Homeಚಳವಳಿಬಂಡಾಯ, ಕಿಲಾಡಿ, ಕಿಡಿಗೇಡಿತನ: ಚಂಪಾರವರೊಂದಿಗೆ ಯಾಹೂ ಮಾತುಕತೆ

ಬಂಡಾಯ, ಕಿಲಾಡಿ, ಕಿಡಿಗೇಡಿತನ: ಚಂಪಾರವರೊಂದಿಗೆ ಯಾಹೂ ಮಾತುಕತೆ

ಚಂಪಾರವರಿಗೆ 70 ವರ್ಷ ತುಂಬಿದ ಸಂದರ್ಭದಲ್ಲಿ ಬಿ.ಚಂದ್ರೇಗೌಡರು ಬರೆದ ಯಾಹೂ ಲೇಖನ

- Advertisement -
- Advertisement -

ಚಂಪಾರಿಗೆ ಎಪ್ಪತ್ತು! ನಂಬುವುದೇ ಕಷ್ಟ. ಅವರ ಬಂಡಾಯ, ಕಿಲಾಡಿ ಮತ್ತು ಕಿಡಿಗೇಡಿತನಕ್ಕೆ ಎಪ್ಪತ್ತು  ತುಂಬಲು ಸಾಧ್ಯವಿಲ್ಲ, ಅದು ಬಂಡಾಯ ಮತ್ತು ನವ್ಯದ ನಡುಕಾಲದಲ್ಲೇ ನಿಂತಿರಬೇಕು ಅನ್ನಿಸಿತು. ಆದರೂ ಅವರನ್ನು ಮಾತನಾಡಿಸಿ ಒಂದು ಹಾರೈಕೆ ಮಾತೇಳುವುದು ನಮ್ಮ ಕರ್ತವ್ಯವಲ್ಲವೆ. ಫೋನ್  ಮಾಡಿದ್ರೆ ಸಿಕ್ಕೇಬಿಟ್ರು.

“ಹಲೋ ನಮಸ್ಕಾರ ಸಾರ್, ನಾನು ಯಾಹೂ”

“ಯಾಹು ಅಂದ್ರ ಗೌರಿ ಲಂಕೇಶದಾಗ ಬರೀತಿರಲ್ಲಿ ಅವರ ಹೌದಲ್ಲೋ ?

“ಹೌದು ಸಾರ್”.

“ನಿಮ್ಮ ಹೆಸರೇನ್ರಿ ?”

“ಯಾಹೂ ಅಂತ ಸಾರ್ ?

“ಅದು ಖರೇರಿ, ತಂದಿ ತಾಯಿ ಇಟ್ಟ ಹೆಸರಿಲ್ಲೇನು ?”

“ಅದು ಕರಿಯಕ್ಕೆ ಚನ್ನಾಗಿಲ್ಲ ಅಂತ ಗೌರಿಮೇಡಂ ಯಾಹೂ ಅಂತ ಇಟ್ಟವರೆ ಸಾ”,

“ಅಂಗೆನ ಯದಕ ಫೋನ್ ಮಾಡಿದಿರಿ ಹೇಳ್ರಲ್ಲ ?”

“ಯಪ್ಪತ್ತು ವರ್ಸಾಯ್ತಂತಲ್ಲ ಸಾರ್ ನಿಮಗೆ ?”

 “ಅನಂತಮೂರ್ತಿಗಾಗ್ಲೆ ಎಪ್ಪತ್ತಾರಾತು ಗೊತ್ತೇನ ?”

“ಅವು ಎಪ್ಪತ್ತಾರಕ್ಕಿಂತ್ಲೂ ಜಾಸ್ತಿಯಾದಂಗೆ ಕಣ್ತಾರೆ. ಆದ್ರೆ ನೀವು ಮಾತ್ರ ಇನ್ನು ಐವತ್ತಾರು ವರ್ಷದಂಗೆ ಕಾಣ್ತೀರಿ. ಇದರ ಗುಟ್ಟೇನು ಸಾರ್ ?

“ಇದರಾಗ ಗುಟ್ಟೇನು ಬಂತ್ರಿ, ನನ್ನ ಮಾತುಕತಿ, ಬರವಣಿಗೆ, ನಡವಳಿಕೆ ಇವೇನದಾವು ಇವುಕೂ, ನನ್ನ ವಯಸಿಗೂ ಸಂಬಂದಿಲ್ಲ, ನಮ್ಮ ದೇಶದಾಗ ಒಂದೊಂದು ವಯೋಮಾನಕ್ಕೆ ಒಂದೊಂದು ನಡವಳಿಕೆ ಇರಾಕೆ ಬೇಕು ಅಂತ ಹೇಳಿ ನಿಯಮ ಮಾಡ್ಕಾರ, ಅದನ್ನ ಮುರಕೊಂಡ ಹೋದ್ರೆ ನಾವು ಅರಾಮಿರತೇವಿ, ಅಷ್ಟ”.

“ನೀವೀಗ ಯಾವುದನ್ನು ಮುರದಿದ್ದಿರಿ ಸಾರ್ ?”

“ಅರವತ್ತರ ಅರಳುಮರಳು ಮುರುದು ಹತ್ತು ವರ್ಸಾತು”

“ಈ ಎಪ್ಪತ್ತು ವರ್ಷದಲ್ಲಿ ಹಿಂತಿರುಗಿ ನೋಡಿದ್ರೆ ಏನನಸ್ತದೆ ಸಾರ್ ?

“ಭಾಳ ಮಂದಿ ಸಾವಿಗೆ ಸಂತಾಪ ಬರದೇನಿ, ಇನ್ನ ರಗಡ ಮಂದಿಗೆ ಬರಿಬೇಕಲ್ಲಪ್ಪಾ ಅನಸತೈತಿ.”

“ನೀವು ಸಂತಾಪ ಬರಿಯೋ ಮಂದಿ ಬಹಳ ಜನ ಉಳಿದಿಲ್ಲವಲ್ಲ ಸಾರ್ ?”

“ಏ, ಭಾಳ ಮಂದ್ಯದಾರ, ಪುರೋಹಿತರ ಪೈಕಿನ ಒಂದು ಡಜನ್ ಅದಾರ, ರಾಜಕಾರಣದಾಗ ಮೂರು ನಾಕು ಮಂದಿ ಆದಾರ, ಸಾಹಿತ್ಯ ಲೋಕದಾಗ ಆಯಸ್ಸು ಮುಗಿಸಿ ಹೋಗೋ ಮಂದಿಗಿಂತ ಲಬಕ್ಕನ ಹೋಗೋ ಮಂದಿ ಭಾಳದಾರ”.

“ಅದರಲ್ಲೂ ಬಂಡಾಯದೋರು ಬೇಗ ಹೋಗ್ತರಲ್ಲ ಸಾರ್ ?”

“ಹೌದ್ರಿ,  ನವೋದಯದವರು ಪಿಂಚಣಿ ತೊಗಂಡು ಆರಾಮವಾಗಿದ್ದಾರ. ನವ್ಯದವರು, ಬಂಡಾಯದವರು ಕೂಡೇ ಹೊಂಟ ಹೋದರ್‍ರಿ”.

“ಸಾಹಿತ್ಯ ಲೋಕದಲ್ಲಿ ನವೋದಯ, ಪ್ರಗತಿಶೀಲ, ನವ್ಯ, ಬಂಡಾಯ ಅಂತ ಕೆಲವು ಕಾಲಘಟ್ಟಗಳವಲ್ಲಾ ಸಾರ್, ನಿಮ್ಮ ಬರವಣಿಗೆ ಹೋರಾಟ, ಯಾವ ಘಟ್ಟದಲ್ಲಿ ತೀವ್ರವಾಗಿತ್ತು ಸಾರ್.

“ನೋಡಿ ಇವರೆ, ನಾವು ಯಾವ ಕಾಲಘಟ್ಟದಾಗೂ ಎರಡೂ ಕಾಲಿಟ್ಟವರಲ್ಲ. ಒಂದೊಂದೇ ಕಾಲಿಟ್ಟು ಹಿಂದ ತಗದೇವಿ”.

“ಯಾಕ್ ಸರ್ ?”

“ಯಾಕ್ ಅಂದ್ರ, ಒಂದು ಲೇಬಲ್ ಹಚಗೊಂಡು ಬರಿಯೂದಂದ್ರ ನನಗಾಗುದಿಲ್ರಿ,

ಮೊದಲಿಕ್ಕ ನವೋದಯದವರು ಬರಿಯಕ್ಕತ್ತಿದ್ರು. ಅವುರಿಗೆ ಆಗ ಲೇಬಲ್ ಇರಲಿಲ್ಲ. ಈ ನಮ್ಮ ಪಿತಾಮಹರಿಗೆ ಯಂಗೋ ಏನೋ ನವೋದಯದವರು ಅನ್ನೋ ಲೇಬಲ್ ಸಿಕ್ಕು ‘ಏ ನಮಗ ಲೇಬಲ್ ಸಿಕ್ತು’ ಅಂತೇಳಿ ಬರದು ಬರೆದು ಸುಸ್ತಾದರ್‍ರಿ.”

“ಆದ್ರು ಇವತ್ತಿಗೂ ಅವರನ್ನ ಓದಬವುದಲ್ಲ ಸಾರ್”…?

“ಕೆಲವು ಮಂದಿನ್ನ ಓದಬವುದು ಅಷ್ಟರಿ, ಇನ್ನ ಕೆಲವು ಮಂದಿ ಪುಸ್ತಕ ತೊಗಂಡು ಸಂತಾಪ ಸೂಚನೆ ಮಾಡಿ ಮುಂದೆ ಹೋಗಬಹುದು”.

“ಆ ತರ ಬರದಿರೋರು ಪ್ರಗತಿಶೀಲರಲ್ಲವ ಸಾರ್ ?”

“ಪ್ರಗತಿಶೀಲರು ಬರಕೊಂಡ್ ಬದುತ್ತೇವಿ ಅಂತ ಹೊಂಟರ್‍ರಿ. ಅದಕ ಅಂಗ ಬರದಾರ, ಪಾಪ ಮೊದಲಕ್ಕ ತಮ್ಮ ಸುತ್ತಮುತ್ತ ಕಾಣೋ ಸಮಾಜ ಕುರುತು ಬರದ್ರು. ಅದು ಖಾಲಿ ಆತು. ಅನಂತರ ಗಟಾರ ಜೀವನ ಬರಿಬೇಕು ಅಂತ ಹೊಂಟರ್‍ರಿ, ಅನುಭವದ ಸಲುವಾಗಿ ಗಟಾರಕ್ಕೋದ್ರು, ವಳ್ಳಿ ಬರಲಿಲ್ಲವರು. ‘ಏ ಇಲ್ಲಿ ಭಾಳ ಅರಾಮೈತ’ ಅಂತ ಅಲ್ಲೇ ಉಳುದ್ರು. “ಅಲ್ಲಿಂದ ಅಂಗೇ ಹೊಂಟೋದರಲ್ಲ?”

“ಹೌದ್ರಿ, ಇನ್ನ ನವ್ಯದವರಿಗೆ ಅನಾಥ ಪ್ರಜ್ಞೆ ಅಮರಿಕೊಂಡು ಏನು ನೋಡಿದ್ರೂ ಚಂದ ಕಾಣಿರಲಿಲ್ಲ ಅವರಿಗೆ. ಆದ್ರಿಂದ ಒಳಗೋದ್ರು. ವಳ್ಳಿ ಬರಲಿಲ್ಲವರು. ನಾವೊಂದಿಷ್ಟು ಮಂದಿ ಹೊರಬಂದು ಬಂಡಾಯದ ಕಡೆ ಹೊಂಟವಿ”.

“ಅಂಗಾದ್ರೆ ನಿಮ್ಮ ಬಂಡಾಯ ಮಧ್ಯಂತರದ್ದ ಸಾರ್ ?”

“ಇಲ್ರೀ, ಬಂಡಾಯ ನನ್ನ ಮನೋಧರ್ಮ, ನಾ ಪೆನ್ನ ತೊಗಂಡ ಕೂಡಲೇ ಹೊರಬಂದಿದ್ದೇ ಬಂಡಾಯ, ಧಾರವಾಡದಾಗ ಬೇಂದ್ರೆ, ಜೋಶಿ ಮತ್ತವರ ಬಳಗ, ಅನಂತರ ಸಿ.ಪ. ಶೆಟ್ಟಿ, ಗಿರಡ್ಡಿ, ಮಾಕು, ದೇಕು, ಗೋಕಾಕ್ ಇವರ ವಿರುದ್ಧ ನನ್ನ ಬಂಡಾಯ ಎಂದೂ ಇದ್ದದ್ದೆ. ಅದಕ ನೋಡ್ರಿ ಎಮರ್ಜೆನ್ಸಿಲಿ ನಾ ಒಬ್ಬವನೇ ಜೇಲಿಗೆ ಹೋದದ್ದು “.

“ಆಗ ಇಡೀ ಧಾರವಾಡ ಖುಷಿಪಡ್ತಾಂತಲ್ಲಾ ಸಾರ್?”

“ನಾ ಹೊರಬಂದಾಗ ಅಷ್ಟೇ ಬೇಸರಾತು ಅವರಿಗೆ”.

“ಜೈಲಲ್ಲಿ ನೀವು ಆರೆಸೆನ್ಸಿನವರ ಜೊತೆಗಿದ್ರಂತೆ ?”

“ಜೈಲಂದ್ರ ಮುಗಿತಲ್ರೀ ಅದು ಪಬ್ಲಿಕ್ ಪಡಖಾನಿ ಇದ್ದಂಗ, ಅಲ್ಲಿಗೆ ದರವೊಬ್ಬರೂ ಬರತಾರ, ಅಂಗ ಚೆಡ್ಡಿ ಹುಡ್ರು ಬಂದಿದ್ದು, ಕೆಲವುರು ನಾ ಆರೆಸ್ಸೆಸ್ಸಲ್ಲ ಅಂತ ಅಳಾಕತ್ತಿದ್ರು.”

“ಆದ್ರಿವತ್ತು ಯಂಗೆ ನಗ್ತಾರೆ ನೋಡಿ ಸಾರ್”

“ಇಲ್ಲಿ ಯಾರ ನಗೂನೂ ಶಾಶ್ವತ ಅಲ್ಲರೀ. ಒಂದು ಕಾಲಕ್ಕೆ ಕಾಂಗ್ರೆಸ್‌ನವರು ಅಂದ್ರೆ ಮಂದಿ ಹೆದರುತಿದ್ದರು. ಆದ್ರ ಇವತ್ತು ಕಾಂಗ್ರೆಸ್ಸಿನವರು ಅಂದ್ರೆ ಒಂದೀಟು ಡುಬ್ಬು ಕೆರೆದು ಹೋಕ್ಯೇನಾ ಅನ್ನಂಗಾಗೇರೆ. ಅಂಗ ಈ ಚೆಡ್ಡಿಗಳ ನಗು ಎಡೂರಪ್ಪ ಲಗಾಟ ಹೊಡೆದ ನಂತರ ಹಿಂಗೇ ಇರುತ್ತೆ ಅಂತ ಹೇಳಾಕ ಬರೂದಿಲ್ಲ”.

“ಇದೊಂತರ ಹತಾಶೆ ಮುಚ್ಚಿಡೋ ಅಭಿಪ್ರಾಯದಂಗೆ ಇದೆಯಲ್ಲ ಸಾರ್”.

“ಹತಾಶ ಅನ್ನದು ನನ್ನ ಸನೇಕ ಸುಳೆದಿಲ್ಲರಿ. ಹತಾಶ ಏನಾರ ನನಗೆ ಇದ್ದಿದ್ರೆ ನನ್ನ ಅರವತ್ತನೇ ವರ್ಷದ ಅದ್ದೂರಿಯಿಂದೆ ಆಚರಿಸೊ ಏರ್ಪಾಡು ಮಾಡತಿದ್ವೆ. “

“ಹೌದ ಸಾರ್?”

“ಹೌದ್ರಿ, ನನಗೆ ಕೆಲವರ ನೋಡಿದ ಕೂಡ್ಳೆ ಬ್ಯಾಟ್ರಿ ಚಾರ್ಜಾಕ್ಕಿತಿ. ಚಡ್ಡಿಗಳ ನೋಡಿದ್ರೆ, ಪುರೋಹಿತರ ನೋಡಿದ್ರೆ, ಪೊಲೀಸರ ನೋಡಿದ್ರೆ, ಇನ್ನು ಕೆಲವರದಾರ ಅವರನ್ನ ನೋಡಿದ್ರೆ, ಅವರ ಬರದದ್ದನ್ನ ಓದಿದ್ರೆ ನನ್ನ ಬ್ಯಾಟರಿ ಚಾರ್ಜ್ ! ಅದಕ ನೋಡ್ರಿ ನನಗೆ ಎಪ್ಪತ್ತಾದದ್ದು ನನಗೇ ಗುರುತಾಗಲಿಲ್ಲ”.

  • ಬಿ. ಚಂದ್ರೇಗೌಡ

(ಚಂಪಾರವರಿಗೆ 70 ವರ್ಷ ತುಂಬಿದ ಸಂದರ್ಭದಲ್ಲಿ ಬಿ.ಚಂದ್ರೇಗೌಡರು ಬರೆದ ಯಾಹೂ ಲೇಖನ)


ಇದನ್ನೂ ಓದಿ; ಇಲ್ಲೇ ಇದ್ದೀರಿ ನಮ್ಮ ನೆನಪಿನ ಗುದ್ದಿನೊಳಗೆ: ಚಂಪಾರವರಿಗೆ ನುಡಿನಮನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...