Homeಕರ್ನಾಟಕಬಳ್ಳಾರಿ ಅದಿರುಗ್ಯಾಂಗ್ ಮಣ್ಣುಪಾಲು: ಡಿಸಿಎಂ ಆಗುವರೇ ಶ್ರೀರಾಮುಲು?

ಬಳ್ಳಾರಿ ಅದಿರುಗ್ಯಾಂಗ್ ಮಣ್ಣುಪಾಲು: ಡಿಸಿಎಂ ಆಗುವರೇ ಶ್ರೀರಾಮುಲು?

- Advertisement -
- Advertisement -

2008 ಮತ್ತು 2019…. ಈ ನಡುವಿನ ಅವಧಿಯೆಲ್ಲ ಕರ್ನಾಟಕಕ್ಕೆ ಬರವೇ. ಯಾವ ಪಕ್ಷವೂ ಜನರ ನೋವಿಗೆ ಮಿಡಿದೇ ಇಲ್ಲ. ಆದರೆ, ಈಗ ಈ ವರದಿಯ ಉದ್ದೇಶವಿಷ್ಟೇ: 2008ರಲ್ಲಿ ಒಂದು ‘ಅಕ್ರಮ’ ಸರ್ಕಾರವನ್ನು ನಿರ್ಮಿಸಿದ ಗುಂಪೊಂದು, ಈಗ ಇನ್ನೊಂದು ಅಕ್ರಮ ಸರ್ಕಾರ ನಿರ್ಮಾಣವಾಗುವ ವೇಳೆಯಲ್ಲಿ ಎಲ್ಲಿತ್ತು?

ಅಂದು ಲೋಡುಗಟ್ಟಲೇ ಹಣ ಹೂಡಿದವರನ್ನು ಇವತ್ತು ಬಿಜೆಪಿ ಚಿಮ್ಮಿಬಿಟ್ಟಿತೇ? ಅಥವಾ ಇವತ್ತು ಹೂಡಲಾಗದಷ್ಟು ಅಸಹಾಯಕತೆಯಲ್ಲಿ ಇರುವರೇ? ದಿಕ್ಕಾಪಾಲಾಗಿರುವ ಬಳ್ಳಾರಿ ಅದಿರಿನ ಗ್ಯಾಂಗಿಗೆ ಈಗ ಬಿಜೆಪಿಯಲ್ಲಿ ಗೌರವ ಅಷ್ಟಕ್ಕಷ್ಟೇ. ಶ್ರೀಮಂತಿಕೆಯಲ್ಲಿ ತೀರಾ ಪಾತಾಳಕ್ಕೇನೂ ಅವರು ಕುಸಿದಿಲ್ಲವಾದರೂ ರಾಜಕೀಯ ಸೋಲುಗಳಿಂದ ಕಂಗೆಟ್ಟಿದ್ದಾರೆ. ಅದಕ್ಕಿಂತ ಮುಖ್ಯವಾದ ಸಂಗತಿ ಎಂದರೆ, ಈಗ ಕೇಂದ್ರ ಬಿಜೆಪಿಯೇ ಇಂತಹವರನ್ನು ಲೋಡುಗಟ್ಟಲೇ ರೊಕ್ಕ ಕೊಟ್ಟು ಖರೀದಿಸುವ ಇಲ್ಲವೇ ಬೆದರಿಸಿ ಲಪಟಾಯಿಸುವ ಮಟ್ಟವನ್ನು ತಲುಪಿದೆ.

ಹೀಗಾಗಿ, ವಿಶ್ವಾಸಮತದ ಚರ್ಚೆಯಲ್ಲಿ ಶ್ರೀರಾಮುಲು ಮತ್ತು ಸೋಮಶೇಖರರೆಡ್ಡಿ ಇಬ್ಬರೇ ಅಕ್ಕಪಕ್ಕ ಕೂತು ತಮ್ಮ ಪಾಡಿಗೆ ತಾವು ಏನೇನೋ ಮಾತಾಡುತ್ತ ಕೂರಬೇಕಾಯಿತು. 2008ರ ಸಂದರ್ಭವನ್ನು ಒಮ್ಮೆ ಗಮನಿಸಿ: 110 ಸೀಟು ಪಡೆದ ಬಿಜೆಪಿ ಸರಳ ಬಹುಮತದ ಕೊರತೆ ಇದ್ದಾಗಲೂ ಸರ್ಕಾರ ರಚನೆಗೆ ಮುಂದಾಗಿತ್ತು. ಆಗ ಮೋದಿ-ಶಾ ಇನ್ನು ಗುಜರಾತ್ ಲೆವೆಲ್ಲಿನಲ್ಲೇ ಇದ್ದರು.

ಆಗ ರಾಜ್ಯ ಬಿಜೆಪಿ ನಂಬಿದ್ದು ಜನಾರ್ದನರೆಡ್ಡಿ ಮತ್ತು ಶ್ರೀರಾಮುಲು ಎಂಬ ಗಣಿ ಉದ್ಯಮಿಗಳನ್ನು. ಅವರು ಬಹುಮತಕ್ಕೆ ಅಗತ್ಯವಿದ್ದ ಮೂರು ಇರಲಿ ಎಂಟ್ಹತ್ತು ಶಾಸಕರನ್ನೇ ದಂಡಿಯಾಗಿ ಕರೆತಂದು ಒಗೆದು ವಿಶ್ವಾಸಮತ ಗೆಲ್ಲಿಸಿಕೊಂಡಿದ್ದರು. ಅನರ್ಹತೆ ಎಂಬ ಪದಕ್ಕೆ ಅವಕಾಶವನ್ನೇ ನೀಡದಂತೆ, ಅವರಿಂದ ರಾಜಿನಾಮೆ ಕೊಡಿಸಲಾಗಿತ್ತು. ಅವರಿಗೆಲ್ಲ ಸಚಿವಗಿರಿಯ ಜೊತೆಗೆ ಸಾಕಷ್ಟು ಗಣಿ ಮಣ್ಣಿನ ಪಾಪದ ದುಡ್ಡನ್ನು ಕಾಣಿಕೆಯಾಗಿ ನೀಡಲಾಯಿತು. ಮುಂದೆ ಉಪ ಚುನಾವಣೆಯಲ್ಲಿ ಅವರಲ್ಲಿ ಬಹುತೇಕರನ್ನು ಗೆಲ್ಲಿಸುವ ಮೂಲಕ ಬಳ್ಳಾರಿಯ ಗಣಿಗಳ್ಳರು ‘ತಮ್ಮದೇ’ ಸರ್ಕಾರವನ್ನು ಕಾಪಾಡಿಕೊಂಡರು.

ಇಡೀ ಬಳ್ಳಾರಿ ಜಿಲ್ಲೆಯೇ ಆಗ ಅವರ ಸುಪರ್ದಿಗೆ ಒಳಪಟ್ಟಿತ್ತು. ತಮಗೆ ಬೇಕಾದ ಎಸ್‍ಪಿ, ಡಿಸಿ ಮತ್ತು ಅರಣ್ಯಾಧಿಕಾರಿಗಳನ್ನೆಲ್ಲ ಹಾಕಿಸಿಕೊಂಡು ಅಕ್ರಮ ಗಣಿಗಾರಿಕೆಯನ್ನು ಅಧಿಕೃತ ವ್ಯಾಪಾರದ ಮಟ್ಟಕ್ಕೆ ಇಳಿಸಿದ್ದರು. ತಮ್ಮ ಅಕ್ರಮ ಗಣಿಗಳಲ್ಲದೇ ಇತರ ಗಣಿಗಳಿಂದ ಹಫ್ತಾ ವಸೂಲಿಯನ್ನೂ ವ್ಯವಸ್ಥಿತವಾಗಿ ಮಾಡುವ ಮೂಲಕ ಅಪಾರ ಸಂಪತ್ತನ್ನು ಕೊಳ್ಳೆ ಹೊಡೆದರು. ರಾಷ್ಟ್ರೀಯ ನಾಯಕಿ ಸುಷ್ಮಾ ಸ್ವರಾಜ್ ಅವರನ್ನು ‘ಮಂಗಳ ಗೌರಿ’ ನೆಪದಲ್ಲಿ ಉಡಿ ತುಂಬಿಸುವ ಮೂಲಕ ಒಲಿಸಿಕೊಂಡಿದ್ದ ಈ ಬಳ್ಳಾರಿ ಗ್ಯಾಂಗ್ ಒಂದು ಹಂತದಲ್ಲಿ ಯಡಿಯೂರಪ್ಪನವರ ವಿರುದ್ಧವೇ ತಿರುಗಿಬಿದ್ದು ಸರ್ಕಾರ ಬೀಳಿಸುವ ಧಮಕಿ ಹಾಕಿತ್ತು.

ವಿಧಾನಸಭಾ ಅಧಿವೇಶನದಲ್ಲೇ ಜನಾರ್ದನರೆಡ್ಡಿ ಸಿದ್ದರಾಮಯ್ಯ ಅವರಿಗೆ ‘ಬಳ್ಳಾರಿಗೆ ಬನ್ನಿ, ನಿಮ್ಮನ್ನೆಲ್ಲ ನೋಡಿಕೊಳ್ತೇವೆ’ ಎನ್ನುವ ಮಟ್ಟಕ್ಕೆ ಹೋದರೆ, ರೆಡ್ಡಿಯ ಚೇಲಾ ಶಾಸಕ ಸುರೇಶ ಬಾಬು ತೋಳೇರಿಸಿ ವಿಪಕ್ಷದವರ ಮೇಲೆ ದಾದಾಗಿರಿ ನಡೆಸಲೂ ಯತ್ನಿಸಿದ್ದರು.
ಸಂತೋಷ್ ಹೆಗ್ಡೆ ವರದಿ ನಂತರ ಕೋರ್ಟುಗಳು ಕೂಡ ತೀಕ್ಷ್ಣ ಆದೇಶಗಳನ್ನು ಕೊಡತೊಡಗಿದವು. ಇತ್ತ ಭೂ ಹಗರಣದಲ್ಲಿ ಸಿಕ್ಕ ಯಡಿಯೂರಪ್ಪ ಜೈಲು ಪಾಲಾದರು. ಅಲ್ಲಿಗೆ ಬಳ್ಳಾರಿ ಗ್ಯಾಂಗಿನ ಒಂದು ಹಂತದ ಆಟ ಮುಗಿದಿತ್ತು. ಮುಂದೆ ಯಡಿಯೂರಪ್ಪ ಒಂದು ಪಾರ್ಟಿ ಕಟ್ಟಿದರೆ, ಬಳ್ಳಾರಿ ಗ್ಯಾಂಗ್ ಇನ್ನೊಂದು ಪಾರ್ಟಿ ಕಟ್ಟಿತು. ಎರಡೂ ಮಕಾಡೆ ಮಲಗಿದವು.

ಜೈಲಲ್ಲಿ ವರ್ಷಗಳನ್ನು ಸವೆಸಿದ ರೆಡ್ಡಿಯನ್ನು ರಾಷ್ಟ್ರೀಯ ಬಿಜೆಪಿ ದೂರವಿಡತೊಡಗಿತು. ಕೇವಲ 10 ವರ್ಷಗಳಲ್ಲಿ ಎಂತಹ ಬದಲಾವಣೆ? ಅಂದು ಸರ್ಕಾರವನ್ನೇ ರಚಿಸಿದ್ದ ಬಳ್ಳಾರಿ ಗ್ಯಾಂಗ್ ಬಿಜೆಪಿ ಪಾಲಿಗೆ ಹೀರೋ ಆಗಿತ್ತು, ಈಗದು ಝೀರೋ, ಬಿಗ್ ಝೀರೋ!

ಫಾರೆಸ್ಟ್ ಅಧಿಕಾರಿಗೆ ಸಜೆ!
ಆದರೆ ರೆಡ್ಡಿಗಳ ಆಟಾಟೋಪ ಮತ್ತೆ ಮುಂದುವರೆಯಲಿದೆಯೇ ಎಂಬ ಪ್ರಶ್ನೆ ಕಾಡಲು ಕಾರಣವಾಗಿದ್ದು, ಮೊಟ್ಟ ಮೊದಲ ಬಾರಿಗೆ ಜನಾರ್ದನರೆಡ್ಡಿಯ ಅಕ್ರಮ ಗಣಿಗಾರಿಕೆಯ ಮೇಲೆ ಮುಗಿಬಿದ್ದಿದ್ದ ಫಾರೆಸ್ಟ್ ಆಫೀಸರ್ ಒಬ್ಬರನ್ನು ಕೇಂದ್ರ ಸರ್ಕಾರ ಈ ವಾರ ಕಾಯಂ ನಿವೃತ್ತಿಗೊಳಿಸಿದ ವಿಷಯ. ಕಲ್ಲೋಳ್ ಬಿಸ್ವಾಸ್ ಎಂಬ ಈ ಅಧಿಕಾರಿಯನ್ನು ಕಡ್ಡಾಯ ನಿವೃತ್ತಿಗೊಳಿಸಿದುದರ ಹಿಂದೆ ಯಡಿಯೂರಪ್ಪ ಪಾತ್ರವಿದೆಯಾ ಅಥವಾ ಜಗನ್‍ರೆಡ್ಡಿಯ ಪಾತ್ರವಿದೆಯಾ ಎಂಬುದು ಸದ್ಯಕ್ಕೆ ಅಸ್ಪಷ್ಟ…..

ಹಳೆಯ ಸೇಡನ್ನು ತೀರಿಸಿಕೊಂಡಿರುವುದರ ಹೊರತಾಗಿ, ಇದರಿಂದ ರೆಡ್ಡಿ ರಾಮುಲು ಬಳಗಕ್ಕಂತೂ ವಿಶೇಷ ಅನುಕೂಲಗಳೇನೂ ದಕ್ಕುವಂತೆ ಕಾಣುತ್ತಿಲ್ಲ. ಒಟ್ಟಿನಲ್ಲಿ ಕೋಟೆ ಕಟ್ಟಿ ಮೆರೆದ ಗಣಿಗಳ್ಳರು ಈಗ ಬಿಜೆಪಿಗೇ ಬೇಡವಾಗಿದ್ದಾರೆ! ಆದರು ಶ್ರೀರಾಮುಲು ಡಿಸಿಎಂ ಕನಸು ಬಿಟ್ಟಿಲ್ಲ. ಜಾತಿಬಲ ಮಾತ್ರವೇ ಅವರಿಗೆ ಈಗ ಆಶಾಕಿರಣವಾಗಿದೆ. ದೆಹಲಿಯಲ್ಲಿ ಅಮಿತ್ ಶಾ ಸಂಪುಟ ವಿಸ್ತರಣೆಗೆ ಅವಕಾಶ ಕೊಡುದಿರುವುದು ನೋಡಿದರೆ ಪಕ್ಕಾ ಆರ್.ಎಸ್.ಎಸ್ ನವರಿಗೆ ಮಾತ್ರ ಮಂತ್ರಿ ಭಾಗ್ಯ ಎಂಬ ಸುಳಿವು ಸಿಗುತ್ತಿವೆ. ಅಂದರೆ ಅದಿರಿನ ದಂಧೆಯ ಕುಸಿತದೊಂದಿಗೆ ಬಳ್ಳಾರಿಯ ಗ್ಯಾಂಗೂ ಮಣ್ಣು ಪಾಲಾಯಿತೇ ಎಂಬ ಪ್ರಶ್ನೆ ಬರುತ್ತಿದೆ. ಏನಾದರೂ ಆಗಲಿ ಇಂದರಿಂದ ಜನರಿಗೆ ಮಾತ್ರ ಏನೂ ಪ್ರಯೋಜನವಿಲ್ಲವೆಂಬುದು ಸತ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...