Homeಕರ್ನಾಟಕದಲಿತ ಚಳವಳಿಯಲ್ಲಿ ಬಿ.ಕೃಷ್ಣಪ್ಪ ನಮ್ಮ ಕೈಹಿಡಿದು ನಡೆಸಿದರು: ಮಾವಳ್ಳಿ ಶಂಕರ್

ದಲಿತ ಚಳವಳಿಯಲ್ಲಿ ಬಿ.ಕೃಷ್ಣಪ್ಪ ನಮ್ಮ ಕೈಹಿಡಿದು ನಡೆಸಿದರು: ಮಾವಳ್ಳಿ ಶಂಕರ್

- Advertisement -
- Advertisement -

ಬಿ.ಕೃಷ್ಣಪ್ಪ ಅವರು ಹಾಡುತ್ತಿದ್ದ ಹೋರಾಟದ ಹಾಡುಗಳ ಮೂಲಕ ನಾವು ಚಳವಳಿಯ ಭಾಗವಾದವರು. ಅವರ ಕನಸು ಮತ್ತು ಚಿಂತನೆಗಳನ್ನು ನಾವು ಮೈಗೂಡಿಸಿಕೊಂಡೆವು ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಹೇಳಿದರು.

ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಆಯೋಜಿಸಿದ್ದ ಪ್ರೊ. ಬಿ.ಕೃಷ್ಣಪ್ಪ ಅವರ 87 ವರ್ಷದ ಜನ್ಮದಿನಾಚರಣೆಯಲ್ಲಿ ಮಾತನಾಡಿದ ಅವರು, “ಅಂಬೇಡ್ಕರ್ ನಿಧನದ ಬಳಿಕ ದೇಶದ ದಲಿತ ಸಮುದಾಯಗಳಲ್ಲಿ ಸ್ಮಶಾನ ಮೌನ ಆವರಿಸಿತ್ತು. ಅದರ ನಂತರ ಮಹಾರಾಷ್ಟ್ರದಲ್ಲಿ 1972ರ ದಶಕದಲ್ಲಿ ‘ದಲಿತ್ ಪ್ಯಾಂಥರ್ಸ್‌’ ಆರಂಭವಾಗಿತ್ತು. ಅದು ವ್ಯಕ್ತಿಗತವಾಗಿದ್ದರಿಂದ ಕ್ರಮೇಣ ಅದರ ವೇಗ ಕ್ಷೀಣಿಸಿತು. ಆದರೆ, ಕರ್ನಾಟಕದಲ್ಲಿ ದಲಿತ ಚಳಚಳಿ ಎಲ್ಲರನ್ನು ಒಳಗೊಂಡಿತ್ತು, ಎಲ್ಲರನ್ನು ಪೊರೆಯುವ ತಾಯ್ತನ ದಲಿತ ಸಂಘರ್ಷ ಸಮಿತಿಗೆ ಇತ್ತು” ಎಂದರು.

“ದಸಂಸ ಎಲ್ಲ ಜಾತಿಯ ನೊಂದವರನ್ನು ತನ್ನ ಒಡಲೊಳಗೆ ಇಟ್ಟುಕೊಂಡಿತ್ತು, ಅಂತಹ ತಾಯ್ತನದಿಂದ ಎಲ್ಲರನ್ನೂ ಪೊರೆದ ದೊಡ್ಡ ಚಳವಳಿಯೇ ದಲಿತ ಸಂಘರ್ಷ ಸಮಿತಿ. ಬಿ.ಕೃಷ್ಣಪ್ಪ, ಸಿದ್ದಲಿಂಗಯ್ಯ, ದೇವನೂರ ಮಹಾದೇವ ಸೇರಿದಂತೆ ಅನೇಮಕ ಕವಿಗಳು, ಕಲಾವಿದರು, ಹಾಡುಗಾರರು ಈ ಚಳವಳಿಯನ್ನು ಮುನ್ನಡೆಸಿದರು. ಯಾರೂ ಕೂಡ ತಮ್ಮ ವೈಯಕ್ತಿಕ ಬದುಕಿನ ಬಗ್ಗೆ ಯೋಚನೆ ಮಾಡಿದವರಲ್ಲ; ಅಂಬೇಡ್ಕರ್ ಚಿಂತನೆ ಹಡರುವುದು ಮಾತ್ರ ಅವರ ಗುರಿಯಾಗಿತ್ತು; ದಲಿತರ ಮೇಲೆಲಿನ ದೌರ್ಜನ್ಯ ತಡೆಯುವುದಾಗಿತ್ತು. ಆದರೆ, ದೌರ್ಜನ ಇಂದಿಗೂ ನಿಂತಿಲ್ಲ” ಎಂದು ಹೇಳಿದರು.

“ಕೃಷ್ಣಪ್ಪ ಅವರು ದಲಿತ ಚಳವಳಿಯಲ್ಲಿದ್ದಾಗ ಮಾವಳ್ಳಿ ಕೇಂದ್ರ ಸ್ಥಾನವಾಗಿತ್ತು. ಬಿಕೆ ಅವರ ಜೊತೆಗೆ ಸಿದ್ದಲಿಂಗಯ್ಯ, ದೇವನೂರು ಮಹಾದೇವ, ತ್ಯಾಗಿ ಸೇರಿದಂತೆ ಅನೇಕರು ಮಾವಳ್ಳಿಯ ಸತ್ಯಮ್ಮನ ಗುಡಿಯಲ್ಲಿ ಕೂರುತ್ತಿದ್ದರು. ಕೃಷ್ಣಪ್ಪ ಅವರು ಅದ್ಭುತವಾಗಿ ಹೋರಾಟದ ಹಾಡುಗಳನ್ನು ಹಾಡುತ್ತಿದ್ದರು. ಬಿಕೆ ಹಾಡುಗಳ ಮೂಲಕ ನಾವು ದಲಿತ ಚಳವಳಿಯ ಭಾಗವಾದವರು. ಅವರ ಕನಸು ಮತ್ತು ಚಿಂತನೆಗಳನ್ನು ನಾವು ಮೈಗೂಡಿಸಿಕೊಂಡೆವು. ಗದಗಿಗೆ (ಸಾವನ್ನಪ್ಪಿದ ಸ್ಥಳ) ಹೊರಡುವ ಹಿಂದಿನ ದಿನ ಅವರನ್ನು ನಾನು ಬೆಂಗಳೂರಿನಿಂದ ಬಸ್‌ ಹತ್ತಿಸಿದೆ. ದಲಿತ ಚಳವಳಿಯ ಆರಂಭದ ದಿನದಿಂದಲೂ ಅವರ ಕೊನೆಯ ದಿನದವರೆಗೆ ನಮ್ಮನ್ನು ಕೈಹಿಡಿದು ನಡೆಸಿದರು” ಎಂದರು.

“ತಮ್ಮ ಜೀವನವನ್ನು ದಲಿತ ಚಳವಳಿಗೆ ಮೀಸಲಿಟ್ಟಿದ್ದ ಅನೇಕ ಹೋರಾಟಗಾರರನ್ನು ಇಂದು ನಾವು ಕಳೆದುಕೊಂಡಿದ್ದೇವೆ. ನಮ್ಮ ಹಿರಿಯರನ್ನು ನಾವು ನೆನೆಪಿಸಿಕೊಳ್ಳುವ ಜೊತೆಗೆ ಅವರ ಚಿಂತನೆಯನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

“ಮೂರು ದಶಕಗಳ ಕಾಲ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ದಸಂಸ ನಿರಂತರವಾಗಿ ಮಾತನಾಡುತ್ತಿತ್ತು. ಇದರಿಂದ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಸಿಆರ್‌ಇ) ಸೆಲ್ ಆರಂಭವಾಯಿತು. ನಮಗೆ ಅಧಿಕಾರ ಇಲ್ಲ, ನಮ್ಮಿಂದ ಎಫ್‌ಐಆರ್‌ ಹಾಕಲು ಸಾಧ್ಯವಿಲ್ಲ ಎಂದು ಎಂದು ಅಲ್ಲಿನ ಎಸ್‌ಪಿ-ಡಿಸಿಪಿಗಳು ಹೇಳುತ್ತಿದ್ದರು. ಅವರಿಗೆ ಅಧಿಕಾರ ಕೊಡಿ ಎಂದು ನಾವು ಹಲವು ಭಾರಿ ಒತ್ತಾಯಿಸಿದ್ದೇವೆ. ದಲಿತ ಚಳವಳಿ ಎತ್ತಿದ ಪ್ರಶ್ನೆಗೆ ಡಿಸಿಆರ್‌ಇ (ವಿಶೇಷ ಪೊಲೀಸ್ ಠಾಣೆ) ಸೆಲ್ ಆರಂಭಿಸುವ ಮೂಲಕ ಮಹದೇವಪ್ಪ ಇಂದು ಉತ್ತರಿಸಿದ್ದಾರೆ. ದಲಿತ ಸಮುದಾಯದ ರಕ್ಷಣೆಗೆ ದೇಶದಲ್ಲೇ ಅತ್ಯಂತ ವ್ಯವಸ್ಥಿತಿ ಪೊಲೀಸ್ ಠಾಣೆ ಅರಂಭಿಸಿರುವುದು ಕರ್ನಾಟಕ ಸರ್ಕಾರ ಮಾತ್ರ; 32 ಡಿಸಿಆರ್‌ಇ ಸೆಲ್ ಪೊಲೀಸ್ ಠಾಣೆಗಳನ್ನು ಸರ್ಕಾರ ಆರಂಭಿಸಿದೆ. ದಸಂಸದ ಬೇಡಿಕೆಯನ್ನು ಜಾರಿ ಮಾಡುವ ಇಚ್ಛಾಶಕ್ತಿ ಈವರೆಗೆ ಯಾರಿಗೂ ಇರಲಿಲ್ಲ, ಅದನ್ನು ಜಾರಿಗೆ ತಂದ ಮಹದೇವಪ್ಪ ಅವರನ್ನು ನಾವು ಅಭಿನಂದಿಸಲೇಬೇಕು” ಎಂದು ಪ್ರಶಂಸಿದರು.

“ದಲಿತರಿಗೆ ಭೂಮಿ ಇದ್ದಿದ್ದರೆ ಅವರ ಮೇಲಿನ ದೌರ್ಜನ್ಯಗಳು ಕಡಿಮೆ ಆಗುತ್ತಿದ್ದವು; ಭೂಮಿ ಎಂಬುದು ಒಂದು ಸಾಧನವಾಗಿದೆ. ದಲಿತ ಚಳವಳಿ ಆರಂಭಿಸಿದ ಪಿಟಿಎಸ್‌ಎಲ್‌ ಮೂಲಕ ಒಂದಷ್ಟು ಭೂಮಿ ಸಿಕ್ಕಿದೆ. ಅದನ್ನೂ ಪ್ರಬಲ ಜಾತಿಗಳು ವಿರೋಧಿಸಿವೆ. ಪಿಟಿಸಿಎಲ್‌ ಕಾಯ್ದೆಯನ್ನು ಸುಪ್ರೀಂ ಕೋರ್ಟಿನಲ್ಲಿ ನಮ್ಮ ಪ್ರಯತ್ನವಾಗಿ ಮಾಡಲು ಸರ್ಕಾರ ಕೆಲಸ ಮಾಡುತ್ತಿದೆ. ಲಕ್ಷಲಕ್ಷ ದರಕಾಸ್ತು ಭೂಮಿ ಅರ್ಜಿಗಳು ಕೊಳೆಯುತ್ತಾ ಬಿದ್ದಿವೆ. ಈ ಬಗ್ಗೆ ಯಾವ ಶಾಸಕರೂ ಮಂತ್ರಿಗಳು ಸಭೆ ನಡೆಸುತ್ತಿಲ್ಲ. ಅರಣ್ಯ ಇಲಾಖೆ ದಲಿತರ ಭೂಮಿಗಳನ್ನು ಬಲವಂತವಾಗಿ ಕಿತ್ತುಕೊಂಡು ಸಾಮಾಜಿಕ ಅರಣ್ಯ ಮಾಡುತ್ತಿವೆ. ಅದನ್ನು ಕೇಳಿದವರನ್ನು ಹಿಡಿದು ಜೈಲಿಗೆ ಹಾಕುತ್ತಿದ್ದಾರೆ” ಎಂದು ಆಕ್ರೋಶ ಹೊರಹಾಕಿದರು.

ದಲಿತ ಚಳವಳಿಯನ್ನು ಹೊಸ ತಲೆಮಾರು ಒಗ್ಗೂಡಿಸಬೇಕು: ಪ್ರೊ. ನಟರಾಜ್ ಹುಳಿಯಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...