Homeಕರ್ನಾಟಕಸದನದಲ್ಲಿಂದು ಗಮನಸೆಳೆದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು

ಸದನದಲ್ಲಿಂದು ಗಮನಸೆಳೆದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು

- Advertisement -
- Advertisement -

ಸದನದಲ್ಲಿಂದು ಬಹುಮತ ಸಾಬೀತು ಮಾಡಲಾಗದಿದ್ದರೂ ಮೈತ್ರಿ ಪಕ್ಷಗಳ ಶಾಸಕರು ಭರ್ಜರಿ ಭಾಷಣ ಮಾಡಿ ಗಮನ ಸೆಳೆದಿದ್ದಾರೆ. ಬಸವಕಲ್ಯಾಣದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು ಈ ಕೆಳಗಿನಂತಿವೆ.

ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಮತ್ತು ಬಸವಣ್ಣನವರನ್ನ ನೆನೆದು ಮಾತು ಆರಂಭಿಸಿದ ಬಿ.ನಾರಾಯಣರಾವ್ ಜನರ ಮಧ್ಯೆ ಹೋರಾಟ ಮಾಡಿ ಮಾಡಿ ಕೊನೆಗೆ ಸಿದ್ಧರಾಮಯ್ಯ, ಪರಮೇಶ್ವರ್ ಅವರು ಟಿಕೇಟ್ ಕೊಟ್ಟಿದ್ದರಿಂದ ನಾನು ಬಂದು ಇಲ್ಲಿ ನಿಮ್ಮ ಮುಂದೆ ನಿಂತಿದ್ದೇನೆ. ಮೊದಲು ದೇವೆಗೌಡರು ಟಿಕೇಟ್ ಕೊಟ್ಟಿದ್ದರು ಅಲ್ಲಿ ಸೋತಿದ್ದೆ ಇಲ್ಲಿಗೆ ಬಂದರೆ ಇಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದಾರೆ, ನಾವು ಸಿದ್ಧರಾಮಯ್ಯ ಮುಖ್ಯಮಂತ್ರಿ ಆಗತ್ತಾರೆ ಅಂದುಕೊಂಡಿದ್ದೆವು ಎಂದು ಹೇಳಿದಾಗ ಸದನದ ಸದಸ್ಯರನ್ನು ನಗೆಯ ಅಲೆ ತೇಲಿಹೋದರು.

ಅನ್ನಭಾಗ್ಯ ಯೋಜನೆ ಇಂದು ಬಡವರು ನೆನೆಯುವಂತ ಕಾರ್ಯಕ್ರಮ ಎಂದ ಅವರು, ನಾವು ಪಂಚಾಯಿತಿ ಕಟ್ಟೆಯಿಂದದ ಬಂದವರು, ನನಗೆ ಕೃಷ್ಣಭೈರೆಗೌಡ, ಮಾಧುಸ್ವಾಮಿ ರೀತಿ ಕಾನೂನು ಮಾತಾಡಲು ಬರುವುದಿಲ್ಲ ಆದರೆ ನಮ್ಮ ಮೂರು ಪಕ್ಷದ ಮುಖಂಡರು ಬೇವಿನ ಬೀಜಗಳನ್ನು ಬಿತ್ತಲು ಹೋಗಬೇಡಿ. ಇಲ್ಲಿ ಏನ್ ನಡೆಯುತ್ತಿದೆ ಎಂಬುದನ್ನು ಎಲ್ಲಾ ಜನ ಮಾಧ್ಯಮಗಳಲ್ಲಿ ನೋಡುತ್ತಿದ್ದಾರೆ, ಎಲ್ಲಾರಿಗಿಂತ ಹೆಚ್ಚು ಮತದಾರರು ಗಮನಿಸುತ್ತಿದ್ದಾರೆ. ಅವರು ಚನ್ನಾಗಿ ಅರಿಯುತ್ತಾರೆ ಸಾರ್, ನಾವು ರಾಜಕೀಯ ಮನೆತನದಿಂದ ಬಂದಿಲ್ಲ ದುಡ್ಡಿರೋರು ಮತ್ತೆ ಚುನಾವಣೆಗೆ ಹೋಗತಾರೆ ನಾವು ಬಡವರು ನಾವು ಎಲ್ಲಿಗೆ ಹೋಗಬೇಕು?

ನಮಗೆ ಕೋಟಿ ಕೋಟಿ ದುಡ್ಡು ಕೊಟ್ಟರೆ ನಾವು ಇಡೋಕೆ ಜಾಗ ಇಲ್ಲ. ನಾನು ಪಾನ್ ಕಾರ್ಡ್ ಮಾಡಿಸಿಲ್ಲ , ಸತ್ತರೆ ಉಳೋದಕ್ಕೆ ಜಾಗ ಇಲ್ಲ ಸಾರ್. ಇನ್ನು ಲೋಕಯುಕ್ತರು ಕೇಳಿಯೇ ಕೇಳುತ್ತಾರೆ, ಕದ್ದು ಮುಚ್ಚು ತಗೊಂಡರೆ ವಿಡಿಯೋ ಮಾಡಿದರೆ ಮತ್ತೆ ಜೈಲಿಗೆ ಹೋಗಬೆಕು ಎಂದು ವಿವರಿಸಿದರು. ನಾನು ನಮ್ಮ ಕ್ಷೇತ್ರದ ವಾರ್ಡ್ ನಲ್ಲಿ ತಿರುಗುತ್ತಿದ್ದರೂ ಉಮೇಶ್ ಜಾಧವ್ ಜೊತೆ ಮುಂಬೈನಲ್ಲಿ ವಾಸ್ತವ್ಯ ಅಂತ ಈ ಮಾಧ್ಯಮಗಳು ಬ್ರೇಕಿಂಗ್ ನ್ಯೂಸ್ ಮಾಡತ್ತಾರೆ. ನಾವು ಮೊದಲೆ ಬಡವರು, ಬಡವ ಸತ್ಯ ಹೇಳಿದರು ನಂಬೊದಿಲ್ಲ. ನನಗೆ ಮಾಲೀಕರು ಮತದಾರರು.

ಎಲ್ಲಾ 224 ಗೌರವಾನ್ವಿತ ಸದಸ್ಯರೆ ನೀವು ಮತದಾರರ ಕಣ್ಣಲ್ಲಿ ಕೀಳು ಮಟ್ಟದಲ್ಲಿ ಕಾಣಬೇಡಿ. ಮೊಟ್ಟ ಮೊದಲು ಸಂಸತ್ತು ಹುಟ್ಟಿದ್ದು ಬಸವಕಲ್ಯಾಣದಲ್ಲಿ. 700 ಶೋಷಿತ ಸಮುದಾಯಗಳ ನೇತೃದ್ವದಲ್ಲಿ ಸಂಸತ್ತು ಪ್ರಾರಂಭ ಆಗಿದ್ದು ಬಸವಕಲ್ಯಾಣದಲ್ಲಿ, ಅನ್ನದಾಸೋಹ ಪ್ರಾರಂಭ ಮಾಡಿದ್ದು ಬಸವ ಕಲ್ಯಾಣ. ಅನುಭವ ಮಂಟಪಕ್ಕೆ 650ಕೋಟಿ ಕೊಡಬೇಕು ಎಂದು ಮನವಿ ಮಾಡಿದರು.

ನೆಲದ ಕಾನೂನಿನ ಪ್ರಕಾರ ವಿಶ್ವಾಸಮತ ಯಾಚಿಸಲು ಹಿಂದೆ ಮುಂದೆ ಯೋಚನೆ ಮಾಡಬೇಡಿ ಈ ಹಿಂದೆ ದೇವೆಗೌಡರು ಸ್ವಾಭಿಮಾನದಿಂದ ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದ್ದರು. ನೀವು ಒಮ್ಮೆ ನಿಮ್ಮ ತಂದೆಗೆ ನೋವು ತಂದು ಬಿಜೆಪಿ ಸಹವಾಸ ಮಾಡಿದ್ದೀರಿ ಅದನ್ನ ಇಂದು ನಾವೆಲ್ಲ ಅನುಭವಿಸುವಂತಾಗಿದೆ. ಇನ್ನು ಮೇಲೆ ನೀವು ಆ ತಪ್ಪು ಮಾಡಬೇಡಿ ಎಂದು ಹೇಳಿದರು.

ಬಸವಣ್ಣನವರ ಆಶಯದಂತೆ, ಬಾಬಾ ಸಾಹೇಬ್ ಅಂಬೇಡ್ಕರ್ ಬರೆದ ಸಂವಿಧಾನದ ಚೌಕಟ್ಟಿನ ಒಳಗಡೆ ಈ ಸಮಸ್ಯೆಯನ್ನ ಬೇಗ ಪರಿಹರಿಸಿ. ಯಾರು ಜಾತ್ಯಾತೀತ ಶಕ್ತಿಗಳು ಒಂದಾಗಬೇಕೆಂದು, ಒಟ್ಟಾಗಿ ಸೇರಿಬೇಕೆಂದು ಮುಖ್ಯಮಂತ್ರಿಯಾದ ನೀವು ಗ್ರಾಮವಾಸ್ತವ್ಯಕ್ಕೆ ಬಂದು ಗಡಿಭಾಗದಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಿದ್ದೀರಿ. ಮಾಧ್ಯಮಗಳು, ವಿರೋಧ ಪಕ್ಷಗಳು ಗಮನಿಸಿ ನಮ್ಮ ಹಳ್ಳಿಗಳಿಗೆ ಸರಪಂಚ್ ಬರೋದೆ ಕಷ್ಟ ಒಬ್ಬ ಮುಖ್ಯಮಂತ್ರಿ ಬರ್ತಾನೆ ಅಂದರೆ ಅಲ್ಲಿ ಹಬ್ಬದ ವಾತಾವರಣ ಇತ್ತು ಬಸವಕಲ್ಯಾಣಕ್ಕೆ ಅನುದಾನ ಕೊಡಿ ಎಂದು ಮನವಿ ಮಾಡಿ ಮಾತು ಮುಗಿಸಿದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...