Homeಮುಖಪುಟಜನರ ಭಯದ ದುರುಪಯೋಗ: ರಾಮ್‌ದೇವ್ ಪತಂಜಲಿಗೆ 10 ಲಕ್ಷ ರೂ ದಂಡ

ಜನರ ಭಯದ ದುರುಪಯೋಗ: ರಾಮ್‌ದೇವ್ ಪತಂಜಲಿಗೆ 10 ಲಕ್ಷ ರೂ ದಂಡ

ಅಡ್ಯಾರ್ ಕ್ಯಾನ್ಸರ್ ಸಂಸ್ಥೆ ಮತ್ತು ಸರ್ಕಾರಿ ಯೋಗ ಮತ್ತು ಪ್ರಕೃತಿಚಿಕಿತ್ಸೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ತಲಾ 5 ಲಕ್ಷ ರೂ ದಂಡ ಪಾವತಿಸುವಂತೆ ಪತಂಜಲಿಗೆ ಕೋರ್ಟ್ ಹೇಳಿದೆ.

- Advertisement -
- Advertisement -

ಕೊರೊನಾ ವೈರಸ್‌ಗೆ ಔಷಧಿ ಸಿದ್ದಪಡಿಸಿರುವುದಾಗಿ ಘೋಷಿಸಿ ಕೊರೊನಿಲ್ ಎಂಬ ಔಷಧವನ್ನು ಮಾರುಕಟ್ಟೆಗೆ ಬಿಡುವ ಮೂಲಕ ಸಾರ್ವಜನಿಕ ಭಯವನ್ನು ದುರುಪಯೋಗಪಡಿಸಿಕೊಂಡು ಶೋಷಿಸಿದ್ದಾರೆ ಎಂದು ಬಾಬಾ ರಾಮ್‌ದೇವ್‌ ನೇತೃತ್ವದ ಆರ್ಯುವೇದ ಕಂಪನಿ ಪತಂಜಲಿಗೆ ಮದ್ರಾಸ್ ಹೈಕೋರ್ಟ್ 10 ಲಕ್ಷ ರೂ ದಂಡ ವಿಧಿಸಿದೆ. ಅಲ್ಲದೇ ಉತ್ಪನ್ನಗಳನ್ನು ಯಾವುದೇ ಕಾರಣಕ್ಕೂ ಮಾರಾಟ ಮಾಡಬಾರದು ಎಂದು ನಿ‍ಷೇಧ ಹೇರಿದೆ.

ಗುರುವಾರ ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಇಮ್ಯುನಿಟಿ ಬೂಸ್ಟರ್ ಎಂದು ಹೇಳಲಾಗುತ್ತಿರುವ ಕೊರೊನಿಲ್ ಮೇಲಿನ ಮಧ್ಯಂತರ ನಿಷೇಧವನ್ನು ತೆರವುಗೊಳಿಸಲು ನಿರಾಕರಿಸಿತು.

ಸುಮಾರು ಮೂರು ದಶಕಗಳಿಂದ ಕೈಗಾರಿಕಾ ಶುಚಿಗೊಳಿಸುವ ರಾಸಾಯನಿಕಗಳಿಗಾಗಿ ನೋಂದಾಯಿತ ಟ್ರೇಡ್‌ಮಾರ್ಕ್‌ಗಳಾದ ಕೊರೊನಿಲ್ -213 ಎಸ್‌ಪಿಎಲ್ ಮತ್ತು ಕೊರೊನಿಲ್ -92 ಬಿ ಅನ್ನು ಬಳಸುತ್ತಿದ್ದ ಚೆನ್ನೈ ಮೂಲದ ಅರುದ್ರ ಎಂಜಿನಿಯರ್ಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ ಟ್ರೇಡ್‌ಮಾರ್ಕ್ ಉಲ್ಲಂಘನೆ ಮೊಕದ್ದಮೆಗೆ ಮದ್ರಾಸ್ ಹೈಕೋರ್ಟ್ ಈ ತಡೆಯಾಜ್ಞೆಯನ್ನು ನೀಡಿದೆ.

“ಪತಂಜಲಿ ಮತ್ತು ದಿವ್ಯಾ ಯೋಗ ಮಂದಿರ ಟ್ರಸ್ಟ್ 10,000 ಕೋಟಿ ರೂ ವ್ಯವಹಾರ ನಡೆಸುತ್ತಿದ್ದಾರೆ. ಆದರೂ ಸಹ ಸಾಂಕ್ರಾಮಿಕದ ಸಮಯದಲ್ಲಿ ಜನರ ಭಯ, ಭೀತಿಯನ್ನು ಬಳಸಿಕೊಂಡು ಔಷಧಿ ಕೊಡುತ್ತೇವೆ ಎಂದು ನಂಬಿಸಿ ಮತ್ತಷ್ಟು ಲಾಭ ಮಾಡಲು ಮುಂದಾಗಿದ್ದಾರೆ. ಕೊರೊನಿಲ್ ಮಾತ್ರೆಯು ಕೊರೊನಾವನ್ನು ಹೋಗಲಾಡಿಸುವುದಿಲ್ಲ ಅದು ಕೇವಲ ಕೆಮ್ಮು, ಶೀತ ಮತ್ತು ಜ್ವರಕ್ಕೆ ರೋಗನಿರೋಧಕ ವರ್ಧಕವಾಗಿದೆ” ಎಂದು ನ್ಯಾಯಮೂರ್ತಿ ಸಿ.ವಿ.ಕಾರ್ತಿಕೇಯನ್ ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೇ ಕೊರೊನಿಲ್ ಎಂಬ ಟ್ರೇಡ್‌ಮಾರ್ಕ್ ಅನ್ನು ಈಗಾಗಲೇ ಬೇರೆಯವರು ಹೊಂದಿದ್ದಾರೆ. ಸರಳವಾಗಿ ರಿಜಿಸ್ಟ್ರಿಯಲ್ಲಿ ಹುಡುಕಿದರೆ ಮಾಹಿತಿ ಸಿಗುತ್ತದೆ. ಆದರೂ ಇದೆಲ್ಲಾ ತಿಳಿದಿದ್ದರು ರಾಮ್‌ದೇವ್ ಕಂಪನಿ ಮುಂದುವರೆದಿದ್ದರೆ ಅವರು ಯಾವುದೇ ಪರಿಗಣೆಗೆ ಅರ್ಹರಲ್ಲ ಎಂದು ಕೋರ್ಟ್ ಹೇಳಿದೆ.

ಅಡ್ಯಾರ್ ಕ್ಯಾನ್ಸರ್ ಸಂಸ್ಥೆ ಮತ್ತು ಸರ್ಕಾರಿ ಯೋಗ ಮತ್ತು ಪ್ರಕೃತಿಚಿಕಿತ್ಸೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ತಲಾ 5 ಲಕ್ಷ ರೂ ದಂಡ ಪಾವತಿಸುವಂತೆ ಸೂಚಿಸಿದ ಕೋರ್ಟ್, 2020 ರ ಆಗಸ್ಟ್ 25 ಕ್ಕೆ ಮುಂಚೆ ಮದ್ರಾಸ್‌ನ ಹೈಕೋರ್ಟ್‌ನ ರಿಜಿಸ್ಟ್ರಿಯ ಮುಂದೆ ದಂಡ ಪಾವತಿಸಿದ ರಶೀದಿಯನ್ನು ಸಲ್ಲಿಸಬೇಕು ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಸರಣಿ-1: ಒಮ್ಮೆ ಕೊರೊನಾ ಬಂದವರಿಗೆ ಮತ್ತೆ ಬರುವುದಿಲ್ಲವಾ? – ಡಾ.ವಾಸು ಎಚ್‌.ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...