Homeಕರ್ನಾಟಕಸದನದಲ್ಲಿಂದು ಗಮನಸೆಳೆದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು

ಸದನದಲ್ಲಿಂದು ಗಮನಸೆಳೆದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು

- Advertisement -
- Advertisement -

ಸದನದಲ್ಲಿಂದು ಬಹುಮತ ಸಾಬೀತು ಮಾಡಲಾಗದಿದ್ದರೂ ಮೈತ್ರಿ ಪಕ್ಷಗಳ ಶಾಸಕರು ಭರ್ಜರಿ ಭಾಷಣ ಮಾಡಿ ಗಮನ ಸೆಳೆದಿದ್ದಾರೆ. ಬಸವಕಲ್ಯಾಣದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು ಈ ಕೆಳಗಿನಂತಿವೆ.

ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಮತ್ತು ಬಸವಣ್ಣನವರನ್ನ ನೆನೆದು ಮಾತು ಆರಂಭಿಸಿದ ಬಿ.ನಾರಾಯಣರಾವ್ ಜನರ ಮಧ್ಯೆ ಹೋರಾಟ ಮಾಡಿ ಮಾಡಿ ಕೊನೆಗೆ ಸಿದ್ಧರಾಮಯ್ಯ, ಪರಮೇಶ್ವರ್ ಅವರು ಟಿಕೇಟ್ ಕೊಟ್ಟಿದ್ದರಿಂದ ನಾನು ಬಂದು ಇಲ್ಲಿ ನಿಮ್ಮ ಮುಂದೆ ನಿಂತಿದ್ದೇನೆ. ಮೊದಲು ದೇವೆಗೌಡರು ಟಿಕೇಟ್ ಕೊಟ್ಟಿದ್ದರು ಅಲ್ಲಿ ಸೋತಿದ್ದೆ ಇಲ್ಲಿಗೆ ಬಂದರೆ ಇಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದಾರೆ, ನಾವು ಸಿದ್ಧರಾಮಯ್ಯ ಮುಖ್ಯಮಂತ್ರಿ ಆಗತ್ತಾರೆ ಅಂದುಕೊಂಡಿದ್ದೆವು ಎಂದು ಹೇಳಿದಾಗ ಸದನದ ಸದಸ್ಯರನ್ನು ನಗೆಯ ಅಲೆ ತೇಲಿಹೋದರು.

ಅನ್ನಭಾಗ್ಯ ಯೋಜನೆ ಇಂದು ಬಡವರು ನೆನೆಯುವಂತ ಕಾರ್ಯಕ್ರಮ ಎಂದ ಅವರು, ನಾವು ಪಂಚಾಯಿತಿ ಕಟ್ಟೆಯಿಂದದ ಬಂದವರು, ನನಗೆ ಕೃಷ್ಣಭೈರೆಗೌಡ, ಮಾಧುಸ್ವಾಮಿ ರೀತಿ ಕಾನೂನು ಮಾತಾಡಲು ಬರುವುದಿಲ್ಲ ಆದರೆ ನಮ್ಮ ಮೂರು ಪಕ್ಷದ ಮುಖಂಡರು ಬೇವಿನ ಬೀಜಗಳನ್ನು ಬಿತ್ತಲು ಹೋಗಬೇಡಿ. ಇಲ್ಲಿ ಏನ್ ನಡೆಯುತ್ತಿದೆ ಎಂಬುದನ್ನು ಎಲ್ಲಾ ಜನ ಮಾಧ್ಯಮಗಳಲ್ಲಿ ನೋಡುತ್ತಿದ್ದಾರೆ, ಎಲ್ಲಾರಿಗಿಂತ ಹೆಚ್ಚು ಮತದಾರರು ಗಮನಿಸುತ್ತಿದ್ದಾರೆ. ಅವರು ಚನ್ನಾಗಿ ಅರಿಯುತ್ತಾರೆ ಸಾರ್, ನಾವು ರಾಜಕೀಯ ಮನೆತನದಿಂದ ಬಂದಿಲ್ಲ ದುಡ್ಡಿರೋರು ಮತ್ತೆ ಚುನಾವಣೆಗೆ ಹೋಗತಾರೆ ನಾವು ಬಡವರು ನಾವು ಎಲ್ಲಿಗೆ ಹೋಗಬೇಕು?

ನಮಗೆ ಕೋಟಿ ಕೋಟಿ ದುಡ್ಡು ಕೊಟ್ಟರೆ ನಾವು ಇಡೋಕೆ ಜಾಗ ಇಲ್ಲ. ನಾನು ಪಾನ್ ಕಾರ್ಡ್ ಮಾಡಿಸಿಲ್ಲ , ಸತ್ತರೆ ಉಳೋದಕ್ಕೆ ಜಾಗ ಇಲ್ಲ ಸಾರ್. ಇನ್ನು ಲೋಕಯುಕ್ತರು ಕೇಳಿಯೇ ಕೇಳುತ್ತಾರೆ, ಕದ್ದು ಮುಚ್ಚು ತಗೊಂಡರೆ ವಿಡಿಯೋ ಮಾಡಿದರೆ ಮತ್ತೆ ಜೈಲಿಗೆ ಹೋಗಬೆಕು ಎಂದು ವಿವರಿಸಿದರು. ನಾನು ನಮ್ಮ ಕ್ಷೇತ್ರದ ವಾರ್ಡ್ ನಲ್ಲಿ ತಿರುಗುತ್ತಿದ್ದರೂ ಉಮೇಶ್ ಜಾಧವ್ ಜೊತೆ ಮುಂಬೈನಲ್ಲಿ ವಾಸ್ತವ್ಯ ಅಂತ ಈ ಮಾಧ್ಯಮಗಳು ಬ್ರೇಕಿಂಗ್ ನ್ಯೂಸ್ ಮಾಡತ್ತಾರೆ. ನಾವು ಮೊದಲೆ ಬಡವರು, ಬಡವ ಸತ್ಯ ಹೇಳಿದರು ನಂಬೊದಿಲ್ಲ. ನನಗೆ ಮಾಲೀಕರು ಮತದಾರರು.

ಎಲ್ಲಾ 224 ಗೌರವಾನ್ವಿತ ಸದಸ್ಯರೆ ನೀವು ಮತದಾರರ ಕಣ್ಣಲ್ಲಿ ಕೀಳು ಮಟ್ಟದಲ್ಲಿ ಕಾಣಬೇಡಿ. ಮೊಟ್ಟ ಮೊದಲು ಸಂಸತ್ತು ಹುಟ್ಟಿದ್ದು ಬಸವಕಲ್ಯಾಣದಲ್ಲಿ. 700 ಶೋಷಿತ ಸಮುದಾಯಗಳ ನೇತೃದ್ವದಲ್ಲಿ ಸಂಸತ್ತು ಪ್ರಾರಂಭ ಆಗಿದ್ದು ಬಸವಕಲ್ಯಾಣದಲ್ಲಿ, ಅನ್ನದಾಸೋಹ ಪ್ರಾರಂಭ ಮಾಡಿದ್ದು ಬಸವ ಕಲ್ಯಾಣ. ಅನುಭವ ಮಂಟಪಕ್ಕೆ 650ಕೋಟಿ ಕೊಡಬೇಕು ಎಂದು ಮನವಿ ಮಾಡಿದರು.

ನೆಲದ ಕಾನೂನಿನ ಪ್ರಕಾರ ವಿಶ್ವಾಸಮತ ಯಾಚಿಸಲು ಹಿಂದೆ ಮುಂದೆ ಯೋಚನೆ ಮಾಡಬೇಡಿ ಈ ಹಿಂದೆ ದೇವೆಗೌಡರು ಸ್ವಾಭಿಮಾನದಿಂದ ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದ್ದರು. ನೀವು ಒಮ್ಮೆ ನಿಮ್ಮ ತಂದೆಗೆ ನೋವು ತಂದು ಬಿಜೆಪಿ ಸಹವಾಸ ಮಾಡಿದ್ದೀರಿ ಅದನ್ನ ಇಂದು ನಾವೆಲ್ಲ ಅನುಭವಿಸುವಂತಾಗಿದೆ. ಇನ್ನು ಮೇಲೆ ನೀವು ಆ ತಪ್ಪು ಮಾಡಬೇಡಿ ಎಂದು ಹೇಳಿದರು.

ಬಸವಣ್ಣನವರ ಆಶಯದಂತೆ, ಬಾಬಾ ಸಾಹೇಬ್ ಅಂಬೇಡ್ಕರ್ ಬರೆದ ಸಂವಿಧಾನದ ಚೌಕಟ್ಟಿನ ಒಳಗಡೆ ಈ ಸಮಸ್ಯೆಯನ್ನ ಬೇಗ ಪರಿಹರಿಸಿ. ಯಾರು ಜಾತ್ಯಾತೀತ ಶಕ್ತಿಗಳು ಒಂದಾಗಬೇಕೆಂದು, ಒಟ್ಟಾಗಿ ಸೇರಿಬೇಕೆಂದು ಮುಖ್ಯಮಂತ್ರಿಯಾದ ನೀವು ಗ್ರಾಮವಾಸ್ತವ್ಯಕ್ಕೆ ಬಂದು ಗಡಿಭಾಗದಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಿದ್ದೀರಿ. ಮಾಧ್ಯಮಗಳು, ವಿರೋಧ ಪಕ್ಷಗಳು ಗಮನಿಸಿ ನಮ್ಮ ಹಳ್ಳಿಗಳಿಗೆ ಸರಪಂಚ್ ಬರೋದೆ ಕಷ್ಟ ಒಬ್ಬ ಮುಖ್ಯಮಂತ್ರಿ ಬರ್ತಾನೆ ಅಂದರೆ ಅಲ್ಲಿ ಹಬ್ಬದ ವಾತಾವರಣ ಇತ್ತು ಬಸವಕಲ್ಯಾಣಕ್ಕೆ ಅನುದಾನ ಕೊಡಿ ಎಂದು ಮನವಿ ಮಾಡಿ ಮಾತು ಮುಗಿಸಿದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...