Homeಚಳವಳಿಬಂಡಾಯ, ಕಿಲಾಡಿ, ಕಿಡಿಗೇಡಿತನ: ಚಂಪಾರವರೊಂದಿಗೆ ಯಾಹೂ ಮಾತುಕತೆ

ಬಂಡಾಯ, ಕಿಲಾಡಿ, ಕಿಡಿಗೇಡಿತನ: ಚಂಪಾರವರೊಂದಿಗೆ ಯಾಹೂ ಮಾತುಕತೆ

ಚಂಪಾರವರಿಗೆ 70 ವರ್ಷ ತುಂಬಿದ ಸಂದರ್ಭದಲ್ಲಿ ಬಿ.ಚಂದ್ರೇಗೌಡರು ಬರೆದ ಯಾಹೂ ಲೇಖನ

- Advertisement -
- Advertisement -

ಚಂಪಾರಿಗೆ ಎಪ್ಪತ್ತು! ನಂಬುವುದೇ ಕಷ್ಟ. ಅವರ ಬಂಡಾಯ, ಕಿಲಾಡಿ ಮತ್ತು ಕಿಡಿಗೇಡಿತನಕ್ಕೆ ಎಪ್ಪತ್ತು  ತುಂಬಲು ಸಾಧ್ಯವಿಲ್ಲ, ಅದು ಬಂಡಾಯ ಮತ್ತು ನವ್ಯದ ನಡುಕಾಲದಲ್ಲೇ ನಿಂತಿರಬೇಕು ಅನ್ನಿಸಿತು. ಆದರೂ ಅವರನ್ನು ಮಾತನಾಡಿಸಿ ಒಂದು ಹಾರೈಕೆ ಮಾತೇಳುವುದು ನಮ್ಮ ಕರ್ತವ್ಯವಲ್ಲವೆ. ಫೋನ್  ಮಾಡಿದ್ರೆ ಸಿಕ್ಕೇಬಿಟ್ರು.

“ಹಲೋ ನಮಸ್ಕಾರ ಸಾರ್, ನಾನು ಯಾಹೂ”

“ಯಾಹು ಅಂದ್ರ ಗೌರಿ ಲಂಕೇಶದಾಗ ಬರೀತಿರಲ್ಲಿ ಅವರ ಹೌದಲ್ಲೋ ?

“ಹೌದು ಸಾರ್”.

“ನಿಮ್ಮ ಹೆಸರೇನ್ರಿ ?”

“ಯಾಹೂ ಅಂತ ಸಾರ್ ?

“ಅದು ಖರೇರಿ, ತಂದಿ ತಾಯಿ ಇಟ್ಟ ಹೆಸರಿಲ್ಲೇನು ?”

“ಅದು ಕರಿಯಕ್ಕೆ ಚನ್ನಾಗಿಲ್ಲ ಅಂತ ಗೌರಿಮೇಡಂ ಯಾಹೂ ಅಂತ ಇಟ್ಟವರೆ ಸಾ”,

“ಅಂಗೆನ ಯದಕ ಫೋನ್ ಮಾಡಿದಿರಿ ಹೇಳ್ರಲ್ಲ ?”

“ಯಪ್ಪತ್ತು ವರ್ಸಾಯ್ತಂತಲ್ಲ ಸಾರ್ ನಿಮಗೆ ?”

 “ಅನಂತಮೂರ್ತಿಗಾಗ್ಲೆ ಎಪ್ಪತ್ತಾರಾತು ಗೊತ್ತೇನ ?”

“ಅವು ಎಪ್ಪತ್ತಾರಕ್ಕಿಂತ್ಲೂ ಜಾಸ್ತಿಯಾದಂಗೆ ಕಣ್ತಾರೆ. ಆದ್ರೆ ನೀವು ಮಾತ್ರ ಇನ್ನು ಐವತ್ತಾರು ವರ್ಷದಂಗೆ ಕಾಣ್ತೀರಿ. ಇದರ ಗುಟ್ಟೇನು ಸಾರ್ ?

“ಇದರಾಗ ಗುಟ್ಟೇನು ಬಂತ್ರಿ, ನನ್ನ ಮಾತುಕತಿ, ಬರವಣಿಗೆ, ನಡವಳಿಕೆ ಇವೇನದಾವು ಇವುಕೂ, ನನ್ನ ವಯಸಿಗೂ ಸಂಬಂದಿಲ್ಲ, ನಮ್ಮ ದೇಶದಾಗ ಒಂದೊಂದು ವಯೋಮಾನಕ್ಕೆ ಒಂದೊಂದು ನಡವಳಿಕೆ ಇರಾಕೆ ಬೇಕು ಅಂತ ಹೇಳಿ ನಿಯಮ ಮಾಡ್ಕಾರ, ಅದನ್ನ ಮುರಕೊಂಡ ಹೋದ್ರೆ ನಾವು ಅರಾಮಿರತೇವಿ, ಅಷ್ಟ”.

“ನೀವೀಗ ಯಾವುದನ್ನು ಮುರದಿದ್ದಿರಿ ಸಾರ್ ?”

“ಅರವತ್ತರ ಅರಳುಮರಳು ಮುರುದು ಹತ್ತು ವರ್ಸಾತು”

“ಈ ಎಪ್ಪತ್ತು ವರ್ಷದಲ್ಲಿ ಹಿಂತಿರುಗಿ ನೋಡಿದ್ರೆ ಏನನಸ್ತದೆ ಸಾರ್ ?

“ಭಾಳ ಮಂದಿ ಸಾವಿಗೆ ಸಂತಾಪ ಬರದೇನಿ, ಇನ್ನ ರಗಡ ಮಂದಿಗೆ ಬರಿಬೇಕಲ್ಲಪ್ಪಾ ಅನಸತೈತಿ.”

“ನೀವು ಸಂತಾಪ ಬರಿಯೋ ಮಂದಿ ಬಹಳ ಜನ ಉಳಿದಿಲ್ಲವಲ್ಲ ಸಾರ್ ?”

“ಏ, ಭಾಳ ಮಂದ್ಯದಾರ, ಪುರೋಹಿತರ ಪೈಕಿನ ಒಂದು ಡಜನ್ ಅದಾರ, ರಾಜಕಾರಣದಾಗ ಮೂರು ನಾಕು ಮಂದಿ ಆದಾರ, ಸಾಹಿತ್ಯ ಲೋಕದಾಗ ಆಯಸ್ಸು ಮುಗಿಸಿ ಹೋಗೋ ಮಂದಿಗಿಂತ ಲಬಕ್ಕನ ಹೋಗೋ ಮಂದಿ ಭಾಳದಾರ”.

“ಅದರಲ್ಲೂ ಬಂಡಾಯದೋರು ಬೇಗ ಹೋಗ್ತರಲ್ಲ ಸಾರ್ ?”

“ಹೌದ್ರಿ,  ನವೋದಯದವರು ಪಿಂಚಣಿ ತೊಗಂಡು ಆರಾಮವಾಗಿದ್ದಾರ. ನವ್ಯದವರು, ಬಂಡಾಯದವರು ಕೂಡೇ ಹೊಂಟ ಹೋದರ್‍ರಿ”.

“ಸಾಹಿತ್ಯ ಲೋಕದಲ್ಲಿ ನವೋದಯ, ಪ್ರಗತಿಶೀಲ, ನವ್ಯ, ಬಂಡಾಯ ಅಂತ ಕೆಲವು ಕಾಲಘಟ್ಟಗಳವಲ್ಲಾ ಸಾರ್, ನಿಮ್ಮ ಬರವಣಿಗೆ ಹೋರಾಟ, ಯಾವ ಘಟ್ಟದಲ್ಲಿ ತೀವ್ರವಾಗಿತ್ತು ಸಾರ್.

“ನೋಡಿ ಇವರೆ, ನಾವು ಯಾವ ಕಾಲಘಟ್ಟದಾಗೂ ಎರಡೂ ಕಾಲಿಟ್ಟವರಲ್ಲ. ಒಂದೊಂದೇ ಕಾಲಿಟ್ಟು ಹಿಂದ ತಗದೇವಿ”.

“ಯಾಕ್ ಸರ್ ?”

“ಯಾಕ್ ಅಂದ್ರ, ಒಂದು ಲೇಬಲ್ ಹಚಗೊಂಡು ಬರಿಯೂದಂದ್ರ ನನಗಾಗುದಿಲ್ರಿ,

ಮೊದಲಿಕ್ಕ ನವೋದಯದವರು ಬರಿಯಕ್ಕತ್ತಿದ್ರು. ಅವುರಿಗೆ ಆಗ ಲೇಬಲ್ ಇರಲಿಲ್ಲ. ಈ ನಮ್ಮ ಪಿತಾಮಹರಿಗೆ ಯಂಗೋ ಏನೋ ನವೋದಯದವರು ಅನ್ನೋ ಲೇಬಲ್ ಸಿಕ್ಕು ‘ಏ ನಮಗ ಲೇಬಲ್ ಸಿಕ್ತು’ ಅಂತೇಳಿ ಬರದು ಬರೆದು ಸುಸ್ತಾದರ್‍ರಿ.”

“ಆದ್ರು ಇವತ್ತಿಗೂ ಅವರನ್ನ ಓದಬವುದಲ್ಲ ಸಾರ್”…?

“ಕೆಲವು ಮಂದಿನ್ನ ಓದಬವುದು ಅಷ್ಟರಿ, ಇನ್ನ ಕೆಲವು ಮಂದಿ ಪುಸ್ತಕ ತೊಗಂಡು ಸಂತಾಪ ಸೂಚನೆ ಮಾಡಿ ಮುಂದೆ ಹೋಗಬಹುದು”.

“ಆ ತರ ಬರದಿರೋರು ಪ್ರಗತಿಶೀಲರಲ್ಲವ ಸಾರ್ ?”

“ಪ್ರಗತಿಶೀಲರು ಬರಕೊಂಡ್ ಬದುತ್ತೇವಿ ಅಂತ ಹೊಂಟರ್‍ರಿ. ಅದಕ ಅಂಗ ಬರದಾರ, ಪಾಪ ಮೊದಲಕ್ಕ ತಮ್ಮ ಸುತ್ತಮುತ್ತ ಕಾಣೋ ಸಮಾಜ ಕುರುತು ಬರದ್ರು. ಅದು ಖಾಲಿ ಆತು. ಅನಂತರ ಗಟಾರ ಜೀವನ ಬರಿಬೇಕು ಅಂತ ಹೊಂಟರ್‍ರಿ, ಅನುಭವದ ಸಲುವಾಗಿ ಗಟಾರಕ್ಕೋದ್ರು, ವಳ್ಳಿ ಬರಲಿಲ್ಲವರು. ‘ಏ ಇಲ್ಲಿ ಭಾಳ ಅರಾಮೈತ’ ಅಂತ ಅಲ್ಲೇ ಉಳುದ್ರು. “ಅಲ್ಲಿಂದ ಅಂಗೇ ಹೊಂಟೋದರಲ್ಲ?”

“ಹೌದ್ರಿ, ಇನ್ನ ನವ್ಯದವರಿಗೆ ಅನಾಥ ಪ್ರಜ್ಞೆ ಅಮರಿಕೊಂಡು ಏನು ನೋಡಿದ್ರೂ ಚಂದ ಕಾಣಿರಲಿಲ್ಲ ಅವರಿಗೆ. ಆದ್ರಿಂದ ಒಳಗೋದ್ರು. ವಳ್ಳಿ ಬರಲಿಲ್ಲವರು. ನಾವೊಂದಿಷ್ಟು ಮಂದಿ ಹೊರಬಂದು ಬಂಡಾಯದ ಕಡೆ ಹೊಂಟವಿ”.

“ಅಂಗಾದ್ರೆ ನಿಮ್ಮ ಬಂಡಾಯ ಮಧ್ಯಂತರದ್ದ ಸಾರ್ ?”

“ಇಲ್ರೀ, ಬಂಡಾಯ ನನ್ನ ಮನೋಧರ್ಮ, ನಾ ಪೆನ್ನ ತೊಗಂಡ ಕೂಡಲೇ ಹೊರಬಂದಿದ್ದೇ ಬಂಡಾಯ, ಧಾರವಾಡದಾಗ ಬೇಂದ್ರೆ, ಜೋಶಿ ಮತ್ತವರ ಬಳಗ, ಅನಂತರ ಸಿ.ಪ. ಶೆಟ್ಟಿ, ಗಿರಡ್ಡಿ, ಮಾಕು, ದೇಕು, ಗೋಕಾಕ್ ಇವರ ವಿರುದ್ಧ ನನ್ನ ಬಂಡಾಯ ಎಂದೂ ಇದ್ದದ್ದೆ. ಅದಕ ನೋಡ್ರಿ ಎಮರ್ಜೆನ್ಸಿಲಿ ನಾ ಒಬ್ಬವನೇ ಜೇಲಿಗೆ ಹೋದದ್ದು “.

“ಆಗ ಇಡೀ ಧಾರವಾಡ ಖುಷಿಪಡ್ತಾಂತಲ್ಲಾ ಸಾರ್?”

“ನಾ ಹೊರಬಂದಾಗ ಅಷ್ಟೇ ಬೇಸರಾತು ಅವರಿಗೆ”.

“ಜೈಲಲ್ಲಿ ನೀವು ಆರೆಸೆನ್ಸಿನವರ ಜೊತೆಗಿದ್ರಂತೆ ?”

“ಜೈಲಂದ್ರ ಮುಗಿತಲ್ರೀ ಅದು ಪಬ್ಲಿಕ್ ಪಡಖಾನಿ ಇದ್ದಂಗ, ಅಲ್ಲಿಗೆ ದರವೊಬ್ಬರೂ ಬರತಾರ, ಅಂಗ ಚೆಡ್ಡಿ ಹುಡ್ರು ಬಂದಿದ್ದು, ಕೆಲವುರು ನಾ ಆರೆಸ್ಸೆಸ್ಸಲ್ಲ ಅಂತ ಅಳಾಕತ್ತಿದ್ರು.”

“ಆದ್ರಿವತ್ತು ಯಂಗೆ ನಗ್ತಾರೆ ನೋಡಿ ಸಾರ್”

“ಇಲ್ಲಿ ಯಾರ ನಗೂನೂ ಶಾಶ್ವತ ಅಲ್ಲರೀ. ಒಂದು ಕಾಲಕ್ಕೆ ಕಾಂಗ್ರೆಸ್‌ನವರು ಅಂದ್ರೆ ಮಂದಿ ಹೆದರುತಿದ್ದರು. ಆದ್ರ ಇವತ್ತು ಕಾಂಗ್ರೆಸ್ಸಿನವರು ಅಂದ್ರೆ ಒಂದೀಟು ಡುಬ್ಬು ಕೆರೆದು ಹೋಕ್ಯೇನಾ ಅನ್ನಂಗಾಗೇರೆ. ಅಂಗ ಈ ಚೆಡ್ಡಿಗಳ ನಗು ಎಡೂರಪ್ಪ ಲಗಾಟ ಹೊಡೆದ ನಂತರ ಹಿಂಗೇ ಇರುತ್ತೆ ಅಂತ ಹೇಳಾಕ ಬರೂದಿಲ್ಲ”.

“ಇದೊಂತರ ಹತಾಶೆ ಮುಚ್ಚಿಡೋ ಅಭಿಪ್ರಾಯದಂಗೆ ಇದೆಯಲ್ಲ ಸಾರ್”.

“ಹತಾಶ ಅನ್ನದು ನನ್ನ ಸನೇಕ ಸುಳೆದಿಲ್ಲರಿ. ಹತಾಶ ಏನಾರ ನನಗೆ ಇದ್ದಿದ್ರೆ ನನ್ನ ಅರವತ್ತನೇ ವರ್ಷದ ಅದ್ದೂರಿಯಿಂದೆ ಆಚರಿಸೊ ಏರ್ಪಾಡು ಮಾಡತಿದ್ವೆ. “

“ಹೌದ ಸಾರ್?”

“ಹೌದ್ರಿ, ನನಗೆ ಕೆಲವರ ನೋಡಿದ ಕೂಡ್ಳೆ ಬ್ಯಾಟ್ರಿ ಚಾರ್ಜಾಕ್ಕಿತಿ. ಚಡ್ಡಿಗಳ ನೋಡಿದ್ರೆ, ಪುರೋಹಿತರ ನೋಡಿದ್ರೆ, ಪೊಲೀಸರ ನೋಡಿದ್ರೆ, ಇನ್ನು ಕೆಲವರದಾರ ಅವರನ್ನ ನೋಡಿದ್ರೆ, ಅವರ ಬರದದ್ದನ್ನ ಓದಿದ್ರೆ ನನ್ನ ಬ್ಯಾಟರಿ ಚಾರ್ಜ್ ! ಅದಕ ನೋಡ್ರಿ ನನಗೆ ಎಪ್ಪತ್ತಾದದ್ದು ನನಗೇ ಗುರುತಾಗಲಿಲ್ಲ”.

  • ಬಿ. ಚಂದ್ರೇಗೌಡ

(ಚಂಪಾರವರಿಗೆ 70 ವರ್ಷ ತುಂಬಿದ ಸಂದರ್ಭದಲ್ಲಿ ಬಿ.ಚಂದ್ರೇಗೌಡರು ಬರೆದ ಯಾಹೂ ಲೇಖನ)


ಇದನ್ನೂ ಓದಿ; ಇಲ್ಲೇ ಇದ್ದೀರಿ ನಮ್ಮ ನೆನಪಿನ ಗುದ್ದಿನೊಳಗೆ: ಚಂಪಾರವರಿಗೆ ನುಡಿನಮನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...