Homeಮುಖಪುಟ'ಒಬಿಸಿ' ಸಮುದಾಯವನ್ನು ಅವಮಾನಿಸಿದ ಬಾಬಾ ರಾಮ್‌ದೇವ್‌

‘ಒಬಿಸಿ’ ಸಮುದಾಯವನ್ನು ಅವಮಾನಿಸಿದ ಬಾಬಾ ರಾಮ್‌ದೇವ್‌

- Advertisement -
- Advertisement -

ಪತಂಜಲಿಯ ಸಂಸ್ಥಾಪಕ, ಯೋಗ ಗುರು ಬಾಬಾ ರಾಮ್‌ದೇವ್ ಹಿಂದುಳಿದ ವರ್ಗಗಳ (ಒಬಿಸಿ) ಬಗ್ಗೆ ಅವಮಾನಕಾರಿಯಾಗಿ ಹೇಳುವ ವಿಡಿಯೋ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಬಾಬಾ ರಾಮದೇವ್ ವೇದಿಕೆಯೊಂದರಲ್ಲಿ ಪೂಜೆಯೊಂದನ್ನು ಮಾಡುತ್ತಾ, ನನ್ನ ಮೂಲ ಗೋತ್ರ ಬ್ರಹ್ಮ ಗೋತ್ರ, ನಾನು ಅಗ್ನಿಹೋತ್ರಿ ಬ್ರಾಹ್ಮಣ, ಅವರು ಹೇಳುತ್ತಾರೆ ಬಾಬಾಜಿ ನೀವು ಒಬಿಸಿ ಎಂದು…ಒಬಿಸಿಗಳು ಆ ರೀತಿ ಹೇಳುತ್ತಾರೆ, ನಾನು ಅಗ್ನಿಹೋತ್ರಿ ಬ್ರಾಹ್ಮಣ, ನಾನು ವೇದಿ ಬ್ರಾಹ್ಮಣ, ದ್ವಿವೇದಿ ಬ್ರಾಹ್ಮಣ, ತ್ರಿವೇದಿ ಬ್ರಾಹ್ಮಣ, ಚತುರ್ವೇದಿ ಬ್ರಾಹ್ಮಣ. ನಾನು ನಾಲ್ಕು ವೇದಗಳನ್ನು ಓದಿದ್ದೇನೆ ಎಂದು ಹೇಳಿದ್ದಾರೆ.

ಬಾಬಾ ರಾಮ್‌ ದೇವ್‌ ವೀಡಿಯೊ ವೈರಲ್ ಆದ ಬೆನ್ನಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಅನೇಕರು ‘#ಬಹಿಷ್ಕಾರಪತಂಜಲಿ’ ಎಂದು ಹ್ಯಾಶ್‌ ಟ್ಯಾಗ್‌ ಬಳಸಿ ಪೋಸ್ಟ್‌ಗಳನ್ನು ಹಾಕಿದ್ದಾರೆ. ಹಿಂದುಳಿದ ಸಮುದಾಯಕ್ಕೆ ಮಾಡಿದ ಅವಮಾನಕ್ಕಾಗಿ ರಾಮ್‌ ದೇವ್‌ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಈ ಕುರಿತು ವಿವಾದವಾಗುತ್ತಿದ್ದಂತೆ ಉಲ್ಟಾ ಹೊಡೆದ ರಾಮ್‌ದೇವ್, ತಮ್ಮ ಹೇಳಿಕೆಗಳು ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಅವರನ್ನು ಉದ್ದೇಶಿಸಿವೆ ಮತ್ತು ಒಬಿಸಿ ಸಮುದಾಯವನ್ನು ಅವಮಾನಿಸುವ ಉದ್ದೇಶವನ್ನು ಹೊಂದಿರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ರಾಮ್‌ದೇವ್ ಅವರು ತಮ್ಮ ಬ್ರಾಹ್ಮಣ ಗುರುತನ್ನು ಪ್ರತಿಪಾದಿಸುವುದು ಮತ್ತು ಆ ಮೂಲಕ ಒಬಿಸಿ ಸಮುದಾಯವನ್ನು ಅವಮಾನಿಸಿದ್ದಾರೆ ಎಂದು ಸೂಚಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್‌ ಆಗಿತ್ತು.

ಈ ಕುರಿತು ಮಾದ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ್ದ ರಾಮ್‌ದೇವ್, ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದು ವಿಚಿತ್ರವಾಗಿ ಸಮಜಾಯಿಸಿ ಕೊಟ್ಟಿದ್ದಾರೆ. ವಿಡಿಯೋದಲ್ಲಿ ಒಬಿಸಿ ಎಂದು ಹೇಳುವುದು ಸ್ಪಷ್ಟವಾಗಿ ದಾಖಲಾಗಿದ್ದರೂ, ನಾನು ಹೇಳಿದ್ದು ಓವೈಸಿಯೇ ಹೊರತು ಒಬಿಸಿ ಅಲ್ಲ. ಅವರ (ಒವೈಸಿ) ಪೂರ್ವಿಕರು ದೇಶವಿರೋಧಿಗಳಾಗಿದ್ದರು. ನಾನು ಅವರನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ರಾಮದೇವ್ ಹೇಳಿದ್ದಾರೆ.

ವೈರಲ್‌ ವೀಡಿಯೊವನ್ನು ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗದಿದ್ದರೂ ವಿಡಿಯೋದಲ್ಲಿ ರಾಮ್‌ದೇವ್  ಬ್ರಾಹ್ಮಣ ಗುರುತನ್ನು ಘೋಷಿಸುವುದನ್ನು ತೋರಿಸುತ್ತದೆ ಮತ್ತು “ಅಗ್ನಿಹೋತ್ರಿ ಬ್ರಾಹ್ಮಣ” ಸೇರಿದಂತೆ ವಿವಿಧ ಬ್ರಾಹ್ಮಣ ಗೋತ್ರಗಳನ್ನು ಹೇಳುವುದು ಸೆರೆಯಾಗಿದೆ ಎಂದು ಎನ್‌ಡಿಟಿವಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಟ್ರೈಬಲ್ ಆರ್ಮಿ ಸಂಸ್ಥಾಪಕ ಹಂಸರಾಜ್ ಮೀನಾ, ರಾಮ್‌ದೇವ್, ನೀವು ಬ್ರಾಹ್ಮಣರಾಗಿ, ಠಾಕೂರ್ ಆಗಿರಿ, ವ್ಯಾಪಾರಿಯಾಗಿರಿ.. ನಮಗೆ ಪರವಾಗಿಲ್ಲ ಆದರೆ ನೀವು ಜಾತಿ ಶ್ರೇಷ್ಠತೆಯ ಬೂಟಾಟಿಕೆಯನ್ನು ಹೇಗೆ ವ್ಯಕ್ತಪಡಿಸುತ್ತೀರಿ ಮತ್ತು OBC ಸಮುದಾಯವನ್ನು ಹೇಗೆ ಅವಮಾನಿಸುತ್ತೀರಿ?ಒಬಿಸಿ ಸಮುದಾಯವು ಪತಂಜಲಿಯ ಸರಕುಗಳನ್ನು ಬಹಿಷ್ಕರಿಸುವ ದಿನ ಈ ಅಂಗಡಿಯನ್ನು ಮುಚ್ಚಲಾಗುತ್ತದೆ ಎಂಬುದನ್ನು ನೆನಪಿನಲ್ಲಿಡಿ ಎಂದು #BoycottPatanjali ಎಂಬ ಹ್ಯಾಶ್‌ಟ್ಯಾಗ್ ಸೇರಿಸಿ ಪೋಸ್ಟ್‌ ಮಾಡಿದ್ದಾರೆ.

ಇದನ್ನು ಓದಿ: ಬುಡಕಟ್ಟು ಕುಟುಂಬಗಳಿಗೆ ಬಹಿಷ್ಕಾರ ಹಾಕಿದ ಗ್ರಾಮದ ಮುಖ್ಯಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...