Homeಮುಖಪುಟಜನರ ಭಯದ ದುರುಪಯೋಗ: ರಾಮ್‌ದೇವ್ ಪತಂಜಲಿಗೆ 10 ಲಕ್ಷ ರೂ ದಂಡ

ಜನರ ಭಯದ ದುರುಪಯೋಗ: ರಾಮ್‌ದೇವ್ ಪತಂಜಲಿಗೆ 10 ಲಕ್ಷ ರೂ ದಂಡ

ಅಡ್ಯಾರ್ ಕ್ಯಾನ್ಸರ್ ಸಂಸ್ಥೆ ಮತ್ತು ಸರ್ಕಾರಿ ಯೋಗ ಮತ್ತು ಪ್ರಕೃತಿಚಿಕಿತ್ಸೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ತಲಾ 5 ಲಕ್ಷ ರೂ ದಂಡ ಪಾವತಿಸುವಂತೆ ಪತಂಜಲಿಗೆ ಕೋರ್ಟ್ ಹೇಳಿದೆ.

- Advertisement -
- Advertisement -

ಕೊರೊನಾ ವೈರಸ್‌ಗೆ ಔಷಧಿ ಸಿದ್ದಪಡಿಸಿರುವುದಾಗಿ ಘೋಷಿಸಿ ಕೊರೊನಿಲ್ ಎಂಬ ಔಷಧವನ್ನು ಮಾರುಕಟ್ಟೆಗೆ ಬಿಡುವ ಮೂಲಕ ಸಾರ್ವಜನಿಕ ಭಯವನ್ನು ದುರುಪಯೋಗಪಡಿಸಿಕೊಂಡು ಶೋಷಿಸಿದ್ದಾರೆ ಎಂದು ಬಾಬಾ ರಾಮ್‌ದೇವ್‌ ನೇತೃತ್ವದ ಆರ್ಯುವೇದ ಕಂಪನಿ ಪತಂಜಲಿಗೆ ಮದ್ರಾಸ್ ಹೈಕೋರ್ಟ್ 10 ಲಕ್ಷ ರೂ ದಂಡ ವಿಧಿಸಿದೆ. ಅಲ್ಲದೇ ಉತ್ಪನ್ನಗಳನ್ನು ಯಾವುದೇ ಕಾರಣಕ್ಕೂ ಮಾರಾಟ ಮಾಡಬಾರದು ಎಂದು ನಿ‍ಷೇಧ ಹೇರಿದೆ.

ಗುರುವಾರ ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಇಮ್ಯುನಿಟಿ ಬೂಸ್ಟರ್ ಎಂದು ಹೇಳಲಾಗುತ್ತಿರುವ ಕೊರೊನಿಲ್ ಮೇಲಿನ ಮಧ್ಯಂತರ ನಿಷೇಧವನ್ನು ತೆರವುಗೊಳಿಸಲು ನಿರಾಕರಿಸಿತು.

ಸುಮಾರು ಮೂರು ದಶಕಗಳಿಂದ ಕೈಗಾರಿಕಾ ಶುಚಿಗೊಳಿಸುವ ರಾಸಾಯನಿಕಗಳಿಗಾಗಿ ನೋಂದಾಯಿತ ಟ್ರೇಡ್‌ಮಾರ್ಕ್‌ಗಳಾದ ಕೊರೊನಿಲ್ -213 ಎಸ್‌ಪಿಎಲ್ ಮತ್ತು ಕೊರೊನಿಲ್ -92 ಬಿ ಅನ್ನು ಬಳಸುತ್ತಿದ್ದ ಚೆನ್ನೈ ಮೂಲದ ಅರುದ್ರ ಎಂಜಿನಿಯರ್ಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ ಟ್ರೇಡ್‌ಮಾರ್ಕ್ ಉಲ್ಲಂಘನೆ ಮೊಕದ್ದಮೆಗೆ ಮದ್ರಾಸ್ ಹೈಕೋರ್ಟ್ ಈ ತಡೆಯಾಜ್ಞೆಯನ್ನು ನೀಡಿದೆ.

“ಪತಂಜಲಿ ಮತ್ತು ದಿವ್ಯಾ ಯೋಗ ಮಂದಿರ ಟ್ರಸ್ಟ್ 10,000 ಕೋಟಿ ರೂ ವ್ಯವಹಾರ ನಡೆಸುತ್ತಿದ್ದಾರೆ. ಆದರೂ ಸಹ ಸಾಂಕ್ರಾಮಿಕದ ಸಮಯದಲ್ಲಿ ಜನರ ಭಯ, ಭೀತಿಯನ್ನು ಬಳಸಿಕೊಂಡು ಔಷಧಿ ಕೊಡುತ್ತೇವೆ ಎಂದು ನಂಬಿಸಿ ಮತ್ತಷ್ಟು ಲಾಭ ಮಾಡಲು ಮುಂದಾಗಿದ್ದಾರೆ. ಕೊರೊನಿಲ್ ಮಾತ್ರೆಯು ಕೊರೊನಾವನ್ನು ಹೋಗಲಾಡಿಸುವುದಿಲ್ಲ ಅದು ಕೇವಲ ಕೆಮ್ಮು, ಶೀತ ಮತ್ತು ಜ್ವರಕ್ಕೆ ರೋಗನಿರೋಧಕ ವರ್ಧಕವಾಗಿದೆ” ಎಂದು ನ್ಯಾಯಮೂರ್ತಿ ಸಿ.ವಿ.ಕಾರ್ತಿಕೇಯನ್ ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೇ ಕೊರೊನಿಲ್ ಎಂಬ ಟ್ರೇಡ್‌ಮಾರ್ಕ್ ಅನ್ನು ಈಗಾಗಲೇ ಬೇರೆಯವರು ಹೊಂದಿದ್ದಾರೆ. ಸರಳವಾಗಿ ರಿಜಿಸ್ಟ್ರಿಯಲ್ಲಿ ಹುಡುಕಿದರೆ ಮಾಹಿತಿ ಸಿಗುತ್ತದೆ. ಆದರೂ ಇದೆಲ್ಲಾ ತಿಳಿದಿದ್ದರು ರಾಮ್‌ದೇವ್ ಕಂಪನಿ ಮುಂದುವರೆದಿದ್ದರೆ ಅವರು ಯಾವುದೇ ಪರಿಗಣೆಗೆ ಅರ್ಹರಲ್ಲ ಎಂದು ಕೋರ್ಟ್ ಹೇಳಿದೆ.

ಅಡ್ಯಾರ್ ಕ್ಯಾನ್ಸರ್ ಸಂಸ್ಥೆ ಮತ್ತು ಸರ್ಕಾರಿ ಯೋಗ ಮತ್ತು ಪ್ರಕೃತಿಚಿಕಿತ್ಸೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ತಲಾ 5 ಲಕ್ಷ ರೂ ದಂಡ ಪಾವತಿಸುವಂತೆ ಸೂಚಿಸಿದ ಕೋರ್ಟ್, 2020 ರ ಆಗಸ್ಟ್ 25 ಕ್ಕೆ ಮುಂಚೆ ಮದ್ರಾಸ್‌ನ ಹೈಕೋರ್ಟ್‌ನ ರಿಜಿಸ್ಟ್ರಿಯ ಮುಂದೆ ದಂಡ ಪಾವತಿಸಿದ ರಶೀದಿಯನ್ನು ಸಲ್ಲಿಸಬೇಕು ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಸರಣಿ-1: ಒಮ್ಮೆ ಕೊರೊನಾ ಬಂದವರಿಗೆ ಮತ್ತೆ ಬರುವುದಿಲ್ಲವಾ? – ಡಾ.ವಾಸು ಎಚ್‌.ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...