Homeಕರ್ನಾಟಕಸದನದಲ್ಲಿಂದು ಗಮನಸೆಳೆದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು

ಸದನದಲ್ಲಿಂದು ಗಮನಸೆಳೆದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು

- Advertisement -
- Advertisement -

ಸದನದಲ್ಲಿಂದು ಬಹುಮತ ಸಾಬೀತು ಮಾಡಲಾಗದಿದ್ದರೂ ಮೈತ್ರಿ ಪಕ್ಷಗಳ ಶಾಸಕರು ಭರ್ಜರಿ ಭಾಷಣ ಮಾಡಿ ಗಮನ ಸೆಳೆದಿದ್ದಾರೆ. ಬಸವಕಲ್ಯಾಣದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು ಈ ಕೆಳಗಿನಂತಿವೆ.

ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಮತ್ತು ಬಸವಣ್ಣನವರನ್ನ ನೆನೆದು ಮಾತು ಆರಂಭಿಸಿದ ಬಿ.ನಾರಾಯಣರಾವ್ ಜನರ ಮಧ್ಯೆ ಹೋರಾಟ ಮಾಡಿ ಮಾಡಿ ಕೊನೆಗೆ ಸಿದ್ಧರಾಮಯ್ಯ, ಪರಮೇಶ್ವರ್ ಅವರು ಟಿಕೇಟ್ ಕೊಟ್ಟಿದ್ದರಿಂದ ನಾನು ಬಂದು ಇಲ್ಲಿ ನಿಮ್ಮ ಮುಂದೆ ನಿಂತಿದ್ದೇನೆ. ಮೊದಲು ದೇವೆಗೌಡರು ಟಿಕೇಟ್ ಕೊಟ್ಟಿದ್ದರು ಅಲ್ಲಿ ಸೋತಿದ್ದೆ ಇಲ್ಲಿಗೆ ಬಂದರೆ ಇಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದಾರೆ, ನಾವು ಸಿದ್ಧರಾಮಯ್ಯ ಮುಖ್ಯಮಂತ್ರಿ ಆಗತ್ತಾರೆ ಅಂದುಕೊಂಡಿದ್ದೆವು ಎಂದು ಹೇಳಿದಾಗ ಸದನದ ಸದಸ್ಯರನ್ನು ನಗೆಯ ಅಲೆ ತೇಲಿಹೋದರು.

ಅನ್ನಭಾಗ್ಯ ಯೋಜನೆ ಇಂದು ಬಡವರು ನೆನೆಯುವಂತ ಕಾರ್ಯಕ್ರಮ ಎಂದ ಅವರು, ನಾವು ಪಂಚಾಯಿತಿ ಕಟ್ಟೆಯಿಂದದ ಬಂದವರು, ನನಗೆ ಕೃಷ್ಣಭೈರೆಗೌಡ, ಮಾಧುಸ್ವಾಮಿ ರೀತಿ ಕಾನೂನು ಮಾತಾಡಲು ಬರುವುದಿಲ್ಲ ಆದರೆ ನಮ್ಮ ಮೂರು ಪಕ್ಷದ ಮುಖಂಡರು ಬೇವಿನ ಬೀಜಗಳನ್ನು ಬಿತ್ತಲು ಹೋಗಬೇಡಿ. ಇಲ್ಲಿ ಏನ್ ನಡೆಯುತ್ತಿದೆ ಎಂಬುದನ್ನು ಎಲ್ಲಾ ಜನ ಮಾಧ್ಯಮಗಳಲ್ಲಿ ನೋಡುತ್ತಿದ್ದಾರೆ, ಎಲ್ಲಾರಿಗಿಂತ ಹೆಚ್ಚು ಮತದಾರರು ಗಮನಿಸುತ್ತಿದ್ದಾರೆ. ಅವರು ಚನ್ನಾಗಿ ಅರಿಯುತ್ತಾರೆ ಸಾರ್, ನಾವು ರಾಜಕೀಯ ಮನೆತನದಿಂದ ಬಂದಿಲ್ಲ ದುಡ್ಡಿರೋರು ಮತ್ತೆ ಚುನಾವಣೆಗೆ ಹೋಗತಾರೆ ನಾವು ಬಡವರು ನಾವು ಎಲ್ಲಿಗೆ ಹೋಗಬೇಕು?

ನಮಗೆ ಕೋಟಿ ಕೋಟಿ ದುಡ್ಡು ಕೊಟ್ಟರೆ ನಾವು ಇಡೋಕೆ ಜಾಗ ಇಲ್ಲ. ನಾನು ಪಾನ್ ಕಾರ್ಡ್ ಮಾಡಿಸಿಲ್ಲ , ಸತ್ತರೆ ಉಳೋದಕ್ಕೆ ಜಾಗ ಇಲ್ಲ ಸಾರ್. ಇನ್ನು ಲೋಕಯುಕ್ತರು ಕೇಳಿಯೇ ಕೇಳುತ್ತಾರೆ, ಕದ್ದು ಮುಚ್ಚು ತಗೊಂಡರೆ ವಿಡಿಯೋ ಮಾಡಿದರೆ ಮತ್ತೆ ಜೈಲಿಗೆ ಹೋಗಬೆಕು ಎಂದು ವಿವರಿಸಿದರು. ನಾನು ನಮ್ಮ ಕ್ಷೇತ್ರದ ವಾರ್ಡ್ ನಲ್ಲಿ ತಿರುಗುತ್ತಿದ್ದರೂ ಉಮೇಶ್ ಜಾಧವ್ ಜೊತೆ ಮುಂಬೈನಲ್ಲಿ ವಾಸ್ತವ್ಯ ಅಂತ ಈ ಮಾಧ್ಯಮಗಳು ಬ್ರೇಕಿಂಗ್ ನ್ಯೂಸ್ ಮಾಡತ್ತಾರೆ. ನಾವು ಮೊದಲೆ ಬಡವರು, ಬಡವ ಸತ್ಯ ಹೇಳಿದರು ನಂಬೊದಿಲ್ಲ. ನನಗೆ ಮಾಲೀಕರು ಮತದಾರರು.

ಎಲ್ಲಾ 224 ಗೌರವಾನ್ವಿತ ಸದಸ್ಯರೆ ನೀವು ಮತದಾರರ ಕಣ್ಣಲ್ಲಿ ಕೀಳು ಮಟ್ಟದಲ್ಲಿ ಕಾಣಬೇಡಿ. ಮೊಟ್ಟ ಮೊದಲು ಸಂಸತ್ತು ಹುಟ್ಟಿದ್ದು ಬಸವಕಲ್ಯಾಣದಲ್ಲಿ. 700 ಶೋಷಿತ ಸಮುದಾಯಗಳ ನೇತೃದ್ವದಲ್ಲಿ ಸಂಸತ್ತು ಪ್ರಾರಂಭ ಆಗಿದ್ದು ಬಸವಕಲ್ಯಾಣದಲ್ಲಿ, ಅನ್ನದಾಸೋಹ ಪ್ರಾರಂಭ ಮಾಡಿದ್ದು ಬಸವ ಕಲ್ಯಾಣ. ಅನುಭವ ಮಂಟಪಕ್ಕೆ 650ಕೋಟಿ ಕೊಡಬೇಕು ಎಂದು ಮನವಿ ಮಾಡಿದರು.

ನೆಲದ ಕಾನೂನಿನ ಪ್ರಕಾರ ವಿಶ್ವಾಸಮತ ಯಾಚಿಸಲು ಹಿಂದೆ ಮುಂದೆ ಯೋಚನೆ ಮಾಡಬೇಡಿ ಈ ಹಿಂದೆ ದೇವೆಗೌಡರು ಸ್ವಾಭಿಮಾನದಿಂದ ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದ್ದರು. ನೀವು ಒಮ್ಮೆ ನಿಮ್ಮ ತಂದೆಗೆ ನೋವು ತಂದು ಬಿಜೆಪಿ ಸಹವಾಸ ಮಾಡಿದ್ದೀರಿ ಅದನ್ನ ಇಂದು ನಾವೆಲ್ಲ ಅನುಭವಿಸುವಂತಾಗಿದೆ. ಇನ್ನು ಮೇಲೆ ನೀವು ಆ ತಪ್ಪು ಮಾಡಬೇಡಿ ಎಂದು ಹೇಳಿದರು.

ಬಸವಣ್ಣನವರ ಆಶಯದಂತೆ, ಬಾಬಾ ಸಾಹೇಬ್ ಅಂಬೇಡ್ಕರ್ ಬರೆದ ಸಂವಿಧಾನದ ಚೌಕಟ್ಟಿನ ಒಳಗಡೆ ಈ ಸಮಸ್ಯೆಯನ್ನ ಬೇಗ ಪರಿಹರಿಸಿ. ಯಾರು ಜಾತ್ಯಾತೀತ ಶಕ್ತಿಗಳು ಒಂದಾಗಬೇಕೆಂದು, ಒಟ್ಟಾಗಿ ಸೇರಿಬೇಕೆಂದು ಮುಖ್ಯಮಂತ್ರಿಯಾದ ನೀವು ಗ್ರಾಮವಾಸ್ತವ್ಯಕ್ಕೆ ಬಂದು ಗಡಿಭಾಗದಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಿದ್ದೀರಿ. ಮಾಧ್ಯಮಗಳು, ವಿರೋಧ ಪಕ್ಷಗಳು ಗಮನಿಸಿ ನಮ್ಮ ಹಳ್ಳಿಗಳಿಗೆ ಸರಪಂಚ್ ಬರೋದೆ ಕಷ್ಟ ಒಬ್ಬ ಮುಖ್ಯಮಂತ್ರಿ ಬರ್ತಾನೆ ಅಂದರೆ ಅಲ್ಲಿ ಹಬ್ಬದ ವಾತಾವರಣ ಇತ್ತು ಬಸವಕಲ್ಯಾಣಕ್ಕೆ ಅನುದಾನ ಕೊಡಿ ಎಂದು ಮನವಿ ಮಾಡಿ ಮಾತು ಮುಗಿಸಿದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...