Homeಮುಖಪುಟಕಟ್ಟೆಪುರಾಣ: ಮೋದಿಗೆ ಬುದ್ದಿಲ್ಲ, ಶಾಗೆ ತಲಿಲ್ಲ. ಅದ್ಕೆ ಇಂತ ಕಾನೂನು!

ಕಟ್ಟೆಪುರಾಣ: ಮೋದಿಗೆ ಬುದ್ದಿಲ್ಲ, ಶಾಗೆ ತಲಿಲ್ಲ. ಅದ್ಕೆ ಇಂತ ಕಾನೂನು!

- Advertisement -
- Advertisement -

ಉಗ್ರ ಚಿಂತಾಕ್ರಾಂತನಾಗಿ ಕುಳಿತಿದ್ದುದನ್ನು ಗಮನಿಸಿದ ಜುಮ್ಮಿ.

ಅದ್ಯಾಕ್ಲ ಹೆಂಡತಿ ಸತ್ತೋನಂಗೆ ತಲೆಮ್ಯಾಲೆ ಕೈ ಹೊತ್ತಗಂಡು ಕುಂತಿದ್ದಿ ಎಂದಳು.

ಹೇಳಿದ್ರೆ ನಿನಿಗೆ ಅರ್ಥಾಗದಿಲ್ಲ ಕಣೆ ಎಂದ.

ವಾಟಿಸ್ಸೆ ಬಂದ ಅವುನ್ನೇ ಕೇಳ್ತಿನಿ ಬುಡು.

ಗುಡಮಾನಿಂಗು ಕಣಕ್ಕ.

ಗೂಡೆ ಮಾರಮ್ಮನೂ ಬ್ಯಾಡ ಕ್ವಾಟೆ ಮಾರಮ್ಮನೂ ಬ್ಯಾಡ. ಈ ಉಗ್ರಿ ಊದಿಕಂಡು ಕುಂತವುನೆ. ಯಾಕ್ಲ ಅಂದ್ರೆ, ಹೇಳದ್ರೆ ನಿನಿಗೆ ಗೊತ್ತಾಗದಿಲ್ಲ ಅಂತನೆ ಅದೇನಾಗ್ಯದೆ ನೀನಾರ ಹೇಳ್ಳ ವಾಟಿಸ್ಸೆ.

ಏನಾಗ್ಯದೆ ಅಂತ ಇವತ್ತೇಳಿದ್ರೆ ಗೊತ್ತಾಗದಿಲ್ಲ ಕಣಕ್ಕ ಬಿಜೆಪಿಗಳು ಅಧಿಕಾರಕ್ಕೆ ಬಂದಾಗ್ಲೆ ಸುರುವಾಗ್ಯದೆ. ಈಗ ವರ್ಕು ಪಾಸ್ಟಾಗ್ಯದೆ ಅಷ್ಟೇ ಕಣಕ್ಕ.

ಅದೇನು ವರಕಲಾ.

ಅದೇನವ್ವ ಅಂದ್ರೆ ಬಿಜೆಪಿಗಳು ದೇಶನೆ ಸರ್ವನಾಶ ಮಾಡಕ್ಕೆ ವಂಟಿದ್ರಲ್ಲಕ್ಕ. ಈಗ ರೈತರನೇ ಮುಗಸೋ ಕಾನೂನು ತತ್ತಾ ಅವುರೆ.

ಅದೇನು ಅಂತ ಕಾನೂನು.

ಅದೇನವ್ವ ಅಂದ್ರೆ ರೈತೆಲ್ಲದೋರು ಭೂಮಿಕೊಳ್ಳಂಗಿರಲಿಲ್ಲ. ಈಗ ಬಂದೂ ನಮ್ಮ ಭೂಮಿ ಕೊಳ್ಳಬವುದಂತೆ ಅಂತ ಕಾನೂನು ಬತ್ತಾ ಅದೆ.

ರೈತರಲ್ಲದೊರು ಅಂದ್ರೆ ಅದ್ಯಾರ್ಲ.

ದೇಸದಲ್ಲಿ ಪ್ಯಾಗುಟ್ರಿ ಮಡಗಿರೊ ಸಾವುಕಾರ್ರ್‍ಅವುರೆ, ಮಾರವಾಡಿಗಳವುರೆ, ಐಎಎಸ್, ಐಪಿಎಸ್ ಅಧಿಕಾರಿಗಳವುರೆ, ಬಿಜೆಪಿಗಳವುರೆ. ಅವರಿಗ್ಯಲ್ಲ ಭೂಮಿ ಬೇಕಾದ್ರೆ ಬಂದು ಕೇಳಿದಷ್ಟು ದುಡ್ಡು ಕೊಟ್ಟು ತಗತರೆ.

ತಗಂಡೇನು ಮಾಡ್ಯರೂ.

ಗೆಣಸು ಬ್ಯಳಿತರೆ, ಕಡ್ಳೆಕಾಯಿ ಬ್ಯಳಿತರೆ, ರಾಗಿ ಬ್ಯಳಿತರೆ.

ಸರಿಯಾಗೇಳ್ಳ ಅಣಕ ವಡಿಬ್ಯಾಡ.

ಏನು ಮಾಡ್ತರೆ ಗೊತ್ತೇನಕ್ಕಾ. ಈ ಉಗ್ರಿ ನಾನು ನೀನು ಸೀರಪ್ಪನಂಥೋರು ಮಾರಿಕತ್ತೀವಿ ಅನ್ನು. ಟೋಟ್ಲು ೨೦ ಯಕರೆ ಆಯ್ತು ಅನ್ನು. ಅದಕ್ಯಲ್ಲ ತಂತಿಬೇಲಿ ಹಾಕ್ತನೆ. ಅಮ್ಯಾಲೆ ಬಂದು ಟೀಕ್ ಮರನೋ, ಸಾಗುವಾನಿ ಮರನೋ ನೆಟ್ಟು ಒಂದು ಪಾರಂ ಹೌಸ್ ಮಾಡಿ, ಒಬ್ಬ ವಾಚ್ ಮ್ಯಾನ್ ಇಟ್ಟು ವಂಟೋಯ್ತನೆ. ಇಲ್ಲ ಹಾಳು ಬುಡ್ತನೆ.

ಅಂಗೆ ಮಾಡ್ತರೇನ್ಲ.

ನಮ್ಮೂರಿಗೂ ಬೆಂಗಳೂರಿಗೂ ಕಾರಲ್ಲಿ ಒಂದೂವರೆಗಂಟೆ ಜರ್ನಿ. ಅಲ್ಲಿಂದ ಬಂದು ಇಲ್ಲಿ ಪಾರ್ಟಿ ಮಾಡಿಕಂಡು, ನಾಟಿಕೋಳಿ ತಿಂದು, ಯಾರಾದ್ರು ಲೇಡಿ ಸಿಕ್ಕಿದ್ರೆ ರಾತ್ರಿ ಅವುಳ ಜೊತೆ ಇದ್ದು, ವಂಟೋಯ್ತರೆ ಕಣಕ್ಕ.

ಥೂ ಅವುರ ಮನಿಯಾಳಾಗ ಅಂಥೋರ ಸೇರುಸಬಾರ್ದು ಕಂಡ್ಳ ಇಲ್ಲೀ.

ಅಂಗಂತ ಎಡೂರಪ್ಪನಿಗೇಳು.

ಅವುನ ಕಾಲಾಗ್ಲೆ ಅತ್ತಮುಂದಾಗ್ಯವೆ ಅವುನಿಗೇನೇಳ್ತಿಯೊ ಎಂದ ಉಗ್ರಿ ಸಿಟ್ಟಿನಿಂದ.

ಇದರಲ್ಲವುಂದೇನು ತೆಪ್ಪಿಲ್ಲ ಕಣೋ. ಮೋದಿ ಶಾಗಳು ಹೇಳಿದ್ದ ಮಾಡ್ತ ಅವುನೆ.

ಅವುರ್‍ಯಾಕ್ಲ ಅಂಗೆ ಮಾಡ್ತ ಅವುರೆ.

ಅವುರು ಮಾರವಾಡಿಗಳ ರಾಜ್ಯ ಗುಜರಾತಿಂದ ಬಂದೋರು ಕಣ್ಣಕ್ಕ. ಯಾವುದೇ ವಿಷಯ ತಗಂಡ್ರೂ ಮಾರವಾಡಿಗಳ ತರ ಲಾಭ-ನಷ್ಟ ನೋಡ್ತರೆ. ಅದ್ಕೆ ರೈತರು ಬೇಸಾಯದಲ್ಲಿ ನಷ್ಟ ಮಾಡಿಕತ್ತಾ ಅವುರೆ ಅಂದ್ರೇ, ಅಂಗರೆ ಮಾರಿಬುಡಿ, ಕೈತುಂಬಾ ದುಡ್ಡು ಸಿಗತದೆ ಅರಾಮಾಗಿರಿ ಅಂತರೆ.

ಅಲ್ಲಾ ಕಂಡ್ಳ, ಜಮೀನ ನಾವ್ಯಾವತ್ತು ಲಾಭ ನಷ್ಟದಲ್ಲಿ ನೋಡಿದ್ದವೀ. ಅದರ ಜ್ವತೆ ಬುದುಕ್ತಯಿದ್ದೀವಿ. ಬೇಜಾರಾದ್ರೆ ವಲ್ತಕ್ಕೋಯ್ತಿವಿ. ದನ ಮೇಸ್ತಿವಿ, ಯಮ್ಮೆ ಮೇಸ್ತಿವಿ, ಆಡುಕುರಿ ಮೇಸ್ತಿವಿ. ಅವುನ್ಯಲ್ಲ ಮೇಸಕ್ಕೆ ಜಮೀನು ಬ್ಯಾಡವೇ?

ಬೇಕವ್ವ. ಅದು ಮೋದಿಶಾಗೆ ಹೊಳಿಬೇಕಲ್ಲ. ಮೋದಿಗೆ ಬುದ್ದಿಲ್ಲ. ಶಾಗೆ ತಲಿಲ್ಲ. ಅದ್ಕೆ ಇಂತ ಮನಿಯಾಳ ಕಾನೂನು ತಂದು ಇಡೀ ದೇಶದ ರೈತರು ದಿಕ್ಕು ದೆಸೆಯಿಲ್ದೆ ನ್ಯಲೆ ಕಳಕಂಡು ಅಲಿಯಂಗೆ ಮಾಡ್ತ ಅವುರೆ.

ಇದ ತಡಿಯಕ್ಕಾಗದಿಲವೆ.

ತಡಿಬೇಕಾದ್ರೆ, ರೈತದು ಬೀದಿಗೆ ಬರಬೇಕು. ಚಳುವಳಿ ಮಾಡಬೇಕು. ಆದ್ರೆ ಕರೊನ ಬಂದು ಹಟಕಾಯಿಸಿಗಂಡದೆ. ಅಂಗಾಗಿ ಯಾರೂ ಬೀದಿಗ ಬರಂಗಿಲ್ಲ. ಅದ್ಕೆ, ಇದೇ ಸರಿಯಾದ ಟೈಮು ಅಂತ, ಬಿಜೆಪಿಗಳು ಯೋಚನೆ ಮಾಡಿ, ಎಪಿಎಂಸಿ ಕತೆ ಮುಗಿಸಿದ್ರು. ಈಗ ರೈತರ ಕತೆ ಮುಗುಸ್ತ ಅವುರೆ.

ಅಂಗಾದ್ರೆ ಗತಿಯೇನ್ಲಾ.

ಗತಿ ಇನ್ನೇನು, ಈಗಾಗ್ಲೆ ಬೆಂಗಳೂರಿಂದ ಕುಬೇರ್ರು ಬಂದು ಜಮೀನ ಹುಡುಕ್ತ ಇದ್ದರಂತೆ. ಇನ್ನುಮುಂದೆ ರೈತರೆಲ್ಲ ಹೋಗಿ ಕೃಷಿ ಕಾರ್ಮಿಕರಾಯ್ತರೆ, ಅಷ್ಟೇಯ.

ಅಯ್ಯೋ ಅವುರ ಮನಿಯಾಳಾಗ ಹೋಗು. ಇವುರ ಸೊಲ್ಲು ಯಾವತ್ತಡಗತದ್ಲ.

  • ಬಿ.ಚಂದ್ರೇಗೌಡ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...