Homeಮುಖಪುಟಬಿಎಸ್‌ವೈ ಆಡಿಯೋ ಕುರಿತು ಸಿದ್ದರಾಮಯ್ಯ-ನಳಿನ್‌ ಕುಮಾರ್‌ ಕಟೀಲ್‌ ನಡುವೆ ಟ್ವೀಟ್‌ ಸಮರ

ಬಿಎಸ್‌ವೈ ಆಡಿಯೋ ಕುರಿತು ಸಿದ್ದರಾಮಯ್ಯ-ನಳಿನ್‌ ಕುಮಾರ್‌ ಕಟೀಲ್‌ ನಡುವೆ ಟ್ವೀಟ್‌ ಸಮರ

- Advertisement -
- Advertisement -

ಮೂರು ದಿನದಿಂದ ಬಿ.ಎಸ್‌ ಯಡಿಯೂರಪ್ಪನವರ ಆಡಿಯೋ ಸಾಕಷ್ಟು ಸದ್ದು ಮಾಡುತ್ತಿದೆ. ಆಪರೇಷನ್‌ ಕಮಲ ಪ್ರಯತ್ನದಲ್ಲಿ ಅಮಿತ್‌ ಶಾರವರ ಕೈವಾಡವಿದೆ ಎನ್ನುವುದು ಆಡಿಯೋದ ಸಾರ. ಈ ಕುರಿತು ಕಾಂಗ್ರೆಸ್‌ ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ದೂರನ್ನು ಸಹ ನೀಡಿದೆ. ರಾಜ್ಯಪಾಲರು ಆ ದೂರನ್ನು ಕೇಂದ್ರ ಗೃಹ ಇಲಾಖೆಗೂ ಕೂಡ ರವಾನೆ ಮಾಡಿದೆ ಎನ್ನಲಾಗುತ್ತಿದೆ.

ಇನ್ನು ಈ ಕುರಿತು ಬಿ.ಎಸ್‌ ಯಡಿಯೂರಪ್ಪನವರ ಆಡಿಯೋ ರಿಲೀಸ್ ಮಾಡಿದ್ದು ಸಿದ್ದರಾಮಯ್ಯನವರೆ ಎಂದು ಬಿಜೆಪಿ ರಾಜ್ಯಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ರವರು ಆರೋಪಿಸಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಸಿದ್ದರಾಮಯ್ಯನವರು, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಆಡಿಯೋ ನನ್ನಿಂದ ರಿಲೀಸ್ ಆಗಿದೆಯೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜೋಕ್ ಮಾಡಿದ್ದಾರೆ.
ಬಿಜೆಪಿ ಕೋರ್ ಕಮಿಟಿ ಸಭೆಗೆ ವಿರೋಧ ಪಕ್ಷದ ನಾಯಕನನ್ನು ಆಹ್ವಾನಿಸಿದ್ದೀರಾ?
ಈ ರೀತಿ ಜೋಕ್ ಮಾಡೋರನ್ನ ‘……’ ಎನ್ನುತ್ತಾರೆ ಗೊತ್ತಾ? ಎಂದು ಖಾರವಾಗಿ ನುಡಿದಿದ್ದರು.

ಇದರಿಂದ ಕುಪಿತಗೊಂಡ ನಳಿನ್‌ ಕುಮಾರ್‌ ಕಟೀಲ್‌ರವರು ಕಳೆದ ಹಲವು ವರ್ಷಗಳಲ್ಲಿ ನಿಮ್ಮ ಅನುಮತಿ ಇಲ್ಲದೆ ನಿಮ್ಮ ಪಕ್ಷದಲ್ಲಿ ಏನಾದರೂ ನಡೆದಿದೆಯೇ ಸಿದ್ದರಾಮಯ್ಯನವರೆ? ಪ್ರತಿ ವಿಷಯದಲ್ಲೂ ಸುಳ್ಳು ಹೇಳುವ ನಿಮ್ಮನ್ನು ಜನ ಏನೆಂದು ಕರೆಯುತ್ತಾರೆ ಗೊತ್ತಾ? ಎಲ್ಲಾ ಕಮಿಟಿಗಳಲ್ಲಿದ್ದು ಕರ್ನಾಟಕ ಕಾಂಗ್ರೆಸ್‌ ಅನ್ನು ನಿರ್ನಾಮ ಮಾಡುತ್ತಿರುವ ನಿಮ್ಮನ್ನು ಬಿಜೆಪಿ ಕೋರ್ ಕಮಿಟಿ ಸಭೆಗೆ ಆಹ್ವಾನಿಸುವುದು ಉಂಟೇ? ಎಂದು ಟೀಕಿಸಿದ್ದಾರೆ.

ಅಷ್ಟರಲ್ಲಿ ಟಿವಿ ವಾಹಿನಿಯೊಂದಕ್ಕೆ ಪ್ರತಿಕ್ರಿಯಿ ನೀಡಿರುವ ಯಡಿಯೂರಪ್ಪನವರು ಹೌದು ನೂರಕ್ಕೆ ನೂರರಷ್ಟು ಅದು ನನ್ನದೇ ಧ್ವನಿ ಎಂದು ಒಪ್ಪಿಕೊಂಡಿದ್ದರು. ಆದರೆ ಪ್ರಹ್ಲಾದ್‌ ಜೋಶಿಯವರು ಹುಬ್ಬಳ್ಳಿಯಲ್ಲಿ ಆ ರೀತಿಯ ಕೋರ್‌ ಕಮಿಟಿ ಸಭೆ ನಡೆದೇ ಇಲ್ಲ ಎಂದು ಹೇಳಿಕೆ ನೀಡಿದ್ದರು. ಒಟ್ಟಿನಲ್ಲಿ ಆಡಿಯೋವೊಂದು ಇನ್ನಷ್ಟು ರಾದ್ಧಾಂತವನ್ನು ಎಬ್ಬಿಸುವುದು ಗ್ಯಾರಂಟಿ ಎನ್ನಿಸುತ್ತಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...