Homeಕರ್ನಾಟಕಸತ್ಯನಾರಾಯಣ್ ಆಮಿಷಕ್ಕೆ ಬಲಿಯಾಗದ ನಿಷ್ಠಾವಂತ ವ್ಯಕ್ತಿ: ಮಾಜಿ ಪ್ರಧಾನಿ ದೇವೇಗೌಡ

ಸತ್ಯನಾರಾಯಣ್ ಆಮಿಷಕ್ಕೆ ಬಲಿಯಾಗದ ನಿಷ್ಠಾವಂತ ವ್ಯಕ್ತಿ: ಮಾಜಿ ಪ್ರಧಾನಿ ದೇವೇಗೌಡ

- Advertisement -
- Advertisement -

ಹಲವು ಆಮಿಷಗಳೊಡ್ಡಿದರೂ ಅದಕ್ಕೆ ಮಾರುಹೋಗದ ಪಕ್ಷದಲ್ಲೇ ನಿಷ್ಠಾವಂತರಾಗಿ ಉಳಿದುಕೊಂಡ ವ್ಯಕ್ತಿ ಬಿ. ಸತ್ಯನಾರಾಯಣ್ ನನ್ನ ಮಗನಂತಿದ್ದರು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಬಣ್ಣಿಸಿದ್ದಾರೆ.

ತುಮಕೂರಿನ ಜೆಡಿಎಸ್ ಕಚೇರಿಯಲ್ಲಿ ಸಾರ್ವಜನಿಕ ಪ್ರದರ್ಶನಕ್ಕಿಟ್ಟಿದ್ದ ಬಿ. ಸತ್ಯನಾರಾಯಣ್ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

ಅತ್ಯಂತ ಸರಳ, ಸಜ್ಜನ ವ್ಯಕ್ತಿ. ನನ್ನ ಮಗನಂತೆಯೇ ನಡೆದುಕೊಳ್ಳುತ್ತಿದ್ದ. ಪಕ್ಷಕ್ಕೆ ನಿಷ್ಠೆ ಇಟ್ಟುಕೊಂಡಿದ್ದ. ಹಾಗಾಗಿ ಎರಡು ಬಾರಿ ಸಚಿವರನ್ನಾಗಿ ಮಾಡಿದ್ದೆ. ಒಮ್ಮೆ ಕಾರ್ಮಿಕ ಸಚಿವರನ್ನಾಗಿ ಕೆಲಸ ನಿರ್ವಹಿಸಿದ್ದರು. ಸತ್ಯನಾರಾಯಣ್ ಅವರನ್ನು ಕಳೆದುಕೊಂಡಿರುವುದು ಅತೀವ ದುಃಖ ತಂದಿದೆ ಎಂದು  ಕಂಬನಿ ಮಿಡಿದರು.

ಬಿ. ಸತ್ಯನಾರಾಯಣ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯಲು ಪಕ್ಷಾತೀತವಾಗಿ ಎಲ್ಲಾ ನಾಯಕರು ಆಗಮಿಸಿದ್ದರು. ಜೆಡಿಎಸ್ ಕಚೇರಿಯಲ್ಲಿ ಕೊರೊನ ಸಂದರ್ಭದಲ್ಲೂ ನೂರಾರು ಮಂದಿ ಭೇಟಿ ನೀಡಿ ಅಂತಿಮ ದರ್ಶನ ಪಡೆದರು.

ಜೆಡಿಎಸ್‌ನ ಮಾಜಿ ಸಚಿವ ಎಚ್. ಡಿ. ರೇವಣ್ಣ, ಕಾಂಗ್ರೆಸ್ ಮುಖಂಡ ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಜೆಡಿಎಸ್‌ನ ಹಾಲಿ ಮತ್ತು ಮಾಜಿ ಶಾಸಕ ಮಾಜಿ ಸಚಿವ ಡಿ. ನಾಗರಾಜಯ್ಯ, ಎಸ್. ಆರ್. ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಬೆಮೆಲ್ ಕಾಂತರಾಜ್, ಮುಖಂಡರಾದ ಟಿ. ಆರ್. ನಾಗರಾಜ್ ಮೊದಲಾದವರು ಅಂತಿಮ ನಮನ ಸಲ್ಲಿಸಿದರು.

ಬಿಜೆಪಿಯ ಮಾಜಿ ಸಚಿವ ಸೊಗಡು ಶಿವಣ್ಣ, ಶಾಸಕ ಜಿ. ಬಿ. ಜ್ಯೋತಿಗಣೇಶ್, ಬಿಜೆಪಿ ಪಾಲಿಕೆ ಸದಸ್ಯ ಮಲ್ಲಿಕಾರ್ಜುನ್ ಸೇರಿದಂತೆ ಬಿಜೆಪಿ ಮುಖಂಡರು ಕೂಡ ಆಗಮಿಸಿದ್ದರು.

ಕಾಂಗ್ರೆಸ್‌ನ ಮಾಜಿ ಶಾಸಕ ರಫೀಕ್ ಅಹಮದ್, ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಸಿದ್ದೇಗೌಡ, ಮಾಜಿ ಶಾಸಕ ಎಂ. ಟಿ. ಕೃಷ್ಣಪ್ಪ, ಕೆ. ಎಂ. ತಿಮ್ಮರಾಯಪ್ಪ, ವೀರಭದ್ರಯ್ಯ, ಗೌರಿಶಂಕರ್ ಸೇರಿದಂತೆ ಹಲವರು ಆಗಮಿಸಿ ಪುಷ್ಪಗುಚ್ಚ ಇರಿಸಿ ಅಂತಿಮ ದರ್ಶನ ಪಡೆದರು.

ಸಂಜೆ ಭೂವನಹಳ್ಳಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.


ಓದಿ: ಗಡಿಯಲ್ಲಿ ಏನು ನಡೆಯುತ್ತಿದೆ ಎಂಬುವುದನ್ನು ದೇಶಕ್ಕೆ ತಿಳಿಸಿ: ಹೆಚ್‌. ಡಿ. ದೇವೇಗೌಡ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...