Homeಎಲೆಮರೆಊರಿಗೆ ಊರನ್ನೆ ಶಾಲಾ ಪತ್ರಿಕೆಯ ಓದುಗರನ್ನಾಗಿಸಿದ ಶಿಕ್ಷಕ ಬಿ.ಕೊಟ್ರೇಶ್

ಊರಿಗೆ ಊರನ್ನೆ ಶಾಲಾ ಪತ್ರಿಕೆಯ ಓದುಗರನ್ನಾಗಿಸಿದ ಶಿಕ್ಷಕ ಬಿ.ಕೊಟ್ರೇಶ್

- Advertisement -
- Advertisement -

ಕಾರಟಗಿಯಲ್ಲಿ ಸಮಾಜ ವಿಜ್ಞಾನ ಸಂಶೋಧನಾ ಸಂಸ್ಥೆಯ ಬಿ.ಪೀರಬಾಷ ಮತ್ತು ಗೆಳೆಯರು ಸೇರಿ ಕುವೆಂಪು ಕುರಿತಂತೆ ಕಮ್ಮಟವನ್ನು ಏರ್ಪಡಿಸಿದ್ದರು. ರಾಮಲಿಂಗಪ್ಪ ಟಿ. ಬೇಗೂರು ಮತ್ತು ನಾನು ಕಮ್ಮಟವನ್ನು ನಿರ್ವಹಿಸುವ ಹೊಣೆ ಹೊತ್ತಿದ್ದೆವು. ಆಗ ಕೊಪ್ಪಳ ಸಿಂಧನೂರು ಗಂಗಾವತಿ ಭಾಗದ ಶಿಕ್ಷಕರು ಶಿಬಿರಾರ್ಥಿಗಳಾಗಿ ಬಂದಿದ್ದರು. ಬಿಡುವಿನ ವೇಳೆಯಲ್ಲಿ ಶಿಕ್ಷಕ ಬಿ.ಕೊಟ್ರೇಶ್ ತಾನು ಶಾಲೆಯಿಂದ ತರುತ್ತಿರುವ ಪತ್ರಿಕೆಯೊಂದನ್ನು ಕೈಗೆ ಕೊಟ್ಟರು. ಸುಮ್ಮನೆ ಕಣ್ಣಾಡಿಸಿದರೆ ಆ ಪತ್ರಿಕೆಯ ವೈವಿಧ್ಯ, ಹರವು, ದೃಷ್ಟಿಕೋನ ಅಚ್ಚರಿ ಹುಟ್ಟಿಸಿತು. ಶಾಲಾ ಮಕ್ಕಳೆ ಪ್ರಕಟಿಸುತ್ತಾರೆಂದಾಗ ನಂಬಲಾಗಲಿಲ್ಲ. ಕಳೆದ ನಾಲ್ಕು ವರ್ಷದಿಂದ ಈ ಪತ್ರಿಕೆ ತರುವುದಾಗಿಯೂ, ಪತ್ರಿಕೆಯನ್ನು ಶಾಲಾಮಕ್ಕಳೇ ಸಂಪಾದಿಸುತ್ತಿದ್ದು, ಅವರೇ ಬರೆದು, ಅವರೇ ಹಂಚುತ್ತಾರೆ ಎಂದು ಮತ್ತಷ್ಟು ವಿವರಿಸಿದರು. ಇದನ್ನು ಕೇಳಿ ಪೇಸ್‍ಬುಕ್‍ನಲ್ಲಿ ಮೆಚ್ಚುಗೆಯ ಪೋಸ್ಟ್ ಹಾಕಿ ಸುಮ್ಮನಾಗಿದ್ದೆ. ಇದೀಗ ರಾಷ್ಟ್ರೀಯ ಪತ್ರಿಕೆಗಳಲ್ಲಿ ಪೆನ್ಸಿಲ್ ಪತ್ರಿಕೆಯ ಬಗ್ಗೆ ವಿಶೇಷ ಸುದ್ದಿಗಳು ಪ್ರಕಟವಾಗಿ ಗಮನ ಸೆಳೆಯುತ್ತಿದೆ.

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಬೆಳಗುರ್ಕಿ ಒಂದು ಪುಟ್ಟ ಹಳ್ಳಿ. ಐದು ಸಾವಿರದಷ್ಟು ಜನಸಂಖ್ಯೆ ಇರುವ ಬೆಳಗುರ್ಕಿಯ ಶಾಲೆಯಲ್ಲಿ 310 ರಷ್ಟು ವಿದ್ಯಾರ್ಥಿಗಳಿದ್ದು, ಎಂಟು ಜನ ಶಿಕ್ಷಕರು, ಇಬ್ಬರು ಅತಿಥಿ ಶಿಕ್ಷಕರಿದ್ದಾರೆ. ಆ ಹಳ್ಳಿಗೆ ಈಗಲೂ ದಿನಪತ್ರಿಕೆಗಳು ಬರುವುದಿಲ್ಲ. ಆದರೆ ಈ ಊರಿನ ಹಿರಿಯರಿಗೆ ತಮ್ಮೂರಿನ ಶಾಲಾಮಕ್ಕಳ ಪೆನ್ಸಿಲ್ ಪತ್ರಿಕೆ ಅಚ್ಚುಮೆಚ್ಚು. ಹರಟೆಕಟ್ಟೆಗಳೀಗ `ಪೆನ್ಸಿಲ್ ಪತ್ರಿಕಾ’ ಕಟ್ಟೆಗಳಾಗಿ ಬದಲಾಗಿವೆ. ಈ ಪತ್ರಿಕೆಯ ಪ್ರಭಾವಕ್ಕೆ ಒಳಗಾಗಿ ಕೆಲವು ದಿನಪತ್ರಿಕೆಗಳೂ ಉಚಿತವಾಗಿ ಊರು ಸೇರುತ್ತಿವೆ. ಊರಲ್ಲೊಂದು ಓದುಗವರ್ಗ ಸೃಷ್ಠಿಯಾಗಿದೆ.

ಶಾಲೆಯಿಂದ ಹೊರಗುಳಿಯುವ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರುವುದರ ಉದ್ದೇಶದಿಂದ ಕೊಟ್ರೇಶ್ ಶಾಲಾ ಬಿಟ್ಟ ಮಕ್ಕಳ ಕತೆಯನ್ನು ಅವರದೆ ಫೋಟೋ ಹಾಕಿ ಆರಂಭಕ್ಕೆ ಗೋಡೆ ಪತ್ರಿಕೆಯಲ್ಲಿ ಪ್ರಕಟಿಸಲು ತೊಡಗುತ್ತಾರೆ. ಇದಕ್ಕೆ ಮಕ್ಕಳ ಪ್ರತಿಕ್ರಿಯೆ ಉತ್ಸಾಹ ಹೆಚ್ಚಾಗತೊಡಗುತ್ತದೆ. ಗೋಡೆ ಪತ್ರಿಕೆಯನ್ನೆ ಯಾಕೆ ಸ್ವತಂತ್ರ ಪತ್ರಿಕೆ ಮಾಡಬಾರದು ಎನ್ನುವ ಯೋಚನೆಯಿಂದ `ಪೆನ್ಸಿಲ್’ ಪತ್ರಿಕೆ ಹುಟ್ಟುತ್ತದೆ. ಪತ್ರಿಕೆಯೊಂದರಲ್ಲಿ ಕೆಲಸ ಮಾಡುವ ಕೊಟ್ರೇಶ್ ಅವರ ಸ್ನೇಹಿತ ಉಲ್ಲಾಸ್ ಎನ್ನುವವರು ಪುಟವಿನ್ಯಾಸ ಮಾಡುತ್ತಾರೆ. ಇದರಿಂದಾಗಿ ಯಾವುದೇ ದಿನಪತ್ರಿಕೆಗೂ ಕಡಿಮೆ ಇಲ್ಲದಂತೆ `ಪೆನ್ಸಿಲ್’ ರೂಪು ಪಡೆಯುತ್ತದೆ. ದೂರದ ನಗರಗಳಲ್ಲಿ ಮುದ್ರಣವಾಗಿ ಬರುವ ಪತ್ರಿಕೆಗಳ ಬಗೆಗೆ ಜನರಿಗಿದ್ದ ಸಹಜ ಕುತೂಹಲ `ನಮ್ಮೂರಿನ ಶಾಲೆಯೂ ಒಂದು ಪತ್ರಿಕೆ ತರುತ್ತಿದೆ’ ಎನ್ನುವ ಬೆರಗು ಮೂಡಿಸುತ್ತದೆ. ಈ ಬೆರಗಿನಿಂದಲೇ ಶಾಲಾಪತ್ರಿಕೆಯನ್ನು ಊರಿನ ಜನ ಓದಲು ತೊಡಗುತ್ತಾರೆ.

2013 ರ ಸೆಪ್ಟೆಂಬರ್ ತಿಂಗಳಲ್ಲಿ ಪೆನ್ಸಿಲ್‍ನ ಮೊದಲ ಮುದ್ರಿತ ಸಂಚಿಕೆ ಬರುತ್ತದೆ. 2016 ರ ತನಕ ಪೆನ್ಸಿಲ್ ಪತ್ರಿಕೆ ತಿಂಗಳ ಪತ್ರಿಕೆಯಾಗಿ ಪ್ರಕಟವಾಗುತ್ತಾ ಗಮನ ಸೆಳೆಯಿತು. 2016 ರಲ್ಲಿ ಪತ್ರಿಕೆ ರೂಪಿಸುವ ಹೊಣೆಹೊತ್ತ ಶಿಕ್ಷಕ ಕೊಟ್ರೇಶ್ ಅವರು ಬಿಇಓ ಕಚೇರಿಯ ಸಿಆರ್‍ಪಿಯಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಹೀಗಾಗಿ ಕೆಲಕಾಲ ಪತ್ರಿಕೆ ನಿಲ್ಲುತ್ತದೆ. ನಂತರ ಇಂಡಿಯನ್ ಫೌಂಡೇಷನ್ ಫಾರ್ ದಿ ಆಟ್ರ್ಸ್‍ನಲ್ಲಿ ಕೊಟ್ರೇಶ್ ತಮ್ಮ ಪತ್ರಿಕೆಗೆ ಆರ್ಥಿಕ ನೆರವು ಕೇಳಿದಾಗ ಫೌಂಡೇಷನ್ ಒಂದು ವರ್ಷದ ಪತ್ರಿಕೆ ವೆಚ್ಚವನ್ನು ಪ್ರಾಯೋಜಿಸುತ್ತಾರೆ. ಹೀಗಾಗಿ ಮತ್ತಷ್ಟು ಉತ್ಸಾಹದೊಂದಿಗೆ ಪತ್ರಿಕೆ ದ್ವೈಮಾಸಿಕ ಸಂಚಿಕೆಯಾಗಿ ಮುದ್ರಿತವಾಗುತ್ತದೆ. ಇದೀಗ ಊರಿನವರೆ ಒಂದೊಂದು ಸಂಚಿಕೆಯ ವೆಚ್ಚವನ್ನು ಪ್ರಾಯೋಜಿಸಲು ಮುಂದೆ ಬರುವಷ್ಟು ಪತ್ರಿಕೆ ಬೇರುಬಿಟ್ಟಿದೆ. ಮುಂದೆ ಹಣದ ಕೊರತೆಯಿಂದ ಪತ್ರಿಕೆ ನಿಂತರೆ ಹೇಗೆ ಎಂದು ಕೊಟ್ರೇಶ್ ಮಕ್ಕಳನ್ನು ಕೇಳಿದರೆ, ನಾವೇ ಸೇವಿಂಗ್ಸ್ ಬ್ಯಾಂಕ್ ಮೂಲಕ ಹಣ ಉಳಿಸಿ ಪ್ರಕಟಿಸೋಣ ಸರ್ ಎಂದು ಮಕ್ಕಳೆ ಕೊಟ್ರೇಶರಿಗೆ ದೈರ್ಯ ತುಂಬುತ್ತಾರೆ.

ಕರ್ನಾಟಕದ ಬೇರೆ ಬೇರೆ ಶಾಲೆಗಳಲ್ಲಿ ಶಿಕ್ಷಕರು ಶಾಲಾಪತ್ರಿಕೆಗಳನ್ನು ರೂಪಿಸುತ್ತಿದ್ದಾರೆ. ಆದರೆ ಪೆನ್ಸಿಲ್ ಪತ್ರಿಕೆಗೂ ಅವುಗಳಿಗೂ ಫರಕಿದೆ. ಮೊದಲನೆಯದಾಗಿ ಬಹುಪಾಲು ಶಿಕ್ಷಕರು ಮಕ್ಕಳಿಗಾಗಿ ಬರೆದ ಅಥವಾ ಸಂಗ್ರಹಿಸಿದ ಬರಹಗಳಿರುತ್ತವೆ. ಆದರೆ ಪೆನ್ಸಿಲ್ ಪತ್ರಿಕೆಯಲ್ಲಿ ಶಿಕ್ಷಕರ ಸಂಪಾದಕೀಯ ಹೊರತುಪಡಿಸಿದರೆ ಇಡೀ ಪತ್ರಿಕೆ ತುಂಬಾ ಶಾಲೆಯ ಮಕ್ಕಳೇ ಬರೆಯುತ್ತಾರೆ. ಮುಖ್ಯವಾಗಿ ಬೇರೆ ಪತ್ರಿಕೆಗಳು ಆಯಾ ಶಾಲೆ, ಶಾಲೆಯ ಮಕ್ಕಳಿಗೆ ಸೀಮಿತವಾಗಿದ್ದರೆ, ಪೆನ್ಸಿಲ್ ಪತ್ರಿಕೆ ಊರಿನ ಮನೆಮನೆಗೆ ಹಂಚಲ್ಪಡುತ್ತದೆ. ಹಾಗಾಗಿ ಪತ್ರಿಕೆ ಜನಸಮುದಾಯಕ್ಕೆ ವಿಸ್ತರಿಸಿದೆ. ಶಾಲಾಮಕ್ಕಳು ತಮ್ಮದೇ ಊರಿನ ಕಲಾವಿದರು, ಹಿರಿಯರು, ಸಾಧಕರನ್ನು ಸಂದರ್ಶನ ಮಾಡುತ್ತಾರೆ. ತಮ್ಮ ಊರಿನ ಹಬ್ಬ ಜಾತ್ರೆಗಳ ಬಗ್ಗೆಯೂ, ಶಾಲಾ ಕಾರ್ಯಕ್ರಮಗಳ ಬಗ್ಗೆಯೂ ವರದಿ ಮಾಡುತ್ತಾರೆ. ಹೀಗಾಗಿಯೇ ಶಾಲಾಮಕ್ಕಳನ್ನು ಸಮೀಪದ ಪತ್ರಿಕಾ ಕಚೇರಿಗಳಿಗೂ ಭೇಟಿಮಾಡಿಸಲಾಗುತ್ತದೆ. ಪತ್ರಕರ್ತರೊಂದಿಗೆ ಮಕ್ಕಳ ಸಂವಾದಗಳನ್ನು ಏರ್ಪಡಿಸಲಾಗುತ್ತದೆ. ಶಾಲಾ ಮಕ್ಕಳು ಏಕಕಾಲದಲ್ಲಿ ಪತ್ರಕರ್ತರಂತೆಯೂ, ಪತ್ರಿಕೆ ರೂಪುಗೊಳ್ಳುವ ಸಮಯಕ್ಕೆ ಶಾಲೆಯೇ ಪತ್ರಿಕಾ ಕಚೇರಿಯಂತೆಯೂ ಬದಲಾಗುತ್ತದೆ.

ಕೊಟ್ರೇಶ್ ಮಾತನಾಡುತ್ತಾ `ನಮ್ಮ ಶಾಲೆಯ ಮುಖ್ಯ ಶಿಕ್ಷಕರಾದ ಪರಮೇಶ್ ಚಿಂತಮಾನದೊಡ್ಡಿ, ಶಿಕ್ಷಕರಾದ ಪುಟ್ಟಸ್ವಾಮಿ, ಮಲ್ಲೇಶ್ ಕರಿಗಾರ, ತಿಮ್ಮಾರೆಡ್ಡಿ, ಸುನೀಲ್, ಶಿಕ್ಷಕಿಯರಾದ ಮೀನಾಕ್ಷಿ, ಬಸಿರಾ ಬೇಗಂ ಎಲ್ಲರ ಶ್ರಮದಿಂದಾಗಿ ಪೆನ್ಸಿಲ್ ಪತ್ರಿಕೆ ರೂಪುಗೊಳ್ಳುತ್ತಿದೆ. ಅಂತೆಯೇ ಬೆಳಗುರ್ಕಿಯ ಗ್ರಾಮಸ್ಥರು, ನಮ್ಮ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಮಾಧ್ಯಮದ ಸ್ನೇಹಿತರು ತುಂಬಾ ಸಹಕಾರ ಕೊಡುತ್ತಿದ್ದಾರೆ. ಇಂಡಿಯನ್ ಫೌಂಡೇಷನ್ ಫಾರ್ ದಿ ಆಟ್ರ್ಸ್(ಕಲಿ-ಕಲಿಸು) ಕಲಾ ಅಂತರ್ಗತ ಯೋಜನೆಗೆ ನಮ್ಮ ಶಾಲೆಯನ್ನು ಆಯ್ದುಕೊಂಡಿದ್ದಾರೆ. ಈ ಸಂಸ್ಥೆಯ ಕಾರ್ಯಕ್ರಮ ನಿರ್ವಾಹಕರಾದ ಕೃಷ್ಣಮೂರ್ತಿ ಹಾಗೂ ರಾಧಿಕಾ ಭಾರದ್ವಾಜ್ ಅವರುಗಳು ಪತ್ರಿಕೆಗೆ ಮಾರ್ಗದರ್ಶನ ಮಾಡುತ್ತಾರೆ. ನಾನು ಪತ್ರಿಕೆಯ ಜವಾಬ್ದಾರಿ ನಿರ್ವಹಿಸಿದರೂ, ಅದರ ಹಿಂದೆ ಈ ಎಲ್ಲರ ಸಹಕಾರ ಮತ್ತು ಪ್ರೀತಿಯೇ ಪೆನ್ಸಿಲ್ ಪತ್ರಿಕೆಯನ್ನು ಗಮನ ಸೆಳೆಯುವಂತೆ ಮಾಡಿದೆ. ಇದರಿಂದಾಗಿ ನಮ್ಮ ಜವಾಬ್ದಾರಿಯೂ ಹೆಚ್ಚಾಗಿದೆ’ ಎನ್ನುತ್ತಾರೆ.

ಇದೀಗ ಬೆಳಗುರ್ಕಿ ಶಾಲೆಯ ಮಕ್ಕಳು ಮಕ್ಕಳ ಗ್ರಾಮಸಭೆಗೆ ಹಾಜರಾಗಿ ಜಬರ್ದಸ್ತ್ ಪ್ರಶ್ನೆ ಮಾಡಿ ಗ್ರಾಮಪಂಚಾಯ್ತಿಯಿಂದ ಶಾಲೆಗೆ ಬರಬೇಕಾದ ಸೌಲಭ್ಯಗಳನ್ನು ಪಡೆದಿದ್ದಾರೆ. ಈಗಾಗಲೆ ಮಕ್ಕಳೆಲ್ಲಾ ಸೇರಿ ನಮ್ಮೂರಲ್ಲಿ ಸಾರಾಯಿ ಅಂಗಡಿಯನ್ನು ಏಕೆ ನಿಲ್ಲಿಸಬಾರದು? ನಾವು ನಮ್ಮ ಪತ್ರಿಕೆಗೆ ಈಗಿನ ಶಿಕ್ಷಣ ಮಂತ್ರಿಯನ್ನೇಕೆ ಸಂದರ್ಶನ ಮಾಡಬಾರದು ಎಂದೆಲ್ಲಾ ಯೋಚನೆ ಮಾಡಲು ಶುರು ಮಾಡಿದ್ದಾರೆ. ಹೀಗೆ ಸದ್ದಿಲ್ಲದಂತೆ ಪೆನ್ಸಿಲ್ ಪತ್ರಿಕೆ ಶಾಲಾಮಕ್ಕಳನ್ನು ಜಾಗೃತ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಪ್ರೇರೇಪಿಸುತ್ತಿದೆ. ಕೊಟ್ರೇಶ್‍ನಂತಹ ಶಿಕ್ಷಕರೂ, ಪೆನ್ಸಿಲ್‍ನಂತಹ ಪತ್ರಿಕೆಗಳು ಎಲ್ಲಾ ಸರಕಾರಿ ಶಾಲೆಗಳಲ್ಲೂ ಜೀವ ತಳೆಯಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...