Homeಕರ್ನಾಟಕಬಳ್ಳಾರಿ ಅದಿರುಗ್ಯಾಂಗ್ ಮಣ್ಣುಪಾಲು: ಡಿಸಿಎಂ ಆಗುವರೇ ಶ್ರೀರಾಮುಲು?

ಬಳ್ಳಾರಿ ಅದಿರುಗ್ಯಾಂಗ್ ಮಣ್ಣುಪಾಲು: ಡಿಸಿಎಂ ಆಗುವರೇ ಶ್ರೀರಾಮುಲು?

- Advertisement -
- Advertisement -

2008 ಮತ್ತು 2019…. ಈ ನಡುವಿನ ಅವಧಿಯೆಲ್ಲ ಕರ್ನಾಟಕಕ್ಕೆ ಬರವೇ. ಯಾವ ಪಕ್ಷವೂ ಜನರ ನೋವಿಗೆ ಮಿಡಿದೇ ಇಲ್ಲ. ಆದರೆ, ಈಗ ಈ ವರದಿಯ ಉದ್ದೇಶವಿಷ್ಟೇ: 2008ರಲ್ಲಿ ಒಂದು ‘ಅಕ್ರಮ’ ಸರ್ಕಾರವನ್ನು ನಿರ್ಮಿಸಿದ ಗುಂಪೊಂದು, ಈಗ ಇನ್ನೊಂದು ಅಕ್ರಮ ಸರ್ಕಾರ ನಿರ್ಮಾಣವಾಗುವ ವೇಳೆಯಲ್ಲಿ ಎಲ್ಲಿತ್ತು?

ಅಂದು ಲೋಡುಗಟ್ಟಲೇ ಹಣ ಹೂಡಿದವರನ್ನು ಇವತ್ತು ಬಿಜೆಪಿ ಚಿಮ್ಮಿಬಿಟ್ಟಿತೇ? ಅಥವಾ ಇವತ್ತು ಹೂಡಲಾಗದಷ್ಟು ಅಸಹಾಯಕತೆಯಲ್ಲಿ ಇರುವರೇ? ದಿಕ್ಕಾಪಾಲಾಗಿರುವ ಬಳ್ಳಾರಿ ಅದಿರಿನ ಗ್ಯಾಂಗಿಗೆ ಈಗ ಬಿಜೆಪಿಯಲ್ಲಿ ಗೌರವ ಅಷ್ಟಕ್ಕಷ್ಟೇ. ಶ್ರೀಮಂತಿಕೆಯಲ್ಲಿ ತೀರಾ ಪಾತಾಳಕ್ಕೇನೂ ಅವರು ಕುಸಿದಿಲ್ಲವಾದರೂ ರಾಜಕೀಯ ಸೋಲುಗಳಿಂದ ಕಂಗೆಟ್ಟಿದ್ದಾರೆ. ಅದಕ್ಕಿಂತ ಮುಖ್ಯವಾದ ಸಂಗತಿ ಎಂದರೆ, ಈಗ ಕೇಂದ್ರ ಬಿಜೆಪಿಯೇ ಇಂತಹವರನ್ನು ಲೋಡುಗಟ್ಟಲೇ ರೊಕ್ಕ ಕೊಟ್ಟು ಖರೀದಿಸುವ ಇಲ್ಲವೇ ಬೆದರಿಸಿ ಲಪಟಾಯಿಸುವ ಮಟ್ಟವನ್ನು ತಲುಪಿದೆ.

ಹೀಗಾಗಿ, ವಿಶ್ವಾಸಮತದ ಚರ್ಚೆಯಲ್ಲಿ ಶ್ರೀರಾಮುಲು ಮತ್ತು ಸೋಮಶೇಖರರೆಡ್ಡಿ ಇಬ್ಬರೇ ಅಕ್ಕಪಕ್ಕ ಕೂತು ತಮ್ಮ ಪಾಡಿಗೆ ತಾವು ಏನೇನೋ ಮಾತಾಡುತ್ತ ಕೂರಬೇಕಾಯಿತು. 2008ರ ಸಂದರ್ಭವನ್ನು ಒಮ್ಮೆ ಗಮನಿಸಿ: 110 ಸೀಟು ಪಡೆದ ಬಿಜೆಪಿ ಸರಳ ಬಹುಮತದ ಕೊರತೆ ಇದ್ದಾಗಲೂ ಸರ್ಕಾರ ರಚನೆಗೆ ಮುಂದಾಗಿತ್ತು. ಆಗ ಮೋದಿ-ಶಾ ಇನ್ನು ಗುಜರಾತ್ ಲೆವೆಲ್ಲಿನಲ್ಲೇ ಇದ್ದರು.

ಆಗ ರಾಜ್ಯ ಬಿಜೆಪಿ ನಂಬಿದ್ದು ಜನಾರ್ದನರೆಡ್ಡಿ ಮತ್ತು ಶ್ರೀರಾಮುಲು ಎಂಬ ಗಣಿ ಉದ್ಯಮಿಗಳನ್ನು. ಅವರು ಬಹುಮತಕ್ಕೆ ಅಗತ್ಯವಿದ್ದ ಮೂರು ಇರಲಿ ಎಂಟ್ಹತ್ತು ಶಾಸಕರನ್ನೇ ದಂಡಿಯಾಗಿ ಕರೆತಂದು ಒಗೆದು ವಿಶ್ವಾಸಮತ ಗೆಲ್ಲಿಸಿಕೊಂಡಿದ್ದರು. ಅನರ್ಹತೆ ಎಂಬ ಪದಕ್ಕೆ ಅವಕಾಶವನ್ನೇ ನೀಡದಂತೆ, ಅವರಿಂದ ರಾಜಿನಾಮೆ ಕೊಡಿಸಲಾಗಿತ್ತು. ಅವರಿಗೆಲ್ಲ ಸಚಿವಗಿರಿಯ ಜೊತೆಗೆ ಸಾಕಷ್ಟು ಗಣಿ ಮಣ್ಣಿನ ಪಾಪದ ದುಡ್ಡನ್ನು ಕಾಣಿಕೆಯಾಗಿ ನೀಡಲಾಯಿತು. ಮುಂದೆ ಉಪ ಚುನಾವಣೆಯಲ್ಲಿ ಅವರಲ್ಲಿ ಬಹುತೇಕರನ್ನು ಗೆಲ್ಲಿಸುವ ಮೂಲಕ ಬಳ್ಳಾರಿಯ ಗಣಿಗಳ್ಳರು ‘ತಮ್ಮದೇ’ ಸರ್ಕಾರವನ್ನು ಕಾಪಾಡಿಕೊಂಡರು.

ಇಡೀ ಬಳ್ಳಾರಿ ಜಿಲ್ಲೆಯೇ ಆಗ ಅವರ ಸುಪರ್ದಿಗೆ ಒಳಪಟ್ಟಿತ್ತು. ತಮಗೆ ಬೇಕಾದ ಎಸ್‍ಪಿ, ಡಿಸಿ ಮತ್ತು ಅರಣ್ಯಾಧಿಕಾರಿಗಳನ್ನೆಲ್ಲ ಹಾಕಿಸಿಕೊಂಡು ಅಕ್ರಮ ಗಣಿಗಾರಿಕೆಯನ್ನು ಅಧಿಕೃತ ವ್ಯಾಪಾರದ ಮಟ್ಟಕ್ಕೆ ಇಳಿಸಿದ್ದರು. ತಮ್ಮ ಅಕ್ರಮ ಗಣಿಗಳಲ್ಲದೇ ಇತರ ಗಣಿಗಳಿಂದ ಹಫ್ತಾ ವಸೂಲಿಯನ್ನೂ ವ್ಯವಸ್ಥಿತವಾಗಿ ಮಾಡುವ ಮೂಲಕ ಅಪಾರ ಸಂಪತ್ತನ್ನು ಕೊಳ್ಳೆ ಹೊಡೆದರು. ರಾಷ್ಟ್ರೀಯ ನಾಯಕಿ ಸುಷ್ಮಾ ಸ್ವರಾಜ್ ಅವರನ್ನು ‘ಮಂಗಳ ಗೌರಿ’ ನೆಪದಲ್ಲಿ ಉಡಿ ತುಂಬಿಸುವ ಮೂಲಕ ಒಲಿಸಿಕೊಂಡಿದ್ದ ಈ ಬಳ್ಳಾರಿ ಗ್ಯಾಂಗ್ ಒಂದು ಹಂತದಲ್ಲಿ ಯಡಿಯೂರಪ್ಪನವರ ವಿರುದ್ಧವೇ ತಿರುಗಿಬಿದ್ದು ಸರ್ಕಾರ ಬೀಳಿಸುವ ಧಮಕಿ ಹಾಕಿತ್ತು.

ವಿಧಾನಸಭಾ ಅಧಿವೇಶನದಲ್ಲೇ ಜನಾರ್ದನರೆಡ್ಡಿ ಸಿದ್ದರಾಮಯ್ಯ ಅವರಿಗೆ ‘ಬಳ್ಳಾರಿಗೆ ಬನ್ನಿ, ನಿಮ್ಮನ್ನೆಲ್ಲ ನೋಡಿಕೊಳ್ತೇವೆ’ ಎನ್ನುವ ಮಟ್ಟಕ್ಕೆ ಹೋದರೆ, ರೆಡ್ಡಿಯ ಚೇಲಾ ಶಾಸಕ ಸುರೇಶ ಬಾಬು ತೋಳೇರಿಸಿ ವಿಪಕ್ಷದವರ ಮೇಲೆ ದಾದಾಗಿರಿ ನಡೆಸಲೂ ಯತ್ನಿಸಿದ್ದರು.
ಸಂತೋಷ್ ಹೆಗ್ಡೆ ವರದಿ ನಂತರ ಕೋರ್ಟುಗಳು ಕೂಡ ತೀಕ್ಷ್ಣ ಆದೇಶಗಳನ್ನು ಕೊಡತೊಡಗಿದವು. ಇತ್ತ ಭೂ ಹಗರಣದಲ್ಲಿ ಸಿಕ್ಕ ಯಡಿಯೂರಪ್ಪ ಜೈಲು ಪಾಲಾದರು. ಅಲ್ಲಿಗೆ ಬಳ್ಳಾರಿ ಗ್ಯಾಂಗಿನ ಒಂದು ಹಂತದ ಆಟ ಮುಗಿದಿತ್ತು. ಮುಂದೆ ಯಡಿಯೂರಪ್ಪ ಒಂದು ಪಾರ್ಟಿ ಕಟ್ಟಿದರೆ, ಬಳ್ಳಾರಿ ಗ್ಯಾಂಗ್ ಇನ್ನೊಂದು ಪಾರ್ಟಿ ಕಟ್ಟಿತು. ಎರಡೂ ಮಕಾಡೆ ಮಲಗಿದವು.

ಜೈಲಲ್ಲಿ ವರ್ಷಗಳನ್ನು ಸವೆಸಿದ ರೆಡ್ಡಿಯನ್ನು ರಾಷ್ಟ್ರೀಯ ಬಿಜೆಪಿ ದೂರವಿಡತೊಡಗಿತು. ಕೇವಲ 10 ವರ್ಷಗಳಲ್ಲಿ ಎಂತಹ ಬದಲಾವಣೆ? ಅಂದು ಸರ್ಕಾರವನ್ನೇ ರಚಿಸಿದ್ದ ಬಳ್ಳಾರಿ ಗ್ಯಾಂಗ್ ಬಿಜೆಪಿ ಪಾಲಿಗೆ ಹೀರೋ ಆಗಿತ್ತು, ಈಗದು ಝೀರೋ, ಬಿಗ್ ಝೀರೋ!

ಫಾರೆಸ್ಟ್ ಅಧಿಕಾರಿಗೆ ಸಜೆ!
ಆದರೆ ರೆಡ್ಡಿಗಳ ಆಟಾಟೋಪ ಮತ್ತೆ ಮುಂದುವರೆಯಲಿದೆಯೇ ಎಂಬ ಪ್ರಶ್ನೆ ಕಾಡಲು ಕಾರಣವಾಗಿದ್ದು, ಮೊಟ್ಟ ಮೊದಲ ಬಾರಿಗೆ ಜನಾರ್ದನರೆಡ್ಡಿಯ ಅಕ್ರಮ ಗಣಿಗಾರಿಕೆಯ ಮೇಲೆ ಮುಗಿಬಿದ್ದಿದ್ದ ಫಾರೆಸ್ಟ್ ಆಫೀಸರ್ ಒಬ್ಬರನ್ನು ಕೇಂದ್ರ ಸರ್ಕಾರ ಈ ವಾರ ಕಾಯಂ ನಿವೃತ್ತಿಗೊಳಿಸಿದ ವಿಷಯ. ಕಲ್ಲೋಳ್ ಬಿಸ್ವಾಸ್ ಎಂಬ ಈ ಅಧಿಕಾರಿಯನ್ನು ಕಡ್ಡಾಯ ನಿವೃತ್ತಿಗೊಳಿಸಿದುದರ ಹಿಂದೆ ಯಡಿಯೂರಪ್ಪ ಪಾತ್ರವಿದೆಯಾ ಅಥವಾ ಜಗನ್‍ರೆಡ್ಡಿಯ ಪಾತ್ರವಿದೆಯಾ ಎಂಬುದು ಸದ್ಯಕ್ಕೆ ಅಸ್ಪಷ್ಟ…..

ಹಳೆಯ ಸೇಡನ್ನು ತೀರಿಸಿಕೊಂಡಿರುವುದರ ಹೊರತಾಗಿ, ಇದರಿಂದ ರೆಡ್ಡಿ ರಾಮುಲು ಬಳಗಕ್ಕಂತೂ ವಿಶೇಷ ಅನುಕೂಲಗಳೇನೂ ದಕ್ಕುವಂತೆ ಕಾಣುತ್ತಿಲ್ಲ. ಒಟ್ಟಿನಲ್ಲಿ ಕೋಟೆ ಕಟ್ಟಿ ಮೆರೆದ ಗಣಿಗಳ್ಳರು ಈಗ ಬಿಜೆಪಿಗೇ ಬೇಡವಾಗಿದ್ದಾರೆ! ಆದರು ಶ್ರೀರಾಮುಲು ಡಿಸಿಎಂ ಕನಸು ಬಿಟ್ಟಿಲ್ಲ. ಜಾತಿಬಲ ಮಾತ್ರವೇ ಅವರಿಗೆ ಈಗ ಆಶಾಕಿರಣವಾಗಿದೆ. ದೆಹಲಿಯಲ್ಲಿ ಅಮಿತ್ ಶಾ ಸಂಪುಟ ವಿಸ್ತರಣೆಗೆ ಅವಕಾಶ ಕೊಡುದಿರುವುದು ನೋಡಿದರೆ ಪಕ್ಕಾ ಆರ್.ಎಸ್.ಎಸ್ ನವರಿಗೆ ಮಾತ್ರ ಮಂತ್ರಿ ಭಾಗ್ಯ ಎಂಬ ಸುಳಿವು ಸಿಗುತ್ತಿವೆ. ಅಂದರೆ ಅದಿರಿನ ದಂಧೆಯ ಕುಸಿತದೊಂದಿಗೆ ಬಳ್ಳಾರಿಯ ಗ್ಯಾಂಗೂ ಮಣ್ಣು ಪಾಲಾಯಿತೇ ಎಂಬ ಪ್ರಶ್ನೆ ಬರುತ್ತಿದೆ. ಏನಾದರೂ ಆಗಲಿ ಇಂದರಿಂದ ಜನರಿಗೆ ಮಾತ್ರ ಏನೂ ಪ್ರಯೋಜನವಿಲ್ಲವೆಂಬುದು ಸತ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...