Homeಕರ್ನಾಟಕಸದನದಲ್ಲಿಂದು ಗಮನಸೆಳೆದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು

ಸದನದಲ್ಲಿಂದು ಗಮನಸೆಳೆದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು

- Advertisement -
- Advertisement -

ಸದನದಲ್ಲಿಂದು ಬಹುಮತ ಸಾಬೀತು ಮಾಡಲಾಗದಿದ್ದರೂ ಮೈತ್ರಿ ಪಕ್ಷಗಳ ಶಾಸಕರು ಭರ್ಜರಿ ಭಾಷಣ ಮಾಡಿ ಗಮನ ಸೆಳೆದಿದ್ದಾರೆ. ಬಸವಕಲ್ಯಾಣದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು ಈ ಕೆಳಗಿನಂತಿವೆ.

ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಮತ್ತು ಬಸವಣ್ಣನವರನ್ನ ನೆನೆದು ಮಾತು ಆರಂಭಿಸಿದ ಬಿ.ನಾರಾಯಣರಾವ್ ಜನರ ಮಧ್ಯೆ ಹೋರಾಟ ಮಾಡಿ ಮಾಡಿ ಕೊನೆಗೆ ಸಿದ್ಧರಾಮಯ್ಯ, ಪರಮೇಶ್ವರ್ ಅವರು ಟಿಕೇಟ್ ಕೊಟ್ಟಿದ್ದರಿಂದ ನಾನು ಬಂದು ಇಲ್ಲಿ ನಿಮ್ಮ ಮುಂದೆ ನಿಂತಿದ್ದೇನೆ. ಮೊದಲು ದೇವೆಗೌಡರು ಟಿಕೇಟ್ ಕೊಟ್ಟಿದ್ದರು ಅಲ್ಲಿ ಸೋತಿದ್ದೆ ಇಲ್ಲಿಗೆ ಬಂದರೆ ಇಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದಾರೆ, ನಾವು ಸಿದ್ಧರಾಮಯ್ಯ ಮುಖ್ಯಮಂತ್ರಿ ಆಗತ್ತಾರೆ ಅಂದುಕೊಂಡಿದ್ದೆವು ಎಂದು ಹೇಳಿದಾಗ ಸದನದ ಸದಸ್ಯರನ್ನು ನಗೆಯ ಅಲೆ ತೇಲಿಹೋದರು.

ಅನ್ನಭಾಗ್ಯ ಯೋಜನೆ ಇಂದು ಬಡವರು ನೆನೆಯುವಂತ ಕಾರ್ಯಕ್ರಮ ಎಂದ ಅವರು, ನಾವು ಪಂಚಾಯಿತಿ ಕಟ್ಟೆಯಿಂದದ ಬಂದವರು, ನನಗೆ ಕೃಷ್ಣಭೈರೆಗೌಡ, ಮಾಧುಸ್ವಾಮಿ ರೀತಿ ಕಾನೂನು ಮಾತಾಡಲು ಬರುವುದಿಲ್ಲ ಆದರೆ ನಮ್ಮ ಮೂರು ಪಕ್ಷದ ಮುಖಂಡರು ಬೇವಿನ ಬೀಜಗಳನ್ನು ಬಿತ್ತಲು ಹೋಗಬೇಡಿ. ಇಲ್ಲಿ ಏನ್ ನಡೆಯುತ್ತಿದೆ ಎಂಬುದನ್ನು ಎಲ್ಲಾ ಜನ ಮಾಧ್ಯಮಗಳಲ್ಲಿ ನೋಡುತ್ತಿದ್ದಾರೆ, ಎಲ್ಲಾರಿಗಿಂತ ಹೆಚ್ಚು ಮತದಾರರು ಗಮನಿಸುತ್ತಿದ್ದಾರೆ. ಅವರು ಚನ್ನಾಗಿ ಅರಿಯುತ್ತಾರೆ ಸಾರ್, ನಾವು ರಾಜಕೀಯ ಮನೆತನದಿಂದ ಬಂದಿಲ್ಲ ದುಡ್ಡಿರೋರು ಮತ್ತೆ ಚುನಾವಣೆಗೆ ಹೋಗತಾರೆ ನಾವು ಬಡವರು ನಾವು ಎಲ್ಲಿಗೆ ಹೋಗಬೇಕು?

ನಮಗೆ ಕೋಟಿ ಕೋಟಿ ದುಡ್ಡು ಕೊಟ್ಟರೆ ನಾವು ಇಡೋಕೆ ಜಾಗ ಇಲ್ಲ. ನಾನು ಪಾನ್ ಕಾರ್ಡ್ ಮಾಡಿಸಿಲ್ಲ , ಸತ್ತರೆ ಉಳೋದಕ್ಕೆ ಜಾಗ ಇಲ್ಲ ಸಾರ್. ಇನ್ನು ಲೋಕಯುಕ್ತರು ಕೇಳಿಯೇ ಕೇಳುತ್ತಾರೆ, ಕದ್ದು ಮುಚ್ಚು ತಗೊಂಡರೆ ವಿಡಿಯೋ ಮಾಡಿದರೆ ಮತ್ತೆ ಜೈಲಿಗೆ ಹೋಗಬೆಕು ಎಂದು ವಿವರಿಸಿದರು. ನಾನು ನಮ್ಮ ಕ್ಷೇತ್ರದ ವಾರ್ಡ್ ನಲ್ಲಿ ತಿರುಗುತ್ತಿದ್ದರೂ ಉಮೇಶ್ ಜಾಧವ್ ಜೊತೆ ಮುಂಬೈನಲ್ಲಿ ವಾಸ್ತವ್ಯ ಅಂತ ಈ ಮಾಧ್ಯಮಗಳು ಬ್ರೇಕಿಂಗ್ ನ್ಯೂಸ್ ಮಾಡತ್ತಾರೆ. ನಾವು ಮೊದಲೆ ಬಡವರು, ಬಡವ ಸತ್ಯ ಹೇಳಿದರು ನಂಬೊದಿಲ್ಲ. ನನಗೆ ಮಾಲೀಕರು ಮತದಾರರು.

ಎಲ್ಲಾ 224 ಗೌರವಾನ್ವಿತ ಸದಸ್ಯರೆ ನೀವು ಮತದಾರರ ಕಣ್ಣಲ್ಲಿ ಕೀಳು ಮಟ್ಟದಲ್ಲಿ ಕಾಣಬೇಡಿ. ಮೊಟ್ಟ ಮೊದಲು ಸಂಸತ್ತು ಹುಟ್ಟಿದ್ದು ಬಸವಕಲ್ಯಾಣದಲ್ಲಿ. 700 ಶೋಷಿತ ಸಮುದಾಯಗಳ ನೇತೃದ್ವದಲ್ಲಿ ಸಂಸತ್ತು ಪ್ರಾರಂಭ ಆಗಿದ್ದು ಬಸವಕಲ್ಯಾಣದಲ್ಲಿ, ಅನ್ನದಾಸೋಹ ಪ್ರಾರಂಭ ಮಾಡಿದ್ದು ಬಸವ ಕಲ್ಯಾಣ. ಅನುಭವ ಮಂಟಪಕ್ಕೆ 650ಕೋಟಿ ಕೊಡಬೇಕು ಎಂದು ಮನವಿ ಮಾಡಿದರು.

ನೆಲದ ಕಾನೂನಿನ ಪ್ರಕಾರ ವಿಶ್ವಾಸಮತ ಯಾಚಿಸಲು ಹಿಂದೆ ಮುಂದೆ ಯೋಚನೆ ಮಾಡಬೇಡಿ ಈ ಹಿಂದೆ ದೇವೆಗೌಡರು ಸ್ವಾಭಿಮಾನದಿಂದ ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದ್ದರು. ನೀವು ಒಮ್ಮೆ ನಿಮ್ಮ ತಂದೆಗೆ ನೋವು ತಂದು ಬಿಜೆಪಿ ಸಹವಾಸ ಮಾಡಿದ್ದೀರಿ ಅದನ್ನ ಇಂದು ನಾವೆಲ್ಲ ಅನುಭವಿಸುವಂತಾಗಿದೆ. ಇನ್ನು ಮೇಲೆ ನೀವು ಆ ತಪ್ಪು ಮಾಡಬೇಡಿ ಎಂದು ಹೇಳಿದರು.

ಬಸವಣ್ಣನವರ ಆಶಯದಂತೆ, ಬಾಬಾ ಸಾಹೇಬ್ ಅಂಬೇಡ್ಕರ್ ಬರೆದ ಸಂವಿಧಾನದ ಚೌಕಟ್ಟಿನ ಒಳಗಡೆ ಈ ಸಮಸ್ಯೆಯನ್ನ ಬೇಗ ಪರಿಹರಿಸಿ. ಯಾರು ಜಾತ್ಯಾತೀತ ಶಕ್ತಿಗಳು ಒಂದಾಗಬೇಕೆಂದು, ಒಟ್ಟಾಗಿ ಸೇರಿಬೇಕೆಂದು ಮುಖ್ಯಮಂತ್ರಿಯಾದ ನೀವು ಗ್ರಾಮವಾಸ್ತವ್ಯಕ್ಕೆ ಬಂದು ಗಡಿಭಾಗದಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಿದ್ದೀರಿ. ಮಾಧ್ಯಮಗಳು, ವಿರೋಧ ಪಕ್ಷಗಳು ಗಮನಿಸಿ ನಮ್ಮ ಹಳ್ಳಿಗಳಿಗೆ ಸರಪಂಚ್ ಬರೋದೆ ಕಷ್ಟ ಒಬ್ಬ ಮುಖ್ಯಮಂತ್ರಿ ಬರ್ತಾನೆ ಅಂದರೆ ಅಲ್ಲಿ ಹಬ್ಬದ ವಾತಾವರಣ ಇತ್ತು ಬಸವಕಲ್ಯಾಣಕ್ಕೆ ಅನುದಾನ ಕೊಡಿ ಎಂದು ಮನವಿ ಮಾಡಿ ಮಾತು ಮುಗಿಸಿದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...