Homeಕರ್ನಾಟಕಬಾಬಾ ಬುಡಾನ್ | ರಾಜ್ಯ ಸರಕಾರ ಸುಪ್ರೀಂ ಕೋರ್ಟ್‌ಗೆ ತನ್ನ ನಿಲುವು ತಿಳಿಸಲಿ: ಸೈಯದ್ ಫಕ್ರುದ್ದೀನ್...

ಬಾಬಾ ಬುಡಾನ್ | ರಾಜ್ಯ ಸರಕಾರ ಸುಪ್ರೀಂ ಕೋರ್ಟ್‌ಗೆ ತನ್ನ ನಿಲುವು ತಿಳಿಸಲಿ: ಸೈಯದ್ ಫಕ್ರುದ್ದೀನ್ ಶಾ ಖಾದ್ರಿ

- Advertisement -
- Advertisement -

ಚಿಕ್ಕಮಗಳೂರು: ಶ್ರೀ ಗುರು ದತ್ತಾತ್ರೇಯ ಬಾಬಾ ಬುಡಾನ್ ಸ್ವಾಮಿ ದರ್ಗಾದ ವಿಚಾರದಲ್ಲಿ ನ್ಯಾಯಬದ್ಧವಾದ ನಿರ್ಧಾರ ತೆಗೆದುಕೊಳ್ಳುವಲ್ಲಿ ಬಿಜೆಪಿ ಸೇರಿದಂತೆ ಹಿಂದಿನ ಸರಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ. ದರ್ಗಾದ ವಿಚಾರಗಳ ಬಗ್ಗೆ ರಾಜ್ಯ ಸರಕಾರ ತನ್ನ ನಿಲುವು ತಿಳಿಸಬೇಕೆಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿರುವ ಹಿನ್ನೆಲೆಯಲ್ಲಿ ಸರಕಾರ ಪೂರಕ ದಾಖಲೆಗಳನ್ನು ಪರಿಶೀಲಿಸಿ ನ್ಯಾಯಾಲಯಕ್ಕೆ ತನ್ನ ನಿಲುವು ತಿಳಿಸಬೇಕು ಎಂದು ಸೈಯದ್ ಬುಡಾನ್ ಶಾ ಖಾದ್ರಿ ವಂಶಸ್ಥರ ಸಂಘದ ಪ್ರಧಾನ ಕಾರ್ಯದರ್ಶಿ ಸೈಯದ್ ಫಕ್ರುದ್ದೀನ್ ಶಾ ಖಾದ್ರಿ (ಅಜ್ಮತ್ ಪಾಷ) ಒತ್ತಾಯಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಗುರು ದತ್ತಾತ್ರೇಯ ಬಾಬಾ ಬುಡಾನ್ ಸ್ವಾಮಿ ದರ್ಗಾದ ವಿಚಾರ ಮುಂದಿಟ್ಟುಕೊಂಡು ಬಿಜೆಪಿ ರಾಜಕೀಯ ಲಾಭ ಪಡೆಯುವ ಕೆಲಸ ಮಾಡುತ್ತಿದ್ದರೆ, ಸಂಘಪರಿವಾರ ವಿವಾದ ಸೃಷ್ಟಿಸಿ ಕೋಮು ಸಾಮರಸ್ಯ ಹದಗೆಡಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದೆ. ಇದನ್ನು ಕೂಡಲೇ ನಿಲ್ಲಿಸಬೇಕೆಂದು ಹೇಳಿದರು.

ಸಂಘಪರಿವಾರದವರು ಗುಹೆಯ ಒಳ ಭಾಗದಲ್ಲಿರುವ ಸೂಫಿ ಪಂಥದ ಗಾದಿ(ಪೀಠ), ಛಿಲ್ಲಾ(ಧ್ಯಾನ ಸ್ಥಳ), ಚಿರಾಗ್(ನಂದಾದೀಪ) ಮತ್ತು ಖಡಾವೆ(ಪಾದುಕೆ)ಗಳ ವಿಚಾರ ಮುಂದಿಟ್ಟುಕೊಂಡು ದೇಶದ ಮುಜರಾಯಿ ಇಲಾಖೆ ಅಧೀನದಲ್ಲಿರುವ ಮುಹಮ್ಮದನ್ ಸಂಸ್ಥೆಯ ಧಾರ್ಮಿಕ ಆಚರಣೆಗಳನ್ನು ಸಂಪೂರ್ಣವಾಗಿ ಬದಲಾಯಿಸುವ ಹುನ್ನಾರ ನಡೆಸುತ್ತಿದ್ದಾರೆ. ಈ ಸಂಸ್ಥೆಯ ವಿಚಾರದಲ್ಲಿ ಕೆಲ ಪಕ್ಷಗಳು ನಾವು ಅಲ್ಪಸಂಖ್ಯಾತರ ಪರ ಇದ್ದೇವೆ ಎನ್ನುತ್ತಿದ್ದರೂ ಅಲ್ಪಸಂಖ್ಯಾತರಿಗೆ ನ್ಯಾಯ ಒದಗಿಸುವಲ್ಲಿ ವಿಫಲವಾಗಿವೆ. ಬಿಜೆಪಿ ಪಕ್ಷ ಈ ವಿಚಾರದಲ್ಲಿ ಹಿಂದೂಗಳ ಪರ ಎಂಬಂತೆ ಬಿಂಬಿಸಿಕೊಂಡು ರಾಜಕೀಯ ಲಾಭ ಪಡೆಯುವ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿದರು.

ಮುಹಮ್ಮದನ್ ಸಂಸ್ಥೆಯಲ್ಲಿನ ಸೂಫಿ ಪಂಥದ ಆಚರಣೆಗಳನ್ನು ತಡೆಯುವ ಹುನ್ನಾರಗಳು ಇತ್ತೀಚೆಗೆ ನಡೆಯುತ್ತಿವೆ. ಇದರ ವಿರುದ್ಧ ಸರಕಾರ ಮತ್ತು ಸಂಬಂಧಿಸಿದ ಇಲಾಖಾಧಿಕಾರಿಗಳು ಮೇಲಿನ ದಾಖಲೆಗಳನ್ನು ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ನಮಗೆ ನ್ಯಾಯ ಒದಗಿಸಬೇಕು. ದತ್ತಾತ್ರೇಯ ಬಾಬಾ ಬುಡಾನ್ ಸ್ವಾಮಿ ದರ್ಗಾದಲ್ಲಿನ ಪೂಜೆ ಹಕ್ಕಿನ ಕುರಿತು 8 ವಾರಗಳ ಒಳಗೆ ತನ್ನ ನಿಲುವು ತಿಳಿಸಬೇಕೆಂದು ಸುಪ್ರೀಂ ಕೋರ್ಟ್ ರಾಜ್ಯ ಸರಕಾರಕ್ಕೆ ಗಡುವು ನೀಡಿದ್ದು, ಸರಕಾರ ಮೇಲಿನ ಸರಕಾರಿ ಆದೇಶ, ಮಹಾರಾಜರ ಕಾಲದ ಸರಕಾರಿ ಆದೇಶ ಹಾಗೂ ಗೆಜೆಟ್ ದಾಖಲೆಗಳನ್ನು ಪರಿಶೀಲಿಸಬೇಕು ಹಾಗೂ ನಮ್ಮೊಂದಿಗೆ ಚರ್ಚಿಸಿ ನ್ಯಾಯಾಲಯಕ್ಕೆ ಸೂಕ್ತ ನಿಲುವು ತಿಳಿಸಿ, ನ್ಯಾಯ ಒದಗಿಸಬೇಕು ಎಂದು ಶಾಖಾದ್ರಿ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಸೈಯದ್ ನಿಝಾಮುದ್ದೀನ್ ಖಾದ್ರಿ, ಸಲೀಂ ಮಲಿಕ್, ಅರ್ಬಾಝ್, ತನ್ವೀರ್ ಅಹ್ಮದ್, ಮುಹಮ್ಮದ್ ಅತೀಕ್ ಉಪಸ್ಥಿತರಿದ್ದರು.

……………………………………………………….

ತಾಲ್ಲೂಕಿನ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ಕಳೆದ ವರ್ಷ ಜನವರಿಯಲ್ಲಿ ಬಾಬಾ ಬುಡನ್ ವಂಶಸ್ಥ ಸಯ್ಯದ್ ಫಕ್ರುದ್ದೀನ್ ಷಾ ಖಾದ್ರಿ ಅವರು ಭೇಟಿ ನೀಡಿದ ಸಂದರ್ಭದಲ್ಲಿ  ಕಲಿಮ ತಯ್ಯಿಬಿನ ಜಪ ನಡಿಸಿ, ಪ್ರತಿವರ್ಷದಂತೆ ಹರಕೆಯ ರೀತಿಯಲ್ಲಿ ಝಿಕ್ರ್ ಎ ಕಲಿಮ ಎ ಫಾತೀಹ ನಡೆಸಿದ್ದರು. ಈ ವೇಳೆ ತಮ್ಮ ಪೂರ್ವಜರ ಇತಿಹಾಸ ಹಂಚಿಕೊಂಡ ಅವರು, ದರ್ಗಾದ ವ್ಯವಸ್ಥಾಪನಾ ಸಮಿತಿ ರಚನೆ ಆದ ಬಳಿಕ ಅಲ್ಲಿರುವ ಪವಿತ್ರ ಕಲಿಮ ತಯ್ಯಿಬವನ್ನು ಮರೆಮಾಚಿಸಿ ಆ ಶ್ಲೋಕದ ಮೇಲೆ ಮುಜಾವರ್ ಹಾಗೂ ಅರ್ಚಕರಿಗೆ ಮಾತ್ರ ಅವಕಾಶವೆಂದು ಬರೆದು ಶ್ಲೋಕವನ್ನು ರಟ್ಟಿನ ತುಂಡಿನಿಂದ ಮರೆಮಾಚಲಾಗಿತ್ತು.

ಐತಿಹಾಸಿಕ ಶ್ಲೋಕದ ಪ್ರಕಾರ ದರ್ಗಾಕ್ಕೆ ಸಂಬಂಧಪಟ್ಟ ಗುರುಗಳಾದ ಸಜ್ಜಾದ್ ಎ ನಶೀನ್ ಹಾಗೂ ಶಾ ಖಾದ್ರಿ ಮತ್ತು ನಂತರ ಮುಜಾವರ್ ಅವರಿಗೆ ಪ್ರವೇಶಕ್ಕೆ ಅವಕಾಶವಿತ್ತು. ಈಚೆಗೆ ಹಲವಾರು ವಿರೋಧದ ನಡುವೆ ನೇಮಕವಾದ ಅರ್ಚಕರು ಪವಿತ್ರವಾದ ಕಲಿಮ ತಯ್ಯಿಬವನ್ನೂ ಒಪ್ಪಿ ಒಳಗಡೆ ಪ್ರವೇಶ ಮಾಡಿದ್ದಾರೆಂದು ನಾವು ನಂಬಿದ್ದೇವೆ ಎಂದಿದ್ದರು.

ದರ್ಗಾದ ಸಜ್ಜಾದ್ ಎ ನಶೀನ್(ಪೀಠಾಧಿಪತಿ) ಎಂದರೇನು? ಶಾ ಖಾದ್ರಿ (ಪೀಠಾಧೀಶರು) ಎಂದರೇನು? ಎಂಬುದನ್ನು ಮುಜರಾಯಿ ಇಲಾಖೆ ಗೆಜೆಟ್‌ನಲ್ಲಿ ಸ್ಪಷ್ಟವಾಗಿ ವಿವರಿಸಿದೆ. ಅದರಂತೆ ಸಜ್ಜಾದ್ ಎ ನಶೀನ್ ಹಜರತ್ ಸಯ್ಯದ್ ಗೌಸ್ ಮೊಹಿಯುದ್ದೀನ್ ಶಾಖಾದ್ರಿ ಅವರಿಗೂ ಇಲಾಖೆ ಗೌರವ ನೀಡಬೇಕು. ಜಿಕರ್ ಫಾತೀಹಾ ನಡೆಸಲು ಅವಕಾಶ ಮಾಡಿ ಕೊಟ್ಟ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...