Homeಮುಖಪುಟಬಿ.ಚಂದ್ರೇಗೌಡರ ಕಟ್ಟೆಪುರಾಣ: ಜುಮ್ಮಕ್ಕ ಕೆಮ್ಮು ನೆಗ್ಲೆಟ್ ಮಾಡಬ್ಯಾಡ ಕಣಕ್ಕ

ಬಿ.ಚಂದ್ರೇಗೌಡರ ಕಟ್ಟೆಪುರಾಣ: ಜುಮ್ಮಕ್ಕ ಕೆಮ್ಮು ನೆಗ್ಲೆಟ್ ಮಾಡಬ್ಯಾಡ ಕಣಕ್ಕ

- Advertisement -
- Advertisement -

ಬಿದಿಕಲ್ಲು ಕಾರ ಕಾವಲಿಯಂತೆ ರಣಗುಡುತ್ತಿದ್ದವು. ಸರಿಯಾಗಿ ಒಂದು ಶತಮಾನದ ಹಿಂದಕ್ಕೆ ಊರು ನೆಗೆದಿತ್ತು. ಆಗಲೂ ಅಷ್ಟೇ, ಇಡೀ ಊರು ಕೆರೆಯ ಸಮೀಪಕ್ಕೆ ಸ್ಥಳಾಂತರಗೊಂಡು, ಊರು ಬಿಕೋ ಎನ್ನುತ್ತಿತ್ತು. ಅದಕ್ಕೆ ಕಾರಣ ಮಾರಿ ಭೀತಿ ಹುಟ್ಟಿಸಿದ್ದಳು. ಕೊರೊನಾ ಗುಂಗಿನಲ್ಲೇ ವಾಟಿಸ್ಸೆ ಜುಮ್ಮಿ ಮನೆಗೆ ಬಂದಾಗ, ಉಗ್ರಿಯೂ ಅಲ್ಲಿದ್ದ.

“ಯಕ್ಕಾ, ಯಕ್ಕವ್ ಯಂಗಿದ್ದಯಕ್ಕಾ.”

“ಅಲ್ಲೆ ನಿಂತಗಂಡು ಮಾತಾಡ್ಳ.”

“ಇದೇನಕ್ಕ ಹಿಂಗಂತಿ ಮತ್ತೆ ಉಗ್ರಿ ವಳಿಕೆ ಬಂದವುನೆ.”

“ಅವುನು ಕೈಕಾಲು ತೊಳಕಂಡು ಬಂದವುನೆ.”

“ಕೊಡು ಮತ್ತೆ ನೀರ.”

“ಅಲ್ಲೆ ಅವೆ ತ್ವಳಕಂಡು ಬಾರ್ಲ.”

“ಓಹೋ, ಯಲ್ಲಾ ಕಲ್ಚರ್ರು ರಿಟನ್ ಆಯ್ತಲ್ಲಪ್ಪಾ ಎಂದುಕೊಂಡ ವಾಟಿಸ್ಸೆ ತಾತ್ಸಾರದಿಂದ ನೀರು ಚುಟುಕಿಸಿಕೊಂಡು ಬಂದ.”

“ಅದೇನ್ಲ ಗ್ವಣಗತಿದ್ಯಲ್ಲ” ಎಂದಳು ಜುಮ್ಮಿ.

“ಅದೇ ಕಣಕ್ಕ ಹಿಂದ್ಲ ಕಾಲ್ದಲ್ಲಿ ಬಂದೋರ್ನ ಬಾಗಲಲ್ಲಿ ನಿಲ್ಲಿಸಿ, ನೀರುಕೊಟ್ಟು ಕೈಕಾಲು ಮಖ ತ್ವಳಕಂಡ ಮ್ಯಾಲೆ ವಳಿಕ್ಕರದು, ಚ್ಯಾಪೆ ಹಾಸಿ ಕುಂಡ್ರುಸಿ, ಕ್ವಾಣೆ ಬಾಗಲಲ್ಲಿ ನಿಂತಗಂಡು ಮಾತಾಡರು, ಅಂದ. ಆಗ ಉಗ್ರಿ,

“ಅಷ್ಟೇ ಅಲ್ಲ ಕಣಯ್ಯ, ಕೈಕಾಲು ತ್ವಳಿಯಕ್ಕೆ ನೀರು ಕೊಡೊರು ಕೂಡ ಸೆರಗಲ್ಲಿ ಚೊಂಬಿಡಕಂಡು, ಅದರಲ್ಲೇ ಕೈಗೆ ನೀರಾಯ್ಕಂಡು, ತ್ವಳಕಂಡು ನಂತರ ನಿನಿಗೆ ನೀರು ಕೊಡೊರು” ಎಂದ.

“ನಮ್ಮತ್ತೆ ನಮ್ಮವ್ವ ಯಲ್ಲ ಕಡಿಗಂಟ ಅಂಗೆ ಮಾಡಿದ್ರು ಕಂಡ್ಳ.”

“ನಿಜ ಕಣಕ್ಕ, ನಾನು ನೋಡಿದ್ದೆ. ಇದೇನು ಮಡಿ ಮೈಲಿಗೆ ಜನವಪ್ಪ ಅನ್ಸಿತ್ತು. ಇವತ್ತು ನೋಡಿದ್ರೆ, ನಮ್ಮ ಹಳೆ ಜನ ಇವುರಿಗಿಂತ ಎಚ್ಚರಾಗಿದ್ದುದ್ದು ಯಂಗೆ, ಅನ್ನಸ್ತದೆ.”

“ಊ ಕಣೋ ವಾಟಿಸ್ಸೆ, ಉಣ್ಣುವಾಗ ಯಾರಾರ ಬಂದ್ರೆ ಕಾಲ್ದೂಳಾಯ್ತದೆ ಅಲ್ಲೇ ಇರಿ ಅಂತಿದ್ರು. ಅವುನ್ಯಂಥಾ ದ್ವಡ್ಡ ಮನುಸ್ನೆ ಆಗ್ಲಿ, ಮುಚ್ಕಂಡು ಕುಂತಿದ್ದು ಅಮ್ಯಾಲೆ ವಳಿಕೆ ಬರೋನು.”

“ನಾನು ನೋಡಿದ್ದೆ ಕಣೋ ಉಗ್ರಿ, ಆಗೊಂದು ಸತಿ ಮಂಡೇವುದತ್ರ ಅಳ್ಳಕ್ಯರಿಗೋಗಿದ್ದಾಗ ದಳ್ಳಾಳಿ ತಮ್ಮಣ್ಣಗೌಡನ ಮನೆ ಉಣತಾಯಿದ್ದೊ, ಆಗ ತಮ್ಮಣ್ಣಗೌಡ ಬಂದ ಅವುನೆಂಡ್ತಿ ‘ಅಯ್ಯವ್ ಅಲ್ಲೆ ಇರು ವಳಿಕೆ ಬರಬ್ಯಾಡ ಉಣತಾ ಅವುರೆ’ ಅಂದ್ಲು ತಮ್ಮಣ್ಣಗೌಡ ಉಸುರು ಬುಡದಂಗೆ ಅಲ್ಲೇ ಕುತಗಂಡ ಅವ್ಯಲ್ಲ ಇವತ್ತು ಜ್ಞಾಪುಕಕ್ಕೆ ಬತ್ತಾ ಅವೆ” ಎಂದು ವಾಟಿಸ್ಸೆ ಹೇಳುವಾಗ ಜುಮ್ಮಿ ಕೆಮ್ಮಿದಳು.

“ಇದ್ಯಾಕಕ್ಕ ಕೆಮ್ತಿ.”

“ಸುಮ್ಮನೆ ಕಂಡ್ಳ.”

“ಸುಮ್ಮನೆ ಕೆಮ್ಮೊ ಸಿಚುಯೇಷನ್ ಅಲ್ಲ ಇದು. ಯಾವುದ್ಕು ತೋರಿಸಿಗಂಡುಬುಡದು ವಳ್ಳೇದು.”

“ಲೈ ಹಿಟ್ಲಕ್ಕ ಕರಾನ ಬರದಕ್ಕಿಂತ ಮದ್ಲಿಂದ ಕೆಮ್ಮುತಿದ್ದೆ ಕಂಡ್ಳ ಅದೊಂತರ ವಣಕೆಮ್ಮುಗ.”

“ಅಯ್ಯೋ ಚೆಕಪ್ ಮಾಡಸಕ್ಕೊದ್ರೆ ಜುಮ್ಮಿ ಬುಟ್ಟರೇನೊ ವಾಟಿಸ್ಸೆ. ಅಲ್ಲೆ ಕುಂಡ್ರಿಸಿಗತ್ತರೆ, ಜ್ವತಿಗೆ ಅವುಳ ಮನೆಲಿದ್ದ ನಮ್ಮನ್ನೂ ಅಲ್ಲೆ ಇರಿ ನಿಮಿಗೂ ಚೆಕಪ್ ಮಾಡ್ತಿವಿ ಅಂತರೆ ಇದು ಬೇರೆ ನಿಂಗೆ.”

“ಅಂಗಲ್ಲ ಕಣೊ ಉಗ್ರಿ, ಈ ನಮ್ಮ ಜುಮ್ಮಕ್ಕ ಪಂಚಾತಿ ಮಂಬ್ರು ಕಾಂಟ್ಯಾಕ್ಟವುಳೆ, ಅದ್ರಿಂದ ಸಣ್ಣ ಕೆಮ್ಮುಗೂ ನೆಗ್ಲೆಟ್ ಮಾಡಂಗಿಲ್ಲ ಚೆಕಪ್ ಮಾಡುಸಬೇಕು.”

“ಇವತ್ತು ದೇಶ ಇಂಗಾಗಿರದೆ ನಿನ್ನಂಥೋನಿಂದ ಕಣೊ. ಆ ಟಿವಿ ಮುಂಡೆಮಕ್ಕಳಿಗೆ ಮದ್ಲು ಕೊರೊನ ಬಂದ್ರು ನೀಟಾಗ್ಯದೆ.”

“ಅವುರ ಬಂಬಾಯಿ ನಿಲ್ಲುಸಬೇಕಾದ್ರೆ, ಯಾವನಾರ ಕೊರೊನಾ ರೋಗಿಯ ಕಳಿಸಿ, ಒಂದು ರವುಂಡ್ ವಡಕಂಡು ಬಾ ಅನ್ನಬೇಕು ಕಣೊ. ಆಗ ಆ ನನ್ನ ಮಕ್ಕಳ ಬಾಯಿ ಬಂದಾಯ್ತದೆ.”

“ಏ ಪಾಪ ಅವುರ ವಟ್ಟಿಪಾಡ್ಯಂಗದೆ. ಅಂದ್ರೆ ಕೊರೊನಾಕ್ಕೂ ಹೆದರದಂಗಾಗ್ಯವುರೆ, ಬಟ್ಟೆ ಕಟಿಗಂಡೆ ಮಾತಾಡ್ತರೆ, ನಿಮಸಕ್ಕೊಂದು ಸತಿ ಮೋದಿ ಪೋಟಾ ಹಾಕಿ ಹೆದರಬ್ಯಾಡಿ ಪ್ರಧಾನಿ ಅವುನೆ ಅಂತರೆ, ಅವುನೇನು ಮಾಡ್ತನೆ ಅಂತ ಅಂಗಂತವೆ.”

“ಅವುರೇನು ಮಾಡಲ್ಲ, ಇಂತವುಕ್ಯಲ್ಲ ಹೆದರದೂ ಇಲ್ಲ ಅವುನು. ಗುಜರಾತಲ್ಲಿ ತಾನೇ ಆಜ್ಞೆ ಮಾಡಿ ಸಾವುರಾರು ಜನ ಸಾಬರ ಕೊಲ್ಲಿಸಿದೋನು, ಇನ್ನ ಕೊರೊನಾದಿಂದ ಜನ ಸತ್ರೆ ಹೆದರತನೇನೊ.”

“ಮತ್ತೆ ಜನಗಳಿಗೆ ಭಾರಿ ಎಚ್ಚರಿಕೆ ಹೇಳ್ತ ಕುಂತವುನೆ.”

“ಹೇಳ್ತನೆ, ಅವುರು ಬಳಸಿಗಳದ್ಯಲ್ಲ ಇಂತ ಸಿಚುಯೇಶನ್ನೇ ಅಲವೆ. ಜನಕ್ಕೆ ಆಗಬಾರದ್ದಾಬೇಕು. ಅಲ್ಲಿ ಆರೆಸ್ಸಿಸ್ಸಿನೋರು ಕಾಣಿಸಿಗಬೇಕು, ಚಿತ್ರಾನ್ನ ಮೊಸರನ್ನ ಹಂಚಬೇಕು, ನಮ್ಮ ಬುಟ್ರೆ ದೇಶಭಕ್ತರು ಇಲವೇಯಿಲ್ಲ ಅನ್ನಬೇಕು. ಇದರಲ್ಲೇ ಬಂದೋರವರು. ಇನ್ನ ಕೊರೊನಾ ಬುಡ್ತರೆನೋ. ನಮ್ಮ ಅವುತಾರ ಪುರುಸ ಮೋದಿ ಯದೆಕೊಟ್ಟು ನಿಂತಗಂಡು ಕೊರೊನಾ ಓಡಿಸಿದಾ ಅಂತ ಕೂಗತ್ತ ತಿರಗ್ತವೆ.”

“ಅದೇನೊ ಸಾಬರಮ್ಯಾಲೆ ಕಾನೂನು ತಂದ್ರಿದ್ರಂತಲ್ಲ ಏನಾಯಿತ್ಲ” ಎಂದಳು ಜುಮ್ಮಿ.

“ಅದು ಸಿಎಎ ಅಂತ ಕಣಕ್ಕ. ಸಾಬರನ್ಯಲ್ಲ ಸೊಸಿ ಅತ್ತಗೆ ಯಸಿಯೋ ಕಾನೂನು ತಂದಿದ್ರು. ಸಾಬರು ಎಲ್ಲ ಸೇರಿಕಂಡು ಅದ್ಯಂಗೆ ನಮ್ಮ ಬ್ಯಾರೆ ಮಾಡ್ತಿರಿ ನೋಡನ ಅಂತ ಎದ್ದು ನಿಂತಗಂಡ್ರು. ಅಷ್ಟರಲ್ಲಿ ಕೊರೊನಾ ಬಂದು ಯಲ್ಲಾರ್ನು ಅಮರಿಕತ್ತಾ ಅದೆ ಕಣಕ್ಕ.’’

“ಯಲ್ಲಾರ್ನು ಅಂದ್ರೆ ಚಪ್ಪನ್ನೈವತ್ತಾರು ದೇಸನೂ ಆವರಿಸಿಗಂಡದೆ ಕಣೆ. ಇಟಲಿದೇಸಕೆ ಜಾಸ್ತಿ ಅಮರಿಕಂಡದೆ.”

“ಸೋನಿಯಾಗಾಂಧಿ ಆ ಊರೊಳೆ ಅದ್ರವೆ.”

“ಆ ಊರೊಳೆಯ, ಅವುಳೇನಾರ ಅಲ್ಲಿಗೋಗಿ ಬಂದಿದ್ರೆ ಅವುಳೆ ಕೊರೊನಾ ತಂದ್ಲು ಅಂತ ಬಿಜೆಪಿಗಳು ಬಬ್ಬೆ ಹೊಡಿಯವು.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...