Homeಕರ್ನಾಟಕದಲಿತ ಚಳವಳಿಯಲ್ಲಿ ಬಿ.ಕೃಷ್ಣಪ್ಪ ನಮ್ಮ ಕೈಹಿಡಿದು ನಡೆಸಿದರು: ಮಾವಳ್ಳಿ ಶಂಕರ್

ದಲಿತ ಚಳವಳಿಯಲ್ಲಿ ಬಿ.ಕೃಷ್ಣಪ್ಪ ನಮ್ಮ ಕೈಹಿಡಿದು ನಡೆಸಿದರು: ಮಾವಳ್ಳಿ ಶಂಕರ್

- Advertisement -
- Advertisement -

ಬಿ.ಕೃಷ್ಣಪ್ಪ ಅವರು ಹಾಡುತ್ತಿದ್ದ ಹೋರಾಟದ ಹಾಡುಗಳ ಮೂಲಕ ನಾವು ಚಳವಳಿಯ ಭಾಗವಾದವರು. ಅವರ ಕನಸು ಮತ್ತು ಚಿಂತನೆಗಳನ್ನು ನಾವು ಮೈಗೂಡಿಸಿಕೊಂಡೆವು ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಹೇಳಿದರು.

ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಆಯೋಜಿಸಿದ್ದ ಪ್ರೊ. ಬಿ.ಕೃಷ್ಣಪ್ಪ ಅವರ 87 ವರ್ಷದ ಜನ್ಮದಿನಾಚರಣೆಯಲ್ಲಿ ಮಾತನಾಡಿದ ಅವರು, “ಅಂಬೇಡ್ಕರ್ ನಿಧನದ ಬಳಿಕ ದೇಶದ ದಲಿತ ಸಮುದಾಯಗಳಲ್ಲಿ ಸ್ಮಶಾನ ಮೌನ ಆವರಿಸಿತ್ತು. ಅದರ ನಂತರ ಮಹಾರಾಷ್ಟ್ರದಲ್ಲಿ 1972ರ ದಶಕದಲ್ಲಿ ‘ದಲಿತ್ ಪ್ಯಾಂಥರ್ಸ್‌’ ಆರಂಭವಾಗಿತ್ತು. ಅದು ವ್ಯಕ್ತಿಗತವಾಗಿದ್ದರಿಂದ ಕ್ರಮೇಣ ಅದರ ವೇಗ ಕ್ಷೀಣಿಸಿತು. ಆದರೆ, ಕರ್ನಾಟಕದಲ್ಲಿ ದಲಿತ ಚಳಚಳಿ ಎಲ್ಲರನ್ನು ಒಳಗೊಂಡಿತ್ತು, ಎಲ್ಲರನ್ನು ಪೊರೆಯುವ ತಾಯ್ತನ ದಲಿತ ಸಂಘರ್ಷ ಸಮಿತಿಗೆ ಇತ್ತು” ಎಂದರು.

“ದಸಂಸ ಎಲ್ಲ ಜಾತಿಯ ನೊಂದವರನ್ನು ತನ್ನ ಒಡಲೊಳಗೆ ಇಟ್ಟುಕೊಂಡಿತ್ತು, ಅಂತಹ ತಾಯ್ತನದಿಂದ ಎಲ್ಲರನ್ನೂ ಪೊರೆದ ದೊಡ್ಡ ಚಳವಳಿಯೇ ದಲಿತ ಸಂಘರ್ಷ ಸಮಿತಿ. ಬಿ.ಕೃಷ್ಣಪ್ಪ, ಸಿದ್ದಲಿಂಗಯ್ಯ, ದೇವನೂರ ಮಹಾದೇವ ಸೇರಿದಂತೆ ಅನೇಮಕ ಕವಿಗಳು, ಕಲಾವಿದರು, ಹಾಡುಗಾರರು ಈ ಚಳವಳಿಯನ್ನು ಮುನ್ನಡೆಸಿದರು. ಯಾರೂ ಕೂಡ ತಮ್ಮ ವೈಯಕ್ತಿಕ ಬದುಕಿನ ಬಗ್ಗೆ ಯೋಚನೆ ಮಾಡಿದವರಲ್ಲ; ಅಂಬೇಡ್ಕರ್ ಚಿಂತನೆ ಹಡರುವುದು ಮಾತ್ರ ಅವರ ಗುರಿಯಾಗಿತ್ತು; ದಲಿತರ ಮೇಲೆಲಿನ ದೌರ್ಜನ್ಯ ತಡೆಯುವುದಾಗಿತ್ತು. ಆದರೆ, ದೌರ್ಜನ ಇಂದಿಗೂ ನಿಂತಿಲ್ಲ” ಎಂದು ಹೇಳಿದರು.

“ಕೃಷ್ಣಪ್ಪ ಅವರು ದಲಿತ ಚಳವಳಿಯಲ್ಲಿದ್ದಾಗ ಮಾವಳ್ಳಿ ಕೇಂದ್ರ ಸ್ಥಾನವಾಗಿತ್ತು. ಬಿಕೆ ಅವರ ಜೊತೆಗೆ ಸಿದ್ದಲಿಂಗಯ್ಯ, ದೇವನೂರು ಮಹಾದೇವ, ತ್ಯಾಗಿ ಸೇರಿದಂತೆ ಅನೇಕರು ಮಾವಳ್ಳಿಯ ಸತ್ಯಮ್ಮನ ಗುಡಿಯಲ್ಲಿ ಕೂರುತ್ತಿದ್ದರು. ಕೃಷ್ಣಪ್ಪ ಅವರು ಅದ್ಭುತವಾಗಿ ಹೋರಾಟದ ಹಾಡುಗಳನ್ನು ಹಾಡುತ್ತಿದ್ದರು. ಬಿಕೆ ಹಾಡುಗಳ ಮೂಲಕ ನಾವು ದಲಿತ ಚಳವಳಿಯ ಭಾಗವಾದವರು. ಅವರ ಕನಸು ಮತ್ತು ಚಿಂತನೆಗಳನ್ನು ನಾವು ಮೈಗೂಡಿಸಿಕೊಂಡೆವು. ಗದಗಿಗೆ (ಸಾವನ್ನಪ್ಪಿದ ಸ್ಥಳ) ಹೊರಡುವ ಹಿಂದಿನ ದಿನ ಅವರನ್ನು ನಾನು ಬೆಂಗಳೂರಿನಿಂದ ಬಸ್‌ ಹತ್ತಿಸಿದೆ. ದಲಿತ ಚಳವಳಿಯ ಆರಂಭದ ದಿನದಿಂದಲೂ ಅವರ ಕೊನೆಯ ದಿನದವರೆಗೆ ನಮ್ಮನ್ನು ಕೈಹಿಡಿದು ನಡೆಸಿದರು” ಎಂದರು.

“ತಮ್ಮ ಜೀವನವನ್ನು ದಲಿತ ಚಳವಳಿಗೆ ಮೀಸಲಿಟ್ಟಿದ್ದ ಅನೇಕ ಹೋರಾಟಗಾರರನ್ನು ಇಂದು ನಾವು ಕಳೆದುಕೊಂಡಿದ್ದೇವೆ. ನಮ್ಮ ಹಿರಿಯರನ್ನು ನಾವು ನೆನೆಪಿಸಿಕೊಳ್ಳುವ ಜೊತೆಗೆ ಅವರ ಚಿಂತನೆಯನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

“ಮೂರು ದಶಕಗಳ ಕಾಲ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ದಸಂಸ ನಿರಂತರವಾಗಿ ಮಾತನಾಡುತ್ತಿತ್ತು. ಇದರಿಂದ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಸಿಆರ್‌ಇ) ಸೆಲ್ ಆರಂಭವಾಯಿತು. ನಮಗೆ ಅಧಿಕಾರ ಇಲ್ಲ, ನಮ್ಮಿಂದ ಎಫ್‌ಐಆರ್‌ ಹಾಕಲು ಸಾಧ್ಯವಿಲ್ಲ ಎಂದು ಎಂದು ಅಲ್ಲಿನ ಎಸ್‌ಪಿ-ಡಿಸಿಪಿಗಳು ಹೇಳುತ್ತಿದ್ದರು. ಅವರಿಗೆ ಅಧಿಕಾರ ಕೊಡಿ ಎಂದು ನಾವು ಹಲವು ಭಾರಿ ಒತ್ತಾಯಿಸಿದ್ದೇವೆ. ದಲಿತ ಚಳವಳಿ ಎತ್ತಿದ ಪ್ರಶ್ನೆಗೆ ಡಿಸಿಆರ್‌ಇ (ವಿಶೇಷ ಪೊಲೀಸ್ ಠಾಣೆ) ಸೆಲ್ ಆರಂಭಿಸುವ ಮೂಲಕ ಮಹದೇವಪ್ಪ ಇಂದು ಉತ್ತರಿಸಿದ್ದಾರೆ. ದಲಿತ ಸಮುದಾಯದ ರಕ್ಷಣೆಗೆ ದೇಶದಲ್ಲೇ ಅತ್ಯಂತ ವ್ಯವಸ್ಥಿತಿ ಪೊಲೀಸ್ ಠಾಣೆ ಅರಂಭಿಸಿರುವುದು ಕರ್ನಾಟಕ ಸರ್ಕಾರ ಮಾತ್ರ; 32 ಡಿಸಿಆರ್‌ಇ ಸೆಲ್ ಪೊಲೀಸ್ ಠಾಣೆಗಳನ್ನು ಸರ್ಕಾರ ಆರಂಭಿಸಿದೆ. ದಸಂಸದ ಬೇಡಿಕೆಯನ್ನು ಜಾರಿ ಮಾಡುವ ಇಚ್ಛಾಶಕ್ತಿ ಈವರೆಗೆ ಯಾರಿಗೂ ಇರಲಿಲ್ಲ, ಅದನ್ನು ಜಾರಿಗೆ ತಂದ ಮಹದೇವಪ್ಪ ಅವರನ್ನು ನಾವು ಅಭಿನಂದಿಸಲೇಬೇಕು” ಎಂದು ಪ್ರಶಂಸಿದರು.

“ದಲಿತರಿಗೆ ಭೂಮಿ ಇದ್ದಿದ್ದರೆ ಅವರ ಮೇಲಿನ ದೌರ್ಜನ್ಯಗಳು ಕಡಿಮೆ ಆಗುತ್ತಿದ್ದವು; ಭೂಮಿ ಎಂಬುದು ಒಂದು ಸಾಧನವಾಗಿದೆ. ದಲಿತ ಚಳವಳಿ ಆರಂಭಿಸಿದ ಪಿಟಿಎಸ್‌ಎಲ್‌ ಮೂಲಕ ಒಂದಷ್ಟು ಭೂಮಿ ಸಿಕ್ಕಿದೆ. ಅದನ್ನೂ ಪ್ರಬಲ ಜಾತಿಗಳು ವಿರೋಧಿಸಿವೆ. ಪಿಟಿಸಿಎಲ್‌ ಕಾಯ್ದೆಯನ್ನು ಸುಪ್ರೀಂ ಕೋರ್ಟಿನಲ್ಲಿ ನಮ್ಮ ಪ್ರಯತ್ನವಾಗಿ ಮಾಡಲು ಸರ್ಕಾರ ಕೆಲಸ ಮಾಡುತ್ತಿದೆ. ಲಕ್ಷಲಕ್ಷ ದರಕಾಸ್ತು ಭೂಮಿ ಅರ್ಜಿಗಳು ಕೊಳೆಯುತ್ತಾ ಬಿದ್ದಿವೆ. ಈ ಬಗ್ಗೆ ಯಾವ ಶಾಸಕರೂ ಮಂತ್ರಿಗಳು ಸಭೆ ನಡೆಸುತ್ತಿಲ್ಲ. ಅರಣ್ಯ ಇಲಾಖೆ ದಲಿತರ ಭೂಮಿಗಳನ್ನು ಬಲವಂತವಾಗಿ ಕಿತ್ತುಕೊಂಡು ಸಾಮಾಜಿಕ ಅರಣ್ಯ ಮಾಡುತ್ತಿವೆ. ಅದನ್ನು ಕೇಳಿದವರನ್ನು ಹಿಡಿದು ಜೈಲಿಗೆ ಹಾಕುತ್ತಿದ್ದಾರೆ” ಎಂದು ಆಕ್ರೋಶ ಹೊರಹಾಕಿದರು.

ದಲಿತ ಚಳವಳಿಯನ್ನು ಹೊಸ ತಲೆಮಾರು ಒಗ್ಗೂಡಿಸಬೇಕು: ಪ್ರೊ. ನಟರಾಜ್ ಹುಳಿಯಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...