Homeಮುಖಪುಟಸುಳ್ಳು ಹೇಳಿದ ಬಾಬಾ ರಾಮ್‌ದೇವ್! - ಪತಂಜಲಿ ಕೊರೊನಿಲ್ ಕುರಿತು ಐಎಂಎ ಆಕ್ರೋಶ

ಸುಳ್ಳು ಹೇಳಿದ ಬಾಬಾ ರಾಮ್‌ದೇವ್! – ಪತಂಜಲಿ ಕೊರೊನಿಲ್ ಕುರಿತು ಐಎಂಎ ಆಕ್ರೋಶ

#COVID19 ಚಿಕಿತ್ಸೆಗಾಗಿ ಯಾವುದೇ ಸಾಂಪ್ರದಾಯಿಕ ಔಷಧದ ಪರಿಣಾಮಕಾರಿತ್ವವನ್ನು WHO ಪರಿಶೀಲಿಸಿಲ್ಲ ಅಥವಾ ಪ್ರಮಾಣೀಕರಿಸಿಲ್ಲ" ಎಂದು WHO ಆಗ್ನೇಯ ಏಷ್ಯ ಟ್ವೀಟ್ ಮಾಡಿದೆ.

- Advertisement -
- Advertisement -

ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರ ಸಮ್ಮುಖದಲ್ಲಿ ಯೋಗ ಗುರು ರಾಮದೇವ್ “ಕೊವಿಡ್-19 ಗಾಗಿ ಮೊದಲ ಸಾಕ್ಷ್ಯ ಆಧಾರಿತ ಔಷಧ” ಎಂದು ಪತಂಜಲಿಯ ಕೊರೊನಿಲ್ ಕುರಿತು ಸಮರ್ಥಿಸಿಕೊಂಡಿದ್ದನ್ನು ಭಾರತೀಯ ವೈದ್ಯಕೀಯ ಸಂಘ (ಐಎಂಎ) ತೀವ್ರವಾಗಿ ಟೀಕಿಸಿದೆ. ಆರೋಗ್ಯ ಸಚಿವರು ದೇಶದ ಮುಂದೆ “ಸುಳ್ಳು ಕಟ್ಟುಕಥೆ, ಅವೈಜ್ಞಾನಿಕ ಉತ್ಪನ್ನ”ವನ್ನು ಉತ್ತೇಜಿಸಲು ಹೇಗೆ ಸಾಧ್ಯ ಎಂದು ವೈದ್ಯಕೀಯ ಸಂಸ್ಥೆ ಪ್ರಶ್ನಿಸಿದೆ.

ಶುಕ್ರವಾರ, ರಾಮದೇವ್ ಅವರು ಪತಂಜಲಿ ಉತ್ಪನ್ನ ಕೊರೊನಿಲ್ ಅನ್ನು ಆರೋಗ್ಯ ಸಚಿವ ಹಷ್‌ವರ್ಧನ್ ಮತ್ತು ಮತ್ತೊಬ್ಬ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಸಮ್ಮುಖದಲ್ಲಿ ಬಿಡುಗಡೆ ಮಾಡಿದ್ದರು. ಈ ಮೂವರ ಹಿಂದಿರುವ ದೊಡ್ಡ ಪೋಸ್ಟರ್‌ನಲ್ಲಿ “ಔಷಧಿಯು CoPP ಮತ್ತು WHO- ಜಿಎಂಪಿ ಪ್ರಮಾಣೀಕರಿಸಲ್ಪಟ್ಟಿದೆ ಎಂದು ಬರೆಯಲ್ಪಟ್ಟಿತ್ತು. ಅಂದರೆ ಇದು ಔಷಧೀಯ ಉತ್ಪನ್ನದ ಪ್ರಮಾಣಪತ್ರವನ್ನು (CoPP) ಹೊಂದಿದೆ ಮತ್ತು ಇದನ್ನು ವಿಶ್ವ ಆರೋಗ್ಯ ಸಂಸ್ಥೆಯ ಉತ್ತಮ ಉತ್ಪಾದನಾ ಪ್ರಾಕ್ಟೀಸಸ್ (ಜಿಎಂಪಿ) ಗುರುತಿಸಿದೆ ಎಂದರ್ಥ.

ಈ ಎರಡೂ ಮಾನದಂಡಗಳು ಔಷಧೀಯ ಉತ್ಪನ್ನಗಳಲ್ಲಿ ಗುಣಮಟ್ಟದ ಭರವಸೆಯನ್ನು ಬಹುಪಾಲು ವ್ಯಾಖ್ಯಾನಿಸುತ್ತವೆ.

ಇದನ್ನೂ ಓದಿ: ಜನರ ಭಯದ ದುರುಪಯೋಗ: ರಾಮ್‌ದೇವ್ ಪತಂಜಲಿಗೆ 10 ಲಕ್ಷ ರೂ ದಂಡ

ಆದರೆ, ಕೊವಿಡ್-19 ಗೆ ಚಿಕಿತ್ಸೆ ನೀಡಲು ಅಥವಾ ತಡೆಗಟ್ಟಲು ಯಾವುದೇ ಸಾಂಪ್ರದಾಯಿಕ ಔಷಧಿಯನ್ನು ಪರಿಶೀಲಿಸಿಲ್ಲ ಅಥವಾ ಪ್ರಮಾಣೀಕರಿಸಿಲ್ಲ ಎಂದು ಡಬ್ಲೂಎಚ್‌ಒ ಟ್ವೀಟ್‌ನಲ್ಲಿ ಸ್ಪಷ್ಟಪಡಿಸಿದೆ. #COVID19 ಚಿಕಿತ್ಸೆಗಾಗಿ ಯಾವುದೇ ಸಾಂಪ್ರದಾಯಿಕ ಔಷಧದ ಪರಿಣಾಮಕಾರಿತ್ವವನ್ನು WHO ಪರಿಶೀಲಿಸಿಲ್ಲ ಅಥವಾ ಪ್ರಮಾಣೀಕರಿಸಿಲ್ಲ” ಎಂದು WHO ಆಗ್ನೇಯ ಏಷ್ಯ ಟ್ವೀಟ್ ಮಾಡಿದೆ.

ಸ್ವತ: ವೈದ್ಯರೂ ಆಗಿರುವ ಆರೋಗ್ಯ ಸಚಿವರ ಸಮ್ಮುಖದಲ್ಲಿ ಅನಾವರಣಗೊಂಡ “ರಹಸ್ಯ ಔಷಧ”ಕ್ಕೆ WHO ಪ್ರಮಾಣೀಕರಣದ ಹಸಿ ಸುಳ್ಳು ಕಾಣಿಸಿಕೊಂಡಿದ್ದನ್ನು ಗಮನಿಸಿದಾಗ ಆಘಾತವಾಯಿತು ಎಂದು ಐಎಂಎ ಹೇಳಿದೆ. ದೇಶಕ್ಕೆ ಸಚಿವರ ವಿವರಣೆಯ ಅಗತ್ಯವಿದೆ ಎಂದು ಅದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

“ದೇಶದ ಆರೋಗ್ಯ ಮಂತ್ರಿಯಾಗಿ, ಇಂತಹ ಸುಳ್ಳು ಪ್ರಕ್ಷೇಪಗಳನ್ನು, ಪ್ರಮಾಣೀಕೃತವಲ್ಲದ ಔಷಧಿಗಳನ್ನು ಇಡೀ ದೇಶದ ಮುಂದೆ ಬಿಡುಗಡೆ ಮಾಡುವುದು ಎಷ್ಟು ಸೂಕ್ತ ಮತ್ತು ತರ್ಕಬದ್ಧವಾಗಿದೆ? ಇಂತಹ ಸುಳ್ಳು ಕಟ್ಟುಕಥೆಯ ಅವೈಜ್ಞಾನಿಕ ಉತ್ಪನ್ನವನ್ನು ಜನರಿಗೆ ಬಿಡುಗಡೆ ಮಾಡುವುದು ಎಷ್ಟು ಸಮರ್ಥನೀಯ? ಇಡೀ ದೇಶದ ಆರೋಗ್ಯ ಮಂತ್ರಿಯಾಗಿ, ಉತ್ಪನ್ನವನ್ನು ಅನೈತಿಕ, ತಪ್ಪು ಮತ್ತು ಸುಳ್ಳು ರೀತಿಯಲ್ಲಿ ಉತ್ತೇಜಿಸುವುದು ಎಷ್ಟು ನೈತಿಕವಾಗಿದೆ? ದೇಶದ ಆರೋಗ್ಯ ಸಚಿವರಾಗಿ ಮತ್ತು ಆಧುನಿಕ ವೈದ್ಯರಾಗಿ ಇಂತಹ ಆಧಾರರಹಿತ, ಪ್ರಮಾಣೀಕೃತವಲ್ಲದ ಉತ್ಪನ್ನವನ್ನು ಉತ್ತೇಜಿಸುವುದು ಎಷ್ಟು ನೈತಿಕವಾಗಿದೆ”ಎಂದು ವೈದ್ಯಕೀಯ ಸಂಸ್ಥೆ ಕಟುವಾಗಿ ಪ್ರಶ್ನಿಸಿದೆ.

ಇದನ್ನೂ ಓದಿ: ರಣಕೇಕೆಯ ಮಾಧ್ಯಮಗಳ ನಡುವೆ ನಮ್ಮ ಕರ್ತವ್ಯ; ನ್ಯಾಯಪಥ ಸಂಪಾದಕೀಯ

“ಆರೋಗ್ಯ ಸಚಿವರು ಒಂದು ಅವೈಜ್ಞಾನಿಕ ಔಷಧದ ಸುಳ್ಳು ಮತ್ತು ಕಲ್ಪಿತ ಪ್ರಕ್ಷೇಪಣವನ್ನು ಬೆಂಬಲಿಸುವುದು ಮತ್ತು WHO ಇದನ್ನು ತಿರಸ್ಕರಿಸುವುದು- ದೇಶದ ಜನರಿಗೆ ಮಾಡಿದ ಕಪಾಳಮೋಕ್ಷ ಮತ್ತು ಅವಮಾನ” ಎಂದು ಐಎಂಎ ಟೀಕಿಸಿದೆ.

ಕೊವಿಡ್ ತಡೆಗಟ್ಟಲು ಕೊರೊನಿಲ್ ಪರಿಣಾಮಕಾರಿಯಾಗಿದ್ದರೆ, ವ್ಯಾಕ್ಸಿನೇಷನ್‌ಗಾಗಿ ಸರ್ಕಾರ 35,000 ಕೋಟಿ ರೂ.ಗಳನ್ನು ಏಕೆ ಖರ್ಚು ಮಾಡಿದೆ ಎಂದು ಐಎಂಎ ಕೇಳಿದೆ.

ಪತಂಜಲಿ ಆಯುರ್ವೇದ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರು WHO ಟ್ವೀಟ್‌ಗೆ ಸ್ವಲ್ಪ ಮೊದಲು ಸ್ಪಷ್ಟನೆ ನೀಡಿದ್ದರು.

“ಕೊರೊನಿಲ್‌ಗೆ WHO ಜಿಎಂಪಿ ಕಂಪ್ಲೈಂಟ್ CoPP ಪ್ರಮಾಣಪತ್ರವನ್ನು ಭಾರತ ಸರ್ಕಾರದ ಡಿಸಿಜಿಐ ನೀಡಿದೆ. WHO ಯಾವುದೇ ಔಷಧಿಗಳನ್ನು ಅನುಮೋದಿಸುವುದಿಲ್ಲ ಅಥವಾ ನಿರಾಕರಿಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಜನರಿಗೆ ಉತ್ತಮ, ಆರೋಗ್ಯಕರ ಭವಿಷ್ಯವನ್ನು ನಿರ್ಮಿಸಲು WHO ಕೆಲಸ ಮಾಡುತ್ತದೆ ಎಂದು ಬಾಲಕೃಷ್ಣ ಟ್ವೀಟ್ ಮಾಡಿದ್ದರು.

ಕಳೆದ ವರ್ಷ, ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ಲಸಿಕೆಗಳು ಇನ್ನೂ ಪ್ರಯೋಗದ ಹಂತದಲ್ಲಿದ್ದವು, ಕೊರೊನಿಲ್ ಕೊರೊನಾವೈರಸ್ ವಿರುದ್ಧ ಬಲವಾದ ರಕ್ಷಣೆ ನೀಡಬಹುದೆಂದು ಪತಂಜಲಿ ಆಯುರ್ವೇದ ಹೇಳಿಕೊಂಡಿತ್ತು. ಅದರ ಸಮರ್ಥನೆಗಳ ಬಗ್ಗೆ ದೊಡ್ಡ ವಿವಾದದ ನಂತರ, ಆಯುಷ್ ಸಚಿವಾಲಯವು ಕೊರೊನಿಲ್ ಅನ್ನು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಸಾಧನವಾಗಿ ಮಾತ್ರ ಮಾರಾಟ ಮಾಡಬಹುದೆಂದು ಹೇಳಿತ್ತು.


ಇದನ್ನೂ ಓದಿ: ಪತಂಜಲಿಯಿಂದ ಕೊರೊನಾ ಗುಣಪಡಿಸಬಹುದೆಂದು ನಾವು ಹೇಳಿಲ್ಲ: ಸಿಇಒ ಆಚಾರ್ಯ ಬಾಲಕೃಷ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...