Homeಮುಖಪುಟಜನರ ಭಯದ ದುರುಪಯೋಗ: ರಾಮ್‌ದೇವ್ ಪತಂಜಲಿಗೆ 10 ಲಕ್ಷ ರೂ ದಂಡ

ಜನರ ಭಯದ ದುರುಪಯೋಗ: ರಾಮ್‌ದೇವ್ ಪತಂಜಲಿಗೆ 10 ಲಕ್ಷ ರೂ ದಂಡ

ಅಡ್ಯಾರ್ ಕ್ಯಾನ್ಸರ್ ಸಂಸ್ಥೆ ಮತ್ತು ಸರ್ಕಾರಿ ಯೋಗ ಮತ್ತು ಪ್ರಕೃತಿಚಿಕಿತ್ಸೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ತಲಾ 5 ಲಕ್ಷ ರೂ ದಂಡ ಪಾವತಿಸುವಂತೆ ಪತಂಜಲಿಗೆ ಕೋರ್ಟ್ ಹೇಳಿದೆ.

- Advertisement -
- Advertisement -

ಕೊರೊನಾ ವೈರಸ್‌ಗೆ ಔಷಧಿ ಸಿದ್ದಪಡಿಸಿರುವುದಾಗಿ ಘೋಷಿಸಿ ಕೊರೊನಿಲ್ ಎಂಬ ಔಷಧವನ್ನು ಮಾರುಕಟ್ಟೆಗೆ ಬಿಡುವ ಮೂಲಕ ಸಾರ್ವಜನಿಕ ಭಯವನ್ನು ದುರುಪಯೋಗಪಡಿಸಿಕೊಂಡು ಶೋಷಿಸಿದ್ದಾರೆ ಎಂದು ಬಾಬಾ ರಾಮ್‌ದೇವ್‌ ನೇತೃತ್ವದ ಆರ್ಯುವೇದ ಕಂಪನಿ ಪತಂಜಲಿಗೆ ಮದ್ರಾಸ್ ಹೈಕೋರ್ಟ್ 10 ಲಕ್ಷ ರೂ ದಂಡ ವಿಧಿಸಿದೆ. ಅಲ್ಲದೇ ಉತ್ಪನ್ನಗಳನ್ನು ಯಾವುದೇ ಕಾರಣಕ್ಕೂ ಮಾರಾಟ ಮಾಡಬಾರದು ಎಂದು ನಿ‍ಷೇಧ ಹೇರಿದೆ.

ಗುರುವಾರ ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಇಮ್ಯುನಿಟಿ ಬೂಸ್ಟರ್ ಎಂದು ಹೇಳಲಾಗುತ್ತಿರುವ ಕೊರೊನಿಲ್ ಮೇಲಿನ ಮಧ್ಯಂತರ ನಿಷೇಧವನ್ನು ತೆರವುಗೊಳಿಸಲು ನಿರಾಕರಿಸಿತು.

ಸುಮಾರು ಮೂರು ದಶಕಗಳಿಂದ ಕೈಗಾರಿಕಾ ಶುಚಿಗೊಳಿಸುವ ರಾಸಾಯನಿಕಗಳಿಗಾಗಿ ನೋಂದಾಯಿತ ಟ್ರೇಡ್‌ಮಾರ್ಕ್‌ಗಳಾದ ಕೊರೊನಿಲ್ -213 ಎಸ್‌ಪಿಎಲ್ ಮತ್ತು ಕೊರೊನಿಲ್ -92 ಬಿ ಅನ್ನು ಬಳಸುತ್ತಿದ್ದ ಚೆನ್ನೈ ಮೂಲದ ಅರುದ್ರ ಎಂಜಿನಿಯರ್ಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ ಟ್ರೇಡ್‌ಮಾರ್ಕ್ ಉಲ್ಲಂಘನೆ ಮೊಕದ್ದಮೆಗೆ ಮದ್ರಾಸ್ ಹೈಕೋರ್ಟ್ ಈ ತಡೆಯಾಜ್ಞೆಯನ್ನು ನೀಡಿದೆ.

“ಪತಂಜಲಿ ಮತ್ತು ದಿವ್ಯಾ ಯೋಗ ಮಂದಿರ ಟ್ರಸ್ಟ್ 10,000 ಕೋಟಿ ರೂ ವ್ಯವಹಾರ ನಡೆಸುತ್ತಿದ್ದಾರೆ. ಆದರೂ ಸಹ ಸಾಂಕ್ರಾಮಿಕದ ಸಮಯದಲ್ಲಿ ಜನರ ಭಯ, ಭೀತಿಯನ್ನು ಬಳಸಿಕೊಂಡು ಔಷಧಿ ಕೊಡುತ್ತೇವೆ ಎಂದು ನಂಬಿಸಿ ಮತ್ತಷ್ಟು ಲಾಭ ಮಾಡಲು ಮುಂದಾಗಿದ್ದಾರೆ. ಕೊರೊನಿಲ್ ಮಾತ್ರೆಯು ಕೊರೊನಾವನ್ನು ಹೋಗಲಾಡಿಸುವುದಿಲ್ಲ ಅದು ಕೇವಲ ಕೆಮ್ಮು, ಶೀತ ಮತ್ತು ಜ್ವರಕ್ಕೆ ರೋಗನಿರೋಧಕ ವರ್ಧಕವಾಗಿದೆ” ಎಂದು ನ್ಯಾಯಮೂರ್ತಿ ಸಿ.ವಿ.ಕಾರ್ತಿಕೇಯನ್ ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೇ ಕೊರೊನಿಲ್ ಎಂಬ ಟ್ರೇಡ್‌ಮಾರ್ಕ್ ಅನ್ನು ಈಗಾಗಲೇ ಬೇರೆಯವರು ಹೊಂದಿದ್ದಾರೆ. ಸರಳವಾಗಿ ರಿಜಿಸ್ಟ್ರಿಯಲ್ಲಿ ಹುಡುಕಿದರೆ ಮಾಹಿತಿ ಸಿಗುತ್ತದೆ. ಆದರೂ ಇದೆಲ್ಲಾ ತಿಳಿದಿದ್ದರು ರಾಮ್‌ದೇವ್ ಕಂಪನಿ ಮುಂದುವರೆದಿದ್ದರೆ ಅವರು ಯಾವುದೇ ಪರಿಗಣೆಗೆ ಅರ್ಹರಲ್ಲ ಎಂದು ಕೋರ್ಟ್ ಹೇಳಿದೆ.

ಅಡ್ಯಾರ್ ಕ್ಯಾನ್ಸರ್ ಸಂಸ್ಥೆ ಮತ್ತು ಸರ್ಕಾರಿ ಯೋಗ ಮತ್ತು ಪ್ರಕೃತಿಚಿಕಿತ್ಸೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ತಲಾ 5 ಲಕ್ಷ ರೂ ದಂಡ ಪಾವತಿಸುವಂತೆ ಸೂಚಿಸಿದ ಕೋರ್ಟ್, 2020 ರ ಆಗಸ್ಟ್ 25 ಕ್ಕೆ ಮುಂಚೆ ಮದ್ರಾಸ್‌ನ ಹೈಕೋರ್ಟ್‌ನ ರಿಜಿಸ್ಟ್ರಿಯ ಮುಂದೆ ದಂಡ ಪಾವತಿಸಿದ ರಶೀದಿಯನ್ನು ಸಲ್ಲಿಸಬೇಕು ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಸರಣಿ-1: ಒಮ್ಮೆ ಕೊರೊನಾ ಬಂದವರಿಗೆ ಮತ್ತೆ ಬರುವುದಿಲ್ಲವಾ? – ಡಾ.ವಾಸು ಎಚ್‌.ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...