Homeಮುಖಪುಟಕಟ್ಟೆಪುರಾಣ: ಮೋದಿಗೆ ಬುದ್ದಿಲ್ಲ, ಶಾಗೆ ತಲಿಲ್ಲ. ಅದ್ಕೆ ಇಂತ ಕಾನೂನು!

ಕಟ್ಟೆಪುರಾಣ: ಮೋದಿಗೆ ಬುದ್ದಿಲ್ಲ, ಶಾಗೆ ತಲಿಲ್ಲ. ಅದ್ಕೆ ಇಂತ ಕಾನೂನು!

- Advertisement -
- Advertisement -

ಉಗ್ರ ಚಿಂತಾಕ್ರಾಂತನಾಗಿ ಕುಳಿತಿದ್ದುದನ್ನು ಗಮನಿಸಿದ ಜುಮ್ಮಿ.

ಅದ್ಯಾಕ್ಲ ಹೆಂಡತಿ ಸತ್ತೋನಂಗೆ ತಲೆಮ್ಯಾಲೆ ಕೈ ಹೊತ್ತಗಂಡು ಕುಂತಿದ್ದಿ ಎಂದಳು.

ಹೇಳಿದ್ರೆ ನಿನಿಗೆ ಅರ್ಥಾಗದಿಲ್ಲ ಕಣೆ ಎಂದ.

ವಾಟಿಸ್ಸೆ ಬಂದ ಅವುನ್ನೇ ಕೇಳ್ತಿನಿ ಬುಡು.

ಗುಡಮಾನಿಂಗು ಕಣಕ್ಕ.

ಗೂಡೆ ಮಾರಮ್ಮನೂ ಬ್ಯಾಡ ಕ್ವಾಟೆ ಮಾರಮ್ಮನೂ ಬ್ಯಾಡ. ಈ ಉಗ್ರಿ ಊದಿಕಂಡು ಕುಂತವುನೆ. ಯಾಕ್ಲ ಅಂದ್ರೆ, ಹೇಳದ್ರೆ ನಿನಿಗೆ ಗೊತ್ತಾಗದಿಲ್ಲ ಅಂತನೆ ಅದೇನಾಗ್ಯದೆ ನೀನಾರ ಹೇಳ್ಳ ವಾಟಿಸ್ಸೆ.

ಏನಾಗ್ಯದೆ ಅಂತ ಇವತ್ತೇಳಿದ್ರೆ ಗೊತ್ತಾಗದಿಲ್ಲ ಕಣಕ್ಕ ಬಿಜೆಪಿಗಳು ಅಧಿಕಾರಕ್ಕೆ ಬಂದಾಗ್ಲೆ ಸುರುವಾಗ್ಯದೆ. ಈಗ ವರ್ಕು ಪಾಸ್ಟಾಗ್ಯದೆ ಅಷ್ಟೇ ಕಣಕ್ಕ.

ಅದೇನು ವರಕಲಾ.

ಅದೇನವ್ವ ಅಂದ್ರೆ ಬಿಜೆಪಿಗಳು ದೇಶನೆ ಸರ್ವನಾಶ ಮಾಡಕ್ಕೆ ವಂಟಿದ್ರಲ್ಲಕ್ಕ. ಈಗ ರೈತರನೇ ಮುಗಸೋ ಕಾನೂನು ತತ್ತಾ ಅವುರೆ.

ಅದೇನು ಅಂತ ಕಾನೂನು.

ಅದೇನವ್ವ ಅಂದ್ರೆ ರೈತೆಲ್ಲದೋರು ಭೂಮಿಕೊಳ್ಳಂಗಿರಲಿಲ್ಲ. ಈಗ ಬಂದೂ ನಮ್ಮ ಭೂಮಿ ಕೊಳ್ಳಬವುದಂತೆ ಅಂತ ಕಾನೂನು ಬತ್ತಾ ಅದೆ.

ರೈತರಲ್ಲದೊರು ಅಂದ್ರೆ ಅದ್ಯಾರ್ಲ.

ದೇಸದಲ್ಲಿ ಪ್ಯಾಗುಟ್ರಿ ಮಡಗಿರೊ ಸಾವುಕಾರ್ರ್‍ಅವುರೆ, ಮಾರವಾಡಿಗಳವುರೆ, ಐಎಎಸ್, ಐಪಿಎಸ್ ಅಧಿಕಾರಿಗಳವುರೆ, ಬಿಜೆಪಿಗಳವುರೆ. ಅವರಿಗ್ಯಲ್ಲ ಭೂಮಿ ಬೇಕಾದ್ರೆ ಬಂದು ಕೇಳಿದಷ್ಟು ದುಡ್ಡು ಕೊಟ್ಟು ತಗತರೆ.

ತಗಂಡೇನು ಮಾಡ್ಯರೂ.

ಗೆಣಸು ಬ್ಯಳಿತರೆ, ಕಡ್ಳೆಕಾಯಿ ಬ್ಯಳಿತರೆ, ರಾಗಿ ಬ್ಯಳಿತರೆ.

ಸರಿಯಾಗೇಳ್ಳ ಅಣಕ ವಡಿಬ್ಯಾಡ.

ಏನು ಮಾಡ್ತರೆ ಗೊತ್ತೇನಕ್ಕಾ. ಈ ಉಗ್ರಿ ನಾನು ನೀನು ಸೀರಪ್ಪನಂಥೋರು ಮಾರಿಕತ್ತೀವಿ ಅನ್ನು. ಟೋಟ್ಲು ೨೦ ಯಕರೆ ಆಯ್ತು ಅನ್ನು. ಅದಕ್ಯಲ್ಲ ತಂತಿಬೇಲಿ ಹಾಕ್ತನೆ. ಅಮ್ಯಾಲೆ ಬಂದು ಟೀಕ್ ಮರನೋ, ಸಾಗುವಾನಿ ಮರನೋ ನೆಟ್ಟು ಒಂದು ಪಾರಂ ಹೌಸ್ ಮಾಡಿ, ಒಬ್ಬ ವಾಚ್ ಮ್ಯಾನ್ ಇಟ್ಟು ವಂಟೋಯ್ತನೆ. ಇಲ್ಲ ಹಾಳು ಬುಡ್ತನೆ.

ಅಂಗೆ ಮಾಡ್ತರೇನ್ಲ.

ನಮ್ಮೂರಿಗೂ ಬೆಂಗಳೂರಿಗೂ ಕಾರಲ್ಲಿ ಒಂದೂವರೆಗಂಟೆ ಜರ್ನಿ. ಅಲ್ಲಿಂದ ಬಂದು ಇಲ್ಲಿ ಪಾರ್ಟಿ ಮಾಡಿಕಂಡು, ನಾಟಿಕೋಳಿ ತಿಂದು, ಯಾರಾದ್ರು ಲೇಡಿ ಸಿಕ್ಕಿದ್ರೆ ರಾತ್ರಿ ಅವುಳ ಜೊತೆ ಇದ್ದು, ವಂಟೋಯ್ತರೆ ಕಣಕ್ಕ.

ಥೂ ಅವುರ ಮನಿಯಾಳಾಗ ಅಂಥೋರ ಸೇರುಸಬಾರ್ದು ಕಂಡ್ಳ ಇಲ್ಲೀ.

ಅಂಗಂತ ಎಡೂರಪ್ಪನಿಗೇಳು.

ಅವುನ ಕಾಲಾಗ್ಲೆ ಅತ್ತಮುಂದಾಗ್ಯವೆ ಅವುನಿಗೇನೇಳ್ತಿಯೊ ಎಂದ ಉಗ್ರಿ ಸಿಟ್ಟಿನಿಂದ.

ಇದರಲ್ಲವುಂದೇನು ತೆಪ್ಪಿಲ್ಲ ಕಣೋ. ಮೋದಿ ಶಾಗಳು ಹೇಳಿದ್ದ ಮಾಡ್ತ ಅವುನೆ.

ಅವುರ್‍ಯಾಕ್ಲ ಅಂಗೆ ಮಾಡ್ತ ಅವುರೆ.

ಅವುರು ಮಾರವಾಡಿಗಳ ರಾಜ್ಯ ಗುಜರಾತಿಂದ ಬಂದೋರು ಕಣ್ಣಕ್ಕ. ಯಾವುದೇ ವಿಷಯ ತಗಂಡ್ರೂ ಮಾರವಾಡಿಗಳ ತರ ಲಾಭ-ನಷ್ಟ ನೋಡ್ತರೆ. ಅದ್ಕೆ ರೈತರು ಬೇಸಾಯದಲ್ಲಿ ನಷ್ಟ ಮಾಡಿಕತ್ತಾ ಅವುರೆ ಅಂದ್ರೇ, ಅಂಗರೆ ಮಾರಿಬುಡಿ, ಕೈತುಂಬಾ ದುಡ್ಡು ಸಿಗತದೆ ಅರಾಮಾಗಿರಿ ಅಂತರೆ.

ಅಲ್ಲಾ ಕಂಡ್ಳ, ಜಮೀನ ನಾವ್ಯಾವತ್ತು ಲಾಭ ನಷ್ಟದಲ್ಲಿ ನೋಡಿದ್ದವೀ. ಅದರ ಜ್ವತೆ ಬುದುಕ್ತಯಿದ್ದೀವಿ. ಬೇಜಾರಾದ್ರೆ ವಲ್ತಕ್ಕೋಯ್ತಿವಿ. ದನ ಮೇಸ್ತಿವಿ, ಯಮ್ಮೆ ಮೇಸ್ತಿವಿ, ಆಡುಕುರಿ ಮೇಸ್ತಿವಿ. ಅವುನ್ಯಲ್ಲ ಮೇಸಕ್ಕೆ ಜಮೀನು ಬ್ಯಾಡವೇ?

ಬೇಕವ್ವ. ಅದು ಮೋದಿಶಾಗೆ ಹೊಳಿಬೇಕಲ್ಲ. ಮೋದಿಗೆ ಬುದ್ದಿಲ್ಲ. ಶಾಗೆ ತಲಿಲ್ಲ. ಅದ್ಕೆ ಇಂತ ಮನಿಯಾಳ ಕಾನೂನು ತಂದು ಇಡೀ ದೇಶದ ರೈತರು ದಿಕ್ಕು ದೆಸೆಯಿಲ್ದೆ ನ್ಯಲೆ ಕಳಕಂಡು ಅಲಿಯಂಗೆ ಮಾಡ್ತ ಅವುರೆ.

ಇದ ತಡಿಯಕ್ಕಾಗದಿಲವೆ.

ತಡಿಬೇಕಾದ್ರೆ, ರೈತದು ಬೀದಿಗೆ ಬರಬೇಕು. ಚಳುವಳಿ ಮಾಡಬೇಕು. ಆದ್ರೆ ಕರೊನ ಬಂದು ಹಟಕಾಯಿಸಿಗಂಡದೆ. ಅಂಗಾಗಿ ಯಾರೂ ಬೀದಿಗ ಬರಂಗಿಲ್ಲ. ಅದ್ಕೆ, ಇದೇ ಸರಿಯಾದ ಟೈಮು ಅಂತ, ಬಿಜೆಪಿಗಳು ಯೋಚನೆ ಮಾಡಿ, ಎಪಿಎಂಸಿ ಕತೆ ಮುಗಿಸಿದ್ರು. ಈಗ ರೈತರ ಕತೆ ಮುಗುಸ್ತ ಅವುರೆ.

ಅಂಗಾದ್ರೆ ಗತಿಯೇನ್ಲಾ.

ಗತಿ ಇನ್ನೇನು, ಈಗಾಗ್ಲೆ ಬೆಂಗಳೂರಿಂದ ಕುಬೇರ್ರು ಬಂದು ಜಮೀನ ಹುಡುಕ್ತ ಇದ್ದರಂತೆ. ಇನ್ನುಮುಂದೆ ರೈತರೆಲ್ಲ ಹೋಗಿ ಕೃಷಿ ಕಾರ್ಮಿಕರಾಯ್ತರೆ, ಅಷ್ಟೇಯ.

ಅಯ್ಯೋ ಅವುರ ಮನಿಯಾಳಾಗ ಹೋಗು. ಇವುರ ಸೊಲ್ಲು ಯಾವತ್ತಡಗತದ್ಲ.

  • ಬಿ.ಚಂದ್ರೇಗೌಡ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...