Homeಕರ್ನಾಟಕಸದನದಲ್ಲಿಂದು ಗಮನಸೆಳೆದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು

ಸದನದಲ್ಲಿಂದು ಗಮನಸೆಳೆದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು

- Advertisement -
- Advertisement -

ಸದನದಲ್ಲಿಂದು ಬಹುಮತ ಸಾಬೀತು ಮಾಡಲಾಗದಿದ್ದರೂ ಮೈತ್ರಿ ಪಕ್ಷಗಳ ಶಾಸಕರು ಭರ್ಜರಿ ಭಾಷಣ ಮಾಡಿ ಗಮನ ಸೆಳೆದಿದ್ದಾರೆ. ಬಸವಕಲ್ಯಾಣದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು ಈ ಕೆಳಗಿನಂತಿವೆ.

ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಮತ್ತು ಬಸವಣ್ಣನವರನ್ನ ನೆನೆದು ಮಾತು ಆರಂಭಿಸಿದ ಬಿ.ನಾರಾಯಣರಾವ್ ಜನರ ಮಧ್ಯೆ ಹೋರಾಟ ಮಾಡಿ ಮಾಡಿ ಕೊನೆಗೆ ಸಿದ್ಧರಾಮಯ್ಯ, ಪರಮೇಶ್ವರ್ ಅವರು ಟಿಕೇಟ್ ಕೊಟ್ಟಿದ್ದರಿಂದ ನಾನು ಬಂದು ಇಲ್ಲಿ ನಿಮ್ಮ ಮುಂದೆ ನಿಂತಿದ್ದೇನೆ. ಮೊದಲು ದೇವೆಗೌಡರು ಟಿಕೇಟ್ ಕೊಟ್ಟಿದ್ದರು ಅಲ್ಲಿ ಸೋತಿದ್ದೆ ಇಲ್ಲಿಗೆ ಬಂದರೆ ಇಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದಾರೆ, ನಾವು ಸಿದ್ಧರಾಮಯ್ಯ ಮುಖ್ಯಮಂತ್ರಿ ಆಗತ್ತಾರೆ ಅಂದುಕೊಂಡಿದ್ದೆವು ಎಂದು ಹೇಳಿದಾಗ ಸದನದ ಸದಸ್ಯರನ್ನು ನಗೆಯ ಅಲೆ ತೇಲಿಹೋದರು.

ಅನ್ನಭಾಗ್ಯ ಯೋಜನೆ ಇಂದು ಬಡವರು ನೆನೆಯುವಂತ ಕಾರ್ಯಕ್ರಮ ಎಂದ ಅವರು, ನಾವು ಪಂಚಾಯಿತಿ ಕಟ್ಟೆಯಿಂದದ ಬಂದವರು, ನನಗೆ ಕೃಷ್ಣಭೈರೆಗೌಡ, ಮಾಧುಸ್ವಾಮಿ ರೀತಿ ಕಾನೂನು ಮಾತಾಡಲು ಬರುವುದಿಲ್ಲ ಆದರೆ ನಮ್ಮ ಮೂರು ಪಕ್ಷದ ಮುಖಂಡರು ಬೇವಿನ ಬೀಜಗಳನ್ನು ಬಿತ್ತಲು ಹೋಗಬೇಡಿ. ಇಲ್ಲಿ ಏನ್ ನಡೆಯುತ್ತಿದೆ ಎಂಬುದನ್ನು ಎಲ್ಲಾ ಜನ ಮಾಧ್ಯಮಗಳಲ್ಲಿ ನೋಡುತ್ತಿದ್ದಾರೆ, ಎಲ್ಲಾರಿಗಿಂತ ಹೆಚ್ಚು ಮತದಾರರು ಗಮನಿಸುತ್ತಿದ್ದಾರೆ. ಅವರು ಚನ್ನಾಗಿ ಅರಿಯುತ್ತಾರೆ ಸಾರ್, ನಾವು ರಾಜಕೀಯ ಮನೆತನದಿಂದ ಬಂದಿಲ್ಲ ದುಡ್ಡಿರೋರು ಮತ್ತೆ ಚುನಾವಣೆಗೆ ಹೋಗತಾರೆ ನಾವು ಬಡವರು ನಾವು ಎಲ್ಲಿಗೆ ಹೋಗಬೇಕು?

ನಮಗೆ ಕೋಟಿ ಕೋಟಿ ದುಡ್ಡು ಕೊಟ್ಟರೆ ನಾವು ಇಡೋಕೆ ಜಾಗ ಇಲ್ಲ. ನಾನು ಪಾನ್ ಕಾರ್ಡ್ ಮಾಡಿಸಿಲ್ಲ , ಸತ್ತರೆ ಉಳೋದಕ್ಕೆ ಜಾಗ ಇಲ್ಲ ಸಾರ್. ಇನ್ನು ಲೋಕಯುಕ್ತರು ಕೇಳಿಯೇ ಕೇಳುತ್ತಾರೆ, ಕದ್ದು ಮುಚ್ಚು ತಗೊಂಡರೆ ವಿಡಿಯೋ ಮಾಡಿದರೆ ಮತ್ತೆ ಜೈಲಿಗೆ ಹೋಗಬೆಕು ಎಂದು ವಿವರಿಸಿದರು. ನಾನು ನಮ್ಮ ಕ್ಷೇತ್ರದ ವಾರ್ಡ್ ನಲ್ಲಿ ತಿರುಗುತ್ತಿದ್ದರೂ ಉಮೇಶ್ ಜಾಧವ್ ಜೊತೆ ಮುಂಬೈನಲ್ಲಿ ವಾಸ್ತವ್ಯ ಅಂತ ಈ ಮಾಧ್ಯಮಗಳು ಬ್ರೇಕಿಂಗ್ ನ್ಯೂಸ್ ಮಾಡತ್ತಾರೆ. ನಾವು ಮೊದಲೆ ಬಡವರು, ಬಡವ ಸತ್ಯ ಹೇಳಿದರು ನಂಬೊದಿಲ್ಲ. ನನಗೆ ಮಾಲೀಕರು ಮತದಾರರು.

ಎಲ್ಲಾ 224 ಗೌರವಾನ್ವಿತ ಸದಸ್ಯರೆ ನೀವು ಮತದಾರರ ಕಣ್ಣಲ್ಲಿ ಕೀಳು ಮಟ್ಟದಲ್ಲಿ ಕಾಣಬೇಡಿ. ಮೊಟ್ಟ ಮೊದಲು ಸಂಸತ್ತು ಹುಟ್ಟಿದ್ದು ಬಸವಕಲ್ಯಾಣದಲ್ಲಿ. 700 ಶೋಷಿತ ಸಮುದಾಯಗಳ ನೇತೃದ್ವದಲ್ಲಿ ಸಂಸತ್ತು ಪ್ರಾರಂಭ ಆಗಿದ್ದು ಬಸವಕಲ್ಯಾಣದಲ್ಲಿ, ಅನ್ನದಾಸೋಹ ಪ್ರಾರಂಭ ಮಾಡಿದ್ದು ಬಸವ ಕಲ್ಯಾಣ. ಅನುಭವ ಮಂಟಪಕ್ಕೆ 650ಕೋಟಿ ಕೊಡಬೇಕು ಎಂದು ಮನವಿ ಮಾಡಿದರು.

ನೆಲದ ಕಾನೂನಿನ ಪ್ರಕಾರ ವಿಶ್ವಾಸಮತ ಯಾಚಿಸಲು ಹಿಂದೆ ಮುಂದೆ ಯೋಚನೆ ಮಾಡಬೇಡಿ ಈ ಹಿಂದೆ ದೇವೆಗೌಡರು ಸ್ವಾಭಿಮಾನದಿಂದ ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದ್ದರು. ನೀವು ಒಮ್ಮೆ ನಿಮ್ಮ ತಂದೆಗೆ ನೋವು ತಂದು ಬಿಜೆಪಿ ಸಹವಾಸ ಮಾಡಿದ್ದೀರಿ ಅದನ್ನ ಇಂದು ನಾವೆಲ್ಲ ಅನುಭವಿಸುವಂತಾಗಿದೆ. ಇನ್ನು ಮೇಲೆ ನೀವು ಆ ತಪ್ಪು ಮಾಡಬೇಡಿ ಎಂದು ಹೇಳಿದರು.

ಬಸವಣ್ಣನವರ ಆಶಯದಂತೆ, ಬಾಬಾ ಸಾಹೇಬ್ ಅಂಬೇಡ್ಕರ್ ಬರೆದ ಸಂವಿಧಾನದ ಚೌಕಟ್ಟಿನ ಒಳಗಡೆ ಈ ಸಮಸ್ಯೆಯನ್ನ ಬೇಗ ಪರಿಹರಿಸಿ. ಯಾರು ಜಾತ್ಯಾತೀತ ಶಕ್ತಿಗಳು ಒಂದಾಗಬೇಕೆಂದು, ಒಟ್ಟಾಗಿ ಸೇರಿಬೇಕೆಂದು ಮುಖ್ಯಮಂತ್ರಿಯಾದ ನೀವು ಗ್ರಾಮವಾಸ್ತವ್ಯಕ್ಕೆ ಬಂದು ಗಡಿಭಾಗದಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಿದ್ದೀರಿ. ಮಾಧ್ಯಮಗಳು, ವಿರೋಧ ಪಕ್ಷಗಳು ಗಮನಿಸಿ ನಮ್ಮ ಹಳ್ಳಿಗಳಿಗೆ ಸರಪಂಚ್ ಬರೋದೆ ಕಷ್ಟ ಒಬ್ಬ ಮುಖ್ಯಮಂತ್ರಿ ಬರ್ತಾನೆ ಅಂದರೆ ಅಲ್ಲಿ ಹಬ್ಬದ ವಾತಾವರಣ ಇತ್ತು ಬಸವಕಲ್ಯಾಣಕ್ಕೆ ಅನುದಾನ ಕೊಡಿ ಎಂದು ಮನವಿ ಮಾಡಿ ಮಾತು ಮುಗಿಸಿದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...