Homeಕರ್ನಾಟಕದಲಿತ ಚಳವಳಿಯಲ್ಲಿ ಬಿ.ಕೃಷ್ಣಪ್ಪ ನಮ್ಮ ಕೈಹಿಡಿದು ನಡೆಸಿದರು: ಮಾವಳ್ಳಿ ಶಂಕರ್

ದಲಿತ ಚಳವಳಿಯಲ್ಲಿ ಬಿ.ಕೃಷ್ಣಪ್ಪ ನಮ್ಮ ಕೈಹಿಡಿದು ನಡೆಸಿದರು: ಮಾವಳ್ಳಿ ಶಂಕರ್

- Advertisement -
- Advertisement -

ಬಿ.ಕೃಷ್ಣಪ್ಪ ಅವರು ಹಾಡುತ್ತಿದ್ದ ಹೋರಾಟದ ಹಾಡುಗಳ ಮೂಲಕ ನಾವು ಚಳವಳಿಯ ಭಾಗವಾದವರು. ಅವರ ಕನಸು ಮತ್ತು ಚಿಂತನೆಗಳನ್ನು ನಾವು ಮೈಗೂಡಿಸಿಕೊಂಡೆವು ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಹೇಳಿದರು.

ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಆಯೋಜಿಸಿದ್ದ ಪ್ರೊ. ಬಿ.ಕೃಷ್ಣಪ್ಪ ಅವರ 87 ವರ್ಷದ ಜನ್ಮದಿನಾಚರಣೆಯಲ್ಲಿ ಮಾತನಾಡಿದ ಅವರು, “ಅಂಬೇಡ್ಕರ್ ನಿಧನದ ಬಳಿಕ ದೇಶದ ದಲಿತ ಸಮುದಾಯಗಳಲ್ಲಿ ಸ್ಮಶಾನ ಮೌನ ಆವರಿಸಿತ್ತು. ಅದರ ನಂತರ ಮಹಾರಾಷ್ಟ್ರದಲ್ಲಿ 1972ರ ದಶಕದಲ್ಲಿ ‘ದಲಿತ್ ಪ್ಯಾಂಥರ್ಸ್‌’ ಆರಂಭವಾಗಿತ್ತು. ಅದು ವ್ಯಕ್ತಿಗತವಾಗಿದ್ದರಿಂದ ಕ್ರಮೇಣ ಅದರ ವೇಗ ಕ್ಷೀಣಿಸಿತು. ಆದರೆ, ಕರ್ನಾಟಕದಲ್ಲಿ ದಲಿತ ಚಳಚಳಿ ಎಲ್ಲರನ್ನು ಒಳಗೊಂಡಿತ್ತು, ಎಲ್ಲರನ್ನು ಪೊರೆಯುವ ತಾಯ್ತನ ದಲಿತ ಸಂಘರ್ಷ ಸಮಿತಿಗೆ ಇತ್ತು” ಎಂದರು.

“ದಸಂಸ ಎಲ್ಲ ಜಾತಿಯ ನೊಂದವರನ್ನು ತನ್ನ ಒಡಲೊಳಗೆ ಇಟ್ಟುಕೊಂಡಿತ್ತು, ಅಂತಹ ತಾಯ್ತನದಿಂದ ಎಲ್ಲರನ್ನೂ ಪೊರೆದ ದೊಡ್ಡ ಚಳವಳಿಯೇ ದಲಿತ ಸಂಘರ್ಷ ಸಮಿತಿ. ಬಿ.ಕೃಷ್ಣಪ್ಪ, ಸಿದ್ದಲಿಂಗಯ್ಯ, ದೇವನೂರ ಮಹಾದೇವ ಸೇರಿದಂತೆ ಅನೇಮಕ ಕವಿಗಳು, ಕಲಾವಿದರು, ಹಾಡುಗಾರರು ಈ ಚಳವಳಿಯನ್ನು ಮುನ್ನಡೆಸಿದರು. ಯಾರೂ ಕೂಡ ತಮ್ಮ ವೈಯಕ್ತಿಕ ಬದುಕಿನ ಬಗ್ಗೆ ಯೋಚನೆ ಮಾಡಿದವರಲ್ಲ; ಅಂಬೇಡ್ಕರ್ ಚಿಂತನೆ ಹಡರುವುದು ಮಾತ್ರ ಅವರ ಗುರಿಯಾಗಿತ್ತು; ದಲಿತರ ಮೇಲೆಲಿನ ದೌರ್ಜನ್ಯ ತಡೆಯುವುದಾಗಿತ್ತು. ಆದರೆ, ದೌರ್ಜನ ಇಂದಿಗೂ ನಿಂತಿಲ್ಲ” ಎಂದು ಹೇಳಿದರು.

“ಕೃಷ್ಣಪ್ಪ ಅವರು ದಲಿತ ಚಳವಳಿಯಲ್ಲಿದ್ದಾಗ ಮಾವಳ್ಳಿ ಕೇಂದ್ರ ಸ್ಥಾನವಾಗಿತ್ತು. ಬಿಕೆ ಅವರ ಜೊತೆಗೆ ಸಿದ್ದಲಿಂಗಯ್ಯ, ದೇವನೂರು ಮಹಾದೇವ, ತ್ಯಾಗಿ ಸೇರಿದಂತೆ ಅನೇಕರು ಮಾವಳ್ಳಿಯ ಸತ್ಯಮ್ಮನ ಗುಡಿಯಲ್ಲಿ ಕೂರುತ್ತಿದ್ದರು. ಕೃಷ್ಣಪ್ಪ ಅವರು ಅದ್ಭುತವಾಗಿ ಹೋರಾಟದ ಹಾಡುಗಳನ್ನು ಹಾಡುತ್ತಿದ್ದರು. ಬಿಕೆ ಹಾಡುಗಳ ಮೂಲಕ ನಾವು ದಲಿತ ಚಳವಳಿಯ ಭಾಗವಾದವರು. ಅವರ ಕನಸು ಮತ್ತು ಚಿಂತನೆಗಳನ್ನು ನಾವು ಮೈಗೂಡಿಸಿಕೊಂಡೆವು. ಗದಗಿಗೆ (ಸಾವನ್ನಪ್ಪಿದ ಸ್ಥಳ) ಹೊರಡುವ ಹಿಂದಿನ ದಿನ ಅವರನ್ನು ನಾನು ಬೆಂಗಳೂರಿನಿಂದ ಬಸ್‌ ಹತ್ತಿಸಿದೆ. ದಲಿತ ಚಳವಳಿಯ ಆರಂಭದ ದಿನದಿಂದಲೂ ಅವರ ಕೊನೆಯ ದಿನದವರೆಗೆ ನಮ್ಮನ್ನು ಕೈಹಿಡಿದು ನಡೆಸಿದರು” ಎಂದರು.

“ತಮ್ಮ ಜೀವನವನ್ನು ದಲಿತ ಚಳವಳಿಗೆ ಮೀಸಲಿಟ್ಟಿದ್ದ ಅನೇಕ ಹೋರಾಟಗಾರರನ್ನು ಇಂದು ನಾವು ಕಳೆದುಕೊಂಡಿದ್ದೇವೆ. ನಮ್ಮ ಹಿರಿಯರನ್ನು ನಾವು ನೆನೆಪಿಸಿಕೊಳ್ಳುವ ಜೊತೆಗೆ ಅವರ ಚಿಂತನೆಯನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

“ಮೂರು ದಶಕಗಳ ಕಾಲ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ದಸಂಸ ನಿರಂತರವಾಗಿ ಮಾತನಾಡುತ್ತಿತ್ತು. ಇದರಿಂದ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಸಿಆರ್‌ಇ) ಸೆಲ್ ಆರಂಭವಾಯಿತು. ನಮಗೆ ಅಧಿಕಾರ ಇಲ್ಲ, ನಮ್ಮಿಂದ ಎಫ್‌ಐಆರ್‌ ಹಾಕಲು ಸಾಧ್ಯವಿಲ್ಲ ಎಂದು ಎಂದು ಅಲ್ಲಿನ ಎಸ್‌ಪಿ-ಡಿಸಿಪಿಗಳು ಹೇಳುತ್ತಿದ್ದರು. ಅವರಿಗೆ ಅಧಿಕಾರ ಕೊಡಿ ಎಂದು ನಾವು ಹಲವು ಭಾರಿ ಒತ್ತಾಯಿಸಿದ್ದೇವೆ. ದಲಿತ ಚಳವಳಿ ಎತ್ತಿದ ಪ್ರಶ್ನೆಗೆ ಡಿಸಿಆರ್‌ಇ (ವಿಶೇಷ ಪೊಲೀಸ್ ಠಾಣೆ) ಸೆಲ್ ಆರಂಭಿಸುವ ಮೂಲಕ ಮಹದೇವಪ್ಪ ಇಂದು ಉತ್ತರಿಸಿದ್ದಾರೆ. ದಲಿತ ಸಮುದಾಯದ ರಕ್ಷಣೆಗೆ ದೇಶದಲ್ಲೇ ಅತ್ಯಂತ ವ್ಯವಸ್ಥಿತಿ ಪೊಲೀಸ್ ಠಾಣೆ ಅರಂಭಿಸಿರುವುದು ಕರ್ನಾಟಕ ಸರ್ಕಾರ ಮಾತ್ರ; 32 ಡಿಸಿಆರ್‌ಇ ಸೆಲ್ ಪೊಲೀಸ್ ಠಾಣೆಗಳನ್ನು ಸರ್ಕಾರ ಆರಂಭಿಸಿದೆ. ದಸಂಸದ ಬೇಡಿಕೆಯನ್ನು ಜಾರಿ ಮಾಡುವ ಇಚ್ಛಾಶಕ್ತಿ ಈವರೆಗೆ ಯಾರಿಗೂ ಇರಲಿಲ್ಲ, ಅದನ್ನು ಜಾರಿಗೆ ತಂದ ಮಹದೇವಪ್ಪ ಅವರನ್ನು ನಾವು ಅಭಿನಂದಿಸಲೇಬೇಕು” ಎಂದು ಪ್ರಶಂಸಿದರು.

“ದಲಿತರಿಗೆ ಭೂಮಿ ಇದ್ದಿದ್ದರೆ ಅವರ ಮೇಲಿನ ದೌರ್ಜನ್ಯಗಳು ಕಡಿಮೆ ಆಗುತ್ತಿದ್ದವು; ಭೂಮಿ ಎಂಬುದು ಒಂದು ಸಾಧನವಾಗಿದೆ. ದಲಿತ ಚಳವಳಿ ಆರಂಭಿಸಿದ ಪಿಟಿಎಸ್‌ಎಲ್‌ ಮೂಲಕ ಒಂದಷ್ಟು ಭೂಮಿ ಸಿಕ್ಕಿದೆ. ಅದನ್ನೂ ಪ್ರಬಲ ಜಾತಿಗಳು ವಿರೋಧಿಸಿವೆ. ಪಿಟಿಸಿಎಲ್‌ ಕಾಯ್ದೆಯನ್ನು ಸುಪ್ರೀಂ ಕೋರ್ಟಿನಲ್ಲಿ ನಮ್ಮ ಪ್ರಯತ್ನವಾಗಿ ಮಾಡಲು ಸರ್ಕಾರ ಕೆಲಸ ಮಾಡುತ್ತಿದೆ. ಲಕ್ಷಲಕ್ಷ ದರಕಾಸ್ತು ಭೂಮಿ ಅರ್ಜಿಗಳು ಕೊಳೆಯುತ್ತಾ ಬಿದ್ದಿವೆ. ಈ ಬಗ್ಗೆ ಯಾವ ಶಾಸಕರೂ ಮಂತ್ರಿಗಳು ಸಭೆ ನಡೆಸುತ್ತಿಲ್ಲ. ಅರಣ್ಯ ಇಲಾಖೆ ದಲಿತರ ಭೂಮಿಗಳನ್ನು ಬಲವಂತವಾಗಿ ಕಿತ್ತುಕೊಂಡು ಸಾಮಾಜಿಕ ಅರಣ್ಯ ಮಾಡುತ್ತಿವೆ. ಅದನ್ನು ಕೇಳಿದವರನ್ನು ಹಿಡಿದು ಜೈಲಿಗೆ ಹಾಕುತ್ತಿದ್ದಾರೆ” ಎಂದು ಆಕ್ರೋಶ ಹೊರಹಾಕಿದರು.

ದಲಿತ ಚಳವಳಿಯನ್ನು ಹೊಸ ತಲೆಮಾರು ಒಗ್ಗೂಡಿಸಬೇಕು: ಪ್ರೊ. ನಟರಾಜ್ ಹುಳಿಯಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...