Homeಕರ್ನಾಟಕಬಳ್ಳಾರಿ ಅದಿರುಗ್ಯಾಂಗ್ ಮಣ್ಣುಪಾಲು: ಡಿಸಿಎಂ ಆಗುವರೇ ಶ್ರೀರಾಮುಲು?

ಬಳ್ಳಾರಿ ಅದಿರುಗ್ಯಾಂಗ್ ಮಣ್ಣುಪಾಲು: ಡಿಸಿಎಂ ಆಗುವರೇ ಶ್ರೀರಾಮುಲು?

- Advertisement -
- Advertisement -

2008 ಮತ್ತು 2019…. ಈ ನಡುವಿನ ಅವಧಿಯೆಲ್ಲ ಕರ್ನಾಟಕಕ್ಕೆ ಬರವೇ. ಯಾವ ಪಕ್ಷವೂ ಜನರ ನೋವಿಗೆ ಮಿಡಿದೇ ಇಲ್ಲ. ಆದರೆ, ಈಗ ಈ ವರದಿಯ ಉದ್ದೇಶವಿಷ್ಟೇ: 2008ರಲ್ಲಿ ಒಂದು ‘ಅಕ್ರಮ’ ಸರ್ಕಾರವನ್ನು ನಿರ್ಮಿಸಿದ ಗುಂಪೊಂದು, ಈಗ ಇನ್ನೊಂದು ಅಕ್ರಮ ಸರ್ಕಾರ ನಿರ್ಮಾಣವಾಗುವ ವೇಳೆಯಲ್ಲಿ ಎಲ್ಲಿತ್ತು?

ಅಂದು ಲೋಡುಗಟ್ಟಲೇ ಹಣ ಹೂಡಿದವರನ್ನು ಇವತ್ತು ಬಿಜೆಪಿ ಚಿಮ್ಮಿಬಿಟ್ಟಿತೇ? ಅಥವಾ ಇವತ್ತು ಹೂಡಲಾಗದಷ್ಟು ಅಸಹಾಯಕತೆಯಲ್ಲಿ ಇರುವರೇ? ದಿಕ್ಕಾಪಾಲಾಗಿರುವ ಬಳ್ಳಾರಿ ಅದಿರಿನ ಗ್ಯಾಂಗಿಗೆ ಈಗ ಬಿಜೆಪಿಯಲ್ಲಿ ಗೌರವ ಅಷ್ಟಕ್ಕಷ್ಟೇ. ಶ್ರೀಮಂತಿಕೆಯಲ್ಲಿ ತೀರಾ ಪಾತಾಳಕ್ಕೇನೂ ಅವರು ಕುಸಿದಿಲ್ಲವಾದರೂ ರಾಜಕೀಯ ಸೋಲುಗಳಿಂದ ಕಂಗೆಟ್ಟಿದ್ದಾರೆ. ಅದಕ್ಕಿಂತ ಮುಖ್ಯವಾದ ಸಂಗತಿ ಎಂದರೆ, ಈಗ ಕೇಂದ್ರ ಬಿಜೆಪಿಯೇ ಇಂತಹವರನ್ನು ಲೋಡುಗಟ್ಟಲೇ ರೊಕ್ಕ ಕೊಟ್ಟು ಖರೀದಿಸುವ ಇಲ್ಲವೇ ಬೆದರಿಸಿ ಲಪಟಾಯಿಸುವ ಮಟ್ಟವನ್ನು ತಲುಪಿದೆ.

ಹೀಗಾಗಿ, ವಿಶ್ವಾಸಮತದ ಚರ್ಚೆಯಲ್ಲಿ ಶ್ರೀರಾಮುಲು ಮತ್ತು ಸೋಮಶೇಖರರೆಡ್ಡಿ ಇಬ್ಬರೇ ಅಕ್ಕಪಕ್ಕ ಕೂತು ತಮ್ಮ ಪಾಡಿಗೆ ತಾವು ಏನೇನೋ ಮಾತಾಡುತ್ತ ಕೂರಬೇಕಾಯಿತು. 2008ರ ಸಂದರ್ಭವನ್ನು ಒಮ್ಮೆ ಗಮನಿಸಿ: 110 ಸೀಟು ಪಡೆದ ಬಿಜೆಪಿ ಸರಳ ಬಹುಮತದ ಕೊರತೆ ಇದ್ದಾಗಲೂ ಸರ್ಕಾರ ರಚನೆಗೆ ಮುಂದಾಗಿತ್ತು. ಆಗ ಮೋದಿ-ಶಾ ಇನ್ನು ಗುಜರಾತ್ ಲೆವೆಲ್ಲಿನಲ್ಲೇ ಇದ್ದರು.

ಆಗ ರಾಜ್ಯ ಬಿಜೆಪಿ ನಂಬಿದ್ದು ಜನಾರ್ದನರೆಡ್ಡಿ ಮತ್ತು ಶ್ರೀರಾಮುಲು ಎಂಬ ಗಣಿ ಉದ್ಯಮಿಗಳನ್ನು. ಅವರು ಬಹುಮತಕ್ಕೆ ಅಗತ್ಯವಿದ್ದ ಮೂರು ಇರಲಿ ಎಂಟ್ಹತ್ತು ಶಾಸಕರನ್ನೇ ದಂಡಿಯಾಗಿ ಕರೆತಂದು ಒಗೆದು ವಿಶ್ವಾಸಮತ ಗೆಲ್ಲಿಸಿಕೊಂಡಿದ್ದರು. ಅನರ್ಹತೆ ಎಂಬ ಪದಕ್ಕೆ ಅವಕಾಶವನ್ನೇ ನೀಡದಂತೆ, ಅವರಿಂದ ರಾಜಿನಾಮೆ ಕೊಡಿಸಲಾಗಿತ್ತು. ಅವರಿಗೆಲ್ಲ ಸಚಿವಗಿರಿಯ ಜೊತೆಗೆ ಸಾಕಷ್ಟು ಗಣಿ ಮಣ್ಣಿನ ಪಾಪದ ದುಡ್ಡನ್ನು ಕಾಣಿಕೆಯಾಗಿ ನೀಡಲಾಯಿತು. ಮುಂದೆ ಉಪ ಚುನಾವಣೆಯಲ್ಲಿ ಅವರಲ್ಲಿ ಬಹುತೇಕರನ್ನು ಗೆಲ್ಲಿಸುವ ಮೂಲಕ ಬಳ್ಳಾರಿಯ ಗಣಿಗಳ್ಳರು ‘ತಮ್ಮದೇ’ ಸರ್ಕಾರವನ್ನು ಕಾಪಾಡಿಕೊಂಡರು.

ಇಡೀ ಬಳ್ಳಾರಿ ಜಿಲ್ಲೆಯೇ ಆಗ ಅವರ ಸುಪರ್ದಿಗೆ ಒಳಪಟ್ಟಿತ್ತು. ತಮಗೆ ಬೇಕಾದ ಎಸ್‍ಪಿ, ಡಿಸಿ ಮತ್ತು ಅರಣ್ಯಾಧಿಕಾರಿಗಳನ್ನೆಲ್ಲ ಹಾಕಿಸಿಕೊಂಡು ಅಕ್ರಮ ಗಣಿಗಾರಿಕೆಯನ್ನು ಅಧಿಕೃತ ವ್ಯಾಪಾರದ ಮಟ್ಟಕ್ಕೆ ಇಳಿಸಿದ್ದರು. ತಮ್ಮ ಅಕ್ರಮ ಗಣಿಗಳಲ್ಲದೇ ಇತರ ಗಣಿಗಳಿಂದ ಹಫ್ತಾ ವಸೂಲಿಯನ್ನೂ ವ್ಯವಸ್ಥಿತವಾಗಿ ಮಾಡುವ ಮೂಲಕ ಅಪಾರ ಸಂಪತ್ತನ್ನು ಕೊಳ್ಳೆ ಹೊಡೆದರು. ರಾಷ್ಟ್ರೀಯ ನಾಯಕಿ ಸುಷ್ಮಾ ಸ್ವರಾಜ್ ಅವರನ್ನು ‘ಮಂಗಳ ಗೌರಿ’ ನೆಪದಲ್ಲಿ ಉಡಿ ತುಂಬಿಸುವ ಮೂಲಕ ಒಲಿಸಿಕೊಂಡಿದ್ದ ಈ ಬಳ್ಳಾರಿ ಗ್ಯಾಂಗ್ ಒಂದು ಹಂತದಲ್ಲಿ ಯಡಿಯೂರಪ್ಪನವರ ವಿರುದ್ಧವೇ ತಿರುಗಿಬಿದ್ದು ಸರ್ಕಾರ ಬೀಳಿಸುವ ಧಮಕಿ ಹಾಕಿತ್ತು.

ವಿಧಾನಸಭಾ ಅಧಿವೇಶನದಲ್ಲೇ ಜನಾರ್ದನರೆಡ್ಡಿ ಸಿದ್ದರಾಮಯ್ಯ ಅವರಿಗೆ ‘ಬಳ್ಳಾರಿಗೆ ಬನ್ನಿ, ನಿಮ್ಮನ್ನೆಲ್ಲ ನೋಡಿಕೊಳ್ತೇವೆ’ ಎನ್ನುವ ಮಟ್ಟಕ್ಕೆ ಹೋದರೆ, ರೆಡ್ಡಿಯ ಚೇಲಾ ಶಾಸಕ ಸುರೇಶ ಬಾಬು ತೋಳೇರಿಸಿ ವಿಪಕ್ಷದವರ ಮೇಲೆ ದಾದಾಗಿರಿ ನಡೆಸಲೂ ಯತ್ನಿಸಿದ್ದರು.
ಸಂತೋಷ್ ಹೆಗ್ಡೆ ವರದಿ ನಂತರ ಕೋರ್ಟುಗಳು ಕೂಡ ತೀಕ್ಷ್ಣ ಆದೇಶಗಳನ್ನು ಕೊಡತೊಡಗಿದವು. ಇತ್ತ ಭೂ ಹಗರಣದಲ್ಲಿ ಸಿಕ್ಕ ಯಡಿಯೂರಪ್ಪ ಜೈಲು ಪಾಲಾದರು. ಅಲ್ಲಿಗೆ ಬಳ್ಳಾರಿ ಗ್ಯಾಂಗಿನ ಒಂದು ಹಂತದ ಆಟ ಮುಗಿದಿತ್ತು. ಮುಂದೆ ಯಡಿಯೂರಪ್ಪ ಒಂದು ಪಾರ್ಟಿ ಕಟ್ಟಿದರೆ, ಬಳ್ಳಾರಿ ಗ್ಯಾಂಗ್ ಇನ್ನೊಂದು ಪಾರ್ಟಿ ಕಟ್ಟಿತು. ಎರಡೂ ಮಕಾಡೆ ಮಲಗಿದವು.

ಜೈಲಲ್ಲಿ ವರ್ಷಗಳನ್ನು ಸವೆಸಿದ ರೆಡ್ಡಿಯನ್ನು ರಾಷ್ಟ್ರೀಯ ಬಿಜೆಪಿ ದೂರವಿಡತೊಡಗಿತು. ಕೇವಲ 10 ವರ್ಷಗಳಲ್ಲಿ ಎಂತಹ ಬದಲಾವಣೆ? ಅಂದು ಸರ್ಕಾರವನ್ನೇ ರಚಿಸಿದ್ದ ಬಳ್ಳಾರಿ ಗ್ಯಾಂಗ್ ಬಿಜೆಪಿ ಪಾಲಿಗೆ ಹೀರೋ ಆಗಿತ್ತು, ಈಗದು ಝೀರೋ, ಬಿಗ್ ಝೀರೋ!

ಫಾರೆಸ್ಟ್ ಅಧಿಕಾರಿಗೆ ಸಜೆ!
ಆದರೆ ರೆಡ್ಡಿಗಳ ಆಟಾಟೋಪ ಮತ್ತೆ ಮುಂದುವರೆಯಲಿದೆಯೇ ಎಂಬ ಪ್ರಶ್ನೆ ಕಾಡಲು ಕಾರಣವಾಗಿದ್ದು, ಮೊಟ್ಟ ಮೊದಲ ಬಾರಿಗೆ ಜನಾರ್ದನರೆಡ್ಡಿಯ ಅಕ್ರಮ ಗಣಿಗಾರಿಕೆಯ ಮೇಲೆ ಮುಗಿಬಿದ್ದಿದ್ದ ಫಾರೆಸ್ಟ್ ಆಫೀಸರ್ ಒಬ್ಬರನ್ನು ಕೇಂದ್ರ ಸರ್ಕಾರ ಈ ವಾರ ಕಾಯಂ ನಿವೃತ್ತಿಗೊಳಿಸಿದ ವಿಷಯ. ಕಲ್ಲೋಳ್ ಬಿಸ್ವಾಸ್ ಎಂಬ ಈ ಅಧಿಕಾರಿಯನ್ನು ಕಡ್ಡಾಯ ನಿವೃತ್ತಿಗೊಳಿಸಿದುದರ ಹಿಂದೆ ಯಡಿಯೂರಪ್ಪ ಪಾತ್ರವಿದೆಯಾ ಅಥವಾ ಜಗನ್‍ರೆಡ್ಡಿಯ ಪಾತ್ರವಿದೆಯಾ ಎಂಬುದು ಸದ್ಯಕ್ಕೆ ಅಸ್ಪಷ್ಟ…..

ಹಳೆಯ ಸೇಡನ್ನು ತೀರಿಸಿಕೊಂಡಿರುವುದರ ಹೊರತಾಗಿ, ಇದರಿಂದ ರೆಡ್ಡಿ ರಾಮುಲು ಬಳಗಕ್ಕಂತೂ ವಿಶೇಷ ಅನುಕೂಲಗಳೇನೂ ದಕ್ಕುವಂತೆ ಕಾಣುತ್ತಿಲ್ಲ. ಒಟ್ಟಿನಲ್ಲಿ ಕೋಟೆ ಕಟ್ಟಿ ಮೆರೆದ ಗಣಿಗಳ್ಳರು ಈಗ ಬಿಜೆಪಿಗೇ ಬೇಡವಾಗಿದ್ದಾರೆ! ಆದರು ಶ್ರೀರಾಮುಲು ಡಿಸಿಎಂ ಕನಸು ಬಿಟ್ಟಿಲ್ಲ. ಜಾತಿಬಲ ಮಾತ್ರವೇ ಅವರಿಗೆ ಈಗ ಆಶಾಕಿರಣವಾಗಿದೆ. ದೆಹಲಿಯಲ್ಲಿ ಅಮಿತ್ ಶಾ ಸಂಪುಟ ವಿಸ್ತರಣೆಗೆ ಅವಕಾಶ ಕೊಡುದಿರುವುದು ನೋಡಿದರೆ ಪಕ್ಕಾ ಆರ್.ಎಸ್.ಎಸ್ ನವರಿಗೆ ಮಾತ್ರ ಮಂತ್ರಿ ಭಾಗ್ಯ ಎಂಬ ಸುಳಿವು ಸಿಗುತ್ತಿವೆ. ಅಂದರೆ ಅದಿರಿನ ದಂಧೆಯ ಕುಸಿತದೊಂದಿಗೆ ಬಳ್ಳಾರಿಯ ಗ್ಯಾಂಗೂ ಮಣ್ಣು ಪಾಲಾಯಿತೇ ಎಂಬ ಪ್ರಶ್ನೆ ಬರುತ್ತಿದೆ. ಏನಾದರೂ ಆಗಲಿ ಇಂದರಿಂದ ಜನರಿಗೆ ಮಾತ್ರ ಏನೂ ಪ್ರಯೋಜನವಿಲ್ಲವೆಂಬುದು ಸತ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...