Homeಸಾಹಿತ್ಯ-ಸಂಸ್ಕೃತಿಕಥೆಬಿ.ಎಲ್.ವೇಣು ಅವರ ದುವಾ ಕಥೆ

ಬಿ.ಎಲ್.ವೇಣು ಅವರ ದುವಾ ಕಥೆ

- Advertisement -
- Advertisement -

| ಬಿ.ಎಲ್.ವೇಣು |

ಮೂಲತಃ ಚಿತ್ರದುರ್ಗದವರಾದ ಬಿ.ಎಲ್.ವೇಣುರವರು ಕಾದಂಬರಿಕಾರರಾಗಿ, ಕಥೆಗಾರರಾಗಿ, ಚಿತ್ರಸಾಹಿತಿಯಾಗಿ ಅಪಾರ ಮನ್ನಣೆ ಗಳಿಸಿದವರು. ತಂದೆ-ತಾಯಿ ಇಬ್ಬರೂ ರಂಗಕಲೆ ಹಿನ್ನೆಲೆಯವರಾಗಿದ್ದರಿಂದ ಸಾಹಿತ್ಯಾಸಕ್ತಿ ಅವರಲ್ಲಿ ಸಹಜವಾಗಿಯೇ ಬೆಳೆದುಬಂದಿದೆ. ಚಾರಿತ್ರಿಕ ಹಿನ್ನೆಲೆಯ ನೆಲದಿಂದ ಬಂದ ಅವರು ಗಂಡುಗಲಿ ಮದಕರಿನಾಯಕ, ರಾಜಾಬಿಚ್ಚುಕತ್ತಿ ಭರಮಣ್ಣನಾಯಕ, ಕಲ್ಲರಳಿ ಹೂವಾಗಿ, ಕ್ರಾಂತಿಯೋಗಿ ಮರುಳಸಿದ್ಧ, ಹೆಬ್ಬುಲಿ ಹಿರೇಮದಕರಿನಾಯಕ ಮುಂತಾದ 5 ಐತಿಹಾಸಿಕ ಕಾದಂಬರಿಗಳು ಸೇರಿದಂತೆ 26 ಕಾದಂಬರಿಗಳನ್ನು ಹಲವಾರು ನಾಟಕಗಳನ್ನು ರಚಿಸಿದ್ದಾರೆ. ಅವರ `ಪ್ರೇಮಪರ್ವ’ ಕಾದಂಬರಿಯು ಚಲನಚಿತ್ರವಾಗಿ ಲವ್‍ಸ್ಟೋರಿಗಳ ಟ್ರೆಂಡ್‍ಗೆ ನಾಂದಿ ಹಾಡಿತಲ್ಲದೆ, ನಾಲ್ಕು ಭಾಷೆಗಳಲ್ಲಿ ತೆರೆಕಂಡಿತು. ಪುಟ್ಟಣ್ಣ ಕಣಗಾಲರ `ಅಮೃತಘಳಿಗೆ’ ಸಿನಿಮಾ ಮೂಲಕ ಸಂಭಾಷಣೆ ಬರೆಯಲು ಶುರು ಮಾಡಿದ ಅವರು 60ಕ್ಕೂ ಹೆಚ್ಚು ಸಿನಿಮಾಗಳಿಗೆ ಚಿತ್ರಸಾಹಿತಿಯಾಗಿ ದುಡಿದಿದ್ದಾರೆ. ನಿರ್ದೇಶಕ ಭಾರ್ಗವ, ನಟ ವಿಷ್ಣುವರ್ಧನ್ ಮತ್ತು ಬಿ.ಎಲ್.ವೇಣುರವರ ಜೋಡಿ ಎಂಬತ್ತರ ದಶಕದಲ್ಲಿ ಯಶಸ್ವಿ ಸಿನಿ ಜೋಡಿಯಾಗಿ ಗುರುತಿಸಿಕೊಂಡಿತ್ತು. ಸಾಹಿತ್ಯ, ಸಿನಿಮಾ ಎರಡೂ ಕ್ಷೇತ್ರಗಳಲ್ಲಿ ಹೆಸರು ಮಾಡಿರುವ ಅವರು ಈಗಲೂ ಕೃತಿಗಳ ರಚನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಹೊರಗಡೆ ತಲೆ ಎತ್ತಿ ತಿರುಗಾಡಲೂ ಶರಮ್ ಆಗ್ತದೆ. ಮಾನಸಿಕ ಹಿಂಸೆಯಿಂದಾಗಿ ಬದುಕೇ ಬೇಡವೆನ್ನಿಸಿದೆ. ನನ್ನನ್ನೇ ಉಗ್ರನಂತೆ ನೋಡುತ್ತಿದ್ದಾರೇನೋ ಎಂಬ ಅಳಕು. ಯಾರೋ ಮಾಡುವ ಗಲತ್ತಿಗೆ ನಾನೇಕೆ ಶರಮ್ ಆಗಬೇಕು? ಇತಿಹಾಸದಲ್ಲಿ ಸಂಭವಿಸಿದ್ದಕ್ಕೆಲ್ಲಾ ಹೊಣೆಗಾರನಾಗಬೇಕೇಕೆ? ನನ್ನ ಯಾವ ಪ್ರಶ್ನೆಗಳಿಗೂ ಉತ್ತರ ಸಿಗುತ್ತಿಲ್ಲವೆಂಬ ಸಂಕಟ. ಪ್ರೇಯರ್ ಮಾಡಲು ಬಂದ ಇಸ್ಮಾಯಿಲ್ ತಂಪು ಆವರಿಸಿದ ಮಸೀದಿಯಲ್ಲೂ ಬೆವರೊಡೆದ. ಮನಸ್ಸು ಬಲೆಯಲ್ಲಿ ಸಿಕ್ಕ ಜೇಡ. ಮಸೀದಿ ಕೆಡವಿದರು. ಕೆಡವಿದವರೇ ಗದ್ದಲವೆಬ್ಬಿಸಿ ಅನೇಕರನ್ನು ಸಾಯಬಡಿದರು. ಪ್ರಾಣ್ ಬಚಾವ್ ಮಾಡಿಕೊಳ್ಳಲು ಹೊಡೆದಾಡಿದ್ದೆವು. ತಲವಾರ್ ಹಿಡಿದುಬಂದವರು ಇವರ ಮನೇಲಿ ವೆಪನ್ಸ್ ಅದಾವೆ ಅಂದರು. ಮಸೀದಿನಾಗೂ ಇಟ್ಕಂಡವರೆ ಅಂದರು. ಮಸೀದಿಗೂ ನುಗ್ಗಿದರು. ಇದೆಲ್ಲಾ ಪುರಾನಿ ಕಹಾನಿಯಾದರೂ ನಾವಿಲ್ಲೇ ಬದುಕಿದ್ದೇವೆ. ನಮ್ಮ ದೇಶದಲ್ಲೇ ಪರಕೀಯರಂತೆ! ಚರಿತ್ರೆ ಪುಟಗಳಲ್ಲೆಂದೋ ನಮ್ಮವರು ದರ್ಬಾರ್ ಮಾಡಿದ ನೆಲದಲ್ಲಿಂದು ಗುಲಾಮರಂತೆ ಬದುಕುವುದೂ ಕಷ್ಟವಾಗಿದೆ. ನೀವೆಲ್ಲಾ ಕನ್ವರ್ಟೆಡ್ ಮುಸ್ಲಿಮರು ಅಂತಾರೆ. ಹಿಂದೆ ನಮ್ಮವರೇ ಆಗಿದ್ದೀರಿ ಅಂತ ಜೋಕ್ಸ್ ಹೊಡಿತಾರೇ ವಿನಹ ತಮ್ಮವರಂತೆ ಕಂಡಿದ್ದಿಲ್ಲ. ನವಾಬರು ಆರನೂರು ವರ್ಷ ಆಳಿದರೂ ದೇಶವನ್ನು ದೋಚಲಿಲ್ಲ. ಇಲ್ಲಿಯೇ ಮೀನಾರು ಮಸೀದಿ ಮಹಲುಗಳನ್ನು ಕಟ್ಕೊಂಡು ಬೇಪಾರ್ ಮಾಡ್ಕೊಂಡು ಬದುಕಿದರು. ಬ್ರಿಟಿಷರಂಗೆ ದೇಶವನ್ನೇ ಲೂಟ್ ಮಾಡಿ ಹೊತ್ತೊಯ್ಯಲಿಲ್ಲ. ಬ್ರಿಟಿಷರನ್ನು ಓಡಿಸೋಕೆ ನಾವೂ ನಮ್ಮದೇ ವತನ್ ಅನ್ನೋ ಭಾವನೆಯಿಂದ್ಲೇ ಹೋರಾಡಿದೆವು. ಅವರು ಹೋಗಬೇಕಾದರೆ ದೇಶನಾ ಎರಡು ಭಾಗ ಮಾಡಿ ಮನಸ್ಸುಗಳನ್ನೂ ಒಡೆದರು. ದೇಶದ ಮೇಲೆ ಮೊಹಬತ್ ಇಲ್ಲದಿದ್ದರೆ ನಾವೇಕೆ ಇಲ್ಲಿ ಉಳೀತಿದ್ದೆವು? ನಮ್ಮ ಪಾಡಿಗೆ ನಾವು ಬೆವರು ಬಸಿದು ದುಡ್ಕೊಂಡು ಬದುಕ್ತಿದ್ದೀವಿ. ಯಾವನೋ ಸಾಬರವನು ಶತ್ರು ದೇಶದ ಜೊತೆ ದೋಸ್ತಿ ಮಾಡ್ಕೊಂಡು ಬಾಂಬ್ ಉಡಾಯಿಸಿ ಸೈನಿಕರ ಜೀವ ತೆಗೆದರೆ ಸಾರಾಸಗಟಾಗಿ ಅನುಮಾನಿಸೋದು ಹೀಯಾಳಿಸೋದು ಸರೀನಾ? ಹಿಂದು ಕ್ರೈಸ್ತ ಮುಸಲ್ಮಾನ ಪಾರಸಿಕ ಜೈನರುದ್ಯಾನ ಎಲ್ಲಿದೆ? ಮಾಧ್ಯಮಗಳಲ್ಲಿ ಬೇರೆ ಟೀಕೆ, ತೀರ್ಪು! ಗಡ್ಡಬಿಟ್ಟೋರೆಲ್ಲಾ ಘಾತಕರೆಂಬ ಇರಿಯುವ ನೋಟ. ದೇಶವನ್ನೇ ಬಿಟ್ಟು ತೊಲಗಿ ಎಂಬಷ್ಟು ದ್ವೇಷ. ಬುದ್ಧ ಬಸವ ಗಾಂಧಿ ಹುಟ್ಟಿದ ದೇಶದಲ್ಲೇ ನಿಮ್ಮ ಹಾಗೆ ಹುಟ್ಟಿದ್ದೇವಲ್ಲ. ಗಾಂಧಿಯನ್ನು ಕೊಂದಿದ್ದು ಯಾರು? ಮುಸಲ್ಮಾನರಾ? ಬ್ರಿಟಿಷರಾ? ಹೇಳಿ? ಪಾಕಿಸ್ತಾನಕ್ಕೇ ನುಗ್ಗಿ ಬಗ್ಗುಬಡಿದು, ವಾಜಪೇಯಿರಂತಹ ಸಜ್ಜನನಿಂದ ‘ದುರ್ಗಿ’ ಅಂತ ತಾರೀಫ್ ಮಾಡಿಸಿಕೊಂಡ ಇಂದಿರಾಗಾಂಧಿನಾ, ಜಂಟ್ಲಮೆನ್ ರಾಜೀವಗಾಂಧಿನಾ ಕೊಂದಿದ್ದು ನಾವಾ? ಹಿಂದುಗಳಲ್ಲೂ ಭಯೋತ್ಪಾದಕರಿಲ್ಲವೆ ಅಂತ ಕೇಳಿದ್ರೆ ಉರ್ಕೊಂಡು ಬೀಳ್ತಿರಲ್ವೆ. ಭಯೋತ್ಪಾದಕರಿಗೆ ಯಾವ ಜಾತಿ? ಯಾವ ಧರ್ಮ? ಅವರಿಗೆ ಬೇಕಿರೋದು ಗೆಲವೂ ಅಲ್ಲ. ಎದುರಿಗೆ ನಿಂತು ಹೋರಾಡೋರಿಗೆ ಸೋಲು ಗೆಲವು ಮುಖ್ಯ. ಮೋಸಗಾರರಿಗೆ ಬೇಕಿರೋದು ನೆತ್ತರು. ಮೊನ್ನೆ ಅಸುನೀಗಿದ ನಲವತ್ತು ನಾಲ್ಕಕ್ಕೂ ಹೆಚ್ಚು ಸೈನಿಕರಲ್ಲಿ ನಸೀರ್ ಅಹ್ಮದ್ ಕೂಡ ಇದ್ದನಲ್ಲ. ಅವನದ್ದು ದೇಶನಿಷ್ಠೆಯಲ್ಲವೆ? ಜೀವ ಅಲ್ಲವೆ? ಕುಟುಂಬಸ್ಥನಲ್ಲವೆ? ನೆನಪಿಸಿಕೊಳ್ಳೋರೇ ಇಲ್ಲ! ಹಡಬೆ ಚಾನಲ್‍ನವರೂ ತುಟಿಬಿಚ್ಚಲಿಲ್ಲ! ಯಾರಿಗೂ ನಾವು ನೀವೆಲ್ಲಾ ಒಟ್ಟಿಗೆ ಬಾಳೋದು ಬೇಕಿಲ್ಲ. ದೇಶದ ಶಕ್ತಿ ಹೆಚ್ಚೋದೂ ಬೇಕಿಲ್ಲ.

ರಾಜಕಾರಣಿಗಳ ಪಾಲಿಗೆ ನಾವು ಕೇವಲ ಮತಬ್ಯಾಂಕ್. ನಾವೇನು ಅರ್ಜಿ ಹಾಕ್ಕೊಂಡು ಹುಟ್ಟಿದ್ದೆವಾ? ಕನ್ನಡ ಮಾತನಾಡೋರೆಲ್ಲಾ ಕನ್ನಡಿಗರು ಅನ್ನೋದಾದ್ರೆ ನಾವೂ ಕನ್ನಡಿಗರು. ಹಿಂದಿ ಒಂದಿಷ್ಟು ಗೊತ್ತು. ಉರ್ದು ಗೊತ್ತೇ ಇಲ್ಲ. ನಮ್ಮ ಮಕ್ಕಳೂ ಕಾನ್ವೆಂಟಿಗೇ ಹೋಗೋದು. ಹೀಗೆಲ್ಲಾ ಪ್ರಮಾಣೀಕರಿಸಬೇಕಾದ್ದೂ ಎಂತಹ ಪರಿಶಾನಿ ನೋಡಿ. ದಾಡಿ ಬಿಟ್ಟರೂ ತಪ್ಪು ಬುರ್ಕಾ ತೊಟ್ಟರೂ ತಪ್ಪು. ಒಂದು ಹಿಡಿಯಷ್ಟು ಪ್ರೀತಿ ತೋರಿಸಿದರೂ ಸಾಗರದಷ್ಟು ಪ್ರೀತಿ ಕೊಡೋರು ಕಣ್ರಿ ನಾವು. ಸಲೀಮ್ ಅನಾರ್ಕಲಿ, ಲೈಲಾ ಮಜ್ನು, ಶಿರಿನ್ ಪರಿಹಾದ್ ರಕ್ತವೇ ನಮ್ಮಲ್ಲೂ ಹರೀತಿದೆ. ನಮ್ಮಲ್ಲೂ ಸೂಫಿ ಸಂತರು, ಕಲಾಂನಂತಹ ವಿಜ್ಞಾನಿಗಳು ಹುಟ್ಟಿದ್ದಾರೆ. ಬ್ರಿಟಿಷರ ವಿರುದ್ಧ ಲಡಾಯಿಗೈದ ಟಿಪ್ಪುನಂತಹ ಶೂರರೂ ಹುಟ್ಟಿದ್ದಾರೆ. ಟಿಪ್ಪು ಹೋರಾಡಿದ್ದು ತನ್ನ ಪಟ್ಟಪದವಿಗಳಿಗಾಗಿ ಅಂತ ವಾದ ಹೂಡೋದು ಯಾವ ನ್ಯಾಯ? ಹಾಗಾದರೆ ಝಾನ್ಸಿರಾಣಿ, ಕಿತ್ತೂರ ರಾಣಿ, ಅಬ್ಬಕ್ಕ ಹೋರಾಡಿದ್ದೇಕೆ? ಇವರೆಲ್ಲಾ ಬ್ರಿಟಿಷರೊಂದಿಗೆ ರಾಜಿಯಾಗಿ ಹಾಯಾಗಿರಬಹುದಿತ್ತಲ್ಲ. ಹಾಗಾಗಿದ್ದಿದ್ದರೆ ಭಾರತ ದೇಶ ಎಂದಿಗೂ ನಮ್ಮದಾಗುತ್ತಿರಲಿಲ್ಲ. ಗಾಂಧೀಜಿ ಬರುವವರೆಗೂ ಹೋರಾಟದ ಕಾವನ್ನು ಕಾಪಾಡಿಕೊಂಡು ಬಂದ ದೇಶಪ್ರೇಮಿಗಳಲ್ಲವೆ ಇವರು? ಈಗೀಗ ಊಟ ಸೇರ್ತಾ ಇಲ್ಲ. ನಿದ್ರೆ ಬರ್ತಾ ಇಲ್ಲ. ಹೊರಗೆ ಹೆಜ್ಜೆ ಇಡಲೂ, ಕಚೇರಿಯಲ್ಲಿ ದುಡಿಯಲೂ ಮುಜುಗರ. ಯಾರೇನಂದರೂ ಸಹನೆಗೆಡುವಂತಿಲ್ಲ. ಬೈದವರನ್ನ ಬಂಧುಗಳಯ್ಯಾ ಅಂತ ಬಸವಣ್ಣೋರೇ ಅಂದಾಗ ನಮ್ಮಂಥವರ ಪಾಡೇನು. ನಾವೂ ದೇಶವಾಸಿಗಳಲ್ಲವೆ. ಭಾಯಿ ಔರ್ ಬೆಹನ್‍ಗಳಲ್ಲವೆ? ಸೈನಿಕರಲ್ಲಿ ಜಾತಿಮತ ಹುಡುಕೋದು ಸಣ್ಣತನವಲ್ಲವೆ

ನಮ್ಮವರೂ ಸೇನೆಯಲ್ಲಿಲ್ಲವೆ? ಯಾರೂ ಸತ್ತೇ ಇಲ್ಲವೆ!? ಪಾಕಿಸ್ತಾನದ ಮೇಲೆ ಯುದ್ಧ ಮಾಡಿ ವಿಷವೃಕ್ಷವನ್ನ ಒಂದೇ ಸಲ ಕಿತ್ತು ಹಾಕಿ ನೆಮ್ಮದಿಯಾಗಿ ಬಾಳಲಾದರೂ ಅವಕಾಶ ಕೊಡಿ. ಮುಖ್ಯವಾಹಿನಿಗೆ ಬನ್ನಿರೆಂಬ ವಾಹಿನಿಗಳೇ ವಿಷಜಂತುಗಳಂತೆ ನೋಡುವುದು ಸುಳ್ಳೇ? ನಮ್ಮಲ್ಲಿಯೇ ಬಡಾ ಆದ್ಮಿಗಳು ಮಿಲಿಯನಿಯರ್ಸ್ ಹಾಯಾಗಿ ಮಹಲುಗಳಲ್ಲಿದ್ದಾರೆ. ಮಿಡ್ಲ್‍ಕ್ಲಾಸ್‍ಗಳ ಗತಿಯೇನು? ಸೇನೆಗೆ ಸೇರಿ ದೇಶಪ್ರೇಮವನ್ನು ಸಾಬೀತು ಮಾಡುವ ವಯಸ್ಸೂ ನನ್ನದಲ್ಲ. ಪರರನ್ನು ಕೊಂದರೆ ಜನ್ನತ್ ಸಿಗುವುದೆಂದು ನಂಬಿದವನೂ ಅಲ್ಲ. ವಾರ್‍ಗಿಂತ ಪ್ಯಾರ್ ಈವತ್ತು ಮುಖ್ಯ. ಹೊರದೇಶಗಳಿಗಿಂತ ನಾವಿಲ್ಲಿ ಸುಖವಾಗಿಯೂ ಸುರಕ್ಷಿತವಾಗಿಯೂ ಇದ್ದೇವೆ. ಆದರೆ ಬಾಳಲು ಸುಖ ಸುರಕ್ಷತೆಗಿಂತ ನಂಬಿಕೆ ಮುಖ್ಯ ಕಣ್ರಿ. ದೇಶಭಕ್ತರೆಂದು ಪ್ರೂವ್ ಮಾಡಲು ಎಲ್ಲರ ಜೊತೆ ಪಾಕ್ ಧ್ವಜ ಸುಟ್ಟೆವು. ಮಡಿದ ಧೀರರಿಗಾಗಿ ಕ್ಯಾಂಡಲ್ ಹಿಡಿದೆವು. ಕವಿತೆ ಬರೆದು ಹಾಡಿದೆವು. ಭಾರತಮಾತಾಕಿ ಜೈ ಅಂತ ಕೂಗಿದ್ದಾಯಿತು. ರಾಮಮಂದಿರ ಕಟ್ಟೋಣ ಅಂದಿದ್ದಾಯಿತು. ಹೇಗೆ ನಂಬಿಸೋದು ನಿಮ್ಮನ್ನು! ನೀವೇ ಹೇಳಿ ಕೊಡ್ರಪ್ಪಾ? ಬೆಂಕಿ ಮಧ್ಯೆ ಬದುಕೋದು ಹೇಗೆ. ನಮಗೆ ಬದುಕಲಾದರೂ ಯಾವ ದೇಶವಿದೆ? ಈ ದೇಶ ನಮ್ಮದೂ ಅಲ್ಲವೆ? ಕಾಪಾಡೋದು ಜನ್ನತ್. ನೆರೆಗೆ ಹೊರೆಯಾಗದಿದ್ದರದೇ ಜನ್ನತ್. ನೀವು ತಿನ್ನೋದು ಉಡೋದನ್ನೇ ಅಲ್ಲವೆ ನಾವೂ ಉಡೋದು ತಿನ್ನೋದು. ದಲಿತರೂ ನಿಮ್ಮವರೆ. ನೀವು ಅವರನ್ನು ಮುಟ್ಟೋಕೇ ಹಿಂಜರಿತೀರಲ್ಲ. ನಾವೆಂದೂ ಹಾಗೆ ವರ್ತಿಸಿದವರಲ್ಲ. ನಿಮ್ಮ ದೇವಾಲಯಗಳಿಗೆ ನಾವು ಬಂದಂಗೆ ನೀವು ಮಸೀದಿಗಳಿಗೇಕೆ ಬರೋದಿಲ್ಲ! ಮಸೀದಿಗಳಿಗೆಂದೂ ನಾವು ಬೀಗವೇ ಹಾಕಿದವರಲ್ಲ. ದೇವರು ಧರ್ಮದ ಹೆಸರಿನಲ್ಲಿ ದೇಶವನ್ನು ಒಡೆವ ಕೋಮುವಾದಿ ರಾಜಕಾರಣಿಗಳನ್ನು ನಂಬದಿರಿ. ನಿಮ್ಮೊಡನೆ ಒಟ್ಟಾಗೇ ಬಾಳುತ್ತಿರುವ ನಮ್ಮನ್ನು ನಂಬಿ ಪ್ಲೀಸ್. ನಂಬಿದರೆ ನಂಬಿ ಬಿಟ್ಟರೆ ಬಿಡಿ. ನೀವು ಪ್ರೀತಿಸಿ ದ್ವೇಷಿಸಿ, ನಮ್ಮ ಸಾವು ಬದುಕು ಈ ನೆಲದಲ್ಲಿಯೇ. ಅಚ್ಚೆದಿನ್ ಬಾರದಿದ್ದರೆ ಬೇಡ, ಬುರೆದಿನ್ ಬಾರದಿದ್ದರೆ ಬಸ್-ಸಾಕಪ್ಪ. ಖುದಾನಲ್ಲಿ ನನ್ನ ದುವಾ ಇದೆ. ಬೊಗಸೆಯಿಂದ ಮುಖ ವರೆಸಿಕೊಂಡ ಇಸ್ಮಾಯಿಲ್ಗೆ ಕೆನ್ನೆಯ ಮೇಲಿಳಿದ ಕಣ್ಣೀರು ತಾಕಿದವು. ಎರಡೂ ಭುಜಗಳತ್ತ ನೋಡಿದ ಶಾಸ್ತ್ರ ಮಾಡಿ ನಿಟ್ಟುಸಿರಿನೊಂದಿಗೆ ಪ್ರೇಯರ್ ಮುಗಿಸಿ ಮೇಲೆದ್ದ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...