Homeಕರ್ನಾಟಕ"ಸಿದ್ದರಾಮಯ್ಯ ಯಾರನ್ನೂ ಬಿಜೆಪಿಗೆ ಕಳಿಸಿಲ್ಲ, ಅವರ ಮಾತುಗಳು ಪ್ರಚೋದನೆ ಮಾಡಿರಬಹುದು" : ಬಿ.ಸಿ ಪಾಟೀಲ್ ಸಂದರ್ಶನ

“ಸಿದ್ದರಾಮಯ್ಯ ಯಾರನ್ನೂ ಬಿಜೆಪಿಗೆ ಕಳಿಸಿಲ್ಲ, ಅವರ ಮಾತುಗಳು ಪ್ರಚೋದನೆ ಮಾಡಿರಬಹುದು” : ಬಿ.ಸಿ ಪಾಟೀಲ್ ಸಂದರ್ಶನ

- Advertisement -
- Advertisement -

ಬಿ.ಸಿ.ಪಾಟೀಲರ ಸಂದರ್ಶನಕ್ಕೆ ನಾವು ಹೋದಾಗ ತಮ್ಮ ಕ್ಷೇತ್ರದ ಕಡುಬಡವರಿಗೆ ಮನೆ ಮಂಜೂರಾತಿ ಮಾಡಿಸಿಕೊಳ್ಳಲು ವಸತಿಸಚಿವರಿಗೆ ಫೋನ್ ಮಾಡಲು ಯತ್ನಿಸುತ್ತಿದ್ದರು. ಅವರ ಮಗಳು ಸೃಷ್ಟಿ ಪಾಟೀಲ್ ಅಪ್ಪನಿಗೆ ಕೊಡುಗೆಯಿತ್ತಿದ್ದ ಫೋಟೋ ಕೊಲ್ಯಾಜನ್ನು ಗೋಡೆಗೆ ತೂಗು ಹಾಕಲಾಗಿತ್ತು. ಅದರಲ್ಲಿ ಪಾಟೀಲರು ಟಿಪ್ಪು ಸುಲ್ತಾನ್ ಆಗಿ ನಟಿಸಿದ್ದ ನಾಟಕದ ಫೋಟೋಗಳೂ ಇದ್ದವು. ಇವರು ಬಿಜೆಪಿಯ ಸಿದ್ಧಾಂತಕ್ಕೆ ಹೇಗೆ ಹೊಂದಿಕೊಳ್ಳಬಹುದು ಎಂಬ ಪ್ರಶ್ನೆ ನಮ್ಮ ಮನಸ್ಸಿನಲ್ಲಿ ಏಳುತ್ತಿರುವಾಗ ಸಂದರ್ಶನ ಶುರುವಾಯಿತು. ಆನ್ ರೆಕಾರ್ಡ್ ಮಾತಾಡಲು ಬಿ.ಸಿ.ಪಾಟೀಲರಿಗೆ ಹಲವು ತೊಡಕುಗಳಿದ್ದವು. ಪಕ್ಷಾಂತರ ನಿಷೇಧ ಕಾಯ್ದೆಯನ್ವಯ ಅನರ್ಹರಾಗಿ ಕೇಸು ಎದುರಿಸುತ್ತಿರುವಾಗ ತಾವಿನ್ನೂ ಬಿಜೆಪಿ ಸೇರುವ ತೀರ್ಮಾನ ಮಾಡಿಲ್ಲ ಎಂದು ಹೇಳುವುದು ಅವರಿಗೆ ಅನಿವಾರ್ಯ. ಹಾಗೆಯೇ ಬಿಜೆಪಿಗೆ ಸೇರಿದ ಮೇಲೂ ಏನಾಗುತ್ತದೋ ಎಂಬ ಬಗ್ಗೆ ಅವರಿಗೆ ಖಾತರಿಯಿರಲಿಲ್ಲ. ಹಾಗಾಗಿ ಆನ್ ರೆಕಾರ್ಡ್ ಬಹಳ ಟೆಕ್ನಿಕಲ್ ಆಗಿ ಮಾತಾಡಿದರು. ಸ್ಪೀಕರ್ ಆದೇಶದನ್ವಯ ಅನರ್ಹರಾಗಿರುವ ಶಾಸಕರು ಅತಂತ್ರರಾಗಿದ್ದರೂ, ತಮ್ಮ ಪ್ರಯತ್ನ ಮುಂದುವರೆಸುತ್ತಿರುವುದು ಮತ್ತು ಸುಪ್ರೀಂಕೋರ್ಟ್‍ನ ಆದೇಶದ ಕುರಿತು ಚಿಂತಿತರಾಗಿರುವುದು ಎದ್ದು ಕಂಡಿತು.

 

ಪತ್ರಿಕೆ: ಹಾವೇರಿ ಜಿಲ್ಲೆಯಲ್ಲಿ ಒಬ್ಬರೂ ಕಾಂಗ್ರೆಸ್ ಶಾಸಕರಿರದಾಗ ನಾನು ಗೆದ್ದಿದ್ದೀನಿ. ಮೂರನೇ ಬಾರಿಗೆ ಶಾಸಕ. ಹಾಗಾಗಿ ಮಂತ್ರಿಯಾಗಲು ನಾನು ಸಹಜ ಆಯ್ಕೆ ಎಂದು ಭಾವಿಸಿದ್ದಿರಿ. ಆದರೆ ಕಾಂಗ್ರೆಸ್ ಪಕ್ಷ ಯಾಕೆ ಆ ರೀತಿ ಭಾವಿಸಲಿಲ್ಲ?

ಬಿ.ಸಿ.ಪಾಟೀಲ್: ನಾನು ಮೂರು ಬಾರಿ ಹಿರೇಕೇರೂರು ಕ್ಷೇತ್ರದಿಂದ ಶಾಸಕನಾಗಿ ಆಯ್ಕೆಯಾದೆ. ಒಂದು ಬಾರಿ ಜೆಡಿಎಸ್ ಮತ್ತು ಎರಡು ಬಾರಿ ಕಾಂಗ್ರೆಸ್‍ನಿಂದ. ಈ ಬಾರಿ ಹಾವೇರಿ ಜಿಲ್ಲೆಯಲ್ಲಿಯೇ ಏಕೈಕ ಕಾಂಗ್ರೆಸ್ ಶಾಸಕನಾಗಿ ಗೆದ್ದೆ. ಹಿರೇಕೆರೂರು ತಾಲ್ಲೂಕಿಗೆ ನಲವತ್ತು ವರ್ಷಗಳಿಂದ ಮಂತ್ರಿ ಸ್ಥಾನ ಸಿಕ್ಕಿಲ್ಲ. ಜಾತಿವಾರು ನೋಡೋದಾದರೆ ಗದಗ, ಹಾವೇರಿ, ಧಾರವಾಡ ಮೂರು ಜಿಲ್ಲೆಗಳಲ್ಲಿ ನಾನೊಬ್ಬನೆ ಲಿಂಗಾಯತ ಶಾಸಕನಾಗಿದ್ದೆ. ಇವತ್ತು ಜಾತಿಯ ಆಧಾರದ ಮೇಲೆಯೇ ಬಹಳಷ್ಟು ತೀರ್ಮಾನ ಆಗ್ತಿದೆ. ಸಚಿವನಾಗಲು ನನಗೆ ಇಷ್ಟೆಲ್ಲಾ ಅರ್ಹತೆಗಳು ಇದ್ದಾಗಲೂ ಕೊಟ್ಟಿಲ್ಲ. ಮೂರನೇ ಬಾರಿ ಸಂಪುಟ ವಿಸ್ತರಣೆಯಲ್ಲಿ ಅವರೇ ಕರೆದು ಕೊಡುತ್ತೇವೆ ಎಂದು ಹೇಳಿದರು. ಆದರೆ ಕೊಡಲಿಲ್ಲ. ಬಹುಶಃ ಕಾಂಗ್ರೆಸ್ ಪಕ್ಷದಲ್ಲಿ ಧ್ವನಿ ಇದ್ದವರು ಮತ್ತು ಸಂಘಟನೆ ಮಾಡುವಂತಹ ಶಕ್ತಿ ಇದ್ದವರಿಗೆ ಬೆಲೆಯಿಲ್ಲ ಅನ್ನಿಸುತ್ತೆ.

ಇವರು ಎಲ್ಲಿ ಬೆಳೆದು ಬಿಡುತ್ತಾರೋ ಅನ್ನೋ ಭಾವನೆ ಪಕ್ಷದ ನಾಯಕರಲ್ಲಿ ಇದ್ದದ್ದರಿಂದ ಹೊರಗಿಟ್ಟರು. ಉಳಿದವರಿಗೆ ನಿಗಮ ಮಂಡಳಿ, ಬೋರ್ಡ್ ಎಲ್ಲ ಕೊಟ್ಟರು. ಕಳೆದ ಸಮ್ಮಿಶ್ರ ಸರ್ಕಾರದಲ್ಲಿ ಉತ್ತರ ಕರ್ನಾಟಕವನ್ನ ಸಂಪೂರ್ಣ ನಿರ್ಲಕ್ಷ್ಯ ಮಾಡಿದರು. ಸಮಗ್ರ ಕರ್ನಾಟಕ ಅಭಿವೃದ್ಧಿಯ ದೃಷ್ಟಿಯಿಂದ ಈ ಸರ್ಕಾರವನ್ನ ಅನಿವಾರ್ಯವಾಗಿ ತೆಗಿಬೇಕು ಅನಿಸಿತು, ತೆಗೆದೆವು.

ಪತ್ರಿಕೆ: ಅಭಿವೃದ್ಧಿ ಕಾರಣಕ್ಕೆ, ಉತ್ತರ ಕರ್ನಾಟಕದ ನಿರ್ಲಕ್ಷ್ಯದ ಕಾರಣಕ್ಕೆ ರಾಜೀನಾಮೆ ಕೊಟ್ಟಿದ್ದೇನೆ ಅಂತ ಹೇಳ್ತಿದೀರಿ. ಆದರೆ ಈಗ ಕೇಂದ್ರ ಸರ್ಕಾರದಿಂದ ಪ್ರವಾಹ ಪರಿಹಾರಕ್ಕೆ ಒಂದು ರೂ. ಸಹ ಬಿಡುಗಡೆಯಾಗಿಲ್ಲ. ಈ ಪಕ್ಷದಿಂದ ನೀವೇನು ನಿರೀಕ್ಷೆ ಮಾಡುತ್ತೀರಿ?

ಬಿ.ಸಿ.ಪಾಟೀಲ್: ನನಗೆ ಗೊತ್ತಿರುವ ಹಾಗೆ ಇನ್ನೆರಡು ದಿನಗಳಲ್ಲಿ ನೆರೆ ಪರಿಹಾರ ಸಿಗುತ್ತದೆ. ಇಲ್ಲಿಂದ 25 ಸಂಸದರನ್ನು ಬಿಜೆಪಿಯಿಂದ ಕಳಿಸಿರುವ ರಾಜ್ಯಕ್ಕೆ ಬೇಗನೇ ಪರಿಹಾರ ಘೋಷಿಸಬೇಕಿತ್ತು.

ಪತ್ರಿಕೆ: ನೀವು ಅಂದುಕೊಂಡ ಹಾಗೆ ಆಗಿದ್ದರೆ ಇಷ್ಟು ಹೊತ್ತಿಗೆ ಸಚಿವರಾಗಿ, ಚುನಾವಣಾ ಪ್ರಚಾರದಲ್ಲಿರುತ್ತಿದ್ದಿರಿ. ಆದರೆ ಅಂಥದ್ದೇನೂ ಆಗಿಲ್ಲ. ಸಂಪೂರ್ಣ ಅತಂತ್ರರಾಗಿದ್ದೀರಿ. ಇದರ ಬಗ್ಗೆ ಪಶ್ಚಾತ್ತಾಪ ಅನಿಸುತ್ತಿದೆಯಾ?

ಇವೆಲ್ಲ ಎದುರಿಸಬೇಕಾಗುತ್ತೆ. ಜೀವನದಲ್ಲಿ ನಾವು ಅಂದುಕೊಂಡ ಹಾಗೆ ಎಲ್ಲವೂ ಆಗೋದಿಲ್ಲ. ನಾವು ರಾಜೀನಾಮೆ ಕೊಟ್ಟ ನಂತರ ದುರುದ್ದೇಶದಿಂದ ಇವರು ನಮ್ಮನ್ನು ಅನರ್ಹರನ್ನಾಗಿಸಿದರು. ಸರ್ಕಾರ ಇದ್ದಾಗ ಒಳ್ಳೆಯ ಆಡಳಿತ ಕೊಡಲಿಲ್ಲ, ಸಮನ್ವಯ ಸಮಿತಿಯ ಅಧ್ಯಕ್ಷರಾಗಿದ್ದ ಸಿದ್ಧರಾಮಯ್ಯನವರು ಹೀಗೆ ಮಾಡಿ ಅಂತ ನಿರ್ದೇಶನ ಮಾಡಲಿಲ್ಲ. 80 ಜನ ಶಾಸಕರಿದ್ದ ಕಾಂಗ್ರೆಸ್ಸಿಗರು 37 ಜನ ಜೆಡಿಎಸ್‍ನವರಿಗೆ ಅಧಿಕಾರ ಕೊಟ್ಟಾಗಲೂ ಸಹ ನಿರ್ಲಕ್ಷ್ಯ ಮಾಡಲಾಯಿತು. ಸಮ್ಮಿಶ್ರ ಸರ್ಕಾರದಲ್ಲಿ ಹೊಂದಾಣಿಕೆ ಇಲ್ಲದೆ ಸರಿಯಾದ ಆಡಳಿತ ಕೊಟ್ಟಿಲ್ಲ. ನನಗೆ ಯಾವ ಪಶ್ಚಾತ್ತಾಪವು ಇಲ್ಲ. ಕರ್ನಾಟಕದ ಹಿತದೃಷ್ಟಿಯಿಂದ ನಮ್ಮ ಸ್ಥಾನವನ್ನ ನಾವು ತ್ಯಾಗ ಮಾಡಿಕೊಂಡಿದ್ದೇವೆ. ಇಂದು ಒಬ್ಬ ಗ್ರಾಮ ಪಂಚಾಯಿತಿ ಸದಸ್ಯ ಕೂಡ ರಾಜೀನಾಮೆ ಕೊಡಲು ಹಿಂದೆ ಮುಂದೆ ನೋಡುತ್ತಾರೆ. ಆದರೆ ನಾವು ದೂರದೃಷ್ಟಿಯಿಂದ ರಾಜಿನಾಮೆ ನೀಡಿದ್ದೇವೆ.
ಆದರೆ ದುರುದ್ದೇಶದಿಂದ ನಮ್ಮನ್ನು ಅನರ್ಹಗೊಳಿಸಿದ್ದಾರೆ. ಸುಪ್ರೀಂಕೋರ್ಟ್ ಆದೇಶ ಸ್ಪಷ್ಟವಾಗಿತ್ತು. ಮೊದಲು ಅವರ ರಾಜೀನಾಮೆ ಬಗ್ಗೆ ತೀರ್ಮಾನ ತಗೋಬೇಕು ಮತ್ತು ಶಾಸಕರನ್ನ ವಿಧಾನಸಭೆಯಲ್ಲಿ ಪಾಲ್ಗೊಳ್ಳಿ ಅಂತ ಒತ್ತಾಯ ಮಾಡೋಹಾಗಿಲ್ಲ ಅಂತ ತೀರ್ಪಿತ್ತು. ಇಷ್ಟೆಲ್ಲ ಇದ್ದರೂ ಸಹ ಅವನ್ನೆಲ್ಲ ಲೆಕ್ಕಕ್ಕೆ ತೆಗೆದುಕೊಳ್ಳದೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸೇರಿ ಸ್ಪೀಕರ್ ಮೇಲೆ ಒತ್ತಡ ಹಾಕಿ ಅನರ್ಹಗೊಳಿಸಿದರು. ಆದರೆ ಸುಪ್ರೀಂಕೋರ್ಟ್‍ಲ್ಲಿ ನಮಗೆ ನ್ಯಾಯ ಸಿಗುತ್ತೆ ಅನ್ನೋ ಭರವಸೆ ಖಂಡಿತ ಇದೆ.

 

ಪತ್ರಿಕೆ: ಸುಪ್ರೀಂಕೋರ್ಟ್ ತೀರ್ಪು ನಿಮ್ಮ ಪರವಾಗಿ ಬಂದರೂ ಸಹ ಬಿಜೆಪಿಯ ಯು.ಬಿ.ಬಣಕಾರ್ ಅವರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದ್ದಂತಿದೆ. ಅಂದರೆ ನಿಮಗೆ ಸುಲಭದ ಗೆಲುವು ಇರಲ್ಲ…

ನೋಡೋಣ. ಅದನ್ನ ತೀರ್ಮಾನ ಮಾಡಲಿಕ್ಕೆ ದೊಡ್ಡವರಿದ್ದಾರೆ. ನಾನು ಈಗಾಗಲೇ ಚುನಾವಣಾ ಸಂಘಟನೆ ಶುರು ಮಾಡಿಕೊಂಡಿದ್ದೇನೆ.

ಪತ್ರಿಕೆ: ಪೊಲೀಸ್ ಅಧಿಕಾರಿಯಾಗಿದ್ದಿರಿ. ರಂಗನಟರಾಗಿದ್ದು, ಸಿನೆಮಾಗೆ ಬಂದಿರಿ. ನೀವು ಒಂದು ಕಾಲಕ್ಕೆ ಇಷ್ಟಪಟ್ಟು ಟಿಪ್ಪು ಸುಲ್ತಾನ್ ನಾಟಕವನ್ನು ಮಾಡಿದವರು. ಆದರೆ ನೀವು ಹೋಗುತ್ತಿರುವ ಬಿಜೆಪಿ ತೀರ ಭಿನ್ನವಾದ ಸಿದ್ಧಾಂತದ ಪಕ್ಷ. ಟಿಪ್ಪು ಸುಲ್ತಾನ್, ಮುಸ್ಲಿಮರನ್ನು ದ್ವೇಷಿಸುವ ಪಕ್ಷ. ಸೆಕ್ಯುಲರ್ ಪಕ್ಷದಿಂದ ನೀವು ಮಾಡುತ್ತಿರುವ ಈ ಶಿಪ್ಟ್ ಬಗ್ಗೆ ಏನು ಅನಿಸುತ್ತೆ?

ಬಿ.ಸಿ.ಪಾಟೀಲ್: ಪಕ್ಷ ಬದಲಾವಣೆ ಆದರೂ ಮನಸ್ಸು ಬದಲಾವಣೆ ಆಗಲ್ಲ. ನಮಗೂ ಇಷ್ಟು ವಯಸ್ಸು ಆಗಿದೆ. ಜಾತಿ, ಧರ್ಮದ ಮೇಲೆ ರಾಜಕೀಯ ಮಾಡುವಂತಹ ಪರಿಸ್ಥಿತಿ ಇಲ್ಲ. ನಾನು ಪೊಲೀಸ್ ಅಧಿಕಾರಿಯಾಗಿದ್ದವನು. ಬಿ.ಸಿ.ಪಾಟೀಲ್ ಯಾವತ್ತು ಬದಲಾಗೋದಿಲ್ಲ. ಮೋದಿಯವರನ್ನ ಜನ ಎರಡು ಬಾರಿ ಗೆಲ್ಲಿಸಿದ್ದು ಅಭಿವೃದ್ಧಿ ನೋಡಿ. ನಾನು ಸಹ ಮೂರು ಬಾರಿ ಶಾಸಕನಾಗಿದ್ದೇನೆ. ರೈತರು, ಬಡವರು, ಹಿಂದುಳಿದವರಿಗೆ ಬೇಕಾದ ಕೆಲಸವನ್ನು ಮಾಡಿಕೊಡುತ್ತಿದ್ದೇವೆ.

ಪತ್ರಿಕೆ: ಕಾಂಗ್ರೆಸ್ ಶಾಸಕರು ರಾಜಿನಾಮೆ ಹಿಂದೆ ಸಿದ್ದರಾಮಯ್ಯನವರೇ ಇದ್ದರು ಎನ್ನುವ ಆರೋಪ ಇದೆ. ಹಲವರು ಸಿದ್ದರಾಮಯ್ಯನವರಿಗೆ ಆಪ್ತರು. ನೀವು ಅವರೆಲ್ಲರ ಜೊತೆಗೆ ಇದ್ದವರು. ಇದು ಎಷ್ಟು ನಿಜ?

ಬಿ.ಸಿ.ಪಾಟೀಲ್: ಅವರೇ ಕಳಿಸಿದ್ದು ಅನ್ನೋದು ನಿಜ ಅಲ್ಲ. ಆದರೆ ಅವರ ಮಾತುಕತೆಗಳನ್ನು ನೀವೇ ನೋಡಿದೀರಲ್ಲ. ಲೋಕಸಭೆ ನಂತರ ಈ ಸರ್ಕಾರ ಇರಲ್ಲ ಅನ್ನುವಂತಹದ್ದು. ಇವೆಲ್ಲ ಪರೋಕ್ಷವಾಗಿ ಪ್ರಚೋದನೆಯಾಯಿತು. ಆದರೆ ಅವರೇ ನೇರವಾಗಿ ಕಳುಹಿಸಿಲ್ಲ ಮತ್ತು ಪ್ರತಿಯೊಬ್ಬ ಶಾಸಕನಿಗೂ ತನ್ನದೇ ಆದ ಕಾರಣಗಳಿವೆ. ತಮ್ಮ ಕ್ಷೇತ್ರದ ಅಭಿವೃದ್ಧಿ ಆಗಿಲ್ಲ ಅನ್ನೋದು ಒಂದು ಕಾರಣ.

ಪತ್ರಿಕೆ: ಒಂದು ವೇಳೆ ಸುಪ್ರೀಂಕೋರ್ಟ್ ನಿಮ್ಮ ಅನರ್ಹತೆಯನ್ನ ಎತ್ತಿ ಹಿಡಿದು ನೀವು ಚುನಾವಣೆಗೆ ಸ್ಪರ್ಧಿಸೋ ಹಾಗಿಲ್ಲ ಅಂದರೆ ನೀವು ಯಾರಿಗೆ ಟಿಕೆಟ್ ಕೇಳುತ್ತೀರಿ?

ಬಿ.ಸಿ.ಪಾಟೀಲ್: ಈಗಾಗಲೇ ಸುಪ್ರೀಂಕೋರ್ಟ್‍ಗೆ ಚುನಾವಣಾ ಆಯೋಗದ ವಕೀಲರು ಮನವಿ ಸಲ್ಲಿಸಿದ್ದಾರೆ. ಅನರ್ಹರಾದರೂ ಸಹ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನ ತಡೆಯಲು ಆಗುವುದಿಲ್ಲ ಅಂತ. ಹಾಗಾಗಿ ಅಂತಹ ಪರಿಸ್ಥಿತಿ ಉಂಟಾಗುವುದಿಲ್ಲ.

ಪತ್ರಿಕೆ: ಯಡಿಯೂರಪ್ಪನವರ ಮೇಲೆ ವಿಶ್ವಾಸ ಇಟ್ಟು ನೀವು ಹೋಗಿದ್ದೀರಿ. ಆದರೆ ಬಿಜೆಪಿಯಲ್ಲಿ ಅವರ ಮಾತೇ ನಡೆಯುತ್ತಿಲ್ಲ. ಸಂತೋಷ್ ಅವರೇ ಹೈಕಮಾಂಡ್ ರೀತಿ ನಡೆದುಕೊಳ್ಳುತ್ತಿದ್ದಾರೆ. ಅವರನ್ನ ನಂಬಿ ಹೋಗಿರೋರ ಪರಿಸ್ಥಿತೀನೂ ಚೆನ್ನಾಗಿರೊಲ್ಲ ಅಂತ ಕಾಣ್ತಾ ಇದೆ. ಇದರ ಬಗ್ಗೆ ಏನು ಹೇಳತೀರಿ?

ಬಿ.ಸಿ.ಪಾಟೀಲ್: ಇಟ್ ಈಸ್ ಟೂ ಅರ್ಲಿ ಸೇ ಎನಿಥಿಂಗ್

ಪತ್ರಿಕೆ: ವೈದಿಕಶಾಹಿ ಧರ್ಮದ ವಿರುದ್ಧ ಲಿಂಗಾಯತ ಧರ್ಮದ ಚಳವಳಿಯ ಹೋರಾಟ ನಡೆಯಿತಲ್ಲ ಇದರ ಬಗ್ಗೆ ನಿಮಗೆ ಏನನ್ನಿಸುತ್ತೆ?

ಬಿ.ಸಿ.ಪಾಟೀಲ್: ಇದು ಬಹಳ ಸೂಕ್ಷ್ಮವಾದ ವಿಚಾರ. ಧರ್ಮದಲ್ಲಿ ಕೈಹಾಕೋದು ಧರ್ಮದ ಭಾವನೆಗಳನ್ನ ಕೆಣಕೋದು ಬಹಳ ಸೂಕ್ಷ್ಮವಾದ ವಿಚಾರ. ಅದನ್ನ ಸಾರ್ವಜನಿಕವಾಗಿ ಚರ್ಚೆ ಮಾಡಿಕೊಳ್ಳೋದಕ್ಕಿಂತ ಒಳಗಡೆ ಕುಳಿತುಕೊಂಡು ಚರ್ಚೆ ಮಾಡೋದು ಬಹಳ ಮುಖ್ಯ.

ಪತ್ರಿಕೆ: 2018ರಲ್ಲಿ ಯಡಿಯೂರಪ್ಪನವರು ನಿಮ್ಮ ಹತ್ತಿರ ಪಕ್ಷಾಂತರ ಮಾಡಲು ಮಾತನಾಡಿದಾಗ ನೀವು ಆ ಆಡಿಯೊವನ್ನ ಬಹಿರಂಗಪಡಿಸಿದಿರಿ. ಈಗ ಅದೇ ಯಡಿಯೂರಪ್ಪನವರ ಜೊತೆಗೆ ಇದ್ದೀರಿ…..

ಬಿ.ಸಿ.ಪಾಟೀಲ್: ಆವತ್ತಿನ ಪರಿಸ್ಥಿತಿ ಆಗಿತ್ತು. ಆಗ ನನಗೆ ಇದೆಲ್ಲ ತಪ್ಪು ಎನಿಸಿತ್ತು. ಆದರೆ ಒಂದು ವರ್ಷ ಎರಡು ತಿಂಗಳ ಆಡಳಿತ ನೋಡಿದಾಗ ಅನಿವಾರ್ಯತೆ ಬಂತು. ರಾಜಕೀಯದಲ್ಲಿ ಯಾರು ಶತ್ರುಗಳಲ್ಲ ಶಾಶ್ವತವಾಗಿ. ಹಾಗಾಗಿ ಅವರು ಸಿಟ್ಟಾಗಿಲ್ಲ. ನಮಗೆ ಬೇಕಾಗಿರೋದು ಅಭಿವೃದ್ಧಿ. ನಾವು ರಾಜೀನಾಮೆ ಕೊಟ್ಟಿರೋದಕ್ಕೆ ಬಿಜೆಪಿ ಸರ್ಕಾರ ಬಂದಿದೆ. ಅವರು ಸರ್ಕಾರ ಬರಲಿ ಅಂತ ಏನು ನಾವು ರಾಜೀನಾಮೆ ಕೊಟ್ಟಿಲ್ಲ. ರಾಜೀನಾಮೆ ಕೊಟ್ಟನಂತರ ಅವರ ಸರ್ಕಾರ ಬಂದಿರೋದಕ್ಕೆ ಅವರು ಕೃತಜ್ಞರಾಗಿದ್ದಾರೆ. ಆಮೇಲೆ ನಮ್ಮ ಕ್ಷೇತ್ರಕ್ಕೆ ಬೇಕಾದ ಕೆಲಸ ಮಾಡಿಕೊಡುತಿದ್ದಾರೆ; ನಮಗೆ ಬೇಕಾದದ್ದು ಅದೇ. ಮುಂದಿನ ದಿನಗಳಲ್ಲಿ ಸುಪ್ರೀಂಕೋರ್ಟ್ ತೀರ್ಪು ಬಂದಮೇಲೆ ಎಲ್ಲರೂ ಕುಳಿತು ಯಾವ ಪಕ್ಷಕ್ಕೆ ಹೋಗದು ಅಂತ ಎಲ್ಲಾ ಮಾತಾಡಿ ತೀರ್ಮಾನ ಮಾಡತೀವಿ.

ಪತ್ರಿಕೆ: ಪ್ರಜಾಪ್ರಭುತ್ವದಲ್ಲಿ ಸಂಸದೀಯ ಪಕ್ಷಗಳಿಗೆ ಒಂದು ಮಹತ್ವ ಇದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ನೀವು ಗೆದ್ದು, ಐದು ವರ್ಷ ಕಾಯದೆ ಹೀಗೆ ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಶಿಫ್ಟ್ ಆದರೆ ನೀವು ಜನರ ವಿಶ್ವಾಸಕ್ಕೆ ದ್ರೋಹ ಮಾಡಿದ ಹಾಗೆ ಆಗಲಿಲ್ಲವಾ?

ಬಿ.ಸಿ.ಪಾಟೀಲ್: ನಾವು ರಾಜಿನಾಮೆ ಕೊಟ್ಟಿದ್ದೇವೆ. ಶಿಫ್ಟ್ ಆಗಿಲ್ಲ. ಮತ್ತೆ ಜನರ ಹತ್ತಿರವೇ ಹೋಗಿ ಆದೇಶ ಕೇಳುತ್ತೇವೆ. ನನಗಿಂತ ನಮ್ಮ ತಾಲ್ಲೂಕಿನ ಜನತೆ ನನಗೆ ಆದ ಮೋಸಕ್ಕೆ ನಾನಿದನ್ನು ಮಾಡಿದ್ದು. ಪ್ರತಿಯೊಬ್ಬರು ನಮ್ಮ ಪರವಾಗಿದ್ದಾರೆ. ನಾನು ಶಿಫ್ಟ್ ಆಗಿಲ್ಲ ಯಾವ ಪಕ್ಷಕ್ಕೂ ಹೋಗಿಲ್ಲ ಇನ್ನೂ.

ಪತ್ರಿಕೆ: ನಿಮಗೆ ಒಳ್ಳೆಯದಾಗಲಿ. ಬಿಜೆಪಿ ಸರ್ಕಾರಕ್ಕೆ ನಿಮ್ಮಂಥವರು ಸೇರುವುದರಿಂದ ಏನಾದರೂ ಬ್ಯಾಲೆನ್ಸ್ ಆದರೂ ಆಗುತ್ತದಾ ಕಾದು ನೋಡುತ್ತೇವೆ.

ಬಿ.ಸಿ.ಪಾಟೀಲ್: (ನಗು)

ಸಂದರ್ಶನ:
ವಾಸು ಎಚ್.ವಿ ಮತ್ತು
ಅನಿಲ್‍ಕುಮಾರ್ ಚಿಕ್ಕದಾಳವಟ್ಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...