Homeಕರ್ನಾಟಕಸದನದಲ್ಲಿಂದು ಗಮನಸೆಳೆದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು

ಸದನದಲ್ಲಿಂದು ಗಮನಸೆಳೆದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು

- Advertisement -
- Advertisement -

ಸದನದಲ್ಲಿಂದು ಬಹುಮತ ಸಾಬೀತು ಮಾಡಲಾಗದಿದ್ದರೂ ಮೈತ್ರಿ ಪಕ್ಷಗಳ ಶಾಸಕರು ಭರ್ಜರಿ ಭಾಷಣ ಮಾಡಿ ಗಮನ ಸೆಳೆದಿದ್ದಾರೆ. ಬಸವಕಲ್ಯಾಣದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು ಈ ಕೆಳಗಿನಂತಿವೆ.

ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಮತ್ತು ಬಸವಣ್ಣನವರನ್ನ ನೆನೆದು ಮಾತು ಆರಂಭಿಸಿದ ಬಿ.ನಾರಾಯಣರಾವ್ ಜನರ ಮಧ್ಯೆ ಹೋರಾಟ ಮಾಡಿ ಮಾಡಿ ಕೊನೆಗೆ ಸಿದ್ಧರಾಮಯ್ಯ, ಪರಮೇಶ್ವರ್ ಅವರು ಟಿಕೇಟ್ ಕೊಟ್ಟಿದ್ದರಿಂದ ನಾನು ಬಂದು ಇಲ್ಲಿ ನಿಮ್ಮ ಮುಂದೆ ನಿಂತಿದ್ದೇನೆ. ಮೊದಲು ದೇವೆಗೌಡರು ಟಿಕೇಟ್ ಕೊಟ್ಟಿದ್ದರು ಅಲ್ಲಿ ಸೋತಿದ್ದೆ ಇಲ್ಲಿಗೆ ಬಂದರೆ ಇಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದಾರೆ, ನಾವು ಸಿದ್ಧರಾಮಯ್ಯ ಮುಖ್ಯಮಂತ್ರಿ ಆಗತ್ತಾರೆ ಅಂದುಕೊಂಡಿದ್ದೆವು ಎಂದು ಹೇಳಿದಾಗ ಸದನದ ಸದಸ್ಯರನ್ನು ನಗೆಯ ಅಲೆ ತೇಲಿಹೋದರು.

ಅನ್ನಭಾಗ್ಯ ಯೋಜನೆ ಇಂದು ಬಡವರು ನೆನೆಯುವಂತ ಕಾರ್ಯಕ್ರಮ ಎಂದ ಅವರು, ನಾವು ಪಂಚಾಯಿತಿ ಕಟ್ಟೆಯಿಂದದ ಬಂದವರು, ನನಗೆ ಕೃಷ್ಣಭೈರೆಗೌಡ, ಮಾಧುಸ್ವಾಮಿ ರೀತಿ ಕಾನೂನು ಮಾತಾಡಲು ಬರುವುದಿಲ್ಲ ಆದರೆ ನಮ್ಮ ಮೂರು ಪಕ್ಷದ ಮುಖಂಡರು ಬೇವಿನ ಬೀಜಗಳನ್ನು ಬಿತ್ತಲು ಹೋಗಬೇಡಿ. ಇಲ್ಲಿ ಏನ್ ನಡೆಯುತ್ತಿದೆ ಎಂಬುದನ್ನು ಎಲ್ಲಾ ಜನ ಮಾಧ್ಯಮಗಳಲ್ಲಿ ನೋಡುತ್ತಿದ್ದಾರೆ, ಎಲ್ಲಾರಿಗಿಂತ ಹೆಚ್ಚು ಮತದಾರರು ಗಮನಿಸುತ್ತಿದ್ದಾರೆ. ಅವರು ಚನ್ನಾಗಿ ಅರಿಯುತ್ತಾರೆ ಸಾರ್, ನಾವು ರಾಜಕೀಯ ಮನೆತನದಿಂದ ಬಂದಿಲ್ಲ ದುಡ್ಡಿರೋರು ಮತ್ತೆ ಚುನಾವಣೆಗೆ ಹೋಗತಾರೆ ನಾವು ಬಡವರು ನಾವು ಎಲ್ಲಿಗೆ ಹೋಗಬೇಕು?

ನಮಗೆ ಕೋಟಿ ಕೋಟಿ ದುಡ್ಡು ಕೊಟ್ಟರೆ ನಾವು ಇಡೋಕೆ ಜಾಗ ಇಲ್ಲ. ನಾನು ಪಾನ್ ಕಾರ್ಡ್ ಮಾಡಿಸಿಲ್ಲ , ಸತ್ತರೆ ಉಳೋದಕ್ಕೆ ಜಾಗ ಇಲ್ಲ ಸಾರ್. ಇನ್ನು ಲೋಕಯುಕ್ತರು ಕೇಳಿಯೇ ಕೇಳುತ್ತಾರೆ, ಕದ್ದು ಮುಚ್ಚು ತಗೊಂಡರೆ ವಿಡಿಯೋ ಮಾಡಿದರೆ ಮತ್ತೆ ಜೈಲಿಗೆ ಹೋಗಬೆಕು ಎಂದು ವಿವರಿಸಿದರು. ನಾನು ನಮ್ಮ ಕ್ಷೇತ್ರದ ವಾರ್ಡ್ ನಲ್ಲಿ ತಿರುಗುತ್ತಿದ್ದರೂ ಉಮೇಶ್ ಜಾಧವ್ ಜೊತೆ ಮುಂಬೈನಲ್ಲಿ ವಾಸ್ತವ್ಯ ಅಂತ ಈ ಮಾಧ್ಯಮಗಳು ಬ್ರೇಕಿಂಗ್ ನ್ಯೂಸ್ ಮಾಡತ್ತಾರೆ. ನಾವು ಮೊದಲೆ ಬಡವರು, ಬಡವ ಸತ್ಯ ಹೇಳಿದರು ನಂಬೊದಿಲ್ಲ. ನನಗೆ ಮಾಲೀಕರು ಮತದಾರರು.

ಎಲ್ಲಾ 224 ಗೌರವಾನ್ವಿತ ಸದಸ್ಯರೆ ನೀವು ಮತದಾರರ ಕಣ್ಣಲ್ಲಿ ಕೀಳು ಮಟ್ಟದಲ್ಲಿ ಕಾಣಬೇಡಿ. ಮೊಟ್ಟ ಮೊದಲು ಸಂಸತ್ತು ಹುಟ್ಟಿದ್ದು ಬಸವಕಲ್ಯಾಣದಲ್ಲಿ. 700 ಶೋಷಿತ ಸಮುದಾಯಗಳ ನೇತೃದ್ವದಲ್ಲಿ ಸಂಸತ್ತು ಪ್ರಾರಂಭ ಆಗಿದ್ದು ಬಸವಕಲ್ಯಾಣದಲ್ಲಿ, ಅನ್ನದಾಸೋಹ ಪ್ರಾರಂಭ ಮಾಡಿದ್ದು ಬಸವ ಕಲ್ಯಾಣ. ಅನುಭವ ಮಂಟಪಕ್ಕೆ 650ಕೋಟಿ ಕೊಡಬೇಕು ಎಂದು ಮನವಿ ಮಾಡಿದರು.

ನೆಲದ ಕಾನೂನಿನ ಪ್ರಕಾರ ವಿಶ್ವಾಸಮತ ಯಾಚಿಸಲು ಹಿಂದೆ ಮುಂದೆ ಯೋಚನೆ ಮಾಡಬೇಡಿ ಈ ಹಿಂದೆ ದೇವೆಗೌಡರು ಸ್ವಾಭಿಮಾನದಿಂದ ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದ್ದರು. ನೀವು ಒಮ್ಮೆ ನಿಮ್ಮ ತಂದೆಗೆ ನೋವು ತಂದು ಬಿಜೆಪಿ ಸಹವಾಸ ಮಾಡಿದ್ದೀರಿ ಅದನ್ನ ಇಂದು ನಾವೆಲ್ಲ ಅನುಭವಿಸುವಂತಾಗಿದೆ. ಇನ್ನು ಮೇಲೆ ನೀವು ಆ ತಪ್ಪು ಮಾಡಬೇಡಿ ಎಂದು ಹೇಳಿದರು.

ಬಸವಣ್ಣನವರ ಆಶಯದಂತೆ, ಬಾಬಾ ಸಾಹೇಬ್ ಅಂಬೇಡ್ಕರ್ ಬರೆದ ಸಂವಿಧಾನದ ಚೌಕಟ್ಟಿನ ಒಳಗಡೆ ಈ ಸಮಸ್ಯೆಯನ್ನ ಬೇಗ ಪರಿಹರಿಸಿ. ಯಾರು ಜಾತ್ಯಾತೀತ ಶಕ್ತಿಗಳು ಒಂದಾಗಬೇಕೆಂದು, ಒಟ್ಟಾಗಿ ಸೇರಿಬೇಕೆಂದು ಮುಖ್ಯಮಂತ್ರಿಯಾದ ನೀವು ಗ್ರಾಮವಾಸ್ತವ್ಯಕ್ಕೆ ಬಂದು ಗಡಿಭಾಗದಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಿದ್ದೀರಿ. ಮಾಧ್ಯಮಗಳು, ವಿರೋಧ ಪಕ್ಷಗಳು ಗಮನಿಸಿ ನಮ್ಮ ಹಳ್ಳಿಗಳಿಗೆ ಸರಪಂಚ್ ಬರೋದೆ ಕಷ್ಟ ಒಬ್ಬ ಮುಖ್ಯಮಂತ್ರಿ ಬರ್ತಾನೆ ಅಂದರೆ ಅಲ್ಲಿ ಹಬ್ಬದ ವಾತಾವರಣ ಇತ್ತು ಬಸವಕಲ್ಯಾಣಕ್ಕೆ ಅನುದಾನ ಕೊಡಿ ಎಂದು ಮನವಿ ಮಾಡಿ ಮಾತು ಮುಗಿಸಿದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....