ದೆಹಲಿಯಲ್ಲಿ ಪ್ರಸಿದ್ಧವಾಗಿದ್ದ ಬಾಬಾ ಕಾ ಡಾಬಾ ಮಾಲೀಕ ಕಾಂತಾ ಪ್ರಸಾದ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಿದ್ದೆ ಮಾತ್ರಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಅವರನ್ನು ಸದ್ಯ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ಸೇರಿಸಲಾಗಿದೆ. ಸದ್ಯ ಕಾಂತ ಪ್ರಸಾದ್ ಅವರಿಗೆ ಐಸಿಯು ವಾರ್ಡನಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ದೆಹಲಿಯ ಮಾಳವೀಯ ನಗರದಲ್ಲಿ ಕಳೆದ ವಷದ ಲಾಕ್ಡೌನ್ ಸಂದರ್ಭದಲ್ಲಿ ಕ್ರೌಡ್ ಫಂಡಿಂಗ್ ಮೂಲಕ ಡಾಬಾ ಆರಂಭಿಸಿದ್ದ ಕಾಂತಾ ಪ್ರಸಾದ್ ನಂತರದಲ್ಲಿ ಅವರ ಡಾಬಾ ದೇಶದಲ್ಲಿ ಅತ್ಯಂತ ಪ್ರಸಿದ್ಧವಾಗಿತ್ತು. ಆದರೆ ಕಾಂತಾ ಪ್ರಸಾದ್ ಯಾವ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬುದು ಇದುವರೆಗೆ ತಿಳಿದುಬಂದಿಲ್ಲ. ಗುರುವಾರ ರಾತ್ರಿ ಸಫ್ದರ್ ಜಂಗ್ ಆಸ್ಪತ್ರೆಯಿಂದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಕುರಿತು ಪೊಲೀಸ್ರಿಗೆ ಮಾಹಿತಿ ದೊರೆತಿದೆ. ಈ ಸಂಬಂಧ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿದಾಗ ಅಲ್ಲಿ ಅವರು ಕಾಂತಾ ಪ್ರಸಾದ್ ಅವರನ್ನು ನೋಡಿದ್ದಾರೆ. ಹಾಗೆಯೇ ಪೊಲೀಸರು ವ್ಯಕ್ತಿ ಬಾಬಾ ಕಾ ಡಾಬಾದ ಮಾಲೀಕ ಕಾಂತಾಪ್ರಸಾದ್ ಎಂದು ಪತ್ತೆ ಹಚ್ಚಿದ್ದಾರೆ. ಆತ್ಮಹತ್ಯೆಯ ಕಾರಣವನ್ನು ಪೊಲೀಸರು ಇದುವರೆಗೆ ಬಹಿರಂಗಗೊಳಿಸಿಲ್ಲ.
ಕಳೆದ ಕೆಲವು ದಿನಗಳಿಂದ ಕಾಂತಾ ಪ್ರಸಾದ್ ಬೇಸರದಲ್ಲಿದ್ದರು. ಖಿನ್ನತೆಗೆ ಒಳಗಾಗಿದ್ದರು ಎಂದು ಅವರ ಪತ್ನಿ ತಿಳಿಸಿದ್ದಾರೆ.
ಇದನ್ನೂ ಓದಿ : ಸಂಸದ ತೇಜಸ್ವಿ ಸೂರ್ಯರವರಿಂದ ಲಾಕ್ ಡೌನ್ ನಿಯಮ ಉಲ್ಲಂಘನೆ: RTI ಕಾರ್ಯಕರ್ತನಿಂದ ದೂರು