Homeಕರ್ನಾಟಕಬಾಬಾ ಬುಡಾನ್ | ರಾಜ್ಯ ಸರಕಾರ ಸುಪ್ರೀಂ ಕೋರ್ಟ್‌ಗೆ ತನ್ನ ನಿಲುವು ತಿಳಿಸಲಿ: ಸೈಯದ್ ಫಕ್ರುದ್ದೀನ್...

ಬಾಬಾ ಬುಡಾನ್ | ರಾಜ್ಯ ಸರಕಾರ ಸುಪ್ರೀಂ ಕೋರ್ಟ್‌ಗೆ ತನ್ನ ನಿಲುವು ತಿಳಿಸಲಿ: ಸೈಯದ್ ಫಕ್ರುದ್ದೀನ್ ಶಾ ಖಾದ್ರಿ

- Advertisement -
- Advertisement -

ಚಿಕ್ಕಮಗಳೂರು: ಶ್ರೀ ಗುರು ದತ್ತಾತ್ರೇಯ ಬಾಬಾ ಬುಡಾನ್ ಸ್ವಾಮಿ ದರ್ಗಾದ ವಿಚಾರದಲ್ಲಿ ನ್ಯಾಯಬದ್ಧವಾದ ನಿರ್ಧಾರ ತೆಗೆದುಕೊಳ್ಳುವಲ್ಲಿ ಬಿಜೆಪಿ ಸೇರಿದಂತೆ ಹಿಂದಿನ ಸರಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ. ದರ್ಗಾದ ವಿಚಾರಗಳ ಬಗ್ಗೆ ರಾಜ್ಯ ಸರಕಾರ ತನ್ನ ನಿಲುವು ತಿಳಿಸಬೇಕೆಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿರುವ ಹಿನ್ನೆಲೆಯಲ್ಲಿ ಸರಕಾರ ಪೂರಕ ದಾಖಲೆಗಳನ್ನು ಪರಿಶೀಲಿಸಿ ನ್ಯಾಯಾಲಯಕ್ಕೆ ತನ್ನ ನಿಲುವು ತಿಳಿಸಬೇಕು ಎಂದು ಸೈಯದ್ ಬುಡಾನ್ ಶಾ ಖಾದ್ರಿ ವಂಶಸ್ಥರ ಸಂಘದ ಪ್ರಧಾನ ಕಾರ್ಯದರ್ಶಿ ಸೈಯದ್ ಫಕ್ರುದ್ದೀನ್ ಶಾ ಖಾದ್ರಿ (ಅಜ್ಮತ್ ಪಾಷ) ಒತ್ತಾಯಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಗುರು ದತ್ತಾತ್ರೇಯ ಬಾಬಾ ಬುಡಾನ್ ಸ್ವಾಮಿ ದರ್ಗಾದ ವಿಚಾರ ಮುಂದಿಟ್ಟುಕೊಂಡು ಬಿಜೆಪಿ ರಾಜಕೀಯ ಲಾಭ ಪಡೆಯುವ ಕೆಲಸ ಮಾಡುತ್ತಿದ್ದರೆ, ಸಂಘಪರಿವಾರ ವಿವಾದ ಸೃಷ್ಟಿಸಿ ಕೋಮು ಸಾಮರಸ್ಯ ಹದಗೆಡಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದೆ. ಇದನ್ನು ಕೂಡಲೇ ನಿಲ್ಲಿಸಬೇಕೆಂದು ಹೇಳಿದರು.

ಸಂಘಪರಿವಾರದವರು ಗುಹೆಯ ಒಳ ಭಾಗದಲ್ಲಿರುವ ಸೂಫಿ ಪಂಥದ ಗಾದಿ(ಪೀಠ), ಛಿಲ್ಲಾ(ಧ್ಯಾನ ಸ್ಥಳ), ಚಿರಾಗ್(ನಂದಾದೀಪ) ಮತ್ತು ಖಡಾವೆ(ಪಾದುಕೆ)ಗಳ ವಿಚಾರ ಮುಂದಿಟ್ಟುಕೊಂಡು ದೇಶದ ಮುಜರಾಯಿ ಇಲಾಖೆ ಅಧೀನದಲ್ಲಿರುವ ಮುಹಮ್ಮದನ್ ಸಂಸ್ಥೆಯ ಧಾರ್ಮಿಕ ಆಚರಣೆಗಳನ್ನು ಸಂಪೂರ್ಣವಾಗಿ ಬದಲಾಯಿಸುವ ಹುನ್ನಾರ ನಡೆಸುತ್ತಿದ್ದಾರೆ. ಈ ಸಂಸ್ಥೆಯ ವಿಚಾರದಲ್ಲಿ ಕೆಲ ಪಕ್ಷಗಳು ನಾವು ಅಲ್ಪಸಂಖ್ಯಾತರ ಪರ ಇದ್ದೇವೆ ಎನ್ನುತ್ತಿದ್ದರೂ ಅಲ್ಪಸಂಖ್ಯಾತರಿಗೆ ನ್ಯಾಯ ಒದಗಿಸುವಲ್ಲಿ ವಿಫಲವಾಗಿವೆ. ಬಿಜೆಪಿ ಪಕ್ಷ ಈ ವಿಚಾರದಲ್ಲಿ ಹಿಂದೂಗಳ ಪರ ಎಂಬಂತೆ ಬಿಂಬಿಸಿಕೊಂಡು ರಾಜಕೀಯ ಲಾಭ ಪಡೆಯುವ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿದರು.

ಮುಹಮ್ಮದನ್ ಸಂಸ್ಥೆಯಲ್ಲಿನ ಸೂಫಿ ಪಂಥದ ಆಚರಣೆಗಳನ್ನು ತಡೆಯುವ ಹುನ್ನಾರಗಳು ಇತ್ತೀಚೆಗೆ ನಡೆಯುತ್ತಿವೆ. ಇದರ ವಿರುದ್ಧ ಸರಕಾರ ಮತ್ತು ಸಂಬಂಧಿಸಿದ ಇಲಾಖಾಧಿಕಾರಿಗಳು ಮೇಲಿನ ದಾಖಲೆಗಳನ್ನು ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ನಮಗೆ ನ್ಯಾಯ ಒದಗಿಸಬೇಕು. ದತ್ತಾತ್ರೇಯ ಬಾಬಾ ಬುಡಾನ್ ಸ್ವಾಮಿ ದರ್ಗಾದಲ್ಲಿನ ಪೂಜೆ ಹಕ್ಕಿನ ಕುರಿತು 8 ವಾರಗಳ ಒಳಗೆ ತನ್ನ ನಿಲುವು ತಿಳಿಸಬೇಕೆಂದು ಸುಪ್ರೀಂ ಕೋರ್ಟ್ ರಾಜ್ಯ ಸರಕಾರಕ್ಕೆ ಗಡುವು ನೀಡಿದ್ದು, ಸರಕಾರ ಮೇಲಿನ ಸರಕಾರಿ ಆದೇಶ, ಮಹಾರಾಜರ ಕಾಲದ ಸರಕಾರಿ ಆದೇಶ ಹಾಗೂ ಗೆಜೆಟ್ ದಾಖಲೆಗಳನ್ನು ಪರಿಶೀಲಿಸಬೇಕು ಹಾಗೂ ನಮ್ಮೊಂದಿಗೆ ಚರ್ಚಿಸಿ ನ್ಯಾಯಾಲಯಕ್ಕೆ ಸೂಕ್ತ ನಿಲುವು ತಿಳಿಸಿ, ನ್ಯಾಯ ಒದಗಿಸಬೇಕು ಎಂದು ಶಾಖಾದ್ರಿ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಸೈಯದ್ ನಿಝಾಮುದ್ದೀನ್ ಖಾದ್ರಿ, ಸಲೀಂ ಮಲಿಕ್, ಅರ್ಬಾಝ್, ತನ್ವೀರ್ ಅಹ್ಮದ್, ಮುಹಮ್ಮದ್ ಅತೀಕ್ ಉಪಸ್ಥಿತರಿದ್ದರು.

……………………………………………………….

ತಾಲ್ಲೂಕಿನ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ಕಳೆದ ವರ್ಷ ಜನವರಿಯಲ್ಲಿ ಬಾಬಾ ಬುಡನ್ ವಂಶಸ್ಥ ಸಯ್ಯದ್ ಫಕ್ರುದ್ದೀನ್ ಷಾ ಖಾದ್ರಿ ಅವರು ಭೇಟಿ ನೀಡಿದ ಸಂದರ್ಭದಲ್ಲಿ  ಕಲಿಮ ತಯ್ಯಿಬಿನ ಜಪ ನಡಿಸಿ, ಪ್ರತಿವರ್ಷದಂತೆ ಹರಕೆಯ ರೀತಿಯಲ್ಲಿ ಝಿಕ್ರ್ ಎ ಕಲಿಮ ಎ ಫಾತೀಹ ನಡೆಸಿದ್ದರು. ಈ ವೇಳೆ ತಮ್ಮ ಪೂರ್ವಜರ ಇತಿಹಾಸ ಹಂಚಿಕೊಂಡ ಅವರು, ದರ್ಗಾದ ವ್ಯವಸ್ಥಾಪನಾ ಸಮಿತಿ ರಚನೆ ಆದ ಬಳಿಕ ಅಲ್ಲಿರುವ ಪವಿತ್ರ ಕಲಿಮ ತಯ್ಯಿಬವನ್ನು ಮರೆಮಾಚಿಸಿ ಆ ಶ್ಲೋಕದ ಮೇಲೆ ಮುಜಾವರ್ ಹಾಗೂ ಅರ್ಚಕರಿಗೆ ಮಾತ್ರ ಅವಕಾಶವೆಂದು ಬರೆದು ಶ್ಲೋಕವನ್ನು ರಟ್ಟಿನ ತುಂಡಿನಿಂದ ಮರೆಮಾಚಲಾಗಿತ್ತು.

ಐತಿಹಾಸಿಕ ಶ್ಲೋಕದ ಪ್ರಕಾರ ದರ್ಗಾಕ್ಕೆ ಸಂಬಂಧಪಟ್ಟ ಗುರುಗಳಾದ ಸಜ್ಜಾದ್ ಎ ನಶೀನ್ ಹಾಗೂ ಶಾ ಖಾದ್ರಿ ಮತ್ತು ನಂತರ ಮುಜಾವರ್ ಅವರಿಗೆ ಪ್ರವೇಶಕ್ಕೆ ಅವಕಾಶವಿತ್ತು. ಈಚೆಗೆ ಹಲವಾರು ವಿರೋಧದ ನಡುವೆ ನೇಮಕವಾದ ಅರ್ಚಕರು ಪವಿತ್ರವಾದ ಕಲಿಮ ತಯ್ಯಿಬವನ್ನೂ ಒಪ್ಪಿ ಒಳಗಡೆ ಪ್ರವೇಶ ಮಾಡಿದ್ದಾರೆಂದು ನಾವು ನಂಬಿದ್ದೇವೆ ಎಂದಿದ್ದರು.

ದರ್ಗಾದ ಸಜ್ಜಾದ್ ಎ ನಶೀನ್(ಪೀಠಾಧಿಪತಿ) ಎಂದರೇನು? ಶಾ ಖಾದ್ರಿ (ಪೀಠಾಧೀಶರು) ಎಂದರೇನು? ಎಂಬುದನ್ನು ಮುಜರಾಯಿ ಇಲಾಖೆ ಗೆಜೆಟ್‌ನಲ್ಲಿ ಸ್ಪಷ್ಟವಾಗಿ ವಿವರಿಸಿದೆ. ಅದರಂತೆ ಸಜ್ಜಾದ್ ಎ ನಶೀನ್ ಹಜರತ್ ಸಯ್ಯದ್ ಗೌಸ್ ಮೊಹಿಯುದ್ದೀನ್ ಶಾಖಾದ್ರಿ ಅವರಿಗೂ ಇಲಾಖೆ ಗೌರವ ನೀಡಬೇಕು. ಜಿಕರ್ ಫಾತೀಹಾ ನಡೆಸಲು ಅವಕಾಶ ಮಾಡಿ ಕೊಟ್ಟ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...

ಕದನ ವಿರಾಮ | ಟ್ರಂಪ್ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ; ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದ ನೆತನ್ಯಾಹು!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಎರಡು ವಾರಗಳ ಕದನ ವಿರಾಮಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಕದನ ವಿರಾಮವು ಕೇವಲ ಇರಾನ್‌ಗೆ ಮಾತ್ರ ಸೀಮಿತವಾಗಿದ್ದು, ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ತಕ್ಷಣವೇ ಹಾರ್ಮುಝ್...

ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ : ಇರಾನ್ ಭರವಸೆ

ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮದ ಹಿನ್ನೆಲೆ, ಹಾರ್ಮುಝ್ ಜಲಸಂಧಿ  ಮೂಲಕ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡುವುದಾಗಿ ಇರಾನ್ ಭರವಸೆ ನೀಡಿದೆ. ವಿಶ್ವದ ಒಟ್ಟು ಪೆಟ್ರೋಲಿಯಂ ರಫ್ತಿನ...

ಇರಾನ್ ಮೇಲಿನ ದಾಳಿ ಸ್ಥಗಿತ : ಎರಡು ವಾರಗಳ ಕದನ ವಿರಾಮ ಘೋಷಿಸಿದ ಟ್ರಂಪ್

ಇರಾನ್ ಮೇಲೆ ನಡೆಸುತ್ತಿರುವ ಬಾಂಬ್ ದಾಳಿ ಹಾಗೂ ಮಿಲಿಟರಿ ಕಾರ್ಯಾಚರಣೆಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಭಾರತೀಯ ಕಾಲಮಾನ ಏ.8) ಹೇಳಿದ್ದಾರೆ. ಪಾಕಿಸ್ತಾನ...

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...