Homeಮುಖಪುಟಅಜೀಂ ಪ್ರೇಮ್‌ಜಿ ಫೌಂಡೇಶನ್ ಬಾಲಕಿಯರ ವಿದ್ಯಾರ್ಥಿ ವೇತನ | ಕರ್ನಾಟಕ ಸೇರಿದಂತೆ 18 ರಾಜ್ಯಗಳಿಗೆ ವಿಸ್ತರಣೆ

ಅಜೀಂ ಪ್ರೇಮ್‌ಜಿ ಫೌಂಡೇಶನ್ ಬಾಲಕಿಯರ ವಿದ್ಯಾರ್ಥಿ ವೇತನ | ಕರ್ನಾಟಕ ಸೇರಿದಂತೆ 18 ರಾಜ್ಯಗಳಿಗೆ ವಿಸ್ತರಣೆ

- Advertisement -
- Advertisement -

ಅಜೀಂ ಪ್ರೇಮ್‌ಜಿ ಫೌಂಡೇಶನ್ (ಎಪಿಎಫ್) 2024-25ರ ಶೈಕ್ಷಣಿಕ ವರ್ಷದಲ್ಲಿ ನಾಲ್ಕು ರಾಜ್ಯಗಳಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಪ್ರಾರಂಭಿಸಲಾಗಿದ್ದ ಬಾಲಕಿಯರ ವಿದ್ಯಾರ್ಥಿ ವೇತನವನ್ನು ಈಗ ಕರ್ನಾಟಕ ಸೇರಿದಂತೆ 18 ರಾಜ್ಯಗಳಿಗೆ 2025-26ರ ಶೈಕ್ಷಣಿಕ ವರ್ಷಕ್ಕೆ ವಿಸ್ತರಿಸಲಾಗಿದೆ.

ಸರ್ಕಾರಿ ಶಾಲೆ ಅಥವಾ ಕಾಲೇಜಿನಿಂದ 10 ಮತ್ತು 12 ನೇ ತರಗತಿಗಳನ್ನು ಪೂರ್ಣಗೊಳಿಸಿದ ಮತ್ತು ಉತ್ತಮ ಉನ್ನತ ಶಿಕ್ಷಣ ಸಂಸ್ಥೆ, ಪದವಿ ಅಥವಾ ಡಿಪ್ಲೊಮಾ ಕೋರ್ಸ್‌ನಲ್ಲಿ ಪ್ರವೇಶ ಪಡೆದ ಹುಡುಗಿಯರು ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಹರಾಗಿರುತ್ತಾರೆ.

ಪೌಂಡೇಷನ್‌ನಿಂದ ಈ ವರ್ಷ 2.5 ಲಕ್ಷ ಹುಡುಗಿಯರಿಗೆ ಅನುಕೂಲವಾಗಲಿದೆ ಎಂದು ಅಂದಾಜಿಸಲಾಗಿದ್ದು, ವಾರ್ಷಿಕ ವಿದ್ಯಾರ್ಥಿವೇತನದ ಮೊತ್ತವು ವರ್ಷಕ್ಕೆ 750 ಕೋಟಿ ರೂ.ಗಳಾಗಿದ್ದು, ಮುಂದಿನ ಮೂರು ವರ್ಷಗಳವರೆಗೆ ಅದರ ಮೊತ್ತ ಸುಮಾರು 2,250 ಕೋಟಿ ರೂ.ಗಳಷ್ಟಾಗುತ್ತದೆ ಎಂದು ತಿಳಿಸಿದೆ.

ವಿದ್ಯಾರ್ಥಿ ವೇತನವು ಆನ್‌ಲೈನ್ ಆಧಾರಿತವಾಗಿರುವುದರಿಂದ, ಪ್ರತಿಷ್ಠಾನವು ಆಗಸ್ಟ್ ಅಥವಾ ಸೆಪ್ಟೆಂಬರ್‌ನಲ್ಲಿ ಪೋರ್ಟಲ್ ಅನ್ನು ತೆರೆಯುತ್ತದೆ. ವಿದ್ಯಾರ್ಥಿ ವೇತನ ವಿಸ್ತರಣೆಯನ್ನು ಘೋಷಿಸಿರುವ ಫೌಂಡೇಶನ್‌ನ ಸಿಇಒ ಅನುರಾಗ್ ಬೆಹರ್, “ಇದು ಅರ್ಹತೆ ಆಧಾರಿತ ವಿದ್ಯಾರ್ಥಿವೇತನವಲ್ಲ. ಆರ್ಥಿಕವಾಗಿ ದುರ್ಬಲ ವರ್ಗಗಳ ಹುಡುಗಿಯರು ಉನ್ನತ ಶಿಕ್ಷಣವನ್ನು ಮುಂದುವರಿಸಲು ಇದು ಪ್ರೋತ್ಸಾಹಿಸುತ್ತದೆ. ಒಂದು ವೇಳೆ ಫಲಾನುಭವಿ ಕೋರ್ಸ್‌ನಿಂದ ಹೊರಗುಳಿದರೆ, ವಿದ್ಯಾರ್ಥಿವೇತನವನ್ನು ನಿಲ್ಲಿಸಲಾಗುತ್ತದೆ.” ಎಂದು ಹೇಳಿದ್ದಾರೆ

ಪ್ರಾಯೋಗಿಕ ಯೋಜನೆಯನ್ನು ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಜಾರ್ಖಂಡ್‌ನ ಕೆಲವು ಜಿಲ್ಲೆಗಳಲ್ಲಿ ಪ್ರಾರಂಭಿಸಲಾಗಿತ್ತು.

ಈಗ, ವಿದ್ಯಾರ್ಥಿವೇತನವನ್ನು ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಜಾರ್ಖಂಡ್, ಕರ್ನಾಟಕ, ಮಧ್ಯಪ್ರದೇಶ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಒಡಿಶಾ, ರಾಜಸ್ಥಾನ, ಸಿಕ್ಕಿಂ, ತೆಲಂಗಾಣ, ತ್ರಿಪುರ, ಯುಪಿ ಮತ್ತು ಉತ್ತರಾಖಂಡಗಳಿಗೆ ವಿಸ್ತರಿಸಲಾಗುವುದು.

ಪ್ರಾಯೋಗಿಕ ಅವಧಿಯಲ್ಲಿ, ಅಜೀಂ ಪ್ರೇಮ್‌ಜಿ ಫೌಂಡೇಶನ್ 1.10 ಲಕ್ಷ ಅರ್ಜಿಗಳನ್ನು ಸ್ವೀಕರಿಸಿತು ಮತ್ತು 25,000 ಅರ್ಹರು ಎಂದು ಕಂಡುಬಂದಿದೆ. ಆ ಹುಡುಗಿಯರಿಗಾಗಿ ಈ ವರ್ಷ 75 ಕೋಟಿ ರೂ.ಗಳ ವಿದ್ಯಾರ್ಥಿ ವೇತನ ನೀಡುವ ಬಗ್ಗೆ ಪೌಂಡೇಷನ್ ಒಪ್ಪಿಕೊಂಡಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಂಗಳೂರು ಕರಾವಳಿಯಲ್ಲಿ ಮುಳುಗುತ್ತಿದ್ದ ಹಡಗಿನಿಂದ ಆರು ಸಿಬ್ಬಂದಿ ರಕ್ಷಿಸಿದ ಭಾರತೀಯ ಕರಾವಳಿ ರಕ್ಷಣಾ ಪಡೆ

ಮಂಗಳೂರು ಕರಾವಳಿಯಲ್ಲಿ ಮುಳುಗುತ್ತಿದ್ದ ಹಡಗಿನಿಂದ ಆರು ಸಿಬ್ಬಂದಿ ರಕ್ಷಿಸಿದ ಭಾರತೀಯ ಕರಾವಳಿ ರಕ್ಷಣಾ ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. We are proud that our people citizens of Karnataka coastal districts are brave and they are ready to sacrifice anything for the general public.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....