Homeಕರ್ನಾಟಕಸದನದಲ್ಲಿಂದು ಗಮನಸೆಳೆದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು

ಸದನದಲ್ಲಿಂದು ಗಮನಸೆಳೆದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು

- Advertisement -
- Advertisement -

ಸದನದಲ್ಲಿಂದು ಬಹುಮತ ಸಾಬೀತು ಮಾಡಲಾಗದಿದ್ದರೂ ಮೈತ್ರಿ ಪಕ್ಷಗಳ ಶಾಸಕರು ಭರ್ಜರಿ ಭಾಷಣ ಮಾಡಿ ಗಮನ ಸೆಳೆದಿದ್ದಾರೆ. ಬಸವಕಲ್ಯಾಣದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು ಈ ಕೆಳಗಿನಂತಿವೆ.

ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಮತ್ತು ಬಸವಣ್ಣನವರನ್ನ ನೆನೆದು ಮಾತು ಆರಂಭಿಸಿದ ಬಿ.ನಾರಾಯಣರಾವ್ ಜನರ ಮಧ್ಯೆ ಹೋರಾಟ ಮಾಡಿ ಮಾಡಿ ಕೊನೆಗೆ ಸಿದ್ಧರಾಮಯ್ಯ, ಪರಮೇಶ್ವರ್ ಅವರು ಟಿಕೇಟ್ ಕೊಟ್ಟಿದ್ದರಿಂದ ನಾನು ಬಂದು ಇಲ್ಲಿ ನಿಮ್ಮ ಮುಂದೆ ನಿಂತಿದ್ದೇನೆ. ಮೊದಲು ದೇವೆಗೌಡರು ಟಿಕೇಟ್ ಕೊಟ್ಟಿದ್ದರು ಅಲ್ಲಿ ಸೋತಿದ್ದೆ ಇಲ್ಲಿಗೆ ಬಂದರೆ ಇಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದಾರೆ, ನಾವು ಸಿದ್ಧರಾಮಯ್ಯ ಮುಖ್ಯಮಂತ್ರಿ ಆಗತ್ತಾರೆ ಅಂದುಕೊಂಡಿದ್ದೆವು ಎಂದು ಹೇಳಿದಾಗ ಸದನದ ಸದಸ್ಯರನ್ನು ನಗೆಯ ಅಲೆ ತೇಲಿಹೋದರು.

ಅನ್ನಭಾಗ್ಯ ಯೋಜನೆ ಇಂದು ಬಡವರು ನೆನೆಯುವಂತ ಕಾರ್ಯಕ್ರಮ ಎಂದ ಅವರು, ನಾವು ಪಂಚಾಯಿತಿ ಕಟ್ಟೆಯಿಂದದ ಬಂದವರು, ನನಗೆ ಕೃಷ್ಣಭೈರೆಗೌಡ, ಮಾಧುಸ್ವಾಮಿ ರೀತಿ ಕಾನೂನು ಮಾತಾಡಲು ಬರುವುದಿಲ್ಲ ಆದರೆ ನಮ್ಮ ಮೂರು ಪಕ್ಷದ ಮುಖಂಡರು ಬೇವಿನ ಬೀಜಗಳನ್ನು ಬಿತ್ತಲು ಹೋಗಬೇಡಿ. ಇಲ್ಲಿ ಏನ್ ನಡೆಯುತ್ತಿದೆ ಎಂಬುದನ್ನು ಎಲ್ಲಾ ಜನ ಮಾಧ್ಯಮಗಳಲ್ಲಿ ನೋಡುತ್ತಿದ್ದಾರೆ, ಎಲ್ಲಾರಿಗಿಂತ ಹೆಚ್ಚು ಮತದಾರರು ಗಮನಿಸುತ್ತಿದ್ದಾರೆ. ಅವರು ಚನ್ನಾಗಿ ಅರಿಯುತ್ತಾರೆ ಸಾರ್, ನಾವು ರಾಜಕೀಯ ಮನೆತನದಿಂದ ಬಂದಿಲ್ಲ ದುಡ್ಡಿರೋರು ಮತ್ತೆ ಚುನಾವಣೆಗೆ ಹೋಗತಾರೆ ನಾವು ಬಡವರು ನಾವು ಎಲ್ಲಿಗೆ ಹೋಗಬೇಕು?

ನಮಗೆ ಕೋಟಿ ಕೋಟಿ ದುಡ್ಡು ಕೊಟ್ಟರೆ ನಾವು ಇಡೋಕೆ ಜಾಗ ಇಲ್ಲ. ನಾನು ಪಾನ್ ಕಾರ್ಡ್ ಮಾಡಿಸಿಲ್ಲ , ಸತ್ತರೆ ಉಳೋದಕ್ಕೆ ಜಾಗ ಇಲ್ಲ ಸಾರ್. ಇನ್ನು ಲೋಕಯುಕ್ತರು ಕೇಳಿಯೇ ಕೇಳುತ್ತಾರೆ, ಕದ್ದು ಮುಚ್ಚು ತಗೊಂಡರೆ ವಿಡಿಯೋ ಮಾಡಿದರೆ ಮತ್ತೆ ಜೈಲಿಗೆ ಹೋಗಬೆಕು ಎಂದು ವಿವರಿಸಿದರು. ನಾನು ನಮ್ಮ ಕ್ಷೇತ್ರದ ವಾರ್ಡ್ ನಲ್ಲಿ ತಿರುಗುತ್ತಿದ್ದರೂ ಉಮೇಶ್ ಜಾಧವ್ ಜೊತೆ ಮುಂಬೈನಲ್ಲಿ ವಾಸ್ತವ್ಯ ಅಂತ ಈ ಮಾಧ್ಯಮಗಳು ಬ್ರೇಕಿಂಗ್ ನ್ಯೂಸ್ ಮಾಡತ್ತಾರೆ. ನಾವು ಮೊದಲೆ ಬಡವರು, ಬಡವ ಸತ್ಯ ಹೇಳಿದರು ನಂಬೊದಿಲ್ಲ. ನನಗೆ ಮಾಲೀಕರು ಮತದಾರರು.

ಎಲ್ಲಾ 224 ಗೌರವಾನ್ವಿತ ಸದಸ್ಯರೆ ನೀವು ಮತದಾರರ ಕಣ್ಣಲ್ಲಿ ಕೀಳು ಮಟ್ಟದಲ್ಲಿ ಕಾಣಬೇಡಿ. ಮೊಟ್ಟ ಮೊದಲು ಸಂಸತ್ತು ಹುಟ್ಟಿದ್ದು ಬಸವಕಲ್ಯಾಣದಲ್ಲಿ. 700 ಶೋಷಿತ ಸಮುದಾಯಗಳ ನೇತೃದ್ವದಲ್ಲಿ ಸಂಸತ್ತು ಪ್ರಾರಂಭ ಆಗಿದ್ದು ಬಸವಕಲ್ಯಾಣದಲ್ಲಿ, ಅನ್ನದಾಸೋಹ ಪ್ರಾರಂಭ ಮಾಡಿದ್ದು ಬಸವ ಕಲ್ಯಾಣ. ಅನುಭವ ಮಂಟಪಕ್ಕೆ 650ಕೋಟಿ ಕೊಡಬೇಕು ಎಂದು ಮನವಿ ಮಾಡಿದರು.

ನೆಲದ ಕಾನೂನಿನ ಪ್ರಕಾರ ವಿಶ್ವಾಸಮತ ಯಾಚಿಸಲು ಹಿಂದೆ ಮುಂದೆ ಯೋಚನೆ ಮಾಡಬೇಡಿ ಈ ಹಿಂದೆ ದೇವೆಗೌಡರು ಸ್ವಾಭಿಮಾನದಿಂದ ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದ್ದರು. ನೀವು ಒಮ್ಮೆ ನಿಮ್ಮ ತಂದೆಗೆ ನೋವು ತಂದು ಬಿಜೆಪಿ ಸಹವಾಸ ಮಾಡಿದ್ದೀರಿ ಅದನ್ನ ಇಂದು ನಾವೆಲ್ಲ ಅನುಭವಿಸುವಂತಾಗಿದೆ. ಇನ್ನು ಮೇಲೆ ನೀವು ಆ ತಪ್ಪು ಮಾಡಬೇಡಿ ಎಂದು ಹೇಳಿದರು.

ಬಸವಣ್ಣನವರ ಆಶಯದಂತೆ, ಬಾಬಾ ಸಾಹೇಬ್ ಅಂಬೇಡ್ಕರ್ ಬರೆದ ಸಂವಿಧಾನದ ಚೌಕಟ್ಟಿನ ಒಳಗಡೆ ಈ ಸಮಸ್ಯೆಯನ್ನ ಬೇಗ ಪರಿಹರಿಸಿ. ಯಾರು ಜಾತ್ಯಾತೀತ ಶಕ್ತಿಗಳು ಒಂದಾಗಬೇಕೆಂದು, ಒಟ್ಟಾಗಿ ಸೇರಿಬೇಕೆಂದು ಮುಖ್ಯಮಂತ್ರಿಯಾದ ನೀವು ಗ್ರಾಮವಾಸ್ತವ್ಯಕ್ಕೆ ಬಂದು ಗಡಿಭಾಗದಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಿದ್ದೀರಿ. ಮಾಧ್ಯಮಗಳು, ವಿರೋಧ ಪಕ್ಷಗಳು ಗಮನಿಸಿ ನಮ್ಮ ಹಳ್ಳಿಗಳಿಗೆ ಸರಪಂಚ್ ಬರೋದೆ ಕಷ್ಟ ಒಬ್ಬ ಮುಖ್ಯಮಂತ್ರಿ ಬರ್ತಾನೆ ಅಂದರೆ ಅಲ್ಲಿ ಹಬ್ಬದ ವಾತಾವರಣ ಇತ್ತು ಬಸವಕಲ್ಯಾಣಕ್ಕೆ ಅನುದಾನ ಕೊಡಿ ಎಂದು ಮನವಿ ಮಾಡಿ ಮಾತು ಮುಗಿಸಿದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...