Homeಮುಖಪುಟಅಶ್ವತ್ಥ ನಾರಾಯಣ್ ಮಲ್ಲೇಶ್ವರಂನಲ್ಲಿ ಗುಳಂ ನಾರಾಯಣ ಎಂದು ಖ್ಯಾತಿ ಪಡೆದಿದ್ದಾರೆ: ಬಿ.ಕೆ ಹರಿಪ್ರಸಾದ್ ಆರೋಪ

ಅಶ್ವತ್ಥ ನಾರಾಯಣ್ ಮಲ್ಲೇಶ್ವರಂನಲ್ಲಿ ಗುಳಂ ನಾರಾಯಣ ಎಂದು ಖ್ಯಾತಿ ಪಡೆದಿದ್ದಾರೆ: ಬಿ.ಕೆ ಹರಿಪ್ರಸಾದ್ ಆರೋಪ

- Advertisement -
- Advertisement -

ಮಲ್ಲೇಶ್ವರಂನಲ್ಲಿ ನಡೆಯುವ ಪ್ರತಿಯೊಂದು ಕಾಮಗಾರಿಗಳಲ್ಲಿ ಸಚಿವ ಅಶ್ವತ್ಥ ನಾರಾಯಣ್‌ಗೆ ಕಮಿಷನ್ ಹೋಗುತ್ತಿದೆ. ಮಲ್ಲೇಶ್ವರಂನ ಬಹುತೇಕ ಕಾಂಟ್ರಾಕ್ಟರ್ ಗಳು ಸಚಿವರ ಸಂಬಂಧಿಗಳೇ ಆಗಿದ್ದಾರೆ. ಅಶ್ವತ್ಥ ನಾರಾಯಣ್ ಮಲ್ಲೇಶ್ವರಂನಲ್ಲಿ ಗುಳಂ ನಾರಾಯಣ ಎಂದು ಖ್ಯಾತಿ ಪಡೆದಿದ್ದಾರೆ ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಮಲ್ಲೇಶ್ವರಂನಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರ ಎಂಬುದರಲ್ಲಿ ಸಂದೇಹವೇ ಇಲ್ಲ. ಪ್ರತಿಯೊಂದು ಯೋಜನೆ/ ಕಾಮಗಾರಿಯಲ್ಲಿ ಮಂತ್ರಿಗಳಿಗೆ ಕಮಿಷನ್ ಹೋಗ್ತಾ ಇದೆ.ಈಗ ಪಿಎಸೈ ನೇಮಕಾತಿಯಲ್ಲಿ ಸಚಿವರ ಸಹೋದರನೇ ಭಾಗಿಯಾಗಿರುವ ಗಂಭೀರ ಆರೋಪ‌ ಕೇಳಿ ಬಂದಿದೆ ಎಂದಿದ್ದಾರೆ.

ಈ ರೀತಿಯ ಭ್ರಷ್ಟಾಚಾರಕ್ಕೆ RSS ಕುಮ್ಮಕ್ಕು ಇದೆ. ಅದರ ಹಣದಿಂದಲೇ ಅದು ಇಂದು ಶ್ರೀಮಂತ ಎನ್‌ಜಿಓ ಆಗಿದೆ. ಪ್ರತಿಯೊಬ್ಬ ಸಚಿವರ ಬಳಿಯು RSS ಸಂಘಟನೆಯ ಒಎಸ್‌ಡಿ ಎಂಬುವವರು ಇದ್ದು, ಹಣ ಕಲೆಕ್ಷನ್ ಮಾಡುವುದೇ ಅವರ ವೃತ್ತಿಯಾಗಿದೆ. ಹಾವಿನಪುರದಲ್ಲಿ ಕುಳಿತು ಹಣ ಕಲೆಕ್ಷನ್ ಮಾಡುವುದರಲ್ಲಿ RSS ಚೆನ್ನಾಗಿ ಪಳಗಿದೆ ಎಂದು ಹರಿಪ್ರಸಾದ್ ಆರೋಪಿಸಿದ್ದಾರೆ.

ನಿನ್ನೆ ಕರ್ನಾಟಕಕ್ಕೆ ಅಮಿತ್ ಶಾ ಬಂದಿದ್ರು. ಆದರೆ ಭ್ರಷ್ಟ ಸರ್ಕಾರದ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಅಂದರೆ 40% ಕಮಿಷನ್ ಹಾಗೂ ಅಕ್ರಮ ಪಿಎಸೈ ನೇಮಕಾತಿಯಲ್ಲಿ ಅಮಿತ್ ಶಾ ಪಾಲು ತೆಗೆದುಕೊಳ್ಳಲು ಬಂದಿದ್ದಾರೆ ಎಂದರ್ಥ.ಅಮಿತ್ ಶಾ ಆಗಮನದಿಂದ ರಾಜ್ಯದ ಜನರಿಗೆ ನಯಾಪೈಸೆ ಪ್ರಯೋಜನವಾಗಿಲ್ಲ ಎಂದು ಕಿಡಿಕಾರಿದರು.

ಇದನ್ನೂ ಓದಿ: ವಿಶೇಷ ವರದಿ: ಪಿಎಸ್‌ಐ ಪರೀಕ್ಷೆ ಅಕ್ರಮ ಒಂದೇ ಅಲ್ಲ, ಶಿಕ್ಷಣದ ಅವ್ಯವಸ್ಥೆಗೆ ಕೊನೆಯೇ ಇಲ್ಲ!

ಪಿಎಸ್‌ಐ ಅಕ್ರಮ ನೇಮಕಾತಿಯಲ್ಲಿ ಭಾಗಿಯಾಗಿರುವ ಸಚಿವ ಅಶ್ವಥ್ ನಾರಾಯಣ್ ಈ ಕೂಡಲೇ ರಾಜೀನಾಮೆ ನೀಡಬೇಕು. ಸ್ವ ಇಲಾಖೆಯಲ್ಲಿ ಗಂಭೀರವಾದ ಆರೋಪ‌ ಎದುರಿಸುತ್ತಿರುವ ಗೃಹ ಸಚಿವ ಆರಗ ಜ್ಞಾನೆಂದ್ರ ಸಹ ರಾಜೀನಾಮೆ ನೀಡಬೇಕು. ಈ ಪ್ರಕರಣದಲ್ಲಿ ನಿಷ್ಪಷಪಾತ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...