Homeಕರೋನಾ ತಲ್ಲಣಅಲೋಪತಿ ವೈದ್ಯರ ವಿರುದ್ಧ ಅವಹೇಳನ: ವಿಚಾರಣೆಗೆ ತಡೆಯೊಡ್ಡಲು ಸುಪ್ರೀಂ ಮೊರೆ ಹೋದ ಬಾಬಾ ರಾಮ್‌ದೇವ್

ಅಲೋಪತಿ ವೈದ್ಯರ ವಿರುದ್ಧ ಅವಹೇಳನ: ವಿಚಾರಣೆಗೆ ತಡೆಯೊಡ್ಡಲು ಸುಪ್ರೀಂ ಮೊರೆ ಹೋದ ಬಾಬಾ ರಾಮ್‌ದೇವ್

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ಚಿಕಿತ್ಸೆ ಕುರಿತು ಅಲೋಪತಿ ಮತ್ತು ಅಲೋಪತಿ ವೈದ್ಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಮೇಲೆ ದಾಖಲಾಗಿರುವ ಪ್ರಕರಣಗಳ ವಿಚಾರಣೆಗೆ ತಡೆಯೊಡ್ಡುವಂತೆ ಯೋಗ ಗುರು ಬಾಬಾ ರಾಮ್‌ದೇವ್ ಸುಪ್ರೀಂ ಮೊರೆ ಹೋಗಿದ್ದಾರೆ.

ರಾಮ್‌ದೇವ ಹೇಳಿಕೆಯಿಂದ ಆಕ್ರೋಶಗೊಂಡಿದ್ದ ವೈದ್ಯಕೀಯ ಸಂಘ ವಿವಿಧ ರಾಜ್ಯಗಳಲ್ಲಿ ಹಲವು ಪ್ರಕರಣ ದಾಖಲಿಸಿತ್ತು. ಹೀಗಾಗಿ ತಮ್ಮ ವಿರುದ್ಧ ದಾಖಲಾಗಿರುವ ಅನೇಕ ಪ್ರಕರಣಗಳ ವಿಚಾರಣೆಯನ್ನು ತಡೆಹಿಡಿಯಬೇಕೆಂದು ಕೋರಿ ರಾಮ್‌ದೇವ್ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಭಾರತೀಯ ವೈದ್ಯಕೀಯ ಸಂಘ (ಐಎಂಎ) ದಾಖಲಿಸಿರುವ ಎಫ್‌ಐಆರ್‌ಗಳಲ್ಲಿ ಬಲವಂತದ ಕ್ರಮಗಳಿಂದ ರಾಮ್‌ದೇವ್ ರಕ್ಷಣೆ ಕೋರಿದ್ದಾರೆ. ಪಾಟ್ನಾ ಮತ್ತು ರಾಯ್‌ಪುರ ಶಾಖೆಗಳಲ್ಲಿ ಐಎಂಎ ಸಲ್ಲಿಸಿರುವ ಎಫ್‌ಐಆರ್‌ಗಳಲ್ಲಿನ ವಿಚಾರಣೆಯನ್ನು ತಡೆಹಿಡಿಯಲು ರಾಮ್‌ದೇವ್ ಕೋರಿದ್ದಾರೆ. ಜೊತೆಗೆ ಎಫ್‌ಐಆರ್‌ಗಳನ್ನು ದೆಹಲಿ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಅಲೋಪತಿ ವೈದ್ಯರು ದೇವದೂತರು, ಲಸಿಕೆ ಪಡೆಯುವೆ; ಯೂಟರ್ನ್ ಹೊಡೆದ ಬಾಬಾ ರಾಮ್‌ದೇವ್

ಅಲೋಪತಿಯ ಬಗ್ಗೆ ನೀಡಿದ್ದ ಹೇಳಿಕೆಯಿಂದಾಗಿ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ರಾಜ್ಯ ಘಟಕವು ನೀಡಿದ ದೂರಿನ ಮೇರೆಗೆ ಬಾಬಾ ರಾಮ್‌ದೇವ್ ವಿರುದ್ಧ ಛತ್ತೀಸ್‌ಗಢದಲ್ಲಿ  ಎಫ್‌ಐಆರ್ ದಾಖಲಿಸಲಾಗಿದೆ ಎಂದು ಛತ್ತೀಸ್‌ಗಢ ಪೊಲೀಸರು ತಿಳಿಸಿದ್ದರು.

ಬಾಬಾ ರಾಮದೇವ್ ವಿರುದ್ಧ, ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ದುರು ದಾಖಲಿಸಿದ್ದೇವೆ. ಐಎಂಎ ಮತ್ತು ಛತ್ತೀಸ್‌ಗಢ ಆಸ್ಪತ್ರೆ ಮಂಡಳಿಯ ಅಧ್ಯಕ್ಷ ಡಾ. ರಾಕೇಶ್ ಗುಪ್ತಾ ನೀಡಿದ ದೂರಿನ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ ” ಎಂದು ರಾಯಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯ ಸಿಎಸ್‌ಪಿ ನಾಸರ್ ಸಿದ್ದಿಕಿ ತಿಳಿಸಿದ್ದರು.

ಎಫ್‌ಐಆರ್ ಅನ್ನು ಐಪಿಸಿ ಸೆಕ್ಷನ್ಸ್ 186 (ಸಾರ್ವಜನಿಕ ಸೇವೆಯಲ್ಲಿರುವುವರನ್ನು ತನ್ನ ಕರ್ತವ್ಯ ನಿರ್ವಹಣೆಯಲ್ಲಿ ಸ್ವಯಂಪ್ರೇರಣೆಯಿಂದ ತಡೆಯುವುದು), 188 (ಅಧಿಕೃತವಾಗಿ ಜಾರಿಗೆ ಬಂದಿರುವ ನಿಯಮಗಳನ್ನು ಪಾಲಿಸಲು ನಿರಾಕರಿಸುವುದು), 270 (ಜೀವಕ್ಕೆ ಅಪಾಯಕಾರಿಯಾಗಿರುವ ಸೋಂಕನ್ನು ಹರಡುವ ಸಾಧ್ಯತೆ ), 504 (ಶಾಂತಿಯನ್ನು ಉಲ್ಲಂಘಿಸುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಅವಮಾನ ಮಾಡುವುದು) ಮತ್ತು ವಿಪತ್ತು ನಿರ್ವಹಣಾ ಕಾಯ್ದೆ, 2005 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಇದನ್ನೂ ಓದಿ: ಬಾಬಾ ರಾಮ್‌ದೇವ್ ವಿರುದ್ಧ ಎಫ್‌ಐಆರ್ ದಾಖಲಿಸಿದ ಛತ್ತೀಸ್‌ಗಢ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...