Homeಮುಖಪುಟ'ಬಾಬಾ ಕಾ ಧಾಬಾ' ವೀಡಿಯೋ ವೈರಲ್: ಸಂಗ್ರಹಿಸಿದ ದೇಣಿಗೆ ಹಣ ದುರುಪಯೋಗ; ದೂರು!

‘ಬಾಬಾ ಕಾ ಧಾಬಾ’ ವೀಡಿಯೋ ವೈರಲ್: ಸಂಗ್ರಹಿಸಿದ ದೇಣಿಗೆ ಹಣ ದುರುಪಯೋಗ; ದೂರು!

ಗೌರವ್ ವಾಸನ್ ತನ್ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಈ ದಂಪತಿಗಳ ಸಂಕಷ್ಟದ ವೀಡಿಯೋವನ್ನು ಹಂಚಿಕೊಂಡಿದ್ದು, ಈ ದಂಪತಿಗೆ ಸಹಾಯ ಮಾಡುವಂತೆ ವಾಸನ್ ಜನರನ್ನು ಕೇಳಿದ್ದರು.

- Advertisement -
- Advertisement -

ಯೂಟ್ಯೂಬರ್ ಗೌರವ್ ವಾಸನ್ ದೇಣಿಗೆ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ದೆಹಲಿಯ ಮಾಲ್ವಿಯಾ ನಗರದ ಜನಪ್ರಿಯ ಉಪಾಹಾರ ಗೃಹ “ಬಾಬಾ ಕಾ ಧಾಬಾ”ದ ಮಾಲೀಕರು ಆರೋಪಿಸಿದ್ದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

“ಮಾಲ್ವಿಯಾ ನಗರ ಪೊಲೀಸ್ ಠಾಣೆಯಲ್ಲಿ ನಾವು ನಿನ್ನೆ ದೂರು ಸ್ವೀಕರಿಸಿದ್ದೇವೆ ಮತ್ತು ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಪ್ರಕರಣದಲ್ಲಿ ಇನ್ನೂ ಯಾವುದೇ ಎಫ್ಐಆರ್ ದಾಖಲಾಗಿಲ್ಲ” ಎಂದು ಉಪ ಪೊಲೀಸ್ ಆಯುಕ್ತ ಅತುಲ್ ಕುಮಾರ್ ಠಾಕೂರ್ ಹೇಳಿದ್ದಾರೆ.

ಲಾಕ್‌ಡೌನ್ ನಂತರ ತನ್ನ ವ್ಯವಹಾರದಲ್ಲಿನ ಕುಸಿತದ ಬಗ್ಗೆ ಕಾಂತಾ ಪ್ರಸಾದ್ ಮತ್ತು ಅವರ ಪತ್ನಿ ಮಾತನಾಡುತ್ತಿರುವ ವೀಡಿಯೋವನ್ನು   ಚಿತ್ರೀಕರಿಸಿದ ನಂತರ, ಗ್ರಾಹಕರ ಕೊರತೆಯಿಂದಾಗಿ ದಂಪತಿಗಳು ತಮ್ಮ ರೆಸ್ಟೋರೆಂಟ್ ನಡೆಸಲು ಕಷ್ಟಪಡುತ್ತಿದ್ದಾರೆ ಎಂಬ ಕಾರಣಕ್ಕೆ ಚಾಲ್ತಿಯಲ್ಲಿದ್ದರು.

ಇದನ್ನೂ ಓದಿ: ಸ್ಟಾರ್ಟ್‌‌ಅಪ್‍: ಮೈಸೂರಿನಲ್ಲಿ ಬಯೋಪಾಲಿಮರ್‌ ಉದ್ಯಮ ಆರಂಭಿಸಿದ ಚೀನಾ ರಿಟರ್ನ್‌ ಗುರುಪ್ರಸಾದ್!

ಗೌರವ್ ವಾಸನ್ ತನ್ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಈ ವೀಡಿಯೋವನ್ನು ಹಂಚಿಕೊಂಡ ನಂತರ ಇದು ವೈರಲ್ ಆಗಿದೆ. ದಂಪತಿಗೆ ಸಹಾಯ ಮಾಡುವಂತೆ ವಾಸನ್ ಜನರನ್ನು ಕೇಳಿದ್ದರು. ವೈರಲ್ ವೀಡಿಯೊದ ಒಂದು ದಿನದ ನಂತರ, # ಬಾಬಾ ಕಾ ಧಾಬಾ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗಿತ್ತು.

ಇದನ್ನೂ ಓದಿ: ’ಕನ್ನಡ ಕಂಕಣ ದಿನ’; ಕರ್ನಾಟಕ ರಣಧೀರ ಪಡೆಯಿಂದ ವಿಭಿನ್ನ ರಾಜ್ಯೋತ್ಸವ!

ಕಾಂತಾ ಪ್ರಸಾದ್ ಪೊಲೀಸರಿಗೆ ನೀಡಿದ ದೂರಿನಲ್ಲಿ, “ಉದ್ದೇಶಪೂರ್ವಕವಾಗಿ ಗೌರವ್ ವಾಸನ್ ತನ್ನ ಮತ್ತು ತನ್ನ ಕುಟುಂಬ ಅಥವಾ ತನ್ನ ಸ್ನೇಹಿತರ ಬ್ಯಾಂಕ್ ವಿವರಗಳು ಮತ್ತು ಮೊಬೈಲ್ ಸಂಖ್ಯೆಗಳನ್ನು ದಾನಿಗಳೊಂದಿಗೆ ಹಂಚಿಕೊಂಡಿದ್ದಾನೆ. ಇದರಿಂದ ವಿವಿಧ ರೀತಿಯಲ್ಲಿ ಅಪಾರ ಪ್ರಮಾಣದ ದೇಣಿಗೆ ಸಂಗ್ರಹಿಸಿದ್ದು, ಇದರ ಬಗ್ಗೆ ನನಗೆ ಮಾಹಿತಿ ನೀಡಿಲ್ಲ. ಜೊತೆಗೆ ಹನಕಾಸು ವಹಿವಾಟಿನ ವಿವರಗಳನ್ನು ನೀಡುತ್ತಿಲ್ಲ”  ಎಂದು ಆರೋಪಿಸಿದರು.

“ವಾಸನ್‌ನಿಂದ ಕೇವಲ 2 ಲಕ್ಷ ರೂ.ಗಳ ಚೆಕ್ ಪಡೆದುಕೊಂಡಿದ್ದೇನೆ. ಈಗ ಹೆಚ್ಚಿನ ಗ್ರಾಹಕರು ಬರುತ್ತಿಲ್ಲ. ಬರುವವರೂ ಸೆಲ್ಫಿ ತೆಗೆದುಕೊಳ್ಳಲು ಇಲ್ಲಿಗೆ ಬರುತ್ತಾರೆ. ಈ ಮೊದಲು ನಾನು ದಿನಕ್ಕೆ 10,000 ರೂ. ಗಳಿಸುತ್ತಿದ್ದೆ. ಈಗ ಅದು 3,000 ರೂ. 5,000 ರೂಗಳಿಗೆ ಇಳಿದಿದೆ” ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದರು.

ಈ ಆರೋಪಗಳನ್ನು ನಿರಾಕರಿಸಿದ ವಾಸನ್, “ನಾನು ಚಿತ್ರೀಕರಿಸಿದ ಈ ವೀಡಿಯೋ ಇಷ್ಟುಮಟ್ಟಿಗೆ ವೈರಲ್ ಆಗುತ್ತದೆ ಎಂದು ಭಾವಿಸಿರಲಿಲ್ಲ. ಜನರು ಬಾಬಾಗೆ ತೊಂದರೆ ನೀಡಬಾರದು ಎಂಬ ಕಾರಣಕ್ಕೆ ನನ್ನ ಬ್ಯಾಂಕ್ ವಿವರಗಳನ್ನು ಹಂಚಿಕೊಂಡಿದ್ದೆ” ಎಂದು ತಿಳಿಸಿದರು.


ಇದನ್ನೂ ಓದಿ: ’ಕೈ’ಗೆ ಮತ ನೀಡಿ ಎಂದು ಬಿಜೆಪಿ ರ್‍ಯಾಲಿಯಲ್ಲಿ ಸಿಂಧಿಯಾ ಮತ ಯಾಚನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...