Homeಮುಖಪುಟಸುಳ್ಳು ಹೇಳಿದ ಬಾಬಾ ರಾಮ್‌ದೇವ್! - ಪತಂಜಲಿ ಕೊರೊನಿಲ್ ಕುರಿತು ಐಎಂಎ ಆಕ್ರೋಶ

ಸುಳ್ಳು ಹೇಳಿದ ಬಾಬಾ ರಾಮ್‌ದೇವ್! – ಪತಂಜಲಿ ಕೊರೊನಿಲ್ ಕುರಿತು ಐಎಂಎ ಆಕ್ರೋಶ

#COVID19 ಚಿಕಿತ್ಸೆಗಾಗಿ ಯಾವುದೇ ಸಾಂಪ್ರದಾಯಿಕ ಔಷಧದ ಪರಿಣಾಮಕಾರಿತ್ವವನ್ನು WHO ಪರಿಶೀಲಿಸಿಲ್ಲ ಅಥವಾ ಪ್ರಮಾಣೀಕರಿಸಿಲ್ಲ" ಎಂದು WHO ಆಗ್ನೇಯ ಏಷ್ಯ ಟ್ವೀಟ್ ಮಾಡಿದೆ.

- Advertisement -
- Advertisement -

ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರ ಸಮ್ಮುಖದಲ್ಲಿ ಯೋಗ ಗುರು ರಾಮದೇವ್ “ಕೊವಿಡ್-19 ಗಾಗಿ ಮೊದಲ ಸಾಕ್ಷ್ಯ ಆಧಾರಿತ ಔಷಧ” ಎಂದು ಪತಂಜಲಿಯ ಕೊರೊನಿಲ್ ಕುರಿತು ಸಮರ್ಥಿಸಿಕೊಂಡಿದ್ದನ್ನು ಭಾರತೀಯ ವೈದ್ಯಕೀಯ ಸಂಘ (ಐಎಂಎ) ತೀವ್ರವಾಗಿ ಟೀಕಿಸಿದೆ. ಆರೋಗ್ಯ ಸಚಿವರು ದೇಶದ ಮುಂದೆ “ಸುಳ್ಳು ಕಟ್ಟುಕಥೆ, ಅವೈಜ್ಞಾನಿಕ ಉತ್ಪನ್ನ”ವನ್ನು ಉತ್ತೇಜಿಸಲು ಹೇಗೆ ಸಾಧ್ಯ ಎಂದು ವೈದ್ಯಕೀಯ ಸಂಸ್ಥೆ ಪ್ರಶ್ನಿಸಿದೆ.

ಶುಕ್ರವಾರ, ರಾಮದೇವ್ ಅವರು ಪತಂಜಲಿ ಉತ್ಪನ್ನ ಕೊರೊನಿಲ್ ಅನ್ನು ಆರೋಗ್ಯ ಸಚಿವ ಹಷ್‌ವರ್ಧನ್ ಮತ್ತು ಮತ್ತೊಬ್ಬ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಸಮ್ಮುಖದಲ್ಲಿ ಬಿಡುಗಡೆ ಮಾಡಿದ್ದರು. ಈ ಮೂವರ ಹಿಂದಿರುವ ದೊಡ್ಡ ಪೋಸ್ಟರ್‌ನಲ್ಲಿ “ಔಷಧಿಯು CoPP ಮತ್ತು WHO- ಜಿಎಂಪಿ ಪ್ರಮಾಣೀಕರಿಸಲ್ಪಟ್ಟಿದೆ ಎಂದು ಬರೆಯಲ್ಪಟ್ಟಿತ್ತು. ಅಂದರೆ ಇದು ಔಷಧೀಯ ಉತ್ಪನ್ನದ ಪ್ರಮಾಣಪತ್ರವನ್ನು (CoPP) ಹೊಂದಿದೆ ಮತ್ತು ಇದನ್ನು ವಿಶ್ವ ಆರೋಗ್ಯ ಸಂಸ್ಥೆಯ ಉತ್ತಮ ಉತ್ಪಾದನಾ ಪ್ರಾಕ್ಟೀಸಸ್ (ಜಿಎಂಪಿ) ಗುರುತಿಸಿದೆ ಎಂದರ್ಥ.

ಈ ಎರಡೂ ಮಾನದಂಡಗಳು ಔಷಧೀಯ ಉತ್ಪನ್ನಗಳಲ್ಲಿ ಗುಣಮಟ್ಟದ ಭರವಸೆಯನ್ನು ಬಹುಪಾಲು ವ್ಯಾಖ್ಯಾನಿಸುತ್ತವೆ.

ಇದನ್ನೂ ಓದಿ: ಜನರ ಭಯದ ದುರುಪಯೋಗ: ರಾಮ್‌ದೇವ್ ಪತಂಜಲಿಗೆ 10 ಲಕ್ಷ ರೂ ದಂಡ

ಆದರೆ, ಕೊವಿಡ್-19 ಗೆ ಚಿಕಿತ್ಸೆ ನೀಡಲು ಅಥವಾ ತಡೆಗಟ್ಟಲು ಯಾವುದೇ ಸಾಂಪ್ರದಾಯಿಕ ಔಷಧಿಯನ್ನು ಪರಿಶೀಲಿಸಿಲ್ಲ ಅಥವಾ ಪ್ರಮಾಣೀಕರಿಸಿಲ್ಲ ಎಂದು ಡಬ್ಲೂಎಚ್‌ಒ ಟ್ವೀಟ್‌ನಲ್ಲಿ ಸ್ಪಷ್ಟಪಡಿಸಿದೆ. #COVID19 ಚಿಕಿತ್ಸೆಗಾಗಿ ಯಾವುದೇ ಸಾಂಪ್ರದಾಯಿಕ ಔಷಧದ ಪರಿಣಾಮಕಾರಿತ್ವವನ್ನು WHO ಪರಿಶೀಲಿಸಿಲ್ಲ ಅಥವಾ ಪ್ರಮಾಣೀಕರಿಸಿಲ್ಲ” ಎಂದು WHO ಆಗ್ನೇಯ ಏಷ್ಯ ಟ್ವೀಟ್ ಮಾಡಿದೆ.

ಸ್ವತ: ವೈದ್ಯರೂ ಆಗಿರುವ ಆರೋಗ್ಯ ಸಚಿವರ ಸಮ್ಮುಖದಲ್ಲಿ ಅನಾವರಣಗೊಂಡ “ರಹಸ್ಯ ಔಷಧ”ಕ್ಕೆ WHO ಪ್ರಮಾಣೀಕರಣದ ಹಸಿ ಸುಳ್ಳು ಕಾಣಿಸಿಕೊಂಡಿದ್ದನ್ನು ಗಮನಿಸಿದಾಗ ಆಘಾತವಾಯಿತು ಎಂದು ಐಎಂಎ ಹೇಳಿದೆ. ದೇಶಕ್ಕೆ ಸಚಿವರ ವಿವರಣೆಯ ಅಗತ್ಯವಿದೆ ಎಂದು ಅದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

“ದೇಶದ ಆರೋಗ್ಯ ಮಂತ್ರಿಯಾಗಿ, ಇಂತಹ ಸುಳ್ಳು ಪ್ರಕ್ಷೇಪಗಳನ್ನು, ಪ್ರಮಾಣೀಕೃತವಲ್ಲದ ಔಷಧಿಗಳನ್ನು ಇಡೀ ದೇಶದ ಮುಂದೆ ಬಿಡುಗಡೆ ಮಾಡುವುದು ಎಷ್ಟು ಸೂಕ್ತ ಮತ್ತು ತರ್ಕಬದ್ಧವಾಗಿದೆ? ಇಂತಹ ಸುಳ್ಳು ಕಟ್ಟುಕಥೆಯ ಅವೈಜ್ಞಾನಿಕ ಉತ್ಪನ್ನವನ್ನು ಜನರಿಗೆ ಬಿಡುಗಡೆ ಮಾಡುವುದು ಎಷ್ಟು ಸಮರ್ಥನೀಯ? ಇಡೀ ದೇಶದ ಆರೋಗ್ಯ ಮಂತ್ರಿಯಾಗಿ, ಉತ್ಪನ್ನವನ್ನು ಅನೈತಿಕ, ತಪ್ಪು ಮತ್ತು ಸುಳ್ಳು ರೀತಿಯಲ್ಲಿ ಉತ್ತೇಜಿಸುವುದು ಎಷ್ಟು ನೈತಿಕವಾಗಿದೆ? ದೇಶದ ಆರೋಗ್ಯ ಸಚಿವರಾಗಿ ಮತ್ತು ಆಧುನಿಕ ವೈದ್ಯರಾಗಿ ಇಂತಹ ಆಧಾರರಹಿತ, ಪ್ರಮಾಣೀಕೃತವಲ್ಲದ ಉತ್ಪನ್ನವನ್ನು ಉತ್ತೇಜಿಸುವುದು ಎಷ್ಟು ನೈತಿಕವಾಗಿದೆ”ಎಂದು ವೈದ್ಯಕೀಯ ಸಂಸ್ಥೆ ಕಟುವಾಗಿ ಪ್ರಶ್ನಿಸಿದೆ.

ಇದನ್ನೂ ಓದಿ: ರಣಕೇಕೆಯ ಮಾಧ್ಯಮಗಳ ನಡುವೆ ನಮ್ಮ ಕರ್ತವ್ಯ; ನ್ಯಾಯಪಥ ಸಂಪಾದಕೀಯ

“ಆರೋಗ್ಯ ಸಚಿವರು ಒಂದು ಅವೈಜ್ಞಾನಿಕ ಔಷಧದ ಸುಳ್ಳು ಮತ್ತು ಕಲ್ಪಿತ ಪ್ರಕ್ಷೇಪಣವನ್ನು ಬೆಂಬಲಿಸುವುದು ಮತ್ತು WHO ಇದನ್ನು ತಿರಸ್ಕರಿಸುವುದು- ದೇಶದ ಜನರಿಗೆ ಮಾಡಿದ ಕಪಾಳಮೋಕ್ಷ ಮತ್ತು ಅವಮಾನ” ಎಂದು ಐಎಂಎ ಟೀಕಿಸಿದೆ.

ಕೊವಿಡ್ ತಡೆಗಟ್ಟಲು ಕೊರೊನಿಲ್ ಪರಿಣಾಮಕಾರಿಯಾಗಿದ್ದರೆ, ವ್ಯಾಕ್ಸಿನೇಷನ್‌ಗಾಗಿ ಸರ್ಕಾರ 35,000 ಕೋಟಿ ರೂ.ಗಳನ್ನು ಏಕೆ ಖರ್ಚು ಮಾಡಿದೆ ಎಂದು ಐಎಂಎ ಕೇಳಿದೆ.

ಪತಂಜಲಿ ಆಯುರ್ವೇದ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರು WHO ಟ್ವೀಟ್‌ಗೆ ಸ್ವಲ್ಪ ಮೊದಲು ಸ್ಪಷ್ಟನೆ ನೀಡಿದ್ದರು.

“ಕೊರೊನಿಲ್‌ಗೆ WHO ಜಿಎಂಪಿ ಕಂಪ್ಲೈಂಟ್ CoPP ಪ್ರಮಾಣಪತ್ರವನ್ನು ಭಾರತ ಸರ್ಕಾರದ ಡಿಸಿಜಿಐ ನೀಡಿದೆ. WHO ಯಾವುದೇ ಔಷಧಿಗಳನ್ನು ಅನುಮೋದಿಸುವುದಿಲ್ಲ ಅಥವಾ ನಿರಾಕರಿಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಜನರಿಗೆ ಉತ್ತಮ, ಆರೋಗ್ಯಕರ ಭವಿಷ್ಯವನ್ನು ನಿರ್ಮಿಸಲು WHO ಕೆಲಸ ಮಾಡುತ್ತದೆ ಎಂದು ಬಾಲಕೃಷ್ಣ ಟ್ವೀಟ್ ಮಾಡಿದ್ದರು.

ಕಳೆದ ವರ್ಷ, ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ಲಸಿಕೆಗಳು ಇನ್ನೂ ಪ್ರಯೋಗದ ಹಂತದಲ್ಲಿದ್ದವು, ಕೊರೊನಿಲ್ ಕೊರೊನಾವೈರಸ್ ವಿರುದ್ಧ ಬಲವಾದ ರಕ್ಷಣೆ ನೀಡಬಹುದೆಂದು ಪತಂಜಲಿ ಆಯುರ್ವೇದ ಹೇಳಿಕೊಂಡಿತ್ತು. ಅದರ ಸಮರ್ಥನೆಗಳ ಬಗ್ಗೆ ದೊಡ್ಡ ವಿವಾದದ ನಂತರ, ಆಯುಷ್ ಸಚಿವಾಲಯವು ಕೊರೊನಿಲ್ ಅನ್ನು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಸಾಧನವಾಗಿ ಮಾತ್ರ ಮಾರಾಟ ಮಾಡಬಹುದೆಂದು ಹೇಳಿತ್ತು.


ಇದನ್ನೂ ಓದಿ: ಪತಂಜಲಿಯಿಂದ ಕೊರೊನಾ ಗುಣಪಡಿಸಬಹುದೆಂದು ನಾವು ಹೇಳಿಲ್ಲ: ಸಿಇಒ ಆಚಾರ್ಯ ಬಾಲಕೃಷ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...