HomeUncategorizedಥೂ....ಮುಂದಿನ ಎಲೆಕ್ಷನ್ನಿನ್ಯಾಗೆ ನಾನು ಬ್ಲೂಜೆಪಿ ಪರುವಾಗಿ ಪ್ರಚಾರ ಮಾಡಕಿಲ್ಲ, ಮಾಡಕಿಲ್ಲ, ಮಾಡಕಿಲ್ಲsss

ಥೂ….ಮುಂದಿನ ಎಲೆಕ್ಷನ್ನಿನ್ಯಾಗೆ ನಾನು ಬ್ಲೂಜೆಪಿ ಪರುವಾಗಿ ಪ್ರಚಾರ ಮಾಡಕಿಲ್ಲ, ಮಾಡಕಿಲ್ಲ, ಮಾಡಕಿಲ್ಲsss

- Advertisement -
- Advertisement -

ಪ್ರಿಯ ಕೇಳುಗರಿಗೆಲ್ಲ ನಮಸ್ಕಾರ. ಆಘಾತವಾಣಿ ವಾರ್ತಾವಾಚನಕ್ಕೆ ಸ್ವಾಗತ. ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತು. ಇದೀಗ ವಾರ್ತೆಗಳ ವಿವರ.
ಬಾಬಾ ಲಾಂದೇವನಿಂದ ಹೆಡ್ಡಾಫೀಸಿಗೆ ಬಗನಿಗೂಟ: ಕಂಗಾಲಾಗಿ ಕುಳಿತುಕೊಂಡಿವೆ ನಾಗಪುರದ ಕ್ರಿಮಿಕೀಟ
ಕಳೆದ ಲೋಕಸಭಾ ಚುನಾವಣೆಯಲ್ಲಿ ಅಣ್ಣ ಹಜಾರೆ ಜೊತೆ ಸೇರಿ ಭ್ರಷ್ಟಾಚಾರ ನಿರ್ಮೂಲನೆ, ಲೋಕಪಾಲ ಮಸೂದೆ ಇನ್ನಿತ್ಯಾದಿ ಜನಪ್ರಿಯ ಸ್ಲೋಗನ್‍ಗಳ ರಿಯಾಯಿತಿ ದರದ ಮಾರಾಟಕ್ಕಿಳಿದಿದ್ದ ಬಾಬಾ ಲಾಂದೇವ್ ನಂತರ ಬ್ಲೂಜೆಪಿ ಗೆದ್ದ ನಂತರ ಧರಿಸಿದ್ದ ಚೂಡಿದಾರ್ ಸಮೇತ ನಾಗಪುರದ ಕುದುರೆರೇಸ್ ಹೆಡ್ಡಾಫೀಸಿನ ಬಚ್ಚಲುಮನೆಗೆ ನೆಗೆದಿದ್ದರು. ತನ್ನ ಮೂರಡಿ ಗಡ್ಡವನ್ನು ನಿರ್ಮಾಪುಡಿ ನೀರಿನಲ್ಲಿ ನೆನೆಸಿ ನಾಗಪುರದ ಹೆಡ್ಡಾಫೀಸ್ ನೆಲ ಒರೆಸುತ್ತ ತನ್ನ ತಪಂಜಲಿ ಕಂಪನಿಯನ್ನು ಬೆಳೆಸಿಕೊಂಡ ಲಾಂದೇವ್ ಇದೀಗ ಹೆಡ್ಡಾಫೀಸ್ ಗಢವಗಳ ಮುಖಕ್ಕೆ ಡಿಚ್ಚಿ ಹೊಡೆದಿರುವ ವರ್ತಮಾನ ಲಭ್ಯವಾಗಿದೆ. ಮುಂದಿನ ಎಲೆಕ್ಷನ್ನಿನಲ್ಲಿ ನಾನು ಬ್ಲೂಜೆಪಿ ಪರವಾಗಿ ಪ್ರಚಾರ ಮಾಡುವುದಿಲ್ಲ, ನನ್ನ ಬಾಯೊಳಗೆ ಹುಣ್ಣಾಗಿದ್ದು ಮೊದಲಿನಂತೆ ಈಗ ಭಾಷಣ ಜಡಿಯಲು ಸಾಧ್ಯವಾಗುತ್ತಿಲ್ಲ, ಆದ್ದರಿಂದ ಬ್ಲೂಜೆಪಿಯವರು ಅವರ ಗುಂಡಿಯನ್ನು ಅವರೇ ತೋಡಿಕೊಳ್ಳಲಿ, ಬೇಕಿದ್ರೆ, ಅದೇ ಗುಂಡಿಯೊಳಗೆ ಬಿದ್ದು ಅವರ ಮುಖದ ಮೇಲೆ ಅವರೇ ಮಣ್ಣು ಎಳೆದುಕೊಳ್ಳಲಿ, ನಾನು ಗೋಮೂತ್ರವನ್ನು 100 ಡಿಗ್ರಿಯಲ್ಲಿ ಕುದಿಸಿ, ಅದಕ್ಕೆ ಕರ್ಪೂರ ಚಕ್ಕೆ ಲವಂಗ ಮಿಕ್ಸ್ ಮಾಡಿ ಪೆಟ್ರೋಲ್ ಕಂಡುಹಿಡಿದು 35 ರುಪಾಯಿಗೆ ಲೀಟರಿನಂತೆ ಮಾರಿಕೊಂಡು ಬದುಕ್ಕೋತೀನಿ ಎಂದ ಲಾಂದೇವನ ಮಾತು ಕೇಳಿದ ನಾಗಪುರದ ವಯೋವೃದ್ಧ ಕ್ರಿಮಿಕೀಟಗಳು ಗಾಬರಿಬಿದ್ದು ಮೂಛೆರ್É ಹೋಗಿದ್ದಾರೆಂದು ತಿಳಿದುಬಂದಿದೆ.

********

ರೋಗಪೀಡಿತ ಮಂತ್ರಿಗಳೆಲ್ಲ ಫಾರಿನ್ನಿಗೆ ಹಾರ್ತಾವ್ರಲ್ಲ: ಚರಂಡಿಗ್ಯಾಸ್ ತಜ್ಞ ಮೋದಿ ಮಾತಿಗೆ ಬೆಲೆಯೇ ಇಲ್ಲ
ಜಿಲ್ಲೆಗೊಂದರಂತೆ ಆಯುರ್ವೇದ ಆಸ್ಪತ್ರೆ ತೆಗೀತೀನಿ, ಅಡ್ಮಿಟ್ ಆದವ್ರಿಗೆ ಗ್ಲೂಕೋಸ್ ಬದಲು ಗಂಜಲ ಹೆಟ್ಟಿ ರೋಗ ವಾಸಿ ಮಾಡ್ತೀನಿ, ಆಹಾರಪಥ್ಯಕ್ಕೆ ಬದಲಾಗಿ ಗೋವಿನಸೆಗಣಿ, ಹಾಸಿಗೆ ಬೆಡ್ ಬದಲು ಭತ್ತದ ಹುಲ್ಲಿನ ಮೆದೆ ಮೇಲೆ ರೋಗಿ ಮಲಗಿಸ್ತೀನಿ, ಹೀಗೆಂದು ಎರಡೂ ಕೈಯಲ್ಲಿ ಢಮಢಮನೆ ಎದೆ ಚಚ್ಚಿಕೊಂಡು ಆಯುರ್ವೇದದ ಬಗ್ಗೆ ಕಕ್ಕಿಕೊಂಡ ಮೋದಿ ಮಾತನ್ನು ಯಾರೂ ಮೂಸದೆ ಇರುವ ವರ್ತಮಾನ ತಿಳಿದುಬಂದಿದೆ. ಈ ಫುಲ್‍ಟೈಂ ಮೆಮೋರಿ ಲಾಸ್ ಗಿರಾಕಿಯ ಕ್ರಿಸ್ತಪೂರ್ವ ಕಾಲದ ಹೆಲ್ತ್ ಟ್ರೀಟ್‍ಮೆಂಟ್ ತಗೊಂಡ್ರೆ ಅಡ್ಮಿಟ್ ಆದ ಎರಡೇ ಗಂಟೆಗೆ ಕೈಲಾಸಕ್ಕೆ ಪಾರ್ಸೆಲ್ ಆಗೋದು ಗ್ಯಾರಂಟಿ ಎಂದರಿತ ಗೋವಾ ಮುಖ್ಯಮಂತ್ರಿ ಮನೋಹರ ಟುರಿಕ್ಕರ್ ಮೊನ್ನೆಯಷ್ಟೇ ಅಮೆರಿಕಕ್ಕೆ ಚಿಕಿತ್ಸೆಗಂತ ಓಡಿಹೋಗಿ ವಾಪಸ್ ಬಂದರು. ಇದೀಗ ಕೇಂದ್ರ ಕೆಮಿಕಲ್ & ಗೊಬ್ಬರದ ಮಂತ್ರಿ ಡೆಂಟಲ್ ಅನಂತ್ಕುಮಾರ್ ಲಂಡನ್ನಿಗೆ ಆರೋಗ್ಯ ಚಿಕಿತ್ಸೆಗೆ ಓಡಿಹೋಗಿದ್ದಾರೆ. ನಮ್ಮ ಟಣಾಟಣ ಸಂಸ್ಕøತಿಯ ಆರೋಗ್ಯವಿದ್ಯೆ, ವೇದಪುರಾಣ, ಆಯುರ್ವೇದ ಚರಕ ಪಂಡಿತನ ಜ್ಞಾನ ಆಧರಿಸಿದ ಚಿಕಿತ್ಸೆ ತಗೊಳ್ಳಿ ಎಂದು ಪುಂಗುವ ಈ ಪುಂಗಿವಾದಕರು ತಮಗೇನಾದರೂ ರೋಗ ಬಡಿದರೆ ಊರಿಗೆ ಮುಂಚೆ ದೇಶ ಬಿಟ್ಟು ವಿದೇಶಿ ಲಕ್ಸುರಿ ಆಸ್ಪತ್ರೆಗಳ ಬೆಡ್ ಮೇಲೆ ಮಕಾಡೆ ಮಲಗುವ ಈ ಐಚಿತ್ರಕ್ಕೆ ಭಕ್ತಗಣವೇ ಬೇಸ್ತುಬಿದ್ದಿರುವುದಾಗಿ ತಿಳಿದುಬಂದಿದೆ. ‘ಸ್ವದೇಶಿ ವೈದ್ಯಪದ್ದತಿಯ ಬಗ್ಗೆ ರಾತ್ರಿಹಗಲು ಬಡಬಡಿಸುವ ಈ ಮಂದಿ ಚಿಕಿತ್ಸೆಗಾಗಿ ಫಾರಿನ್‍ಗೆ ಹಾರುತ್ತಿದ್ದಾರೆಂದರೆ ಇವರಿಗೆ ಯಾವುದೋ ಗುಹ್ಯರೋಗಳು ಒಕ್ಕರಿಸಿಕೊಂಡಿರಬಹುದು; ತಮ್ಮ ಗೌಪ್ಯತೆಯನ್ನು ಕಾಪಾಡಿಕೊಳ್ಳಲಿಕ್ಕಾಗಿಯೇ ಫಾರಿನ್‍ಗೆ ಹಾರುತ್ತಿರಬಹುದು’ ಎಂಬ ವಿಶ್ಲೇಷಣೆ ಅವರ ವಿರೋಧಿಗಳ ಪಡಸಾಲೆಯಿಂದ ಕೇಳಿಬಂದಿದೆ.

********

ಸರ್ಕಾರಿ ಬ್ಯಾಂಕ್ ಹೆಸರು ಕಿವಿಗೆ ಬಿದ್ದರೆ ಶ್ರೀಸಾಮಾನ್ಯ ಪರಾರಿ: ದರೋಡೆಕೋರರ ಕಷ್ಟ ನಿವಾರಿಸಲು ಏಕಗವಾಕ್ಷಿ ನೀತಿ ಜಾರಿ
ಓದು ಬರಹ ಗೊತ್ತಿಲ್ಲದ ಅನ್ನೆಜುಕೇಟೆಡ್ ಮುಠ್ಠಾಳರ ಕೊಂಪೆಯಾಗಿರುವ ಕೇಂದ್ರ ಸರ್ಕಾರದ ಮಟಾಶ್ ಯೋಜನೆಗಳಿಂದ ದೇಶದ ಸರ್ಕಾರಿ ಬ್ಯಾಂಕುಗಳು ಕಾಲು ಕಿಸಿದುಕೊಂಡು ಮಲಗಿರುವ ಹೊತ್ತಿನಲ್ಲೇ, ಜನರು ಈ ಬ್ಯಾಂಕ್‍ಗಳಲ್ಲಿ ಹಣ ಡಿಪಾಸಿಟ್ ಮಾಡುವ ಅಂದರ್‍ಬಾಹರ್ ಅಪಾಯಕಾರಿ ಆಟಕ್ಕೆ ಬೆನ್ನು ತಿರುಗಿಸಿ ದಿಕ್ಕಾಪಾಲಾಗಿ ಓಡುತ್ತಿರುವ ಸುದ್ದಿ ಬಂದಿದೆ. ಸರ್ಕಾರಿ ಬ್ಯಾಂಕುಗಳಲ್ಲಿ ಜನರು ಇಡುತ್ತಿದ್ದ ಠೇವಣಿಯ ಮೊತ್ತ ಕಳೆದ 4 ದಶಕಗಳಲ್ಲೇ ಅತ್ಯಂತ ಕನಿಷ್ಠಮಟ್ಟ ತಲುಪಿದೆಯೆಂದು ಸರ್ಕಾರದ ವರದಿಯಿಂದಲೇ ಬಯಲಾಗಿದೆ. ಜನರ ಠೇವಣಿ ದುಡ್ಡನ್ನು ಬ್ಯಾಂಕುಗಳು ವಂಚಕ ಕಂಪನಿಗಳಿಗೆ ಕೊಡುವುದು, ಕಂಪನಿ ಮಾಲೀಕರು, ಕೇಂದ್ರ ಸರ್ಕಾರದ ಮೂರೂಬಿಟ್ಟ ಮಂತ್ರಿಗಳಿಗೆ ಪುಳಿಯೊಗರೆ ಪಾರ್ಟಿ ಕೊಟ್ಟು ಹಣದ ಸಮೇತ ದೇಶ ಬಿಟ್ಟು ಓಡಿಹೋಗುವುದು ಹೆಚ್ಚುತ್ತಿರುವುದರ ಹಿನ್ನೆಲೆಯಲ್ಲಿ ಬ್ಯಾಂಕಿನಲ್ಲಿ ಹಣವಿಡುವುದಕ್ಕಿಂತ ಆ ದುಡ್ಡನ್ನು ನಾವೇ ಪರಪರ ಹರಿದು ಬಿಸಾಕುವುದು ಬೆಟರ್ ಎಂಬ ತೀರ್ಮಾನಕ್ಕೆ ಜನರು ಬಂದಿರುವ ಸೂಚನೆಯಿದೆಯೆಂದು ಆರ್ಥಿಕ ತಜ್ಞರು ಅಂದಾಜಿಸಿದ್ದಾರೆ. ಇದರೊಡನೆ ದೇನಾ ಬ್ಯಾಂಕ್, ವಿಜಯಾಬ್ಯಾಂಕ್, ಬ್ಯಾಂಕ್ ಆಫ್ ಬರೋಡ ಬ್ಯಾಂಕ್‍ಗಳನ್ನು ಒಂದುಗೂಡಿಸಿ ಒಂದೇ ಬ್ಯಾಂಕ್ ಮಾಡಲು ಹೊರಟಿರೋ ಮುಠ್ಠಾಳ ಮಡೆಯರ ಹುನ್ನಾರವೇನೆಂದು ಆರ್ಥಿಕತಜ್ಞರಲ್ಲಿ ವಿಚಾರಿಸಿದಾಗ.. ಬ್ಯಾಂಕ್ ವಂಚಕರು ಸೆಪರೇಟ್ ಸೆಪರೇಟಾಗಿ ಬ್ಯಾಂಕುಗಳಿಗೆ ಸಾವಿರಾರು ಕೋಟಿ ಮುಂಡಾಮೋಚಲು ತೊಂದರೆಯಾಗಿರುವುದರಿಂದ ಒಂದೇ ಬ್ಯಾಂಕಿನಲ್ಲಿ ದೊಡ್ಡಮೊತ್ತದ ಸಾಲದ ದರೋಡೆ ನಡೆಸಲು “ಏಕಗವಾಕ್ಷಿ ಟ್ಯಾಕ್ಸ್‍ಮನಿ ದರೋಡೆ’ ಸ್ಕೀಂ ಕೆಳಗೆ ಈ ಬ್ಯಾಂಕುಗಳನ್ನು ವಿಲೀನಗೊಳಿಸಲಾಗಿದೆಯೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

********

ಕಾಲೆತ್ತಿಕೊಂಡ ಧಡಿಯೂರಪ್ಪನ ಆಪರೇಷನ್ ಕಮಲ: ಬೆರಕೆ ಸರ್ಕಾರ ಉರುಳಿಸೋ ಯತ್ನ ವಿಫಲ
ಅಧಿಕಾರದಲ್ಲಿದ್ದಾಗ ಚೆಕ್ಕು, ಡಿಡಿ, ಮನಿಯಾರ್ಡರ್‍ನಲ್ಲೆಲ್ಲ ಲಂಚ ಗೆಬರಿದ ಕಳ್ಳಗಂಟನ್ನು ಬಿಚ್ಚದೆ, ಬೆಂಗಳೂರು ಸಕಲೇಶಪುರ ಮುಂತಾದ ಊರುಗಳ ಪಿಕ್‍ಪಾಕೆಟರ್‍ಗಳು, ದರೋಡೆಕೋರರು, ಮಣ್ಣುಕಳ್ಳರ ಹಿಂದೆ ಬಿದ್ದಿರುವ ಧಡಿಯೂರಪ್ಪ ‘ನಿನ್ನ ಮಿನಿಸ್ಟರ್ ಮಾಡ್ತೀನಿ ಕೈ-ದಳ ಪಕ್ಷದ ಎಮ್ಮೆಲ್ಲೆಗಳನ್ನ ಪರ್ಚೇಸ್ ಮಾಡ್ಕೊಡು’ ಎಂದು ದುಂಬಾಲು ಬಿದ್ದಿದ್ದರೆಂಬ ಸುದ್ದಿ ವರದಿಯಾಗಿದೆ. ಅತ್ತ ಜಾರಕಿಹೊಳಿ ಬ್ರದರ್ಸ್ ಒದ್ದ ಎಡಗಾಲಿನ ಏಟಿಗೆ ಬುರುಡೆ ತೂತು ಮಾಡಿಕೊಂಡು ಬ್ಯಾಂಡೇಜ್ ಹಾಕಿಸಿಕೊಳ್ಳೋ ಲೆವೆಲ್ಲಿಗೆ ಬಂದಿರುವ ಬ್ಲೂಜೆಪಿ ಪಕ್ಷದ ಪ್ಲಾನು ಎರಡೂ ಕಾಲೆತ್ತಿಕೊಂಡು ಕಿಸಕೊಂಡು ಬಿದ್ದಿದ್ದು ಮತ್ತೊಮ್ಮೆ ಮುಖಭಂಗವಾಗಿದೆ. ಹೊಲಿಸಿಕೊಂಡಿದ್ದ ಹೊಸ ಕೋಟನ್ನು ಮಡಚಿಡುತ್ತ ಗೋಳಾಡುತ್ತಲೇ ವಾಮಿಟ್ ಶಾಗೆ ಫೋನ್ ಮಾಡಿದ ಧಡಿಯೂರಪ್ಪ ‘ಹಲೋ ಹಲೋ, ನಮ್ ಪ್ಲಾನಿಗೆ ವಾಂತಿಬೇಧಿಯಾಗಿ ಸ್ಕೆಚ್ಚು.. ಪಚ್ಚ್ ಎಂದಿದೆ.. ಮುಂದೆ ಯಾವತಿಪ್ಪೆ ಸೆಗಣಿ ತಿಂದರೆ ಅಧಿಕಾರ ಪಡೆಯಬಹುದು ಹೇಳಿ’ ಎಂದು ಕೇಳಿದರಂತೆ. ಅದಕ್ಕೆ ವಾಮಿಟ್ ಶಾ “ಅರೇ ಧಡಿಯೂರಪ್ಪಾಜೀ.. ಆಪ್ ಕೈಕೂ ಬಾರ್ ಬಾರ್ ಅಗಣಿ ಹಾಕಕ್ಕೆ ಹೋಗಿ.. ಉಸ್ಕೋ ಸಿಗಿಸ್ಕೋತೀರಿ, ಫಿರ್‍ಸೆ ಮತ್ ಫೋನ್ ಕರ್ನಾ.. ಮುಝೆ ಬಹೋತ್ ದರ್ದ್ ಹೋತಾ ಹಯ್, ಆಪ್ ಏಕ್ ಕಾಮ್ ಕೀಜಿಯೇ, ಏಕ್ ಚೊಂಬು ಉಠಾಕೆ ಕೋಯಿ ಡ್ಯಾಮ್ ಕಡೀಕೆ ಜಾವೋ. ವಾಪಸ್ ಮತ್ ಆನಾ.. ಡ್ಯಾಮ್ ಕೆ ಅಂದರ್ ಜಂಪ್ ಮಾರ್ಕೆ ಡೂಬ್ ಮರೋ” ಎಂದು ಬೈದು ಫೋನ್ ಕುಕ್ಕಿದರೆಂದು ಬಲ್ಲ ಮೂಲಗಳು ತಿಳಿಸಿವೆ.
ಇಲ್ಲಿಗೆ ನಮ್ಮ ವಾರ್ತಾಪ್ರಸಾರ ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಬೇಟಿ, ಮುಂದಿನವಾರ ಇದೇ ಸಮಯಕ್ಕೆ. ಮತ್ತೆ ಸಿಗೋಣ. ಅಲ್ಲಿಯವರೆಗೂ ನಮಸ್ಕಾರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...