Homeಮುಖಪುಟಕಟ್ಟೆಪುರಾಣ: ಮೋದಿಗೆ ಬುದ್ದಿಲ್ಲ, ಶಾಗೆ ತಲಿಲ್ಲ. ಅದ್ಕೆ ಇಂತ ಕಾನೂನು!

ಕಟ್ಟೆಪುರಾಣ: ಮೋದಿಗೆ ಬುದ್ದಿಲ್ಲ, ಶಾಗೆ ತಲಿಲ್ಲ. ಅದ್ಕೆ ಇಂತ ಕಾನೂನು!

- Advertisement -
- Advertisement -

ಉಗ್ರ ಚಿಂತಾಕ್ರಾಂತನಾಗಿ ಕುಳಿತಿದ್ದುದನ್ನು ಗಮನಿಸಿದ ಜುಮ್ಮಿ.

ಅದ್ಯಾಕ್ಲ ಹೆಂಡತಿ ಸತ್ತೋನಂಗೆ ತಲೆಮ್ಯಾಲೆ ಕೈ ಹೊತ್ತಗಂಡು ಕುಂತಿದ್ದಿ ಎಂದಳು.

ಹೇಳಿದ್ರೆ ನಿನಿಗೆ ಅರ್ಥಾಗದಿಲ್ಲ ಕಣೆ ಎಂದ.

ವಾಟಿಸ್ಸೆ ಬಂದ ಅವುನ್ನೇ ಕೇಳ್ತಿನಿ ಬುಡು.

ಗುಡಮಾನಿಂಗು ಕಣಕ್ಕ.

ಗೂಡೆ ಮಾರಮ್ಮನೂ ಬ್ಯಾಡ ಕ್ವಾಟೆ ಮಾರಮ್ಮನೂ ಬ್ಯಾಡ. ಈ ಉಗ್ರಿ ಊದಿಕಂಡು ಕುಂತವುನೆ. ಯಾಕ್ಲ ಅಂದ್ರೆ, ಹೇಳದ್ರೆ ನಿನಿಗೆ ಗೊತ್ತಾಗದಿಲ್ಲ ಅಂತನೆ ಅದೇನಾಗ್ಯದೆ ನೀನಾರ ಹೇಳ್ಳ ವಾಟಿಸ್ಸೆ.

ಏನಾಗ್ಯದೆ ಅಂತ ಇವತ್ತೇಳಿದ್ರೆ ಗೊತ್ತಾಗದಿಲ್ಲ ಕಣಕ್ಕ ಬಿಜೆಪಿಗಳು ಅಧಿಕಾರಕ್ಕೆ ಬಂದಾಗ್ಲೆ ಸುರುವಾಗ್ಯದೆ. ಈಗ ವರ್ಕು ಪಾಸ್ಟಾಗ್ಯದೆ ಅಷ್ಟೇ ಕಣಕ್ಕ.

ಅದೇನು ವರಕಲಾ.

ಅದೇನವ್ವ ಅಂದ್ರೆ ಬಿಜೆಪಿಗಳು ದೇಶನೆ ಸರ್ವನಾಶ ಮಾಡಕ್ಕೆ ವಂಟಿದ್ರಲ್ಲಕ್ಕ. ಈಗ ರೈತರನೇ ಮುಗಸೋ ಕಾನೂನು ತತ್ತಾ ಅವುರೆ.

ಅದೇನು ಅಂತ ಕಾನೂನು.

ಅದೇನವ್ವ ಅಂದ್ರೆ ರೈತೆಲ್ಲದೋರು ಭೂಮಿಕೊಳ್ಳಂಗಿರಲಿಲ್ಲ. ಈಗ ಬಂದೂ ನಮ್ಮ ಭೂಮಿ ಕೊಳ್ಳಬವುದಂತೆ ಅಂತ ಕಾನೂನು ಬತ್ತಾ ಅದೆ.

ರೈತರಲ್ಲದೊರು ಅಂದ್ರೆ ಅದ್ಯಾರ್ಲ.

ದೇಸದಲ್ಲಿ ಪ್ಯಾಗುಟ್ರಿ ಮಡಗಿರೊ ಸಾವುಕಾರ್ರ್‍ಅವುರೆ, ಮಾರವಾಡಿಗಳವುರೆ, ಐಎಎಸ್, ಐಪಿಎಸ್ ಅಧಿಕಾರಿಗಳವುರೆ, ಬಿಜೆಪಿಗಳವುರೆ. ಅವರಿಗ್ಯಲ್ಲ ಭೂಮಿ ಬೇಕಾದ್ರೆ ಬಂದು ಕೇಳಿದಷ್ಟು ದುಡ್ಡು ಕೊಟ್ಟು ತಗತರೆ.

ತಗಂಡೇನು ಮಾಡ್ಯರೂ.

ಗೆಣಸು ಬ್ಯಳಿತರೆ, ಕಡ್ಳೆಕಾಯಿ ಬ್ಯಳಿತರೆ, ರಾಗಿ ಬ್ಯಳಿತರೆ.

ಸರಿಯಾಗೇಳ್ಳ ಅಣಕ ವಡಿಬ್ಯಾಡ.

ಏನು ಮಾಡ್ತರೆ ಗೊತ್ತೇನಕ್ಕಾ. ಈ ಉಗ್ರಿ ನಾನು ನೀನು ಸೀರಪ್ಪನಂಥೋರು ಮಾರಿಕತ್ತೀವಿ ಅನ್ನು. ಟೋಟ್ಲು ೨೦ ಯಕರೆ ಆಯ್ತು ಅನ್ನು. ಅದಕ್ಯಲ್ಲ ತಂತಿಬೇಲಿ ಹಾಕ್ತನೆ. ಅಮ್ಯಾಲೆ ಬಂದು ಟೀಕ್ ಮರನೋ, ಸಾಗುವಾನಿ ಮರನೋ ನೆಟ್ಟು ಒಂದು ಪಾರಂ ಹೌಸ್ ಮಾಡಿ, ಒಬ್ಬ ವಾಚ್ ಮ್ಯಾನ್ ಇಟ್ಟು ವಂಟೋಯ್ತನೆ. ಇಲ್ಲ ಹಾಳು ಬುಡ್ತನೆ.

ಅಂಗೆ ಮಾಡ್ತರೇನ್ಲ.

ನಮ್ಮೂರಿಗೂ ಬೆಂಗಳೂರಿಗೂ ಕಾರಲ್ಲಿ ಒಂದೂವರೆಗಂಟೆ ಜರ್ನಿ. ಅಲ್ಲಿಂದ ಬಂದು ಇಲ್ಲಿ ಪಾರ್ಟಿ ಮಾಡಿಕಂಡು, ನಾಟಿಕೋಳಿ ತಿಂದು, ಯಾರಾದ್ರು ಲೇಡಿ ಸಿಕ್ಕಿದ್ರೆ ರಾತ್ರಿ ಅವುಳ ಜೊತೆ ಇದ್ದು, ವಂಟೋಯ್ತರೆ ಕಣಕ್ಕ.

ಥೂ ಅವುರ ಮನಿಯಾಳಾಗ ಅಂಥೋರ ಸೇರುಸಬಾರ್ದು ಕಂಡ್ಳ ಇಲ್ಲೀ.

ಅಂಗಂತ ಎಡೂರಪ್ಪನಿಗೇಳು.

ಅವುನ ಕಾಲಾಗ್ಲೆ ಅತ್ತಮುಂದಾಗ್ಯವೆ ಅವುನಿಗೇನೇಳ್ತಿಯೊ ಎಂದ ಉಗ್ರಿ ಸಿಟ್ಟಿನಿಂದ.

ಇದರಲ್ಲವುಂದೇನು ತೆಪ್ಪಿಲ್ಲ ಕಣೋ. ಮೋದಿ ಶಾಗಳು ಹೇಳಿದ್ದ ಮಾಡ್ತ ಅವುನೆ.

ಅವುರ್‍ಯಾಕ್ಲ ಅಂಗೆ ಮಾಡ್ತ ಅವುರೆ.

ಅವುರು ಮಾರವಾಡಿಗಳ ರಾಜ್ಯ ಗುಜರಾತಿಂದ ಬಂದೋರು ಕಣ್ಣಕ್ಕ. ಯಾವುದೇ ವಿಷಯ ತಗಂಡ್ರೂ ಮಾರವಾಡಿಗಳ ತರ ಲಾಭ-ನಷ್ಟ ನೋಡ್ತರೆ. ಅದ್ಕೆ ರೈತರು ಬೇಸಾಯದಲ್ಲಿ ನಷ್ಟ ಮಾಡಿಕತ್ತಾ ಅವುರೆ ಅಂದ್ರೇ, ಅಂಗರೆ ಮಾರಿಬುಡಿ, ಕೈತುಂಬಾ ದುಡ್ಡು ಸಿಗತದೆ ಅರಾಮಾಗಿರಿ ಅಂತರೆ.

ಅಲ್ಲಾ ಕಂಡ್ಳ, ಜಮೀನ ನಾವ್ಯಾವತ್ತು ಲಾಭ ನಷ್ಟದಲ್ಲಿ ನೋಡಿದ್ದವೀ. ಅದರ ಜ್ವತೆ ಬುದುಕ್ತಯಿದ್ದೀವಿ. ಬೇಜಾರಾದ್ರೆ ವಲ್ತಕ್ಕೋಯ್ತಿವಿ. ದನ ಮೇಸ್ತಿವಿ, ಯಮ್ಮೆ ಮೇಸ್ತಿವಿ, ಆಡುಕುರಿ ಮೇಸ್ತಿವಿ. ಅವುನ್ಯಲ್ಲ ಮೇಸಕ್ಕೆ ಜಮೀನು ಬ್ಯಾಡವೇ?

ಬೇಕವ್ವ. ಅದು ಮೋದಿಶಾಗೆ ಹೊಳಿಬೇಕಲ್ಲ. ಮೋದಿಗೆ ಬುದ್ದಿಲ್ಲ. ಶಾಗೆ ತಲಿಲ್ಲ. ಅದ್ಕೆ ಇಂತ ಮನಿಯಾಳ ಕಾನೂನು ತಂದು ಇಡೀ ದೇಶದ ರೈತರು ದಿಕ್ಕು ದೆಸೆಯಿಲ್ದೆ ನ್ಯಲೆ ಕಳಕಂಡು ಅಲಿಯಂಗೆ ಮಾಡ್ತ ಅವುರೆ.

ಇದ ತಡಿಯಕ್ಕಾಗದಿಲವೆ.

ತಡಿಬೇಕಾದ್ರೆ, ರೈತದು ಬೀದಿಗೆ ಬರಬೇಕು. ಚಳುವಳಿ ಮಾಡಬೇಕು. ಆದ್ರೆ ಕರೊನ ಬಂದು ಹಟಕಾಯಿಸಿಗಂಡದೆ. ಅಂಗಾಗಿ ಯಾರೂ ಬೀದಿಗ ಬರಂಗಿಲ್ಲ. ಅದ್ಕೆ, ಇದೇ ಸರಿಯಾದ ಟೈಮು ಅಂತ, ಬಿಜೆಪಿಗಳು ಯೋಚನೆ ಮಾಡಿ, ಎಪಿಎಂಸಿ ಕತೆ ಮುಗಿಸಿದ್ರು. ಈಗ ರೈತರ ಕತೆ ಮುಗುಸ್ತ ಅವುರೆ.

ಅಂಗಾದ್ರೆ ಗತಿಯೇನ್ಲಾ.

ಗತಿ ಇನ್ನೇನು, ಈಗಾಗ್ಲೆ ಬೆಂಗಳೂರಿಂದ ಕುಬೇರ್ರು ಬಂದು ಜಮೀನ ಹುಡುಕ್ತ ಇದ್ದರಂತೆ. ಇನ್ನುಮುಂದೆ ರೈತರೆಲ್ಲ ಹೋಗಿ ಕೃಷಿ ಕಾರ್ಮಿಕರಾಯ್ತರೆ, ಅಷ್ಟೇಯ.

ಅಯ್ಯೋ ಅವುರ ಮನಿಯಾಳಾಗ ಹೋಗು. ಇವುರ ಸೊಲ್ಲು ಯಾವತ್ತಡಗತದ್ಲ.

  • ಬಿ.ಚಂದ್ರೇಗೌಡ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...