Homeಮುಖಪುಟಬಿ.ಚಂದ್ರೇಗೌಡರ ಕಟ್ಟೆಪುರಾಣ: ಜುಮ್ಮಕ್ಕ ಕೆಮ್ಮು ನೆಗ್ಲೆಟ್ ಮಾಡಬ್ಯಾಡ ಕಣಕ್ಕ

ಬಿ.ಚಂದ್ರೇಗೌಡರ ಕಟ್ಟೆಪುರಾಣ: ಜುಮ್ಮಕ್ಕ ಕೆಮ್ಮು ನೆಗ್ಲೆಟ್ ಮಾಡಬ್ಯಾಡ ಕಣಕ್ಕ

- Advertisement -
- Advertisement -

ಬಿದಿಕಲ್ಲು ಕಾರ ಕಾವಲಿಯಂತೆ ರಣಗುಡುತ್ತಿದ್ದವು. ಸರಿಯಾಗಿ ಒಂದು ಶತಮಾನದ ಹಿಂದಕ್ಕೆ ಊರು ನೆಗೆದಿತ್ತು. ಆಗಲೂ ಅಷ್ಟೇ, ಇಡೀ ಊರು ಕೆರೆಯ ಸಮೀಪಕ್ಕೆ ಸ್ಥಳಾಂತರಗೊಂಡು, ಊರು ಬಿಕೋ ಎನ್ನುತ್ತಿತ್ತು. ಅದಕ್ಕೆ ಕಾರಣ ಮಾರಿ ಭೀತಿ ಹುಟ್ಟಿಸಿದ್ದಳು. ಕೊರೊನಾ ಗುಂಗಿನಲ್ಲೇ ವಾಟಿಸ್ಸೆ ಜುಮ್ಮಿ ಮನೆಗೆ ಬಂದಾಗ, ಉಗ್ರಿಯೂ ಅಲ್ಲಿದ್ದ.

“ಯಕ್ಕಾ, ಯಕ್ಕವ್ ಯಂಗಿದ್ದಯಕ್ಕಾ.”

“ಅಲ್ಲೆ ನಿಂತಗಂಡು ಮಾತಾಡ್ಳ.”

“ಇದೇನಕ್ಕ ಹಿಂಗಂತಿ ಮತ್ತೆ ಉಗ್ರಿ ವಳಿಕೆ ಬಂದವುನೆ.”

“ಅವುನು ಕೈಕಾಲು ತೊಳಕಂಡು ಬಂದವುನೆ.”

“ಕೊಡು ಮತ್ತೆ ನೀರ.”

“ಅಲ್ಲೆ ಅವೆ ತ್ವಳಕಂಡು ಬಾರ್ಲ.”

“ಓಹೋ, ಯಲ್ಲಾ ಕಲ್ಚರ್ರು ರಿಟನ್ ಆಯ್ತಲ್ಲಪ್ಪಾ ಎಂದುಕೊಂಡ ವಾಟಿಸ್ಸೆ ತಾತ್ಸಾರದಿಂದ ನೀರು ಚುಟುಕಿಸಿಕೊಂಡು ಬಂದ.”

“ಅದೇನ್ಲ ಗ್ವಣಗತಿದ್ಯಲ್ಲ” ಎಂದಳು ಜುಮ್ಮಿ.

“ಅದೇ ಕಣಕ್ಕ ಹಿಂದ್ಲ ಕಾಲ್ದಲ್ಲಿ ಬಂದೋರ್ನ ಬಾಗಲಲ್ಲಿ ನಿಲ್ಲಿಸಿ, ನೀರುಕೊಟ್ಟು ಕೈಕಾಲು ಮಖ ತ್ವಳಕಂಡ ಮ್ಯಾಲೆ ವಳಿಕ್ಕರದು, ಚ್ಯಾಪೆ ಹಾಸಿ ಕುಂಡ್ರುಸಿ, ಕ್ವಾಣೆ ಬಾಗಲಲ್ಲಿ ನಿಂತಗಂಡು ಮಾತಾಡರು, ಅಂದ. ಆಗ ಉಗ್ರಿ,

“ಅಷ್ಟೇ ಅಲ್ಲ ಕಣಯ್ಯ, ಕೈಕಾಲು ತ್ವಳಿಯಕ್ಕೆ ನೀರು ಕೊಡೊರು ಕೂಡ ಸೆರಗಲ್ಲಿ ಚೊಂಬಿಡಕಂಡು, ಅದರಲ್ಲೇ ಕೈಗೆ ನೀರಾಯ್ಕಂಡು, ತ್ವಳಕಂಡು ನಂತರ ನಿನಿಗೆ ನೀರು ಕೊಡೊರು” ಎಂದ.

“ನಮ್ಮತ್ತೆ ನಮ್ಮವ್ವ ಯಲ್ಲ ಕಡಿಗಂಟ ಅಂಗೆ ಮಾಡಿದ್ರು ಕಂಡ್ಳ.”

“ನಿಜ ಕಣಕ್ಕ, ನಾನು ನೋಡಿದ್ದೆ. ಇದೇನು ಮಡಿ ಮೈಲಿಗೆ ಜನವಪ್ಪ ಅನ್ಸಿತ್ತು. ಇವತ್ತು ನೋಡಿದ್ರೆ, ನಮ್ಮ ಹಳೆ ಜನ ಇವುರಿಗಿಂತ ಎಚ್ಚರಾಗಿದ್ದುದ್ದು ಯಂಗೆ, ಅನ್ನಸ್ತದೆ.”

“ಊ ಕಣೋ ವಾಟಿಸ್ಸೆ, ಉಣ್ಣುವಾಗ ಯಾರಾರ ಬಂದ್ರೆ ಕಾಲ್ದೂಳಾಯ್ತದೆ ಅಲ್ಲೇ ಇರಿ ಅಂತಿದ್ರು. ಅವುನ್ಯಂಥಾ ದ್ವಡ್ಡ ಮನುಸ್ನೆ ಆಗ್ಲಿ, ಮುಚ್ಕಂಡು ಕುಂತಿದ್ದು ಅಮ್ಯಾಲೆ ವಳಿಕೆ ಬರೋನು.”

“ನಾನು ನೋಡಿದ್ದೆ ಕಣೋ ಉಗ್ರಿ, ಆಗೊಂದು ಸತಿ ಮಂಡೇವುದತ್ರ ಅಳ್ಳಕ್ಯರಿಗೋಗಿದ್ದಾಗ ದಳ್ಳಾಳಿ ತಮ್ಮಣ್ಣಗೌಡನ ಮನೆ ಉಣತಾಯಿದ್ದೊ, ಆಗ ತಮ್ಮಣ್ಣಗೌಡ ಬಂದ ಅವುನೆಂಡ್ತಿ ‘ಅಯ್ಯವ್ ಅಲ್ಲೆ ಇರು ವಳಿಕೆ ಬರಬ್ಯಾಡ ಉಣತಾ ಅವುರೆ’ ಅಂದ್ಲು ತಮ್ಮಣ್ಣಗೌಡ ಉಸುರು ಬುಡದಂಗೆ ಅಲ್ಲೇ ಕುತಗಂಡ ಅವ್ಯಲ್ಲ ಇವತ್ತು ಜ್ಞಾಪುಕಕ್ಕೆ ಬತ್ತಾ ಅವೆ” ಎಂದು ವಾಟಿಸ್ಸೆ ಹೇಳುವಾಗ ಜುಮ್ಮಿ ಕೆಮ್ಮಿದಳು.

“ಇದ್ಯಾಕಕ್ಕ ಕೆಮ್ತಿ.”

“ಸುಮ್ಮನೆ ಕಂಡ್ಳ.”

“ಸುಮ್ಮನೆ ಕೆಮ್ಮೊ ಸಿಚುಯೇಷನ್ ಅಲ್ಲ ಇದು. ಯಾವುದ್ಕು ತೋರಿಸಿಗಂಡುಬುಡದು ವಳ್ಳೇದು.”

“ಲೈ ಹಿಟ್ಲಕ್ಕ ಕರಾನ ಬರದಕ್ಕಿಂತ ಮದ್ಲಿಂದ ಕೆಮ್ಮುತಿದ್ದೆ ಕಂಡ್ಳ ಅದೊಂತರ ವಣಕೆಮ್ಮುಗ.”

“ಅಯ್ಯೋ ಚೆಕಪ್ ಮಾಡಸಕ್ಕೊದ್ರೆ ಜುಮ್ಮಿ ಬುಟ್ಟರೇನೊ ವಾಟಿಸ್ಸೆ. ಅಲ್ಲೆ ಕುಂಡ್ರಿಸಿಗತ್ತರೆ, ಜ್ವತಿಗೆ ಅವುಳ ಮನೆಲಿದ್ದ ನಮ್ಮನ್ನೂ ಅಲ್ಲೆ ಇರಿ ನಿಮಿಗೂ ಚೆಕಪ್ ಮಾಡ್ತಿವಿ ಅಂತರೆ ಇದು ಬೇರೆ ನಿಂಗೆ.”

“ಅಂಗಲ್ಲ ಕಣೊ ಉಗ್ರಿ, ಈ ನಮ್ಮ ಜುಮ್ಮಕ್ಕ ಪಂಚಾತಿ ಮಂಬ್ರು ಕಾಂಟ್ಯಾಕ್ಟವುಳೆ, ಅದ್ರಿಂದ ಸಣ್ಣ ಕೆಮ್ಮುಗೂ ನೆಗ್ಲೆಟ್ ಮಾಡಂಗಿಲ್ಲ ಚೆಕಪ್ ಮಾಡುಸಬೇಕು.”

“ಇವತ್ತು ದೇಶ ಇಂಗಾಗಿರದೆ ನಿನ್ನಂಥೋನಿಂದ ಕಣೊ. ಆ ಟಿವಿ ಮುಂಡೆಮಕ್ಕಳಿಗೆ ಮದ್ಲು ಕೊರೊನ ಬಂದ್ರು ನೀಟಾಗ್ಯದೆ.”

“ಅವುರ ಬಂಬಾಯಿ ನಿಲ್ಲುಸಬೇಕಾದ್ರೆ, ಯಾವನಾರ ಕೊರೊನಾ ರೋಗಿಯ ಕಳಿಸಿ, ಒಂದು ರವುಂಡ್ ವಡಕಂಡು ಬಾ ಅನ್ನಬೇಕು ಕಣೊ. ಆಗ ಆ ನನ್ನ ಮಕ್ಕಳ ಬಾಯಿ ಬಂದಾಯ್ತದೆ.”

“ಏ ಪಾಪ ಅವುರ ವಟ್ಟಿಪಾಡ್ಯಂಗದೆ. ಅಂದ್ರೆ ಕೊರೊನಾಕ್ಕೂ ಹೆದರದಂಗಾಗ್ಯವುರೆ, ಬಟ್ಟೆ ಕಟಿಗಂಡೆ ಮಾತಾಡ್ತರೆ, ನಿಮಸಕ್ಕೊಂದು ಸತಿ ಮೋದಿ ಪೋಟಾ ಹಾಕಿ ಹೆದರಬ್ಯಾಡಿ ಪ್ರಧಾನಿ ಅವುನೆ ಅಂತರೆ, ಅವುನೇನು ಮಾಡ್ತನೆ ಅಂತ ಅಂಗಂತವೆ.”

“ಅವುರೇನು ಮಾಡಲ್ಲ, ಇಂತವುಕ್ಯಲ್ಲ ಹೆದರದೂ ಇಲ್ಲ ಅವುನು. ಗುಜರಾತಲ್ಲಿ ತಾನೇ ಆಜ್ಞೆ ಮಾಡಿ ಸಾವುರಾರು ಜನ ಸಾಬರ ಕೊಲ್ಲಿಸಿದೋನು, ಇನ್ನ ಕೊರೊನಾದಿಂದ ಜನ ಸತ್ರೆ ಹೆದರತನೇನೊ.”

“ಮತ್ತೆ ಜನಗಳಿಗೆ ಭಾರಿ ಎಚ್ಚರಿಕೆ ಹೇಳ್ತ ಕುಂತವುನೆ.”

“ಹೇಳ್ತನೆ, ಅವುರು ಬಳಸಿಗಳದ್ಯಲ್ಲ ಇಂತ ಸಿಚುಯೇಶನ್ನೇ ಅಲವೆ. ಜನಕ್ಕೆ ಆಗಬಾರದ್ದಾಬೇಕು. ಅಲ್ಲಿ ಆರೆಸ್ಸಿಸ್ಸಿನೋರು ಕಾಣಿಸಿಗಬೇಕು, ಚಿತ್ರಾನ್ನ ಮೊಸರನ್ನ ಹಂಚಬೇಕು, ನಮ್ಮ ಬುಟ್ರೆ ದೇಶಭಕ್ತರು ಇಲವೇಯಿಲ್ಲ ಅನ್ನಬೇಕು. ಇದರಲ್ಲೇ ಬಂದೋರವರು. ಇನ್ನ ಕೊರೊನಾ ಬುಡ್ತರೆನೋ. ನಮ್ಮ ಅವುತಾರ ಪುರುಸ ಮೋದಿ ಯದೆಕೊಟ್ಟು ನಿಂತಗಂಡು ಕೊರೊನಾ ಓಡಿಸಿದಾ ಅಂತ ಕೂಗತ್ತ ತಿರಗ್ತವೆ.”

“ಅದೇನೊ ಸಾಬರಮ್ಯಾಲೆ ಕಾನೂನು ತಂದ್ರಿದ್ರಂತಲ್ಲ ಏನಾಯಿತ್ಲ” ಎಂದಳು ಜುಮ್ಮಿ.

“ಅದು ಸಿಎಎ ಅಂತ ಕಣಕ್ಕ. ಸಾಬರನ್ಯಲ್ಲ ಸೊಸಿ ಅತ್ತಗೆ ಯಸಿಯೋ ಕಾನೂನು ತಂದಿದ್ರು. ಸಾಬರು ಎಲ್ಲ ಸೇರಿಕಂಡು ಅದ್ಯಂಗೆ ನಮ್ಮ ಬ್ಯಾರೆ ಮಾಡ್ತಿರಿ ನೋಡನ ಅಂತ ಎದ್ದು ನಿಂತಗಂಡ್ರು. ಅಷ್ಟರಲ್ಲಿ ಕೊರೊನಾ ಬಂದು ಯಲ್ಲಾರ್ನು ಅಮರಿಕತ್ತಾ ಅದೆ ಕಣಕ್ಕ.’’

“ಯಲ್ಲಾರ್ನು ಅಂದ್ರೆ ಚಪ್ಪನ್ನೈವತ್ತಾರು ದೇಸನೂ ಆವರಿಸಿಗಂಡದೆ ಕಣೆ. ಇಟಲಿದೇಸಕೆ ಜಾಸ್ತಿ ಅಮರಿಕಂಡದೆ.”

“ಸೋನಿಯಾಗಾಂಧಿ ಆ ಊರೊಳೆ ಅದ್ರವೆ.”

“ಆ ಊರೊಳೆಯ, ಅವುಳೇನಾರ ಅಲ್ಲಿಗೋಗಿ ಬಂದಿದ್ರೆ ಅವುಳೆ ಕೊರೊನಾ ತಂದ್ಲು ಅಂತ ಬಿಜೆಪಿಗಳು ಬಬ್ಬೆ ಹೊಡಿಯವು.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....