Homeಕರೋನಾ ತಲ್ಲಣಅಲೋಪತಿ ವೈದ್ಯರ ವಿರುದ್ಧ ಅವಹೇಳನ: ವಿಚಾರಣೆಗೆ ತಡೆಯೊಡ್ಡಲು ಸುಪ್ರೀಂ ಮೊರೆ ಹೋದ ಬಾಬಾ ರಾಮ್‌ದೇವ್

ಅಲೋಪತಿ ವೈದ್ಯರ ವಿರುದ್ಧ ಅವಹೇಳನ: ವಿಚಾರಣೆಗೆ ತಡೆಯೊಡ್ಡಲು ಸುಪ್ರೀಂ ಮೊರೆ ಹೋದ ಬಾಬಾ ರಾಮ್‌ದೇವ್

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ಚಿಕಿತ್ಸೆ ಕುರಿತು ಅಲೋಪತಿ ಮತ್ತು ಅಲೋಪತಿ ವೈದ್ಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಮೇಲೆ ದಾಖಲಾಗಿರುವ ಪ್ರಕರಣಗಳ ವಿಚಾರಣೆಗೆ ತಡೆಯೊಡ್ಡುವಂತೆ ಯೋಗ ಗುರು ಬಾಬಾ ರಾಮ್‌ದೇವ್ ಸುಪ್ರೀಂ ಮೊರೆ ಹೋಗಿದ್ದಾರೆ.

ರಾಮ್‌ದೇವ ಹೇಳಿಕೆಯಿಂದ ಆಕ್ರೋಶಗೊಂಡಿದ್ದ ವೈದ್ಯಕೀಯ ಸಂಘ ವಿವಿಧ ರಾಜ್ಯಗಳಲ್ಲಿ ಹಲವು ಪ್ರಕರಣ ದಾಖಲಿಸಿತ್ತು. ಹೀಗಾಗಿ ತಮ್ಮ ವಿರುದ್ಧ ದಾಖಲಾಗಿರುವ ಅನೇಕ ಪ್ರಕರಣಗಳ ವಿಚಾರಣೆಯನ್ನು ತಡೆಹಿಡಿಯಬೇಕೆಂದು ಕೋರಿ ರಾಮ್‌ದೇವ್ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಭಾರತೀಯ ವೈದ್ಯಕೀಯ ಸಂಘ (ಐಎಂಎ) ದಾಖಲಿಸಿರುವ ಎಫ್‌ಐಆರ್‌ಗಳಲ್ಲಿ ಬಲವಂತದ ಕ್ರಮಗಳಿಂದ ರಾಮ್‌ದೇವ್ ರಕ್ಷಣೆ ಕೋರಿದ್ದಾರೆ. ಪಾಟ್ನಾ ಮತ್ತು ರಾಯ್‌ಪುರ ಶಾಖೆಗಳಲ್ಲಿ ಐಎಂಎ ಸಲ್ಲಿಸಿರುವ ಎಫ್‌ಐಆರ್‌ಗಳಲ್ಲಿನ ವಿಚಾರಣೆಯನ್ನು ತಡೆಹಿಡಿಯಲು ರಾಮ್‌ದೇವ್ ಕೋರಿದ್ದಾರೆ. ಜೊತೆಗೆ ಎಫ್‌ಐಆರ್‌ಗಳನ್ನು ದೆಹಲಿ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಅಲೋಪತಿ ವೈದ್ಯರು ದೇವದೂತರು, ಲಸಿಕೆ ಪಡೆಯುವೆ; ಯೂಟರ್ನ್ ಹೊಡೆದ ಬಾಬಾ ರಾಮ್‌ದೇವ್

ಅಲೋಪತಿಯ ಬಗ್ಗೆ ನೀಡಿದ್ದ ಹೇಳಿಕೆಯಿಂದಾಗಿ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ರಾಜ್ಯ ಘಟಕವು ನೀಡಿದ ದೂರಿನ ಮೇರೆಗೆ ಬಾಬಾ ರಾಮ್‌ದೇವ್ ವಿರುದ್ಧ ಛತ್ತೀಸ್‌ಗಢದಲ್ಲಿ  ಎಫ್‌ಐಆರ್ ದಾಖಲಿಸಲಾಗಿದೆ ಎಂದು ಛತ್ತೀಸ್‌ಗಢ ಪೊಲೀಸರು ತಿಳಿಸಿದ್ದರು.

ಬಾಬಾ ರಾಮದೇವ್ ವಿರುದ್ಧ, ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ದುರು ದಾಖಲಿಸಿದ್ದೇವೆ. ಐಎಂಎ ಮತ್ತು ಛತ್ತೀಸ್‌ಗಢ ಆಸ್ಪತ್ರೆ ಮಂಡಳಿಯ ಅಧ್ಯಕ್ಷ ಡಾ. ರಾಕೇಶ್ ಗುಪ್ತಾ ನೀಡಿದ ದೂರಿನ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ ” ಎಂದು ರಾಯಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯ ಸಿಎಸ್‌ಪಿ ನಾಸರ್ ಸಿದ್ದಿಕಿ ತಿಳಿಸಿದ್ದರು.

ಎಫ್‌ಐಆರ್ ಅನ್ನು ಐಪಿಸಿ ಸೆಕ್ಷನ್ಸ್ 186 (ಸಾರ್ವಜನಿಕ ಸೇವೆಯಲ್ಲಿರುವುವರನ್ನು ತನ್ನ ಕರ್ತವ್ಯ ನಿರ್ವಹಣೆಯಲ್ಲಿ ಸ್ವಯಂಪ್ರೇರಣೆಯಿಂದ ತಡೆಯುವುದು), 188 (ಅಧಿಕೃತವಾಗಿ ಜಾರಿಗೆ ಬಂದಿರುವ ನಿಯಮಗಳನ್ನು ಪಾಲಿಸಲು ನಿರಾಕರಿಸುವುದು), 270 (ಜೀವಕ್ಕೆ ಅಪಾಯಕಾರಿಯಾಗಿರುವ ಸೋಂಕನ್ನು ಹರಡುವ ಸಾಧ್ಯತೆ ), 504 (ಶಾಂತಿಯನ್ನು ಉಲ್ಲಂಘಿಸುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಅವಮಾನ ಮಾಡುವುದು) ಮತ್ತು ವಿಪತ್ತು ನಿರ್ವಹಣಾ ಕಾಯ್ದೆ, 2005 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಇದನ್ನೂ ಓದಿ: ಬಾಬಾ ರಾಮ್‌ದೇವ್ ವಿರುದ್ಧ ಎಫ್‌ಐಆರ್ ದಾಖಲಿಸಿದ ಛತ್ತೀಸ್‌ಗಢ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...