Homeಕರ್ನಾಟಕಬಾಬಾ ಬುಡಾನ್ | ರಾಜ್ಯ ಸರಕಾರ ಸುಪ್ರೀಂ ಕೋರ್ಟ್‌ಗೆ ತನ್ನ ನಿಲುವು ತಿಳಿಸಲಿ: ಸೈಯದ್ ಫಕ್ರುದ್ದೀನ್...

ಬಾಬಾ ಬುಡಾನ್ | ರಾಜ್ಯ ಸರಕಾರ ಸುಪ್ರೀಂ ಕೋರ್ಟ್‌ಗೆ ತನ್ನ ನಿಲುವು ತಿಳಿಸಲಿ: ಸೈಯದ್ ಫಕ್ರುದ್ದೀನ್ ಶಾ ಖಾದ್ರಿ

- Advertisement -
- Advertisement -

ಚಿಕ್ಕಮಗಳೂರು: ಶ್ರೀ ಗುರು ದತ್ತಾತ್ರೇಯ ಬಾಬಾ ಬುಡಾನ್ ಸ್ವಾಮಿ ದರ್ಗಾದ ವಿಚಾರದಲ್ಲಿ ನ್ಯಾಯಬದ್ಧವಾದ ನಿರ್ಧಾರ ತೆಗೆದುಕೊಳ್ಳುವಲ್ಲಿ ಬಿಜೆಪಿ ಸೇರಿದಂತೆ ಹಿಂದಿನ ಸರಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ. ದರ್ಗಾದ ವಿಚಾರಗಳ ಬಗ್ಗೆ ರಾಜ್ಯ ಸರಕಾರ ತನ್ನ ನಿಲುವು ತಿಳಿಸಬೇಕೆಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿರುವ ಹಿನ್ನೆಲೆಯಲ್ಲಿ ಸರಕಾರ ಪೂರಕ ದಾಖಲೆಗಳನ್ನು ಪರಿಶೀಲಿಸಿ ನ್ಯಾಯಾಲಯಕ್ಕೆ ತನ್ನ ನಿಲುವು ತಿಳಿಸಬೇಕು ಎಂದು ಸೈಯದ್ ಬುಡಾನ್ ಶಾ ಖಾದ್ರಿ ವಂಶಸ್ಥರ ಸಂಘದ ಪ್ರಧಾನ ಕಾರ್ಯದರ್ಶಿ ಸೈಯದ್ ಫಕ್ರುದ್ದೀನ್ ಶಾ ಖಾದ್ರಿ (ಅಜ್ಮತ್ ಪಾಷ) ಒತ್ತಾಯಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಗುರು ದತ್ತಾತ್ರೇಯ ಬಾಬಾ ಬುಡಾನ್ ಸ್ವಾಮಿ ದರ್ಗಾದ ವಿಚಾರ ಮುಂದಿಟ್ಟುಕೊಂಡು ಬಿಜೆಪಿ ರಾಜಕೀಯ ಲಾಭ ಪಡೆಯುವ ಕೆಲಸ ಮಾಡುತ್ತಿದ್ದರೆ, ಸಂಘಪರಿವಾರ ವಿವಾದ ಸೃಷ್ಟಿಸಿ ಕೋಮು ಸಾಮರಸ್ಯ ಹದಗೆಡಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದೆ. ಇದನ್ನು ಕೂಡಲೇ ನಿಲ್ಲಿಸಬೇಕೆಂದು ಹೇಳಿದರು.

ಸಂಘಪರಿವಾರದವರು ಗುಹೆಯ ಒಳ ಭಾಗದಲ್ಲಿರುವ ಸೂಫಿ ಪಂಥದ ಗಾದಿ(ಪೀಠ), ಛಿಲ್ಲಾ(ಧ್ಯಾನ ಸ್ಥಳ), ಚಿರಾಗ್(ನಂದಾದೀಪ) ಮತ್ತು ಖಡಾವೆ(ಪಾದುಕೆ)ಗಳ ವಿಚಾರ ಮುಂದಿಟ್ಟುಕೊಂಡು ದೇಶದ ಮುಜರಾಯಿ ಇಲಾಖೆ ಅಧೀನದಲ್ಲಿರುವ ಮುಹಮ್ಮದನ್ ಸಂಸ್ಥೆಯ ಧಾರ್ಮಿಕ ಆಚರಣೆಗಳನ್ನು ಸಂಪೂರ್ಣವಾಗಿ ಬದಲಾಯಿಸುವ ಹುನ್ನಾರ ನಡೆಸುತ್ತಿದ್ದಾರೆ. ಈ ಸಂಸ್ಥೆಯ ವಿಚಾರದಲ್ಲಿ ಕೆಲ ಪಕ್ಷಗಳು ನಾವು ಅಲ್ಪಸಂಖ್ಯಾತರ ಪರ ಇದ್ದೇವೆ ಎನ್ನುತ್ತಿದ್ದರೂ ಅಲ್ಪಸಂಖ್ಯಾತರಿಗೆ ನ್ಯಾಯ ಒದಗಿಸುವಲ್ಲಿ ವಿಫಲವಾಗಿವೆ. ಬಿಜೆಪಿ ಪಕ್ಷ ಈ ವಿಚಾರದಲ್ಲಿ ಹಿಂದೂಗಳ ಪರ ಎಂಬಂತೆ ಬಿಂಬಿಸಿಕೊಂಡು ರಾಜಕೀಯ ಲಾಭ ಪಡೆಯುವ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿದರು.

ಮುಹಮ್ಮದನ್ ಸಂಸ್ಥೆಯಲ್ಲಿನ ಸೂಫಿ ಪಂಥದ ಆಚರಣೆಗಳನ್ನು ತಡೆಯುವ ಹುನ್ನಾರಗಳು ಇತ್ತೀಚೆಗೆ ನಡೆಯುತ್ತಿವೆ. ಇದರ ವಿರುದ್ಧ ಸರಕಾರ ಮತ್ತು ಸಂಬಂಧಿಸಿದ ಇಲಾಖಾಧಿಕಾರಿಗಳು ಮೇಲಿನ ದಾಖಲೆಗಳನ್ನು ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ನಮಗೆ ನ್ಯಾಯ ಒದಗಿಸಬೇಕು. ದತ್ತಾತ್ರೇಯ ಬಾಬಾ ಬುಡಾನ್ ಸ್ವಾಮಿ ದರ್ಗಾದಲ್ಲಿನ ಪೂಜೆ ಹಕ್ಕಿನ ಕುರಿತು 8 ವಾರಗಳ ಒಳಗೆ ತನ್ನ ನಿಲುವು ತಿಳಿಸಬೇಕೆಂದು ಸುಪ್ರೀಂ ಕೋರ್ಟ್ ರಾಜ್ಯ ಸರಕಾರಕ್ಕೆ ಗಡುವು ನೀಡಿದ್ದು, ಸರಕಾರ ಮೇಲಿನ ಸರಕಾರಿ ಆದೇಶ, ಮಹಾರಾಜರ ಕಾಲದ ಸರಕಾರಿ ಆದೇಶ ಹಾಗೂ ಗೆಜೆಟ್ ದಾಖಲೆಗಳನ್ನು ಪರಿಶೀಲಿಸಬೇಕು ಹಾಗೂ ನಮ್ಮೊಂದಿಗೆ ಚರ್ಚಿಸಿ ನ್ಯಾಯಾಲಯಕ್ಕೆ ಸೂಕ್ತ ನಿಲುವು ತಿಳಿಸಿ, ನ್ಯಾಯ ಒದಗಿಸಬೇಕು ಎಂದು ಶಾಖಾದ್ರಿ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಸೈಯದ್ ನಿಝಾಮುದ್ದೀನ್ ಖಾದ್ರಿ, ಸಲೀಂ ಮಲಿಕ್, ಅರ್ಬಾಝ್, ತನ್ವೀರ್ ಅಹ್ಮದ್, ಮುಹಮ್ಮದ್ ಅತೀಕ್ ಉಪಸ್ಥಿತರಿದ್ದರು.

……………………………………………………….

ತಾಲ್ಲೂಕಿನ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ಕಳೆದ ವರ್ಷ ಜನವರಿಯಲ್ಲಿ ಬಾಬಾ ಬುಡನ್ ವಂಶಸ್ಥ ಸಯ್ಯದ್ ಫಕ್ರುದ್ದೀನ್ ಷಾ ಖಾದ್ರಿ ಅವರು ಭೇಟಿ ನೀಡಿದ ಸಂದರ್ಭದಲ್ಲಿ  ಕಲಿಮ ತಯ್ಯಿಬಿನ ಜಪ ನಡಿಸಿ, ಪ್ರತಿವರ್ಷದಂತೆ ಹರಕೆಯ ರೀತಿಯಲ್ಲಿ ಝಿಕ್ರ್ ಎ ಕಲಿಮ ಎ ಫಾತೀಹ ನಡೆಸಿದ್ದರು. ಈ ವೇಳೆ ತಮ್ಮ ಪೂರ್ವಜರ ಇತಿಹಾಸ ಹಂಚಿಕೊಂಡ ಅವರು, ದರ್ಗಾದ ವ್ಯವಸ್ಥಾಪನಾ ಸಮಿತಿ ರಚನೆ ಆದ ಬಳಿಕ ಅಲ್ಲಿರುವ ಪವಿತ್ರ ಕಲಿಮ ತಯ್ಯಿಬವನ್ನು ಮರೆಮಾಚಿಸಿ ಆ ಶ್ಲೋಕದ ಮೇಲೆ ಮುಜಾವರ್ ಹಾಗೂ ಅರ್ಚಕರಿಗೆ ಮಾತ್ರ ಅವಕಾಶವೆಂದು ಬರೆದು ಶ್ಲೋಕವನ್ನು ರಟ್ಟಿನ ತುಂಡಿನಿಂದ ಮರೆಮಾಚಲಾಗಿತ್ತು.

ಐತಿಹಾಸಿಕ ಶ್ಲೋಕದ ಪ್ರಕಾರ ದರ್ಗಾಕ್ಕೆ ಸಂಬಂಧಪಟ್ಟ ಗುರುಗಳಾದ ಸಜ್ಜಾದ್ ಎ ನಶೀನ್ ಹಾಗೂ ಶಾ ಖಾದ್ರಿ ಮತ್ತು ನಂತರ ಮುಜಾವರ್ ಅವರಿಗೆ ಪ್ರವೇಶಕ್ಕೆ ಅವಕಾಶವಿತ್ತು. ಈಚೆಗೆ ಹಲವಾರು ವಿರೋಧದ ನಡುವೆ ನೇಮಕವಾದ ಅರ್ಚಕರು ಪವಿತ್ರವಾದ ಕಲಿಮ ತಯ್ಯಿಬವನ್ನೂ ಒಪ್ಪಿ ಒಳಗಡೆ ಪ್ರವೇಶ ಮಾಡಿದ್ದಾರೆಂದು ನಾವು ನಂಬಿದ್ದೇವೆ ಎಂದಿದ್ದರು.

ದರ್ಗಾದ ಸಜ್ಜಾದ್ ಎ ನಶೀನ್(ಪೀಠಾಧಿಪತಿ) ಎಂದರೇನು? ಶಾ ಖಾದ್ರಿ (ಪೀಠಾಧೀಶರು) ಎಂದರೇನು? ಎಂಬುದನ್ನು ಮುಜರಾಯಿ ಇಲಾಖೆ ಗೆಜೆಟ್‌ನಲ್ಲಿ ಸ್ಪಷ್ಟವಾಗಿ ವಿವರಿಸಿದೆ. ಅದರಂತೆ ಸಜ್ಜಾದ್ ಎ ನಶೀನ್ ಹಜರತ್ ಸಯ್ಯದ್ ಗೌಸ್ ಮೊಹಿಯುದ್ದೀನ್ ಶಾಖಾದ್ರಿ ಅವರಿಗೂ ಇಲಾಖೆ ಗೌರವ ನೀಡಬೇಕು. ಜಿಕರ್ ಫಾತೀಹಾ ನಡೆಸಲು ಅವಕಾಶ ಮಾಡಿ ಕೊಟ್ಟ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...