Homeಮುಖಪುಟಸುಳ್ಳು ಹೇಳಿದ ಬಾಬಾ ರಾಮ್‌ದೇವ್! - ಪತಂಜಲಿ ಕೊರೊನಿಲ್ ಕುರಿತು ಐಎಂಎ ಆಕ್ರೋಶ

ಸುಳ್ಳು ಹೇಳಿದ ಬಾಬಾ ರಾಮ್‌ದೇವ್! – ಪತಂಜಲಿ ಕೊರೊನಿಲ್ ಕುರಿತು ಐಎಂಎ ಆಕ್ರೋಶ

#COVID19 ಚಿಕಿತ್ಸೆಗಾಗಿ ಯಾವುದೇ ಸಾಂಪ್ರದಾಯಿಕ ಔಷಧದ ಪರಿಣಾಮಕಾರಿತ್ವವನ್ನು WHO ಪರಿಶೀಲಿಸಿಲ್ಲ ಅಥವಾ ಪ್ರಮಾಣೀಕರಿಸಿಲ್ಲ" ಎಂದು WHO ಆಗ್ನೇಯ ಏಷ್ಯ ಟ್ವೀಟ್ ಮಾಡಿದೆ.

- Advertisement -
- Advertisement -

ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರ ಸಮ್ಮುಖದಲ್ಲಿ ಯೋಗ ಗುರು ರಾಮದೇವ್ “ಕೊವಿಡ್-19 ಗಾಗಿ ಮೊದಲ ಸಾಕ್ಷ್ಯ ಆಧಾರಿತ ಔಷಧ” ಎಂದು ಪತಂಜಲಿಯ ಕೊರೊನಿಲ್ ಕುರಿತು ಸಮರ್ಥಿಸಿಕೊಂಡಿದ್ದನ್ನು ಭಾರತೀಯ ವೈದ್ಯಕೀಯ ಸಂಘ (ಐಎಂಎ) ತೀವ್ರವಾಗಿ ಟೀಕಿಸಿದೆ. ಆರೋಗ್ಯ ಸಚಿವರು ದೇಶದ ಮುಂದೆ “ಸುಳ್ಳು ಕಟ್ಟುಕಥೆ, ಅವೈಜ್ಞಾನಿಕ ಉತ್ಪನ್ನ”ವನ್ನು ಉತ್ತೇಜಿಸಲು ಹೇಗೆ ಸಾಧ್ಯ ಎಂದು ವೈದ್ಯಕೀಯ ಸಂಸ್ಥೆ ಪ್ರಶ್ನಿಸಿದೆ.

ಶುಕ್ರವಾರ, ರಾಮದೇವ್ ಅವರು ಪತಂಜಲಿ ಉತ್ಪನ್ನ ಕೊರೊನಿಲ್ ಅನ್ನು ಆರೋಗ್ಯ ಸಚಿವ ಹಷ್‌ವರ್ಧನ್ ಮತ್ತು ಮತ್ತೊಬ್ಬ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಸಮ್ಮುಖದಲ್ಲಿ ಬಿಡುಗಡೆ ಮಾಡಿದ್ದರು. ಈ ಮೂವರ ಹಿಂದಿರುವ ದೊಡ್ಡ ಪೋಸ್ಟರ್‌ನಲ್ಲಿ “ಔಷಧಿಯು CoPP ಮತ್ತು WHO- ಜಿಎಂಪಿ ಪ್ರಮಾಣೀಕರಿಸಲ್ಪಟ್ಟಿದೆ ಎಂದು ಬರೆಯಲ್ಪಟ್ಟಿತ್ತು. ಅಂದರೆ ಇದು ಔಷಧೀಯ ಉತ್ಪನ್ನದ ಪ್ರಮಾಣಪತ್ರವನ್ನು (CoPP) ಹೊಂದಿದೆ ಮತ್ತು ಇದನ್ನು ವಿಶ್ವ ಆರೋಗ್ಯ ಸಂಸ್ಥೆಯ ಉತ್ತಮ ಉತ್ಪಾದನಾ ಪ್ರಾಕ್ಟೀಸಸ್ (ಜಿಎಂಪಿ) ಗುರುತಿಸಿದೆ ಎಂದರ್ಥ.

ಈ ಎರಡೂ ಮಾನದಂಡಗಳು ಔಷಧೀಯ ಉತ್ಪನ್ನಗಳಲ್ಲಿ ಗುಣಮಟ್ಟದ ಭರವಸೆಯನ್ನು ಬಹುಪಾಲು ವ್ಯಾಖ್ಯಾನಿಸುತ್ತವೆ.

ಇದನ್ನೂ ಓದಿ: ಜನರ ಭಯದ ದುರುಪಯೋಗ: ರಾಮ್‌ದೇವ್ ಪತಂಜಲಿಗೆ 10 ಲಕ್ಷ ರೂ ದಂಡ

ಆದರೆ, ಕೊವಿಡ್-19 ಗೆ ಚಿಕಿತ್ಸೆ ನೀಡಲು ಅಥವಾ ತಡೆಗಟ್ಟಲು ಯಾವುದೇ ಸಾಂಪ್ರದಾಯಿಕ ಔಷಧಿಯನ್ನು ಪರಿಶೀಲಿಸಿಲ್ಲ ಅಥವಾ ಪ್ರಮಾಣೀಕರಿಸಿಲ್ಲ ಎಂದು ಡಬ್ಲೂಎಚ್‌ಒ ಟ್ವೀಟ್‌ನಲ್ಲಿ ಸ್ಪಷ್ಟಪಡಿಸಿದೆ. #COVID19 ಚಿಕಿತ್ಸೆಗಾಗಿ ಯಾವುದೇ ಸಾಂಪ್ರದಾಯಿಕ ಔಷಧದ ಪರಿಣಾಮಕಾರಿತ್ವವನ್ನು WHO ಪರಿಶೀಲಿಸಿಲ್ಲ ಅಥವಾ ಪ್ರಮಾಣೀಕರಿಸಿಲ್ಲ” ಎಂದು WHO ಆಗ್ನೇಯ ಏಷ್ಯ ಟ್ವೀಟ್ ಮಾಡಿದೆ.

ಸ್ವತ: ವೈದ್ಯರೂ ಆಗಿರುವ ಆರೋಗ್ಯ ಸಚಿವರ ಸಮ್ಮುಖದಲ್ಲಿ ಅನಾವರಣಗೊಂಡ “ರಹಸ್ಯ ಔಷಧ”ಕ್ಕೆ WHO ಪ್ರಮಾಣೀಕರಣದ ಹಸಿ ಸುಳ್ಳು ಕಾಣಿಸಿಕೊಂಡಿದ್ದನ್ನು ಗಮನಿಸಿದಾಗ ಆಘಾತವಾಯಿತು ಎಂದು ಐಎಂಎ ಹೇಳಿದೆ. ದೇಶಕ್ಕೆ ಸಚಿವರ ವಿವರಣೆಯ ಅಗತ್ಯವಿದೆ ಎಂದು ಅದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

“ದೇಶದ ಆರೋಗ್ಯ ಮಂತ್ರಿಯಾಗಿ, ಇಂತಹ ಸುಳ್ಳು ಪ್ರಕ್ಷೇಪಗಳನ್ನು, ಪ್ರಮಾಣೀಕೃತವಲ್ಲದ ಔಷಧಿಗಳನ್ನು ಇಡೀ ದೇಶದ ಮುಂದೆ ಬಿಡುಗಡೆ ಮಾಡುವುದು ಎಷ್ಟು ಸೂಕ್ತ ಮತ್ತು ತರ್ಕಬದ್ಧವಾಗಿದೆ? ಇಂತಹ ಸುಳ್ಳು ಕಟ್ಟುಕಥೆಯ ಅವೈಜ್ಞಾನಿಕ ಉತ್ಪನ್ನವನ್ನು ಜನರಿಗೆ ಬಿಡುಗಡೆ ಮಾಡುವುದು ಎಷ್ಟು ಸಮರ್ಥನೀಯ? ಇಡೀ ದೇಶದ ಆರೋಗ್ಯ ಮಂತ್ರಿಯಾಗಿ, ಉತ್ಪನ್ನವನ್ನು ಅನೈತಿಕ, ತಪ್ಪು ಮತ್ತು ಸುಳ್ಳು ರೀತಿಯಲ್ಲಿ ಉತ್ತೇಜಿಸುವುದು ಎಷ್ಟು ನೈತಿಕವಾಗಿದೆ? ದೇಶದ ಆರೋಗ್ಯ ಸಚಿವರಾಗಿ ಮತ್ತು ಆಧುನಿಕ ವೈದ್ಯರಾಗಿ ಇಂತಹ ಆಧಾರರಹಿತ, ಪ್ರಮಾಣೀಕೃತವಲ್ಲದ ಉತ್ಪನ್ನವನ್ನು ಉತ್ತೇಜಿಸುವುದು ಎಷ್ಟು ನೈತಿಕವಾಗಿದೆ”ಎಂದು ವೈದ್ಯಕೀಯ ಸಂಸ್ಥೆ ಕಟುವಾಗಿ ಪ್ರಶ್ನಿಸಿದೆ.

ಇದನ್ನೂ ಓದಿ: ರಣಕೇಕೆಯ ಮಾಧ್ಯಮಗಳ ನಡುವೆ ನಮ್ಮ ಕರ್ತವ್ಯ; ನ್ಯಾಯಪಥ ಸಂಪಾದಕೀಯ

“ಆರೋಗ್ಯ ಸಚಿವರು ಒಂದು ಅವೈಜ್ಞಾನಿಕ ಔಷಧದ ಸುಳ್ಳು ಮತ್ತು ಕಲ್ಪಿತ ಪ್ರಕ್ಷೇಪಣವನ್ನು ಬೆಂಬಲಿಸುವುದು ಮತ್ತು WHO ಇದನ್ನು ತಿರಸ್ಕರಿಸುವುದು- ದೇಶದ ಜನರಿಗೆ ಮಾಡಿದ ಕಪಾಳಮೋಕ್ಷ ಮತ್ತು ಅವಮಾನ” ಎಂದು ಐಎಂಎ ಟೀಕಿಸಿದೆ.

ಕೊವಿಡ್ ತಡೆಗಟ್ಟಲು ಕೊರೊನಿಲ್ ಪರಿಣಾಮಕಾರಿಯಾಗಿದ್ದರೆ, ವ್ಯಾಕ್ಸಿನೇಷನ್‌ಗಾಗಿ ಸರ್ಕಾರ 35,000 ಕೋಟಿ ರೂ.ಗಳನ್ನು ಏಕೆ ಖರ್ಚು ಮಾಡಿದೆ ಎಂದು ಐಎಂಎ ಕೇಳಿದೆ.

ಪತಂಜಲಿ ಆಯುರ್ವೇದ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರು WHO ಟ್ವೀಟ್‌ಗೆ ಸ್ವಲ್ಪ ಮೊದಲು ಸ್ಪಷ್ಟನೆ ನೀಡಿದ್ದರು.

“ಕೊರೊನಿಲ್‌ಗೆ WHO ಜಿಎಂಪಿ ಕಂಪ್ಲೈಂಟ್ CoPP ಪ್ರಮಾಣಪತ್ರವನ್ನು ಭಾರತ ಸರ್ಕಾರದ ಡಿಸಿಜಿಐ ನೀಡಿದೆ. WHO ಯಾವುದೇ ಔಷಧಿಗಳನ್ನು ಅನುಮೋದಿಸುವುದಿಲ್ಲ ಅಥವಾ ನಿರಾಕರಿಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಜನರಿಗೆ ಉತ್ತಮ, ಆರೋಗ್ಯಕರ ಭವಿಷ್ಯವನ್ನು ನಿರ್ಮಿಸಲು WHO ಕೆಲಸ ಮಾಡುತ್ತದೆ ಎಂದು ಬಾಲಕೃಷ್ಣ ಟ್ವೀಟ್ ಮಾಡಿದ್ದರು.

ಕಳೆದ ವರ್ಷ, ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ಲಸಿಕೆಗಳು ಇನ್ನೂ ಪ್ರಯೋಗದ ಹಂತದಲ್ಲಿದ್ದವು, ಕೊರೊನಿಲ್ ಕೊರೊನಾವೈರಸ್ ವಿರುದ್ಧ ಬಲವಾದ ರಕ್ಷಣೆ ನೀಡಬಹುದೆಂದು ಪತಂಜಲಿ ಆಯುರ್ವೇದ ಹೇಳಿಕೊಂಡಿತ್ತು. ಅದರ ಸಮರ್ಥನೆಗಳ ಬಗ್ಗೆ ದೊಡ್ಡ ವಿವಾದದ ನಂತರ, ಆಯುಷ್ ಸಚಿವಾಲಯವು ಕೊರೊನಿಲ್ ಅನ್ನು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಸಾಧನವಾಗಿ ಮಾತ್ರ ಮಾರಾಟ ಮಾಡಬಹುದೆಂದು ಹೇಳಿತ್ತು.


ಇದನ್ನೂ ಓದಿ: ಪತಂಜಲಿಯಿಂದ ಕೊರೊನಾ ಗುಣಪಡಿಸಬಹುದೆಂದು ನಾವು ಹೇಳಿಲ್ಲ: ಸಿಇಒ ಆಚಾರ್ಯ ಬಾಲಕೃಷ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...