Homeಎಲೆಮರೆಊರಿಗೆ ಊರನ್ನೆ ಶಾಲಾ ಪತ್ರಿಕೆಯ ಓದುಗರನ್ನಾಗಿಸಿದ ಶಿಕ್ಷಕ ಬಿ.ಕೊಟ್ರೇಶ್

ಊರಿಗೆ ಊರನ್ನೆ ಶಾಲಾ ಪತ್ರಿಕೆಯ ಓದುಗರನ್ನಾಗಿಸಿದ ಶಿಕ್ಷಕ ಬಿ.ಕೊಟ್ರೇಶ್

- Advertisement -
- Advertisement -

ಕಾರಟಗಿಯಲ್ಲಿ ಸಮಾಜ ವಿಜ್ಞಾನ ಸಂಶೋಧನಾ ಸಂಸ್ಥೆಯ ಬಿ.ಪೀರಬಾಷ ಮತ್ತು ಗೆಳೆಯರು ಸೇರಿ ಕುವೆಂಪು ಕುರಿತಂತೆ ಕಮ್ಮಟವನ್ನು ಏರ್ಪಡಿಸಿದ್ದರು. ರಾಮಲಿಂಗಪ್ಪ ಟಿ. ಬೇಗೂರು ಮತ್ತು ನಾನು ಕಮ್ಮಟವನ್ನು ನಿರ್ವಹಿಸುವ ಹೊಣೆ ಹೊತ್ತಿದ್ದೆವು. ಆಗ ಕೊಪ್ಪಳ ಸಿಂಧನೂರು ಗಂಗಾವತಿ ಭಾಗದ ಶಿಕ್ಷಕರು ಶಿಬಿರಾರ್ಥಿಗಳಾಗಿ ಬಂದಿದ್ದರು. ಬಿಡುವಿನ ವೇಳೆಯಲ್ಲಿ ಶಿಕ್ಷಕ ಬಿ.ಕೊಟ್ರೇಶ್ ತಾನು ಶಾಲೆಯಿಂದ ತರುತ್ತಿರುವ ಪತ್ರಿಕೆಯೊಂದನ್ನು ಕೈಗೆ ಕೊಟ್ಟರು. ಸುಮ್ಮನೆ ಕಣ್ಣಾಡಿಸಿದರೆ ಆ ಪತ್ರಿಕೆಯ ವೈವಿಧ್ಯ, ಹರವು, ದೃಷ್ಟಿಕೋನ ಅಚ್ಚರಿ ಹುಟ್ಟಿಸಿತು. ಶಾಲಾ ಮಕ್ಕಳೆ ಪ್ರಕಟಿಸುತ್ತಾರೆಂದಾಗ ನಂಬಲಾಗಲಿಲ್ಲ. ಕಳೆದ ನಾಲ್ಕು ವರ್ಷದಿಂದ ಈ ಪತ್ರಿಕೆ ತರುವುದಾಗಿಯೂ, ಪತ್ರಿಕೆಯನ್ನು ಶಾಲಾಮಕ್ಕಳೇ ಸಂಪಾದಿಸುತ್ತಿದ್ದು, ಅವರೇ ಬರೆದು, ಅವರೇ ಹಂಚುತ್ತಾರೆ ಎಂದು ಮತ್ತಷ್ಟು ವಿವರಿಸಿದರು. ಇದನ್ನು ಕೇಳಿ ಪೇಸ್‍ಬುಕ್‍ನಲ್ಲಿ ಮೆಚ್ಚುಗೆಯ ಪೋಸ್ಟ್ ಹಾಕಿ ಸುಮ್ಮನಾಗಿದ್ದೆ. ಇದೀಗ ರಾಷ್ಟ್ರೀಯ ಪತ್ರಿಕೆಗಳಲ್ಲಿ ಪೆನ್ಸಿಲ್ ಪತ್ರಿಕೆಯ ಬಗ್ಗೆ ವಿಶೇಷ ಸುದ್ದಿಗಳು ಪ್ರಕಟವಾಗಿ ಗಮನ ಸೆಳೆಯುತ್ತಿದೆ.

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಬೆಳಗುರ್ಕಿ ಒಂದು ಪುಟ್ಟ ಹಳ್ಳಿ. ಐದು ಸಾವಿರದಷ್ಟು ಜನಸಂಖ್ಯೆ ಇರುವ ಬೆಳಗುರ್ಕಿಯ ಶಾಲೆಯಲ್ಲಿ 310 ರಷ್ಟು ವಿದ್ಯಾರ್ಥಿಗಳಿದ್ದು, ಎಂಟು ಜನ ಶಿಕ್ಷಕರು, ಇಬ್ಬರು ಅತಿಥಿ ಶಿಕ್ಷಕರಿದ್ದಾರೆ. ಆ ಹಳ್ಳಿಗೆ ಈಗಲೂ ದಿನಪತ್ರಿಕೆಗಳು ಬರುವುದಿಲ್ಲ. ಆದರೆ ಈ ಊರಿನ ಹಿರಿಯರಿಗೆ ತಮ್ಮೂರಿನ ಶಾಲಾಮಕ್ಕಳ ಪೆನ್ಸಿಲ್ ಪತ್ರಿಕೆ ಅಚ್ಚುಮೆಚ್ಚು. ಹರಟೆಕಟ್ಟೆಗಳೀಗ `ಪೆನ್ಸಿಲ್ ಪತ್ರಿಕಾ’ ಕಟ್ಟೆಗಳಾಗಿ ಬದಲಾಗಿವೆ. ಈ ಪತ್ರಿಕೆಯ ಪ್ರಭಾವಕ್ಕೆ ಒಳಗಾಗಿ ಕೆಲವು ದಿನಪತ್ರಿಕೆಗಳೂ ಉಚಿತವಾಗಿ ಊರು ಸೇರುತ್ತಿವೆ. ಊರಲ್ಲೊಂದು ಓದುಗವರ್ಗ ಸೃಷ್ಠಿಯಾಗಿದೆ.

ಶಾಲೆಯಿಂದ ಹೊರಗುಳಿಯುವ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರುವುದರ ಉದ್ದೇಶದಿಂದ ಕೊಟ್ರೇಶ್ ಶಾಲಾ ಬಿಟ್ಟ ಮಕ್ಕಳ ಕತೆಯನ್ನು ಅವರದೆ ಫೋಟೋ ಹಾಕಿ ಆರಂಭಕ್ಕೆ ಗೋಡೆ ಪತ್ರಿಕೆಯಲ್ಲಿ ಪ್ರಕಟಿಸಲು ತೊಡಗುತ್ತಾರೆ. ಇದಕ್ಕೆ ಮಕ್ಕಳ ಪ್ರತಿಕ್ರಿಯೆ ಉತ್ಸಾಹ ಹೆಚ್ಚಾಗತೊಡಗುತ್ತದೆ. ಗೋಡೆ ಪತ್ರಿಕೆಯನ್ನೆ ಯಾಕೆ ಸ್ವತಂತ್ರ ಪತ್ರಿಕೆ ಮಾಡಬಾರದು ಎನ್ನುವ ಯೋಚನೆಯಿಂದ `ಪೆನ್ಸಿಲ್’ ಪತ್ರಿಕೆ ಹುಟ್ಟುತ್ತದೆ. ಪತ್ರಿಕೆಯೊಂದರಲ್ಲಿ ಕೆಲಸ ಮಾಡುವ ಕೊಟ್ರೇಶ್ ಅವರ ಸ್ನೇಹಿತ ಉಲ್ಲಾಸ್ ಎನ್ನುವವರು ಪುಟವಿನ್ಯಾಸ ಮಾಡುತ್ತಾರೆ. ಇದರಿಂದಾಗಿ ಯಾವುದೇ ದಿನಪತ್ರಿಕೆಗೂ ಕಡಿಮೆ ಇಲ್ಲದಂತೆ `ಪೆನ್ಸಿಲ್’ ರೂಪು ಪಡೆಯುತ್ತದೆ. ದೂರದ ನಗರಗಳಲ್ಲಿ ಮುದ್ರಣವಾಗಿ ಬರುವ ಪತ್ರಿಕೆಗಳ ಬಗೆಗೆ ಜನರಿಗಿದ್ದ ಸಹಜ ಕುತೂಹಲ `ನಮ್ಮೂರಿನ ಶಾಲೆಯೂ ಒಂದು ಪತ್ರಿಕೆ ತರುತ್ತಿದೆ’ ಎನ್ನುವ ಬೆರಗು ಮೂಡಿಸುತ್ತದೆ. ಈ ಬೆರಗಿನಿಂದಲೇ ಶಾಲಾಪತ್ರಿಕೆಯನ್ನು ಊರಿನ ಜನ ಓದಲು ತೊಡಗುತ್ತಾರೆ.

2013 ರ ಸೆಪ್ಟೆಂಬರ್ ತಿಂಗಳಲ್ಲಿ ಪೆನ್ಸಿಲ್‍ನ ಮೊದಲ ಮುದ್ರಿತ ಸಂಚಿಕೆ ಬರುತ್ತದೆ. 2016 ರ ತನಕ ಪೆನ್ಸಿಲ್ ಪತ್ರಿಕೆ ತಿಂಗಳ ಪತ್ರಿಕೆಯಾಗಿ ಪ್ರಕಟವಾಗುತ್ತಾ ಗಮನ ಸೆಳೆಯಿತು. 2016 ರಲ್ಲಿ ಪತ್ರಿಕೆ ರೂಪಿಸುವ ಹೊಣೆಹೊತ್ತ ಶಿಕ್ಷಕ ಕೊಟ್ರೇಶ್ ಅವರು ಬಿಇಓ ಕಚೇರಿಯ ಸಿಆರ್‍ಪಿಯಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಹೀಗಾಗಿ ಕೆಲಕಾಲ ಪತ್ರಿಕೆ ನಿಲ್ಲುತ್ತದೆ. ನಂತರ ಇಂಡಿಯನ್ ಫೌಂಡೇಷನ್ ಫಾರ್ ದಿ ಆಟ್ರ್ಸ್‍ನಲ್ಲಿ ಕೊಟ್ರೇಶ್ ತಮ್ಮ ಪತ್ರಿಕೆಗೆ ಆರ್ಥಿಕ ನೆರವು ಕೇಳಿದಾಗ ಫೌಂಡೇಷನ್ ಒಂದು ವರ್ಷದ ಪತ್ರಿಕೆ ವೆಚ್ಚವನ್ನು ಪ್ರಾಯೋಜಿಸುತ್ತಾರೆ. ಹೀಗಾಗಿ ಮತ್ತಷ್ಟು ಉತ್ಸಾಹದೊಂದಿಗೆ ಪತ್ರಿಕೆ ದ್ವೈಮಾಸಿಕ ಸಂಚಿಕೆಯಾಗಿ ಮುದ್ರಿತವಾಗುತ್ತದೆ. ಇದೀಗ ಊರಿನವರೆ ಒಂದೊಂದು ಸಂಚಿಕೆಯ ವೆಚ್ಚವನ್ನು ಪ್ರಾಯೋಜಿಸಲು ಮುಂದೆ ಬರುವಷ್ಟು ಪತ್ರಿಕೆ ಬೇರುಬಿಟ್ಟಿದೆ. ಮುಂದೆ ಹಣದ ಕೊರತೆಯಿಂದ ಪತ್ರಿಕೆ ನಿಂತರೆ ಹೇಗೆ ಎಂದು ಕೊಟ್ರೇಶ್ ಮಕ್ಕಳನ್ನು ಕೇಳಿದರೆ, ನಾವೇ ಸೇವಿಂಗ್ಸ್ ಬ್ಯಾಂಕ್ ಮೂಲಕ ಹಣ ಉಳಿಸಿ ಪ್ರಕಟಿಸೋಣ ಸರ್ ಎಂದು ಮಕ್ಕಳೆ ಕೊಟ್ರೇಶರಿಗೆ ದೈರ್ಯ ತುಂಬುತ್ತಾರೆ.

ಕರ್ನಾಟಕದ ಬೇರೆ ಬೇರೆ ಶಾಲೆಗಳಲ್ಲಿ ಶಿಕ್ಷಕರು ಶಾಲಾಪತ್ರಿಕೆಗಳನ್ನು ರೂಪಿಸುತ್ತಿದ್ದಾರೆ. ಆದರೆ ಪೆನ್ಸಿಲ್ ಪತ್ರಿಕೆಗೂ ಅವುಗಳಿಗೂ ಫರಕಿದೆ. ಮೊದಲನೆಯದಾಗಿ ಬಹುಪಾಲು ಶಿಕ್ಷಕರು ಮಕ್ಕಳಿಗಾಗಿ ಬರೆದ ಅಥವಾ ಸಂಗ್ರಹಿಸಿದ ಬರಹಗಳಿರುತ್ತವೆ. ಆದರೆ ಪೆನ್ಸಿಲ್ ಪತ್ರಿಕೆಯಲ್ಲಿ ಶಿಕ್ಷಕರ ಸಂಪಾದಕೀಯ ಹೊರತುಪಡಿಸಿದರೆ ಇಡೀ ಪತ್ರಿಕೆ ತುಂಬಾ ಶಾಲೆಯ ಮಕ್ಕಳೇ ಬರೆಯುತ್ತಾರೆ. ಮುಖ್ಯವಾಗಿ ಬೇರೆ ಪತ್ರಿಕೆಗಳು ಆಯಾ ಶಾಲೆ, ಶಾಲೆಯ ಮಕ್ಕಳಿಗೆ ಸೀಮಿತವಾಗಿದ್ದರೆ, ಪೆನ್ಸಿಲ್ ಪತ್ರಿಕೆ ಊರಿನ ಮನೆಮನೆಗೆ ಹಂಚಲ್ಪಡುತ್ತದೆ. ಹಾಗಾಗಿ ಪತ್ರಿಕೆ ಜನಸಮುದಾಯಕ್ಕೆ ವಿಸ್ತರಿಸಿದೆ. ಶಾಲಾಮಕ್ಕಳು ತಮ್ಮದೇ ಊರಿನ ಕಲಾವಿದರು, ಹಿರಿಯರು, ಸಾಧಕರನ್ನು ಸಂದರ್ಶನ ಮಾಡುತ್ತಾರೆ. ತಮ್ಮ ಊರಿನ ಹಬ್ಬ ಜಾತ್ರೆಗಳ ಬಗ್ಗೆಯೂ, ಶಾಲಾ ಕಾರ್ಯಕ್ರಮಗಳ ಬಗ್ಗೆಯೂ ವರದಿ ಮಾಡುತ್ತಾರೆ. ಹೀಗಾಗಿಯೇ ಶಾಲಾಮಕ್ಕಳನ್ನು ಸಮೀಪದ ಪತ್ರಿಕಾ ಕಚೇರಿಗಳಿಗೂ ಭೇಟಿಮಾಡಿಸಲಾಗುತ್ತದೆ. ಪತ್ರಕರ್ತರೊಂದಿಗೆ ಮಕ್ಕಳ ಸಂವಾದಗಳನ್ನು ಏರ್ಪಡಿಸಲಾಗುತ್ತದೆ. ಶಾಲಾ ಮಕ್ಕಳು ಏಕಕಾಲದಲ್ಲಿ ಪತ್ರಕರ್ತರಂತೆಯೂ, ಪತ್ರಿಕೆ ರೂಪುಗೊಳ್ಳುವ ಸಮಯಕ್ಕೆ ಶಾಲೆಯೇ ಪತ್ರಿಕಾ ಕಚೇರಿಯಂತೆಯೂ ಬದಲಾಗುತ್ತದೆ.

ಕೊಟ್ರೇಶ್ ಮಾತನಾಡುತ್ತಾ `ನಮ್ಮ ಶಾಲೆಯ ಮುಖ್ಯ ಶಿಕ್ಷಕರಾದ ಪರಮೇಶ್ ಚಿಂತಮಾನದೊಡ್ಡಿ, ಶಿಕ್ಷಕರಾದ ಪುಟ್ಟಸ್ವಾಮಿ, ಮಲ್ಲೇಶ್ ಕರಿಗಾರ, ತಿಮ್ಮಾರೆಡ್ಡಿ, ಸುನೀಲ್, ಶಿಕ್ಷಕಿಯರಾದ ಮೀನಾಕ್ಷಿ, ಬಸಿರಾ ಬೇಗಂ ಎಲ್ಲರ ಶ್ರಮದಿಂದಾಗಿ ಪೆನ್ಸಿಲ್ ಪತ್ರಿಕೆ ರೂಪುಗೊಳ್ಳುತ್ತಿದೆ. ಅಂತೆಯೇ ಬೆಳಗುರ್ಕಿಯ ಗ್ರಾಮಸ್ಥರು, ನಮ್ಮ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಮಾಧ್ಯಮದ ಸ್ನೇಹಿತರು ತುಂಬಾ ಸಹಕಾರ ಕೊಡುತ್ತಿದ್ದಾರೆ. ಇಂಡಿಯನ್ ಫೌಂಡೇಷನ್ ಫಾರ್ ದಿ ಆಟ್ರ್ಸ್(ಕಲಿ-ಕಲಿಸು) ಕಲಾ ಅಂತರ್ಗತ ಯೋಜನೆಗೆ ನಮ್ಮ ಶಾಲೆಯನ್ನು ಆಯ್ದುಕೊಂಡಿದ್ದಾರೆ. ಈ ಸಂಸ್ಥೆಯ ಕಾರ್ಯಕ್ರಮ ನಿರ್ವಾಹಕರಾದ ಕೃಷ್ಣಮೂರ್ತಿ ಹಾಗೂ ರಾಧಿಕಾ ಭಾರದ್ವಾಜ್ ಅವರುಗಳು ಪತ್ರಿಕೆಗೆ ಮಾರ್ಗದರ್ಶನ ಮಾಡುತ್ತಾರೆ. ನಾನು ಪತ್ರಿಕೆಯ ಜವಾಬ್ದಾರಿ ನಿರ್ವಹಿಸಿದರೂ, ಅದರ ಹಿಂದೆ ಈ ಎಲ್ಲರ ಸಹಕಾರ ಮತ್ತು ಪ್ರೀತಿಯೇ ಪೆನ್ಸಿಲ್ ಪತ್ರಿಕೆಯನ್ನು ಗಮನ ಸೆಳೆಯುವಂತೆ ಮಾಡಿದೆ. ಇದರಿಂದಾಗಿ ನಮ್ಮ ಜವಾಬ್ದಾರಿಯೂ ಹೆಚ್ಚಾಗಿದೆ’ ಎನ್ನುತ್ತಾರೆ.

ಇದೀಗ ಬೆಳಗುರ್ಕಿ ಶಾಲೆಯ ಮಕ್ಕಳು ಮಕ್ಕಳ ಗ್ರಾಮಸಭೆಗೆ ಹಾಜರಾಗಿ ಜಬರ್ದಸ್ತ್ ಪ್ರಶ್ನೆ ಮಾಡಿ ಗ್ರಾಮಪಂಚಾಯ್ತಿಯಿಂದ ಶಾಲೆಗೆ ಬರಬೇಕಾದ ಸೌಲಭ್ಯಗಳನ್ನು ಪಡೆದಿದ್ದಾರೆ. ಈಗಾಗಲೆ ಮಕ್ಕಳೆಲ್ಲಾ ಸೇರಿ ನಮ್ಮೂರಲ್ಲಿ ಸಾರಾಯಿ ಅಂಗಡಿಯನ್ನು ಏಕೆ ನಿಲ್ಲಿಸಬಾರದು? ನಾವು ನಮ್ಮ ಪತ್ರಿಕೆಗೆ ಈಗಿನ ಶಿಕ್ಷಣ ಮಂತ್ರಿಯನ್ನೇಕೆ ಸಂದರ್ಶನ ಮಾಡಬಾರದು ಎಂದೆಲ್ಲಾ ಯೋಚನೆ ಮಾಡಲು ಶುರು ಮಾಡಿದ್ದಾರೆ. ಹೀಗೆ ಸದ್ದಿಲ್ಲದಂತೆ ಪೆನ್ಸಿಲ್ ಪತ್ರಿಕೆ ಶಾಲಾಮಕ್ಕಳನ್ನು ಜಾಗೃತ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಪ್ರೇರೇಪಿಸುತ್ತಿದೆ. ಕೊಟ್ರೇಶ್‍ನಂತಹ ಶಿಕ್ಷಕರೂ, ಪೆನ್ಸಿಲ್‍ನಂತಹ ಪತ್ರಿಕೆಗಳು ಎಲ್ಲಾ ಸರಕಾರಿ ಶಾಲೆಗಳಲ್ಲೂ ಜೀವ ತಳೆಯಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...