Homeಮುಖಪುಟಕಟ್ಟೆಪುರಾಣ: ಮೋದಿಗೆ ಬುದ್ದಿಲ್ಲ, ಶಾಗೆ ತಲಿಲ್ಲ. ಅದ್ಕೆ ಇಂತ ಕಾನೂನು!

ಕಟ್ಟೆಪುರಾಣ: ಮೋದಿಗೆ ಬುದ್ದಿಲ್ಲ, ಶಾಗೆ ತಲಿಲ್ಲ. ಅದ್ಕೆ ಇಂತ ಕಾನೂನು!

- Advertisement -
- Advertisement -

ಉಗ್ರ ಚಿಂತಾಕ್ರಾಂತನಾಗಿ ಕುಳಿತಿದ್ದುದನ್ನು ಗಮನಿಸಿದ ಜುಮ್ಮಿ.

ಅದ್ಯಾಕ್ಲ ಹೆಂಡತಿ ಸತ್ತೋನಂಗೆ ತಲೆಮ್ಯಾಲೆ ಕೈ ಹೊತ್ತಗಂಡು ಕುಂತಿದ್ದಿ ಎಂದಳು.

ಹೇಳಿದ್ರೆ ನಿನಿಗೆ ಅರ್ಥಾಗದಿಲ್ಲ ಕಣೆ ಎಂದ.

ವಾಟಿಸ್ಸೆ ಬಂದ ಅವುನ್ನೇ ಕೇಳ್ತಿನಿ ಬುಡು.

ಗುಡಮಾನಿಂಗು ಕಣಕ್ಕ.

ಗೂಡೆ ಮಾರಮ್ಮನೂ ಬ್ಯಾಡ ಕ್ವಾಟೆ ಮಾರಮ್ಮನೂ ಬ್ಯಾಡ. ಈ ಉಗ್ರಿ ಊದಿಕಂಡು ಕುಂತವುನೆ. ಯಾಕ್ಲ ಅಂದ್ರೆ, ಹೇಳದ್ರೆ ನಿನಿಗೆ ಗೊತ್ತಾಗದಿಲ್ಲ ಅಂತನೆ ಅದೇನಾಗ್ಯದೆ ನೀನಾರ ಹೇಳ್ಳ ವಾಟಿಸ್ಸೆ.

ಏನಾಗ್ಯದೆ ಅಂತ ಇವತ್ತೇಳಿದ್ರೆ ಗೊತ್ತಾಗದಿಲ್ಲ ಕಣಕ್ಕ ಬಿಜೆಪಿಗಳು ಅಧಿಕಾರಕ್ಕೆ ಬಂದಾಗ್ಲೆ ಸುರುವಾಗ್ಯದೆ. ಈಗ ವರ್ಕು ಪಾಸ್ಟಾಗ್ಯದೆ ಅಷ್ಟೇ ಕಣಕ್ಕ.

ಅದೇನು ವರಕಲಾ.

ಅದೇನವ್ವ ಅಂದ್ರೆ ಬಿಜೆಪಿಗಳು ದೇಶನೆ ಸರ್ವನಾಶ ಮಾಡಕ್ಕೆ ವಂಟಿದ್ರಲ್ಲಕ್ಕ. ಈಗ ರೈತರನೇ ಮುಗಸೋ ಕಾನೂನು ತತ್ತಾ ಅವುರೆ.

ಅದೇನು ಅಂತ ಕಾನೂನು.

ಅದೇನವ್ವ ಅಂದ್ರೆ ರೈತೆಲ್ಲದೋರು ಭೂಮಿಕೊಳ್ಳಂಗಿರಲಿಲ್ಲ. ಈಗ ಬಂದೂ ನಮ್ಮ ಭೂಮಿ ಕೊಳ್ಳಬವುದಂತೆ ಅಂತ ಕಾನೂನು ಬತ್ತಾ ಅದೆ.

ರೈತರಲ್ಲದೊರು ಅಂದ್ರೆ ಅದ್ಯಾರ್ಲ.

ದೇಸದಲ್ಲಿ ಪ್ಯಾಗುಟ್ರಿ ಮಡಗಿರೊ ಸಾವುಕಾರ್ರ್‍ಅವುರೆ, ಮಾರವಾಡಿಗಳವುರೆ, ಐಎಎಸ್, ಐಪಿಎಸ್ ಅಧಿಕಾರಿಗಳವುರೆ, ಬಿಜೆಪಿಗಳವುರೆ. ಅವರಿಗ್ಯಲ್ಲ ಭೂಮಿ ಬೇಕಾದ್ರೆ ಬಂದು ಕೇಳಿದಷ್ಟು ದುಡ್ಡು ಕೊಟ್ಟು ತಗತರೆ.

ತಗಂಡೇನು ಮಾಡ್ಯರೂ.

ಗೆಣಸು ಬ್ಯಳಿತರೆ, ಕಡ್ಳೆಕಾಯಿ ಬ್ಯಳಿತರೆ, ರಾಗಿ ಬ್ಯಳಿತರೆ.

ಸರಿಯಾಗೇಳ್ಳ ಅಣಕ ವಡಿಬ್ಯಾಡ.

ಏನು ಮಾಡ್ತರೆ ಗೊತ್ತೇನಕ್ಕಾ. ಈ ಉಗ್ರಿ ನಾನು ನೀನು ಸೀರಪ್ಪನಂಥೋರು ಮಾರಿಕತ್ತೀವಿ ಅನ್ನು. ಟೋಟ್ಲು ೨೦ ಯಕರೆ ಆಯ್ತು ಅನ್ನು. ಅದಕ್ಯಲ್ಲ ತಂತಿಬೇಲಿ ಹಾಕ್ತನೆ. ಅಮ್ಯಾಲೆ ಬಂದು ಟೀಕ್ ಮರನೋ, ಸಾಗುವಾನಿ ಮರನೋ ನೆಟ್ಟು ಒಂದು ಪಾರಂ ಹೌಸ್ ಮಾಡಿ, ಒಬ್ಬ ವಾಚ್ ಮ್ಯಾನ್ ಇಟ್ಟು ವಂಟೋಯ್ತನೆ. ಇಲ್ಲ ಹಾಳು ಬುಡ್ತನೆ.

ಅಂಗೆ ಮಾಡ್ತರೇನ್ಲ.

ನಮ್ಮೂರಿಗೂ ಬೆಂಗಳೂರಿಗೂ ಕಾರಲ್ಲಿ ಒಂದೂವರೆಗಂಟೆ ಜರ್ನಿ. ಅಲ್ಲಿಂದ ಬಂದು ಇಲ್ಲಿ ಪಾರ್ಟಿ ಮಾಡಿಕಂಡು, ನಾಟಿಕೋಳಿ ತಿಂದು, ಯಾರಾದ್ರು ಲೇಡಿ ಸಿಕ್ಕಿದ್ರೆ ರಾತ್ರಿ ಅವುಳ ಜೊತೆ ಇದ್ದು, ವಂಟೋಯ್ತರೆ ಕಣಕ್ಕ.

ಥೂ ಅವುರ ಮನಿಯಾಳಾಗ ಅಂಥೋರ ಸೇರುಸಬಾರ್ದು ಕಂಡ್ಳ ಇಲ್ಲೀ.

ಅಂಗಂತ ಎಡೂರಪ್ಪನಿಗೇಳು.

ಅವುನ ಕಾಲಾಗ್ಲೆ ಅತ್ತಮುಂದಾಗ್ಯವೆ ಅವುನಿಗೇನೇಳ್ತಿಯೊ ಎಂದ ಉಗ್ರಿ ಸಿಟ್ಟಿನಿಂದ.

ಇದರಲ್ಲವುಂದೇನು ತೆಪ್ಪಿಲ್ಲ ಕಣೋ. ಮೋದಿ ಶಾಗಳು ಹೇಳಿದ್ದ ಮಾಡ್ತ ಅವುನೆ.

ಅವುರ್‍ಯಾಕ್ಲ ಅಂಗೆ ಮಾಡ್ತ ಅವುರೆ.

ಅವುರು ಮಾರವಾಡಿಗಳ ರಾಜ್ಯ ಗುಜರಾತಿಂದ ಬಂದೋರು ಕಣ್ಣಕ್ಕ. ಯಾವುದೇ ವಿಷಯ ತಗಂಡ್ರೂ ಮಾರವಾಡಿಗಳ ತರ ಲಾಭ-ನಷ್ಟ ನೋಡ್ತರೆ. ಅದ್ಕೆ ರೈತರು ಬೇಸಾಯದಲ್ಲಿ ನಷ್ಟ ಮಾಡಿಕತ್ತಾ ಅವುರೆ ಅಂದ್ರೇ, ಅಂಗರೆ ಮಾರಿಬುಡಿ, ಕೈತುಂಬಾ ದುಡ್ಡು ಸಿಗತದೆ ಅರಾಮಾಗಿರಿ ಅಂತರೆ.

ಅಲ್ಲಾ ಕಂಡ್ಳ, ಜಮೀನ ನಾವ್ಯಾವತ್ತು ಲಾಭ ನಷ್ಟದಲ್ಲಿ ನೋಡಿದ್ದವೀ. ಅದರ ಜ್ವತೆ ಬುದುಕ್ತಯಿದ್ದೀವಿ. ಬೇಜಾರಾದ್ರೆ ವಲ್ತಕ್ಕೋಯ್ತಿವಿ. ದನ ಮೇಸ್ತಿವಿ, ಯಮ್ಮೆ ಮೇಸ್ತಿವಿ, ಆಡುಕುರಿ ಮೇಸ್ತಿವಿ. ಅವುನ್ಯಲ್ಲ ಮೇಸಕ್ಕೆ ಜಮೀನು ಬ್ಯಾಡವೇ?

ಬೇಕವ್ವ. ಅದು ಮೋದಿಶಾಗೆ ಹೊಳಿಬೇಕಲ್ಲ. ಮೋದಿಗೆ ಬುದ್ದಿಲ್ಲ. ಶಾಗೆ ತಲಿಲ್ಲ. ಅದ್ಕೆ ಇಂತ ಮನಿಯಾಳ ಕಾನೂನು ತಂದು ಇಡೀ ದೇಶದ ರೈತರು ದಿಕ್ಕು ದೆಸೆಯಿಲ್ದೆ ನ್ಯಲೆ ಕಳಕಂಡು ಅಲಿಯಂಗೆ ಮಾಡ್ತ ಅವುರೆ.

ಇದ ತಡಿಯಕ್ಕಾಗದಿಲವೆ.

ತಡಿಬೇಕಾದ್ರೆ, ರೈತದು ಬೀದಿಗೆ ಬರಬೇಕು. ಚಳುವಳಿ ಮಾಡಬೇಕು. ಆದ್ರೆ ಕರೊನ ಬಂದು ಹಟಕಾಯಿಸಿಗಂಡದೆ. ಅಂಗಾಗಿ ಯಾರೂ ಬೀದಿಗ ಬರಂಗಿಲ್ಲ. ಅದ್ಕೆ, ಇದೇ ಸರಿಯಾದ ಟೈಮು ಅಂತ, ಬಿಜೆಪಿಗಳು ಯೋಚನೆ ಮಾಡಿ, ಎಪಿಎಂಸಿ ಕತೆ ಮುಗಿಸಿದ್ರು. ಈಗ ರೈತರ ಕತೆ ಮುಗುಸ್ತ ಅವುರೆ.

ಅಂಗಾದ್ರೆ ಗತಿಯೇನ್ಲಾ.

ಗತಿ ಇನ್ನೇನು, ಈಗಾಗ್ಲೆ ಬೆಂಗಳೂರಿಂದ ಕುಬೇರ್ರು ಬಂದು ಜಮೀನ ಹುಡುಕ್ತ ಇದ್ದರಂತೆ. ಇನ್ನುಮುಂದೆ ರೈತರೆಲ್ಲ ಹೋಗಿ ಕೃಷಿ ಕಾರ್ಮಿಕರಾಯ್ತರೆ, ಅಷ್ಟೇಯ.

ಅಯ್ಯೋ ಅವುರ ಮನಿಯಾಳಾಗ ಹೋಗು. ಇವುರ ಸೊಲ್ಲು ಯಾವತ್ತಡಗತದ್ಲ.

  • ಬಿ.ಚಂದ್ರೇಗೌಡ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...