Homeಮುಖಪುಟಅಜೀಂ ಪ್ರೇಮ್‌ಜಿ ಫೌಂಡೇಶನ್ ಬಾಲಕಿಯರ ವಿದ್ಯಾರ್ಥಿ ವೇತನ | ಕರ್ನಾಟಕ ಸೇರಿದಂತೆ 18 ರಾಜ್ಯಗಳಿಗೆ ವಿಸ್ತರಣೆ

ಅಜೀಂ ಪ್ರೇಮ್‌ಜಿ ಫೌಂಡೇಶನ್ ಬಾಲಕಿಯರ ವಿದ್ಯಾರ್ಥಿ ವೇತನ | ಕರ್ನಾಟಕ ಸೇರಿದಂತೆ 18 ರಾಜ್ಯಗಳಿಗೆ ವಿಸ್ತರಣೆ

- Advertisement -
- Advertisement -

ಅಜೀಂ ಪ್ರೇಮ್‌ಜಿ ಫೌಂಡೇಶನ್ (ಎಪಿಎಫ್) 2024-25ರ ಶೈಕ್ಷಣಿಕ ವರ್ಷದಲ್ಲಿ ನಾಲ್ಕು ರಾಜ್ಯಗಳಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಪ್ರಾರಂಭಿಸಲಾಗಿದ್ದ ಬಾಲಕಿಯರ ವಿದ್ಯಾರ್ಥಿ ವೇತನವನ್ನು ಈಗ ಕರ್ನಾಟಕ ಸೇರಿದಂತೆ 18 ರಾಜ್ಯಗಳಿಗೆ 2025-26ರ ಶೈಕ್ಷಣಿಕ ವರ್ಷಕ್ಕೆ ವಿಸ್ತರಿಸಲಾಗಿದೆ.

ಸರ್ಕಾರಿ ಶಾಲೆ ಅಥವಾ ಕಾಲೇಜಿನಿಂದ 10 ಮತ್ತು 12 ನೇ ತರಗತಿಗಳನ್ನು ಪೂರ್ಣಗೊಳಿಸಿದ ಮತ್ತು ಉತ್ತಮ ಉನ್ನತ ಶಿಕ್ಷಣ ಸಂಸ್ಥೆ, ಪದವಿ ಅಥವಾ ಡಿಪ್ಲೊಮಾ ಕೋರ್ಸ್‌ನಲ್ಲಿ ಪ್ರವೇಶ ಪಡೆದ ಹುಡುಗಿಯರು ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಹರಾಗಿರುತ್ತಾರೆ.

ಪೌಂಡೇಷನ್‌ನಿಂದ ಈ ವರ್ಷ 2.5 ಲಕ್ಷ ಹುಡುಗಿಯರಿಗೆ ಅನುಕೂಲವಾಗಲಿದೆ ಎಂದು ಅಂದಾಜಿಸಲಾಗಿದ್ದು, ವಾರ್ಷಿಕ ವಿದ್ಯಾರ್ಥಿವೇತನದ ಮೊತ್ತವು ವರ್ಷಕ್ಕೆ 750 ಕೋಟಿ ರೂ.ಗಳಾಗಿದ್ದು, ಮುಂದಿನ ಮೂರು ವರ್ಷಗಳವರೆಗೆ ಅದರ ಮೊತ್ತ ಸುಮಾರು 2,250 ಕೋಟಿ ರೂ.ಗಳಷ್ಟಾಗುತ್ತದೆ ಎಂದು ತಿಳಿಸಿದೆ.

ವಿದ್ಯಾರ್ಥಿ ವೇತನವು ಆನ್‌ಲೈನ್ ಆಧಾರಿತವಾಗಿರುವುದರಿಂದ, ಪ್ರತಿಷ್ಠಾನವು ಆಗಸ್ಟ್ ಅಥವಾ ಸೆಪ್ಟೆಂಬರ್‌ನಲ್ಲಿ ಪೋರ್ಟಲ್ ಅನ್ನು ತೆರೆಯುತ್ತದೆ. ವಿದ್ಯಾರ್ಥಿ ವೇತನ ವಿಸ್ತರಣೆಯನ್ನು ಘೋಷಿಸಿರುವ ಫೌಂಡೇಶನ್‌ನ ಸಿಇಒ ಅನುರಾಗ್ ಬೆಹರ್, “ಇದು ಅರ್ಹತೆ ಆಧಾರಿತ ವಿದ್ಯಾರ್ಥಿವೇತನವಲ್ಲ. ಆರ್ಥಿಕವಾಗಿ ದುರ್ಬಲ ವರ್ಗಗಳ ಹುಡುಗಿಯರು ಉನ್ನತ ಶಿಕ್ಷಣವನ್ನು ಮುಂದುವರಿಸಲು ಇದು ಪ್ರೋತ್ಸಾಹಿಸುತ್ತದೆ. ಒಂದು ವೇಳೆ ಫಲಾನುಭವಿ ಕೋರ್ಸ್‌ನಿಂದ ಹೊರಗುಳಿದರೆ, ವಿದ್ಯಾರ್ಥಿವೇತನವನ್ನು ನಿಲ್ಲಿಸಲಾಗುತ್ತದೆ.” ಎಂದು ಹೇಳಿದ್ದಾರೆ

ಪ್ರಾಯೋಗಿಕ ಯೋಜನೆಯನ್ನು ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಜಾರ್ಖಂಡ್‌ನ ಕೆಲವು ಜಿಲ್ಲೆಗಳಲ್ಲಿ ಪ್ರಾರಂಭಿಸಲಾಗಿತ್ತು.

ಈಗ, ವಿದ್ಯಾರ್ಥಿವೇತನವನ್ನು ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಜಾರ್ಖಂಡ್, ಕರ್ನಾಟಕ, ಮಧ್ಯಪ್ರದೇಶ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಒಡಿಶಾ, ರಾಜಸ್ಥಾನ, ಸಿಕ್ಕಿಂ, ತೆಲಂಗಾಣ, ತ್ರಿಪುರ, ಯುಪಿ ಮತ್ತು ಉತ್ತರಾಖಂಡಗಳಿಗೆ ವಿಸ್ತರಿಸಲಾಗುವುದು.

ಪ್ರಾಯೋಗಿಕ ಅವಧಿಯಲ್ಲಿ, ಅಜೀಂ ಪ್ರೇಮ್‌ಜಿ ಫೌಂಡೇಶನ್ 1.10 ಲಕ್ಷ ಅರ್ಜಿಗಳನ್ನು ಸ್ವೀಕರಿಸಿತು ಮತ್ತು 25,000 ಅರ್ಹರು ಎಂದು ಕಂಡುಬಂದಿದೆ. ಆ ಹುಡುಗಿಯರಿಗಾಗಿ ಈ ವರ್ಷ 75 ಕೋಟಿ ರೂ.ಗಳ ವಿದ್ಯಾರ್ಥಿ ವೇತನ ನೀಡುವ ಬಗ್ಗೆ ಪೌಂಡೇಷನ್ ಒಪ್ಪಿಕೊಂಡಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಂಗಳೂರು ಕರಾವಳಿಯಲ್ಲಿ ಮುಳುಗುತ್ತಿದ್ದ ಹಡಗಿನಿಂದ ಆರು ಸಿಬ್ಬಂದಿ ರಕ್ಷಿಸಿದ ಭಾರತೀಯ ಕರಾವಳಿ ರಕ್ಷಣಾ ಪಡೆ

ಮಂಗಳೂರು ಕರಾವಳಿಯಲ್ಲಿ ಮುಳುಗುತ್ತಿದ್ದ ಹಡಗಿನಿಂದ ಆರು ಸಿಬ್ಬಂದಿ ರಕ್ಷಿಸಿದ ಭಾರತೀಯ ಕರಾವಳಿ ರಕ್ಷಣಾ ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. We are proud that our people citizens of Karnataka coastal districts are brave and they are ready to sacrifice anything for the general public.

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...