Homeಸಾಹಿತ್ಯ-ಸಂಸ್ಕೃತಿಕಥೆಬಿ.ಎಲ್.ವೇಣು ಅವರ ದುವಾ ಕಥೆ

ಬಿ.ಎಲ್.ವೇಣು ಅವರ ದುವಾ ಕಥೆ

- Advertisement -
- Advertisement -

| ಬಿ.ಎಲ್.ವೇಣು |

ಮೂಲತಃ ಚಿತ್ರದುರ್ಗದವರಾದ ಬಿ.ಎಲ್.ವೇಣುರವರು ಕಾದಂಬರಿಕಾರರಾಗಿ, ಕಥೆಗಾರರಾಗಿ, ಚಿತ್ರಸಾಹಿತಿಯಾಗಿ ಅಪಾರ ಮನ್ನಣೆ ಗಳಿಸಿದವರು. ತಂದೆ-ತಾಯಿ ಇಬ್ಬರೂ ರಂಗಕಲೆ ಹಿನ್ನೆಲೆಯವರಾಗಿದ್ದರಿಂದ ಸಾಹಿತ್ಯಾಸಕ್ತಿ ಅವರಲ್ಲಿ ಸಹಜವಾಗಿಯೇ ಬೆಳೆದುಬಂದಿದೆ. ಚಾರಿತ್ರಿಕ ಹಿನ್ನೆಲೆಯ ನೆಲದಿಂದ ಬಂದ ಅವರು ಗಂಡುಗಲಿ ಮದಕರಿನಾಯಕ, ರಾಜಾಬಿಚ್ಚುಕತ್ತಿ ಭರಮಣ್ಣನಾಯಕ, ಕಲ್ಲರಳಿ ಹೂವಾಗಿ, ಕ್ರಾಂತಿಯೋಗಿ ಮರುಳಸಿದ್ಧ, ಹೆಬ್ಬುಲಿ ಹಿರೇಮದಕರಿನಾಯಕ ಮುಂತಾದ 5 ಐತಿಹಾಸಿಕ ಕಾದಂಬರಿಗಳು ಸೇರಿದಂತೆ 26 ಕಾದಂಬರಿಗಳನ್ನು ಹಲವಾರು ನಾಟಕಗಳನ್ನು ರಚಿಸಿದ್ದಾರೆ. ಅವರ `ಪ್ರೇಮಪರ್ವ’ ಕಾದಂಬರಿಯು ಚಲನಚಿತ್ರವಾಗಿ ಲವ್‍ಸ್ಟೋರಿಗಳ ಟ್ರೆಂಡ್‍ಗೆ ನಾಂದಿ ಹಾಡಿತಲ್ಲದೆ, ನಾಲ್ಕು ಭಾಷೆಗಳಲ್ಲಿ ತೆರೆಕಂಡಿತು. ಪುಟ್ಟಣ್ಣ ಕಣಗಾಲರ `ಅಮೃತಘಳಿಗೆ’ ಸಿನಿಮಾ ಮೂಲಕ ಸಂಭಾಷಣೆ ಬರೆಯಲು ಶುರು ಮಾಡಿದ ಅವರು 60ಕ್ಕೂ ಹೆಚ್ಚು ಸಿನಿಮಾಗಳಿಗೆ ಚಿತ್ರಸಾಹಿತಿಯಾಗಿ ದುಡಿದಿದ್ದಾರೆ. ನಿರ್ದೇಶಕ ಭಾರ್ಗವ, ನಟ ವಿಷ್ಣುವರ್ಧನ್ ಮತ್ತು ಬಿ.ಎಲ್.ವೇಣುರವರ ಜೋಡಿ ಎಂಬತ್ತರ ದಶಕದಲ್ಲಿ ಯಶಸ್ವಿ ಸಿನಿ ಜೋಡಿಯಾಗಿ ಗುರುತಿಸಿಕೊಂಡಿತ್ತು. ಸಾಹಿತ್ಯ, ಸಿನಿಮಾ ಎರಡೂ ಕ್ಷೇತ್ರಗಳಲ್ಲಿ ಹೆಸರು ಮಾಡಿರುವ ಅವರು ಈಗಲೂ ಕೃತಿಗಳ ರಚನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಹೊರಗಡೆ ತಲೆ ಎತ್ತಿ ತಿರುಗಾಡಲೂ ಶರಮ್ ಆಗ್ತದೆ. ಮಾನಸಿಕ ಹಿಂಸೆಯಿಂದಾಗಿ ಬದುಕೇ ಬೇಡವೆನ್ನಿಸಿದೆ. ನನ್ನನ್ನೇ ಉಗ್ರನಂತೆ ನೋಡುತ್ತಿದ್ದಾರೇನೋ ಎಂಬ ಅಳಕು. ಯಾರೋ ಮಾಡುವ ಗಲತ್ತಿಗೆ ನಾನೇಕೆ ಶರಮ್ ಆಗಬೇಕು? ಇತಿಹಾಸದಲ್ಲಿ ಸಂಭವಿಸಿದ್ದಕ್ಕೆಲ್ಲಾ ಹೊಣೆಗಾರನಾಗಬೇಕೇಕೆ? ನನ್ನ ಯಾವ ಪ್ರಶ್ನೆಗಳಿಗೂ ಉತ್ತರ ಸಿಗುತ್ತಿಲ್ಲವೆಂಬ ಸಂಕಟ. ಪ್ರೇಯರ್ ಮಾಡಲು ಬಂದ ಇಸ್ಮಾಯಿಲ್ ತಂಪು ಆವರಿಸಿದ ಮಸೀದಿಯಲ್ಲೂ ಬೆವರೊಡೆದ. ಮನಸ್ಸು ಬಲೆಯಲ್ಲಿ ಸಿಕ್ಕ ಜೇಡ. ಮಸೀದಿ ಕೆಡವಿದರು. ಕೆಡವಿದವರೇ ಗದ್ದಲವೆಬ್ಬಿಸಿ ಅನೇಕರನ್ನು ಸಾಯಬಡಿದರು. ಪ್ರಾಣ್ ಬಚಾವ್ ಮಾಡಿಕೊಳ್ಳಲು ಹೊಡೆದಾಡಿದ್ದೆವು. ತಲವಾರ್ ಹಿಡಿದುಬಂದವರು ಇವರ ಮನೇಲಿ ವೆಪನ್ಸ್ ಅದಾವೆ ಅಂದರು. ಮಸೀದಿನಾಗೂ ಇಟ್ಕಂಡವರೆ ಅಂದರು. ಮಸೀದಿಗೂ ನುಗ್ಗಿದರು. ಇದೆಲ್ಲಾ ಪುರಾನಿ ಕಹಾನಿಯಾದರೂ ನಾವಿಲ್ಲೇ ಬದುಕಿದ್ದೇವೆ. ನಮ್ಮ ದೇಶದಲ್ಲೇ ಪರಕೀಯರಂತೆ! ಚರಿತ್ರೆ ಪುಟಗಳಲ್ಲೆಂದೋ ನಮ್ಮವರು ದರ್ಬಾರ್ ಮಾಡಿದ ನೆಲದಲ್ಲಿಂದು ಗುಲಾಮರಂತೆ ಬದುಕುವುದೂ ಕಷ್ಟವಾಗಿದೆ. ನೀವೆಲ್ಲಾ ಕನ್ವರ್ಟೆಡ್ ಮುಸ್ಲಿಮರು ಅಂತಾರೆ. ಹಿಂದೆ ನಮ್ಮವರೇ ಆಗಿದ್ದೀರಿ ಅಂತ ಜೋಕ್ಸ್ ಹೊಡಿತಾರೇ ವಿನಹ ತಮ್ಮವರಂತೆ ಕಂಡಿದ್ದಿಲ್ಲ. ನವಾಬರು ಆರನೂರು ವರ್ಷ ಆಳಿದರೂ ದೇಶವನ್ನು ದೋಚಲಿಲ್ಲ. ಇಲ್ಲಿಯೇ ಮೀನಾರು ಮಸೀದಿ ಮಹಲುಗಳನ್ನು ಕಟ್ಕೊಂಡು ಬೇಪಾರ್ ಮಾಡ್ಕೊಂಡು ಬದುಕಿದರು. ಬ್ರಿಟಿಷರಂಗೆ ದೇಶವನ್ನೇ ಲೂಟ್ ಮಾಡಿ ಹೊತ್ತೊಯ್ಯಲಿಲ್ಲ. ಬ್ರಿಟಿಷರನ್ನು ಓಡಿಸೋಕೆ ನಾವೂ ನಮ್ಮದೇ ವತನ್ ಅನ್ನೋ ಭಾವನೆಯಿಂದ್ಲೇ ಹೋರಾಡಿದೆವು. ಅವರು ಹೋಗಬೇಕಾದರೆ ದೇಶನಾ ಎರಡು ಭಾಗ ಮಾಡಿ ಮನಸ್ಸುಗಳನ್ನೂ ಒಡೆದರು. ದೇಶದ ಮೇಲೆ ಮೊಹಬತ್ ಇಲ್ಲದಿದ್ದರೆ ನಾವೇಕೆ ಇಲ್ಲಿ ಉಳೀತಿದ್ದೆವು? ನಮ್ಮ ಪಾಡಿಗೆ ನಾವು ಬೆವರು ಬಸಿದು ದುಡ್ಕೊಂಡು ಬದುಕ್ತಿದ್ದೀವಿ. ಯಾವನೋ ಸಾಬರವನು ಶತ್ರು ದೇಶದ ಜೊತೆ ದೋಸ್ತಿ ಮಾಡ್ಕೊಂಡು ಬಾಂಬ್ ಉಡಾಯಿಸಿ ಸೈನಿಕರ ಜೀವ ತೆಗೆದರೆ ಸಾರಾಸಗಟಾಗಿ ಅನುಮಾನಿಸೋದು ಹೀಯಾಳಿಸೋದು ಸರೀನಾ? ಹಿಂದು ಕ್ರೈಸ್ತ ಮುಸಲ್ಮಾನ ಪಾರಸಿಕ ಜೈನರುದ್ಯಾನ ಎಲ್ಲಿದೆ? ಮಾಧ್ಯಮಗಳಲ್ಲಿ ಬೇರೆ ಟೀಕೆ, ತೀರ್ಪು! ಗಡ್ಡಬಿಟ್ಟೋರೆಲ್ಲಾ ಘಾತಕರೆಂಬ ಇರಿಯುವ ನೋಟ. ದೇಶವನ್ನೇ ಬಿಟ್ಟು ತೊಲಗಿ ಎಂಬಷ್ಟು ದ್ವೇಷ. ಬುದ್ಧ ಬಸವ ಗಾಂಧಿ ಹುಟ್ಟಿದ ದೇಶದಲ್ಲೇ ನಿಮ್ಮ ಹಾಗೆ ಹುಟ್ಟಿದ್ದೇವಲ್ಲ. ಗಾಂಧಿಯನ್ನು ಕೊಂದಿದ್ದು ಯಾರು? ಮುಸಲ್ಮಾನರಾ? ಬ್ರಿಟಿಷರಾ? ಹೇಳಿ? ಪಾಕಿಸ್ತಾನಕ್ಕೇ ನುಗ್ಗಿ ಬಗ್ಗುಬಡಿದು, ವಾಜಪೇಯಿರಂತಹ ಸಜ್ಜನನಿಂದ ‘ದುರ್ಗಿ’ ಅಂತ ತಾರೀಫ್ ಮಾಡಿಸಿಕೊಂಡ ಇಂದಿರಾಗಾಂಧಿನಾ, ಜಂಟ್ಲಮೆನ್ ರಾಜೀವಗಾಂಧಿನಾ ಕೊಂದಿದ್ದು ನಾವಾ? ಹಿಂದುಗಳಲ್ಲೂ ಭಯೋತ್ಪಾದಕರಿಲ್ಲವೆ ಅಂತ ಕೇಳಿದ್ರೆ ಉರ್ಕೊಂಡು ಬೀಳ್ತಿರಲ್ವೆ. ಭಯೋತ್ಪಾದಕರಿಗೆ ಯಾವ ಜಾತಿ? ಯಾವ ಧರ್ಮ? ಅವರಿಗೆ ಬೇಕಿರೋದು ಗೆಲವೂ ಅಲ್ಲ. ಎದುರಿಗೆ ನಿಂತು ಹೋರಾಡೋರಿಗೆ ಸೋಲು ಗೆಲವು ಮುಖ್ಯ. ಮೋಸಗಾರರಿಗೆ ಬೇಕಿರೋದು ನೆತ್ತರು. ಮೊನ್ನೆ ಅಸುನೀಗಿದ ನಲವತ್ತು ನಾಲ್ಕಕ್ಕೂ ಹೆಚ್ಚು ಸೈನಿಕರಲ್ಲಿ ನಸೀರ್ ಅಹ್ಮದ್ ಕೂಡ ಇದ್ದನಲ್ಲ. ಅವನದ್ದು ದೇಶನಿಷ್ಠೆಯಲ್ಲವೆ? ಜೀವ ಅಲ್ಲವೆ? ಕುಟುಂಬಸ್ಥನಲ್ಲವೆ? ನೆನಪಿಸಿಕೊಳ್ಳೋರೇ ಇಲ್ಲ! ಹಡಬೆ ಚಾನಲ್‍ನವರೂ ತುಟಿಬಿಚ್ಚಲಿಲ್ಲ! ಯಾರಿಗೂ ನಾವು ನೀವೆಲ್ಲಾ ಒಟ್ಟಿಗೆ ಬಾಳೋದು ಬೇಕಿಲ್ಲ. ದೇಶದ ಶಕ್ತಿ ಹೆಚ್ಚೋದೂ ಬೇಕಿಲ್ಲ.

ರಾಜಕಾರಣಿಗಳ ಪಾಲಿಗೆ ನಾವು ಕೇವಲ ಮತಬ್ಯಾಂಕ್. ನಾವೇನು ಅರ್ಜಿ ಹಾಕ್ಕೊಂಡು ಹುಟ್ಟಿದ್ದೆವಾ? ಕನ್ನಡ ಮಾತನಾಡೋರೆಲ್ಲಾ ಕನ್ನಡಿಗರು ಅನ್ನೋದಾದ್ರೆ ನಾವೂ ಕನ್ನಡಿಗರು. ಹಿಂದಿ ಒಂದಿಷ್ಟು ಗೊತ್ತು. ಉರ್ದು ಗೊತ್ತೇ ಇಲ್ಲ. ನಮ್ಮ ಮಕ್ಕಳೂ ಕಾನ್ವೆಂಟಿಗೇ ಹೋಗೋದು. ಹೀಗೆಲ್ಲಾ ಪ್ರಮಾಣೀಕರಿಸಬೇಕಾದ್ದೂ ಎಂತಹ ಪರಿಶಾನಿ ನೋಡಿ. ದಾಡಿ ಬಿಟ್ಟರೂ ತಪ್ಪು ಬುರ್ಕಾ ತೊಟ್ಟರೂ ತಪ್ಪು. ಒಂದು ಹಿಡಿಯಷ್ಟು ಪ್ರೀತಿ ತೋರಿಸಿದರೂ ಸಾಗರದಷ್ಟು ಪ್ರೀತಿ ಕೊಡೋರು ಕಣ್ರಿ ನಾವು. ಸಲೀಮ್ ಅನಾರ್ಕಲಿ, ಲೈಲಾ ಮಜ್ನು, ಶಿರಿನ್ ಪರಿಹಾದ್ ರಕ್ತವೇ ನಮ್ಮಲ್ಲೂ ಹರೀತಿದೆ. ನಮ್ಮಲ್ಲೂ ಸೂಫಿ ಸಂತರು, ಕಲಾಂನಂತಹ ವಿಜ್ಞಾನಿಗಳು ಹುಟ್ಟಿದ್ದಾರೆ. ಬ್ರಿಟಿಷರ ವಿರುದ್ಧ ಲಡಾಯಿಗೈದ ಟಿಪ್ಪುನಂತಹ ಶೂರರೂ ಹುಟ್ಟಿದ್ದಾರೆ. ಟಿಪ್ಪು ಹೋರಾಡಿದ್ದು ತನ್ನ ಪಟ್ಟಪದವಿಗಳಿಗಾಗಿ ಅಂತ ವಾದ ಹೂಡೋದು ಯಾವ ನ್ಯಾಯ? ಹಾಗಾದರೆ ಝಾನ್ಸಿರಾಣಿ, ಕಿತ್ತೂರ ರಾಣಿ, ಅಬ್ಬಕ್ಕ ಹೋರಾಡಿದ್ದೇಕೆ? ಇವರೆಲ್ಲಾ ಬ್ರಿಟಿಷರೊಂದಿಗೆ ರಾಜಿಯಾಗಿ ಹಾಯಾಗಿರಬಹುದಿತ್ತಲ್ಲ. ಹಾಗಾಗಿದ್ದಿದ್ದರೆ ಭಾರತ ದೇಶ ಎಂದಿಗೂ ನಮ್ಮದಾಗುತ್ತಿರಲಿಲ್ಲ. ಗಾಂಧೀಜಿ ಬರುವವರೆಗೂ ಹೋರಾಟದ ಕಾವನ್ನು ಕಾಪಾಡಿಕೊಂಡು ಬಂದ ದೇಶಪ್ರೇಮಿಗಳಲ್ಲವೆ ಇವರು? ಈಗೀಗ ಊಟ ಸೇರ್ತಾ ಇಲ್ಲ. ನಿದ್ರೆ ಬರ್ತಾ ಇಲ್ಲ. ಹೊರಗೆ ಹೆಜ್ಜೆ ಇಡಲೂ, ಕಚೇರಿಯಲ್ಲಿ ದುಡಿಯಲೂ ಮುಜುಗರ. ಯಾರೇನಂದರೂ ಸಹನೆಗೆಡುವಂತಿಲ್ಲ. ಬೈದವರನ್ನ ಬಂಧುಗಳಯ್ಯಾ ಅಂತ ಬಸವಣ್ಣೋರೇ ಅಂದಾಗ ನಮ್ಮಂಥವರ ಪಾಡೇನು. ನಾವೂ ದೇಶವಾಸಿಗಳಲ್ಲವೆ. ಭಾಯಿ ಔರ್ ಬೆಹನ್‍ಗಳಲ್ಲವೆ? ಸೈನಿಕರಲ್ಲಿ ಜಾತಿಮತ ಹುಡುಕೋದು ಸಣ್ಣತನವಲ್ಲವೆ

ನಮ್ಮವರೂ ಸೇನೆಯಲ್ಲಿಲ್ಲವೆ? ಯಾರೂ ಸತ್ತೇ ಇಲ್ಲವೆ!? ಪಾಕಿಸ್ತಾನದ ಮೇಲೆ ಯುದ್ಧ ಮಾಡಿ ವಿಷವೃಕ್ಷವನ್ನ ಒಂದೇ ಸಲ ಕಿತ್ತು ಹಾಕಿ ನೆಮ್ಮದಿಯಾಗಿ ಬಾಳಲಾದರೂ ಅವಕಾಶ ಕೊಡಿ. ಮುಖ್ಯವಾಹಿನಿಗೆ ಬನ್ನಿರೆಂಬ ವಾಹಿನಿಗಳೇ ವಿಷಜಂತುಗಳಂತೆ ನೋಡುವುದು ಸುಳ್ಳೇ? ನಮ್ಮಲ್ಲಿಯೇ ಬಡಾ ಆದ್ಮಿಗಳು ಮಿಲಿಯನಿಯರ್ಸ್ ಹಾಯಾಗಿ ಮಹಲುಗಳಲ್ಲಿದ್ದಾರೆ. ಮಿಡ್ಲ್‍ಕ್ಲಾಸ್‍ಗಳ ಗತಿಯೇನು? ಸೇನೆಗೆ ಸೇರಿ ದೇಶಪ್ರೇಮವನ್ನು ಸಾಬೀತು ಮಾಡುವ ವಯಸ್ಸೂ ನನ್ನದಲ್ಲ. ಪರರನ್ನು ಕೊಂದರೆ ಜನ್ನತ್ ಸಿಗುವುದೆಂದು ನಂಬಿದವನೂ ಅಲ್ಲ. ವಾರ್‍ಗಿಂತ ಪ್ಯಾರ್ ಈವತ್ತು ಮುಖ್ಯ. ಹೊರದೇಶಗಳಿಗಿಂತ ನಾವಿಲ್ಲಿ ಸುಖವಾಗಿಯೂ ಸುರಕ್ಷಿತವಾಗಿಯೂ ಇದ್ದೇವೆ. ಆದರೆ ಬಾಳಲು ಸುಖ ಸುರಕ್ಷತೆಗಿಂತ ನಂಬಿಕೆ ಮುಖ್ಯ ಕಣ್ರಿ. ದೇಶಭಕ್ತರೆಂದು ಪ್ರೂವ್ ಮಾಡಲು ಎಲ್ಲರ ಜೊತೆ ಪಾಕ್ ಧ್ವಜ ಸುಟ್ಟೆವು. ಮಡಿದ ಧೀರರಿಗಾಗಿ ಕ್ಯಾಂಡಲ್ ಹಿಡಿದೆವು. ಕವಿತೆ ಬರೆದು ಹಾಡಿದೆವು. ಭಾರತಮಾತಾಕಿ ಜೈ ಅಂತ ಕೂಗಿದ್ದಾಯಿತು. ರಾಮಮಂದಿರ ಕಟ್ಟೋಣ ಅಂದಿದ್ದಾಯಿತು. ಹೇಗೆ ನಂಬಿಸೋದು ನಿಮ್ಮನ್ನು! ನೀವೇ ಹೇಳಿ ಕೊಡ್ರಪ್ಪಾ? ಬೆಂಕಿ ಮಧ್ಯೆ ಬದುಕೋದು ಹೇಗೆ. ನಮಗೆ ಬದುಕಲಾದರೂ ಯಾವ ದೇಶವಿದೆ? ಈ ದೇಶ ನಮ್ಮದೂ ಅಲ್ಲವೆ? ಕಾಪಾಡೋದು ಜನ್ನತ್. ನೆರೆಗೆ ಹೊರೆಯಾಗದಿದ್ದರದೇ ಜನ್ನತ್. ನೀವು ತಿನ್ನೋದು ಉಡೋದನ್ನೇ ಅಲ್ಲವೆ ನಾವೂ ಉಡೋದು ತಿನ್ನೋದು. ದಲಿತರೂ ನಿಮ್ಮವರೆ. ನೀವು ಅವರನ್ನು ಮುಟ್ಟೋಕೇ ಹಿಂಜರಿತೀರಲ್ಲ. ನಾವೆಂದೂ ಹಾಗೆ ವರ್ತಿಸಿದವರಲ್ಲ. ನಿಮ್ಮ ದೇವಾಲಯಗಳಿಗೆ ನಾವು ಬಂದಂಗೆ ನೀವು ಮಸೀದಿಗಳಿಗೇಕೆ ಬರೋದಿಲ್ಲ! ಮಸೀದಿಗಳಿಗೆಂದೂ ನಾವು ಬೀಗವೇ ಹಾಕಿದವರಲ್ಲ. ದೇವರು ಧರ್ಮದ ಹೆಸರಿನಲ್ಲಿ ದೇಶವನ್ನು ಒಡೆವ ಕೋಮುವಾದಿ ರಾಜಕಾರಣಿಗಳನ್ನು ನಂಬದಿರಿ. ನಿಮ್ಮೊಡನೆ ಒಟ್ಟಾಗೇ ಬಾಳುತ್ತಿರುವ ನಮ್ಮನ್ನು ನಂಬಿ ಪ್ಲೀಸ್. ನಂಬಿದರೆ ನಂಬಿ ಬಿಟ್ಟರೆ ಬಿಡಿ. ನೀವು ಪ್ರೀತಿಸಿ ದ್ವೇಷಿಸಿ, ನಮ್ಮ ಸಾವು ಬದುಕು ಈ ನೆಲದಲ್ಲಿಯೇ. ಅಚ್ಚೆದಿನ್ ಬಾರದಿದ್ದರೆ ಬೇಡ, ಬುರೆದಿನ್ ಬಾರದಿದ್ದರೆ ಬಸ್-ಸಾಕಪ್ಪ. ಖುದಾನಲ್ಲಿ ನನ್ನ ದುವಾ ಇದೆ. ಬೊಗಸೆಯಿಂದ ಮುಖ ವರೆಸಿಕೊಂಡ ಇಸ್ಮಾಯಿಲ್ಗೆ ಕೆನ್ನೆಯ ಮೇಲಿಳಿದ ಕಣ್ಣೀರು ತಾಕಿದವು. ಎರಡೂ ಭುಜಗಳತ್ತ ನೋಡಿದ ಶಾಸ್ತ್ರ ಮಾಡಿ ನಿಟ್ಟುಸಿರಿನೊಂದಿಗೆ ಪ್ರೇಯರ್ ಮುಗಿಸಿ ಮೇಲೆದ್ದ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...