Homeಕರ್ನಾಟಕಬಳ್ಳಾರಿ ಅದಿರುಗ್ಯಾಂಗ್ ಮಣ್ಣುಪಾಲು: ಡಿಸಿಎಂ ಆಗುವರೇ ಶ್ರೀರಾಮುಲು?

ಬಳ್ಳಾರಿ ಅದಿರುಗ್ಯಾಂಗ್ ಮಣ್ಣುಪಾಲು: ಡಿಸಿಎಂ ಆಗುವರೇ ಶ್ರೀರಾಮುಲು?

- Advertisement -
- Advertisement -

2008 ಮತ್ತು 2019…. ಈ ನಡುವಿನ ಅವಧಿಯೆಲ್ಲ ಕರ್ನಾಟಕಕ್ಕೆ ಬರವೇ. ಯಾವ ಪಕ್ಷವೂ ಜನರ ನೋವಿಗೆ ಮಿಡಿದೇ ಇಲ್ಲ. ಆದರೆ, ಈಗ ಈ ವರದಿಯ ಉದ್ದೇಶವಿಷ್ಟೇ: 2008ರಲ್ಲಿ ಒಂದು ‘ಅಕ್ರಮ’ ಸರ್ಕಾರವನ್ನು ನಿರ್ಮಿಸಿದ ಗುಂಪೊಂದು, ಈಗ ಇನ್ನೊಂದು ಅಕ್ರಮ ಸರ್ಕಾರ ನಿರ್ಮಾಣವಾಗುವ ವೇಳೆಯಲ್ಲಿ ಎಲ್ಲಿತ್ತು?

ಅಂದು ಲೋಡುಗಟ್ಟಲೇ ಹಣ ಹೂಡಿದವರನ್ನು ಇವತ್ತು ಬಿಜೆಪಿ ಚಿಮ್ಮಿಬಿಟ್ಟಿತೇ? ಅಥವಾ ಇವತ್ತು ಹೂಡಲಾಗದಷ್ಟು ಅಸಹಾಯಕತೆಯಲ್ಲಿ ಇರುವರೇ? ದಿಕ್ಕಾಪಾಲಾಗಿರುವ ಬಳ್ಳಾರಿ ಅದಿರಿನ ಗ್ಯಾಂಗಿಗೆ ಈಗ ಬಿಜೆಪಿಯಲ್ಲಿ ಗೌರವ ಅಷ್ಟಕ್ಕಷ್ಟೇ. ಶ್ರೀಮಂತಿಕೆಯಲ್ಲಿ ತೀರಾ ಪಾತಾಳಕ್ಕೇನೂ ಅವರು ಕುಸಿದಿಲ್ಲವಾದರೂ ರಾಜಕೀಯ ಸೋಲುಗಳಿಂದ ಕಂಗೆಟ್ಟಿದ್ದಾರೆ. ಅದಕ್ಕಿಂತ ಮುಖ್ಯವಾದ ಸಂಗತಿ ಎಂದರೆ, ಈಗ ಕೇಂದ್ರ ಬಿಜೆಪಿಯೇ ಇಂತಹವರನ್ನು ಲೋಡುಗಟ್ಟಲೇ ರೊಕ್ಕ ಕೊಟ್ಟು ಖರೀದಿಸುವ ಇಲ್ಲವೇ ಬೆದರಿಸಿ ಲಪಟಾಯಿಸುವ ಮಟ್ಟವನ್ನು ತಲುಪಿದೆ.

ಹೀಗಾಗಿ, ವಿಶ್ವಾಸಮತದ ಚರ್ಚೆಯಲ್ಲಿ ಶ್ರೀರಾಮುಲು ಮತ್ತು ಸೋಮಶೇಖರರೆಡ್ಡಿ ಇಬ್ಬರೇ ಅಕ್ಕಪಕ್ಕ ಕೂತು ತಮ್ಮ ಪಾಡಿಗೆ ತಾವು ಏನೇನೋ ಮಾತಾಡುತ್ತ ಕೂರಬೇಕಾಯಿತು. 2008ರ ಸಂದರ್ಭವನ್ನು ಒಮ್ಮೆ ಗಮನಿಸಿ: 110 ಸೀಟು ಪಡೆದ ಬಿಜೆಪಿ ಸರಳ ಬಹುಮತದ ಕೊರತೆ ಇದ್ದಾಗಲೂ ಸರ್ಕಾರ ರಚನೆಗೆ ಮುಂದಾಗಿತ್ತು. ಆಗ ಮೋದಿ-ಶಾ ಇನ್ನು ಗುಜರಾತ್ ಲೆವೆಲ್ಲಿನಲ್ಲೇ ಇದ್ದರು.

ಆಗ ರಾಜ್ಯ ಬಿಜೆಪಿ ನಂಬಿದ್ದು ಜನಾರ್ದನರೆಡ್ಡಿ ಮತ್ತು ಶ್ರೀರಾಮುಲು ಎಂಬ ಗಣಿ ಉದ್ಯಮಿಗಳನ್ನು. ಅವರು ಬಹುಮತಕ್ಕೆ ಅಗತ್ಯವಿದ್ದ ಮೂರು ಇರಲಿ ಎಂಟ್ಹತ್ತು ಶಾಸಕರನ್ನೇ ದಂಡಿಯಾಗಿ ಕರೆತಂದು ಒಗೆದು ವಿಶ್ವಾಸಮತ ಗೆಲ್ಲಿಸಿಕೊಂಡಿದ್ದರು. ಅನರ್ಹತೆ ಎಂಬ ಪದಕ್ಕೆ ಅವಕಾಶವನ್ನೇ ನೀಡದಂತೆ, ಅವರಿಂದ ರಾಜಿನಾಮೆ ಕೊಡಿಸಲಾಗಿತ್ತು. ಅವರಿಗೆಲ್ಲ ಸಚಿವಗಿರಿಯ ಜೊತೆಗೆ ಸಾಕಷ್ಟು ಗಣಿ ಮಣ್ಣಿನ ಪಾಪದ ದುಡ್ಡನ್ನು ಕಾಣಿಕೆಯಾಗಿ ನೀಡಲಾಯಿತು. ಮುಂದೆ ಉಪ ಚುನಾವಣೆಯಲ್ಲಿ ಅವರಲ್ಲಿ ಬಹುತೇಕರನ್ನು ಗೆಲ್ಲಿಸುವ ಮೂಲಕ ಬಳ್ಳಾರಿಯ ಗಣಿಗಳ್ಳರು ‘ತಮ್ಮದೇ’ ಸರ್ಕಾರವನ್ನು ಕಾಪಾಡಿಕೊಂಡರು.

ಇಡೀ ಬಳ್ಳಾರಿ ಜಿಲ್ಲೆಯೇ ಆಗ ಅವರ ಸುಪರ್ದಿಗೆ ಒಳಪಟ್ಟಿತ್ತು. ತಮಗೆ ಬೇಕಾದ ಎಸ್‍ಪಿ, ಡಿಸಿ ಮತ್ತು ಅರಣ್ಯಾಧಿಕಾರಿಗಳನ್ನೆಲ್ಲ ಹಾಕಿಸಿಕೊಂಡು ಅಕ್ರಮ ಗಣಿಗಾರಿಕೆಯನ್ನು ಅಧಿಕೃತ ವ್ಯಾಪಾರದ ಮಟ್ಟಕ್ಕೆ ಇಳಿಸಿದ್ದರು. ತಮ್ಮ ಅಕ್ರಮ ಗಣಿಗಳಲ್ಲದೇ ಇತರ ಗಣಿಗಳಿಂದ ಹಫ್ತಾ ವಸೂಲಿಯನ್ನೂ ವ್ಯವಸ್ಥಿತವಾಗಿ ಮಾಡುವ ಮೂಲಕ ಅಪಾರ ಸಂಪತ್ತನ್ನು ಕೊಳ್ಳೆ ಹೊಡೆದರು. ರಾಷ್ಟ್ರೀಯ ನಾಯಕಿ ಸುಷ್ಮಾ ಸ್ವರಾಜ್ ಅವರನ್ನು ‘ಮಂಗಳ ಗೌರಿ’ ನೆಪದಲ್ಲಿ ಉಡಿ ತುಂಬಿಸುವ ಮೂಲಕ ಒಲಿಸಿಕೊಂಡಿದ್ದ ಈ ಬಳ್ಳಾರಿ ಗ್ಯಾಂಗ್ ಒಂದು ಹಂತದಲ್ಲಿ ಯಡಿಯೂರಪ್ಪನವರ ವಿರುದ್ಧವೇ ತಿರುಗಿಬಿದ್ದು ಸರ್ಕಾರ ಬೀಳಿಸುವ ಧಮಕಿ ಹಾಕಿತ್ತು.

ವಿಧಾನಸಭಾ ಅಧಿವೇಶನದಲ್ಲೇ ಜನಾರ್ದನರೆಡ್ಡಿ ಸಿದ್ದರಾಮಯ್ಯ ಅವರಿಗೆ ‘ಬಳ್ಳಾರಿಗೆ ಬನ್ನಿ, ನಿಮ್ಮನ್ನೆಲ್ಲ ನೋಡಿಕೊಳ್ತೇವೆ’ ಎನ್ನುವ ಮಟ್ಟಕ್ಕೆ ಹೋದರೆ, ರೆಡ್ಡಿಯ ಚೇಲಾ ಶಾಸಕ ಸುರೇಶ ಬಾಬು ತೋಳೇರಿಸಿ ವಿಪಕ್ಷದವರ ಮೇಲೆ ದಾದಾಗಿರಿ ನಡೆಸಲೂ ಯತ್ನಿಸಿದ್ದರು.
ಸಂತೋಷ್ ಹೆಗ್ಡೆ ವರದಿ ನಂತರ ಕೋರ್ಟುಗಳು ಕೂಡ ತೀಕ್ಷ್ಣ ಆದೇಶಗಳನ್ನು ಕೊಡತೊಡಗಿದವು. ಇತ್ತ ಭೂ ಹಗರಣದಲ್ಲಿ ಸಿಕ್ಕ ಯಡಿಯೂರಪ್ಪ ಜೈಲು ಪಾಲಾದರು. ಅಲ್ಲಿಗೆ ಬಳ್ಳಾರಿ ಗ್ಯಾಂಗಿನ ಒಂದು ಹಂತದ ಆಟ ಮುಗಿದಿತ್ತು. ಮುಂದೆ ಯಡಿಯೂರಪ್ಪ ಒಂದು ಪಾರ್ಟಿ ಕಟ್ಟಿದರೆ, ಬಳ್ಳಾರಿ ಗ್ಯಾಂಗ್ ಇನ್ನೊಂದು ಪಾರ್ಟಿ ಕಟ್ಟಿತು. ಎರಡೂ ಮಕಾಡೆ ಮಲಗಿದವು.

ಜೈಲಲ್ಲಿ ವರ್ಷಗಳನ್ನು ಸವೆಸಿದ ರೆಡ್ಡಿಯನ್ನು ರಾಷ್ಟ್ರೀಯ ಬಿಜೆಪಿ ದೂರವಿಡತೊಡಗಿತು. ಕೇವಲ 10 ವರ್ಷಗಳಲ್ಲಿ ಎಂತಹ ಬದಲಾವಣೆ? ಅಂದು ಸರ್ಕಾರವನ್ನೇ ರಚಿಸಿದ್ದ ಬಳ್ಳಾರಿ ಗ್ಯಾಂಗ್ ಬಿಜೆಪಿ ಪಾಲಿಗೆ ಹೀರೋ ಆಗಿತ್ತು, ಈಗದು ಝೀರೋ, ಬಿಗ್ ಝೀರೋ!

ಫಾರೆಸ್ಟ್ ಅಧಿಕಾರಿಗೆ ಸಜೆ!
ಆದರೆ ರೆಡ್ಡಿಗಳ ಆಟಾಟೋಪ ಮತ್ತೆ ಮುಂದುವರೆಯಲಿದೆಯೇ ಎಂಬ ಪ್ರಶ್ನೆ ಕಾಡಲು ಕಾರಣವಾಗಿದ್ದು, ಮೊಟ್ಟ ಮೊದಲ ಬಾರಿಗೆ ಜನಾರ್ದನರೆಡ್ಡಿಯ ಅಕ್ರಮ ಗಣಿಗಾರಿಕೆಯ ಮೇಲೆ ಮುಗಿಬಿದ್ದಿದ್ದ ಫಾರೆಸ್ಟ್ ಆಫೀಸರ್ ಒಬ್ಬರನ್ನು ಕೇಂದ್ರ ಸರ್ಕಾರ ಈ ವಾರ ಕಾಯಂ ನಿವೃತ್ತಿಗೊಳಿಸಿದ ವಿಷಯ. ಕಲ್ಲೋಳ್ ಬಿಸ್ವಾಸ್ ಎಂಬ ಈ ಅಧಿಕಾರಿಯನ್ನು ಕಡ್ಡಾಯ ನಿವೃತ್ತಿಗೊಳಿಸಿದುದರ ಹಿಂದೆ ಯಡಿಯೂರಪ್ಪ ಪಾತ್ರವಿದೆಯಾ ಅಥವಾ ಜಗನ್‍ರೆಡ್ಡಿಯ ಪಾತ್ರವಿದೆಯಾ ಎಂಬುದು ಸದ್ಯಕ್ಕೆ ಅಸ್ಪಷ್ಟ…..

ಹಳೆಯ ಸೇಡನ್ನು ತೀರಿಸಿಕೊಂಡಿರುವುದರ ಹೊರತಾಗಿ, ಇದರಿಂದ ರೆಡ್ಡಿ ರಾಮುಲು ಬಳಗಕ್ಕಂತೂ ವಿಶೇಷ ಅನುಕೂಲಗಳೇನೂ ದಕ್ಕುವಂತೆ ಕಾಣುತ್ತಿಲ್ಲ. ಒಟ್ಟಿನಲ್ಲಿ ಕೋಟೆ ಕಟ್ಟಿ ಮೆರೆದ ಗಣಿಗಳ್ಳರು ಈಗ ಬಿಜೆಪಿಗೇ ಬೇಡವಾಗಿದ್ದಾರೆ! ಆದರು ಶ್ರೀರಾಮುಲು ಡಿಸಿಎಂ ಕನಸು ಬಿಟ್ಟಿಲ್ಲ. ಜಾತಿಬಲ ಮಾತ್ರವೇ ಅವರಿಗೆ ಈಗ ಆಶಾಕಿರಣವಾಗಿದೆ. ದೆಹಲಿಯಲ್ಲಿ ಅಮಿತ್ ಶಾ ಸಂಪುಟ ವಿಸ್ತರಣೆಗೆ ಅವಕಾಶ ಕೊಡುದಿರುವುದು ನೋಡಿದರೆ ಪಕ್ಕಾ ಆರ್.ಎಸ್.ಎಸ್ ನವರಿಗೆ ಮಾತ್ರ ಮಂತ್ರಿ ಭಾಗ್ಯ ಎಂಬ ಸುಳಿವು ಸಿಗುತ್ತಿವೆ. ಅಂದರೆ ಅದಿರಿನ ದಂಧೆಯ ಕುಸಿತದೊಂದಿಗೆ ಬಳ್ಳಾರಿಯ ಗ್ಯಾಂಗೂ ಮಣ್ಣು ಪಾಲಾಯಿತೇ ಎಂಬ ಪ್ರಶ್ನೆ ಬರುತ್ತಿದೆ. ಏನಾದರೂ ಆಗಲಿ ಇಂದರಿಂದ ಜನರಿಗೆ ಮಾತ್ರ ಏನೂ ಪ್ರಯೋಜನವಿಲ್ಲವೆಂಬುದು ಸತ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...