Homeಮುಖಪುಟಅಜೀಂ ಪ್ರೇಮ್‌ಜಿ ಫೌಂಡೇಶನ್ ಬಾಲಕಿಯರ ವಿದ್ಯಾರ್ಥಿ ವೇತನ | ಕರ್ನಾಟಕ ಸೇರಿದಂತೆ 18 ರಾಜ್ಯಗಳಿಗೆ ವಿಸ್ತರಣೆ

ಅಜೀಂ ಪ್ರೇಮ್‌ಜಿ ಫೌಂಡೇಶನ್ ಬಾಲಕಿಯರ ವಿದ್ಯಾರ್ಥಿ ವೇತನ | ಕರ್ನಾಟಕ ಸೇರಿದಂತೆ 18 ರಾಜ್ಯಗಳಿಗೆ ವಿಸ್ತರಣೆ

- Advertisement -
- Advertisement -

ಅಜೀಂ ಪ್ರೇಮ್‌ಜಿ ಫೌಂಡೇಶನ್ (ಎಪಿಎಫ್) 2024-25ರ ಶೈಕ್ಷಣಿಕ ವರ್ಷದಲ್ಲಿ ನಾಲ್ಕು ರಾಜ್ಯಗಳಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಪ್ರಾರಂಭಿಸಲಾಗಿದ್ದ ಬಾಲಕಿಯರ ವಿದ್ಯಾರ್ಥಿ ವೇತನವನ್ನು ಈಗ ಕರ್ನಾಟಕ ಸೇರಿದಂತೆ 18 ರಾಜ್ಯಗಳಿಗೆ 2025-26ರ ಶೈಕ್ಷಣಿಕ ವರ್ಷಕ್ಕೆ ವಿಸ್ತರಿಸಲಾಗಿದೆ.

ಸರ್ಕಾರಿ ಶಾಲೆ ಅಥವಾ ಕಾಲೇಜಿನಿಂದ 10 ಮತ್ತು 12 ನೇ ತರಗತಿಗಳನ್ನು ಪೂರ್ಣಗೊಳಿಸಿದ ಮತ್ತು ಉತ್ತಮ ಉನ್ನತ ಶಿಕ್ಷಣ ಸಂಸ್ಥೆ, ಪದವಿ ಅಥವಾ ಡಿಪ್ಲೊಮಾ ಕೋರ್ಸ್‌ನಲ್ಲಿ ಪ್ರವೇಶ ಪಡೆದ ಹುಡುಗಿಯರು ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಹರಾಗಿರುತ್ತಾರೆ.

ಪೌಂಡೇಷನ್‌ನಿಂದ ಈ ವರ್ಷ 2.5 ಲಕ್ಷ ಹುಡುಗಿಯರಿಗೆ ಅನುಕೂಲವಾಗಲಿದೆ ಎಂದು ಅಂದಾಜಿಸಲಾಗಿದ್ದು, ವಾರ್ಷಿಕ ವಿದ್ಯಾರ್ಥಿವೇತನದ ಮೊತ್ತವು ವರ್ಷಕ್ಕೆ 750 ಕೋಟಿ ರೂ.ಗಳಾಗಿದ್ದು, ಮುಂದಿನ ಮೂರು ವರ್ಷಗಳವರೆಗೆ ಅದರ ಮೊತ್ತ ಸುಮಾರು 2,250 ಕೋಟಿ ರೂ.ಗಳಷ್ಟಾಗುತ್ತದೆ ಎಂದು ತಿಳಿಸಿದೆ.

ವಿದ್ಯಾರ್ಥಿ ವೇತನವು ಆನ್‌ಲೈನ್ ಆಧಾರಿತವಾಗಿರುವುದರಿಂದ, ಪ್ರತಿಷ್ಠಾನವು ಆಗಸ್ಟ್ ಅಥವಾ ಸೆಪ್ಟೆಂಬರ್‌ನಲ್ಲಿ ಪೋರ್ಟಲ್ ಅನ್ನು ತೆರೆಯುತ್ತದೆ. ವಿದ್ಯಾರ್ಥಿ ವೇತನ ವಿಸ್ತರಣೆಯನ್ನು ಘೋಷಿಸಿರುವ ಫೌಂಡೇಶನ್‌ನ ಸಿಇಒ ಅನುರಾಗ್ ಬೆಹರ್, “ಇದು ಅರ್ಹತೆ ಆಧಾರಿತ ವಿದ್ಯಾರ್ಥಿವೇತನವಲ್ಲ. ಆರ್ಥಿಕವಾಗಿ ದುರ್ಬಲ ವರ್ಗಗಳ ಹುಡುಗಿಯರು ಉನ್ನತ ಶಿಕ್ಷಣವನ್ನು ಮುಂದುವರಿಸಲು ಇದು ಪ್ರೋತ್ಸಾಹಿಸುತ್ತದೆ. ಒಂದು ವೇಳೆ ಫಲಾನುಭವಿ ಕೋರ್ಸ್‌ನಿಂದ ಹೊರಗುಳಿದರೆ, ವಿದ್ಯಾರ್ಥಿವೇತನವನ್ನು ನಿಲ್ಲಿಸಲಾಗುತ್ತದೆ.” ಎಂದು ಹೇಳಿದ್ದಾರೆ

ಪ್ರಾಯೋಗಿಕ ಯೋಜನೆಯನ್ನು ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಜಾರ್ಖಂಡ್‌ನ ಕೆಲವು ಜಿಲ್ಲೆಗಳಲ್ಲಿ ಪ್ರಾರಂಭಿಸಲಾಗಿತ್ತು.

ಈಗ, ವಿದ್ಯಾರ್ಥಿವೇತನವನ್ನು ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಜಾರ್ಖಂಡ್, ಕರ್ನಾಟಕ, ಮಧ್ಯಪ್ರದೇಶ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಒಡಿಶಾ, ರಾಜಸ್ಥಾನ, ಸಿಕ್ಕಿಂ, ತೆಲಂಗಾಣ, ತ್ರಿಪುರ, ಯುಪಿ ಮತ್ತು ಉತ್ತರಾಖಂಡಗಳಿಗೆ ವಿಸ್ತರಿಸಲಾಗುವುದು.

ಪ್ರಾಯೋಗಿಕ ಅವಧಿಯಲ್ಲಿ, ಅಜೀಂ ಪ್ರೇಮ್‌ಜಿ ಫೌಂಡೇಶನ್ 1.10 ಲಕ್ಷ ಅರ್ಜಿಗಳನ್ನು ಸ್ವೀಕರಿಸಿತು ಮತ್ತು 25,000 ಅರ್ಹರು ಎಂದು ಕಂಡುಬಂದಿದೆ. ಆ ಹುಡುಗಿಯರಿಗಾಗಿ ಈ ವರ್ಷ 75 ಕೋಟಿ ರೂ.ಗಳ ವಿದ್ಯಾರ್ಥಿ ವೇತನ ನೀಡುವ ಬಗ್ಗೆ ಪೌಂಡೇಷನ್ ಒಪ್ಪಿಕೊಂಡಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಂಗಳೂರು ಕರಾವಳಿಯಲ್ಲಿ ಮುಳುಗುತ್ತಿದ್ದ ಹಡಗಿನಿಂದ ಆರು ಸಿಬ್ಬಂದಿ ರಕ್ಷಿಸಿದ ಭಾರತೀಯ ಕರಾವಳಿ ರಕ್ಷಣಾ ಪಡೆ

ಮಂಗಳೂರು ಕರಾವಳಿಯಲ್ಲಿ ಮುಳುಗುತ್ತಿದ್ದ ಹಡಗಿನಿಂದ ಆರು ಸಿಬ್ಬಂದಿ ರಕ್ಷಿಸಿದ ಭಾರತೀಯ ಕರಾವಳಿ ರಕ್ಷಣಾ ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. We are proud that our people citizens of Karnataka coastal districts are brave and they are ready to sacrifice anything for the general public.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...