Homeಮುಖಪುಟಕಟ್ಟೆಪುರಾಣ: ಮೋದಿಗೆ ಬುದ್ದಿಲ್ಲ, ಶಾಗೆ ತಲಿಲ್ಲ. ಅದ್ಕೆ ಇಂತ ಕಾನೂನು!

ಕಟ್ಟೆಪುರಾಣ: ಮೋದಿಗೆ ಬುದ್ದಿಲ್ಲ, ಶಾಗೆ ತಲಿಲ್ಲ. ಅದ್ಕೆ ಇಂತ ಕಾನೂನು!

- Advertisement -
- Advertisement -

ಉಗ್ರ ಚಿಂತಾಕ್ರಾಂತನಾಗಿ ಕುಳಿತಿದ್ದುದನ್ನು ಗಮನಿಸಿದ ಜುಮ್ಮಿ.

ಅದ್ಯಾಕ್ಲ ಹೆಂಡತಿ ಸತ್ತೋನಂಗೆ ತಲೆಮ್ಯಾಲೆ ಕೈ ಹೊತ್ತಗಂಡು ಕುಂತಿದ್ದಿ ಎಂದಳು.

ಹೇಳಿದ್ರೆ ನಿನಿಗೆ ಅರ್ಥಾಗದಿಲ್ಲ ಕಣೆ ಎಂದ.

ವಾಟಿಸ್ಸೆ ಬಂದ ಅವುನ್ನೇ ಕೇಳ್ತಿನಿ ಬುಡು.

ಗುಡಮಾನಿಂಗು ಕಣಕ್ಕ.

ಗೂಡೆ ಮಾರಮ್ಮನೂ ಬ್ಯಾಡ ಕ್ವಾಟೆ ಮಾರಮ್ಮನೂ ಬ್ಯಾಡ. ಈ ಉಗ್ರಿ ಊದಿಕಂಡು ಕುಂತವುನೆ. ಯಾಕ್ಲ ಅಂದ್ರೆ, ಹೇಳದ್ರೆ ನಿನಿಗೆ ಗೊತ್ತಾಗದಿಲ್ಲ ಅಂತನೆ ಅದೇನಾಗ್ಯದೆ ನೀನಾರ ಹೇಳ್ಳ ವಾಟಿಸ್ಸೆ.

ಏನಾಗ್ಯದೆ ಅಂತ ಇವತ್ತೇಳಿದ್ರೆ ಗೊತ್ತಾಗದಿಲ್ಲ ಕಣಕ್ಕ ಬಿಜೆಪಿಗಳು ಅಧಿಕಾರಕ್ಕೆ ಬಂದಾಗ್ಲೆ ಸುರುವಾಗ್ಯದೆ. ಈಗ ವರ್ಕು ಪಾಸ್ಟಾಗ್ಯದೆ ಅಷ್ಟೇ ಕಣಕ್ಕ.

ಅದೇನು ವರಕಲಾ.

ಅದೇನವ್ವ ಅಂದ್ರೆ ಬಿಜೆಪಿಗಳು ದೇಶನೆ ಸರ್ವನಾಶ ಮಾಡಕ್ಕೆ ವಂಟಿದ್ರಲ್ಲಕ್ಕ. ಈಗ ರೈತರನೇ ಮುಗಸೋ ಕಾನೂನು ತತ್ತಾ ಅವುರೆ.

ಅದೇನು ಅಂತ ಕಾನೂನು.

ಅದೇನವ್ವ ಅಂದ್ರೆ ರೈತೆಲ್ಲದೋರು ಭೂಮಿಕೊಳ್ಳಂಗಿರಲಿಲ್ಲ. ಈಗ ಬಂದೂ ನಮ್ಮ ಭೂಮಿ ಕೊಳ್ಳಬವುದಂತೆ ಅಂತ ಕಾನೂನು ಬತ್ತಾ ಅದೆ.

ರೈತರಲ್ಲದೊರು ಅಂದ್ರೆ ಅದ್ಯಾರ್ಲ.

ದೇಸದಲ್ಲಿ ಪ್ಯಾಗುಟ್ರಿ ಮಡಗಿರೊ ಸಾವುಕಾರ್ರ್‍ಅವುರೆ, ಮಾರವಾಡಿಗಳವುರೆ, ಐಎಎಸ್, ಐಪಿಎಸ್ ಅಧಿಕಾರಿಗಳವುರೆ, ಬಿಜೆಪಿಗಳವುರೆ. ಅವರಿಗ್ಯಲ್ಲ ಭೂಮಿ ಬೇಕಾದ್ರೆ ಬಂದು ಕೇಳಿದಷ್ಟು ದುಡ್ಡು ಕೊಟ್ಟು ತಗತರೆ.

ತಗಂಡೇನು ಮಾಡ್ಯರೂ.

ಗೆಣಸು ಬ್ಯಳಿತರೆ, ಕಡ್ಳೆಕಾಯಿ ಬ್ಯಳಿತರೆ, ರಾಗಿ ಬ್ಯಳಿತರೆ.

ಸರಿಯಾಗೇಳ್ಳ ಅಣಕ ವಡಿಬ್ಯಾಡ.

ಏನು ಮಾಡ್ತರೆ ಗೊತ್ತೇನಕ್ಕಾ. ಈ ಉಗ್ರಿ ನಾನು ನೀನು ಸೀರಪ್ಪನಂಥೋರು ಮಾರಿಕತ್ತೀವಿ ಅನ್ನು. ಟೋಟ್ಲು ೨೦ ಯಕರೆ ಆಯ್ತು ಅನ್ನು. ಅದಕ್ಯಲ್ಲ ತಂತಿಬೇಲಿ ಹಾಕ್ತನೆ. ಅಮ್ಯಾಲೆ ಬಂದು ಟೀಕ್ ಮರನೋ, ಸಾಗುವಾನಿ ಮರನೋ ನೆಟ್ಟು ಒಂದು ಪಾರಂ ಹೌಸ್ ಮಾಡಿ, ಒಬ್ಬ ವಾಚ್ ಮ್ಯಾನ್ ಇಟ್ಟು ವಂಟೋಯ್ತನೆ. ಇಲ್ಲ ಹಾಳು ಬುಡ್ತನೆ.

ಅಂಗೆ ಮಾಡ್ತರೇನ್ಲ.

ನಮ್ಮೂರಿಗೂ ಬೆಂಗಳೂರಿಗೂ ಕಾರಲ್ಲಿ ಒಂದೂವರೆಗಂಟೆ ಜರ್ನಿ. ಅಲ್ಲಿಂದ ಬಂದು ಇಲ್ಲಿ ಪಾರ್ಟಿ ಮಾಡಿಕಂಡು, ನಾಟಿಕೋಳಿ ತಿಂದು, ಯಾರಾದ್ರು ಲೇಡಿ ಸಿಕ್ಕಿದ್ರೆ ರಾತ್ರಿ ಅವುಳ ಜೊತೆ ಇದ್ದು, ವಂಟೋಯ್ತರೆ ಕಣಕ್ಕ.

ಥೂ ಅವುರ ಮನಿಯಾಳಾಗ ಅಂಥೋರ ಸೇರುಸಬಾರ್ದು ಕಂಡ್ಳ ಇಲ್ಲೀ.

ಅಂಗಂತ ಎಡೂರಪ್ಪನಿಗೇಳು.

ಅವುನ ಕಾಲಾಗ್ಲೆ ಅತ್ತಮುಂದಾಗ್ಯವೆ ಅವುನಿಗೇನೇಳ್ತಿಯೊ ಎಂದ ಉಗ್ರಿ ಸಿಟ್ಟಿನಿಂದ.

ಇದರಲ್ಲವುಂದೇನು ತೆಪ್ಪಿಲ್ಲ ಕಣೋ. ಮೋದಿ ಶಾಗಳು ಹೇಳಿದ್ದ ಮಾಡ್ತ ಅವುನೆ.

ಅವುರ್‍ಯಾಕ್ಲ ಅಂಗೆ ಮಾಡ್ತ ಅವುರೆ.

ಅವುರು ಮಾರವಾಡಿಗಳ ರಾಜ್ಯ ಗುಜರಾತಿಂದ ಬಂದೋರು ಕಣ್ಣಕ್ಕ. ಯಾವುದೇ ವಿಷಯ ತಗಂಡ್ರೂ ಮಾರವಾಡಿಗಳ ತರ ಲಾಭ-ನಷ್ಟ ನೋಡ್ತರೆ. ಅದ್ಕೆ ರೈತರು ಬೇಸಾಯದಲ್ಲಿ ನಷ್ಟ ಮಾಡಿಕತ್ತಾ ಅವುರೆ ಅಂದ್ರೇ, ಅಂಗರೆ ಮಾರಿಬುಡಿ, ಕೈತುಂಬಾ ದುಡ್ಡು ಸಿಗತದೆ ಅರಾಮಾಗಿರಿ ಅಂತರೆ.

ಅಲ್ಲಾ ಕಂಡ್ಳ, ಜಮೀನ ನಾವ್ಯಾವತ್ತು ಲಾಭ ನಷ್ಟದಲ್ಲಿ ನೋಡಿದ್ದವೀ. ಅದರ ಜ್ವತೆ ಬುದುಕ್ತಯಿದ್ದೀವಿ. ಬೇಜಾರಾದ್ರೆ ವಲ್ತಕ್ಕೋಯ್ತಿವಿ. ದನ ಮೇಸ್ತಿವಿ, ಯಮ್ಮೆ ಮೇಸ್ತಿವಿ, ಆಡುಕುರಿ ಮೇಸ್ತಿವಿ. ಅವುನ್ಯಲ್ಲ ಮೇಸಕ್ಕೆ ಜಮೀನು ಬ್ಯಾಡವೇ?

ಬೇಕವ್ವ. ಅದು ಮೋದಿಶಾಗೆ ಹೊಳಿಬೇಕಲ್ಲ. ಮೋದಿಗೆ ಬುದ್ದಿಲ್ಲ. ಶಾಗೆ ತಲಿಲ್ಲ. ಅದ್ಕೆ ಇಂತ ಮನಿಯಾಳ ಕಾನೂನು ತಂದು ಇಡೀ ದೇಶದ ರೈತರು ದಿಕ್ಕು ದೆಸೆಯಿಲ್ದೆ ನ್ಯಲೆ ಕಳಕಂಡು ಅಲಿಯಂಗೆ ಮಾಡ್ತ ಅವುರೆ.

ಇದ ತಡಿಯಕ್ಕಾಗದಿಲವೆ.

ತಡಿಬೇಕಾದ್ರೆ, ರೈತದು ಬೀದಿಗೆ ಬರಬೇಕು. ಚಳುವಳಿ ಮಾಡಬೇಕು. ಆದ್ರೆ ಕರೊನ ಬಂದು ಹಟಕಾಯಿಸಿಗಂಡದೆ. ಅಂಗಾಗಿ ಯಾರೂ ಬೀದಿಗ ಬರಂಗಿಲ್ಲ. ಅದ್ಕೆ, ಇದೇ ಸರಿಯಾದ ಟೈಮು ಅಂತ, ಬಿಜೆಪಿಗಳು ಯೋಚನೆ ಮಾಡಿ, ಎಪಿಎಂಸಿ ಕತೆ ಮುಗಿಸಿದ್ರು. ಈಗ ರೈತರ ಕತೆ ಮುಗುಸ್ತ ಅವುರೆ.

ಅಂಗಾದ್ರೆ ಗತಿಯೇನ್ಲಾ.

ಗತಿ ಇನ್ನೇನು, ಈಗಾಗ್ಲೆ ಬೆಂಗಳೂರಿಂದ ಕುಬೇರ್ರು ಬಂದು ಜಮೀನ ಹುಡುಕ್ತ ಇದ್ದರಂತೆ. ಇನ್ನುಮುಂದೆ ರೈತರೆಲ್ಲ ಹೋಗಿ ಕೃಷಿ ಕಾರ್ಮಿಕರಾಯ್ತರೆ, ಅಷ್ಟೇಯ.

ಅಯ್ಯೋ ಅವುರ ಮನಿಯಾಳಾಗ ಹೋಗು. ಇವುರ ಸೊಲ್ಲು ಯಾವತ್ತಡಗತದ್ಲ.

  • ಬಿ.ಚಂದ್ರೇಗೌಡ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...