Homeಮುಖಪುಟಅಜಿತ್‌ ಪವಾರ್‌ ನೇತೃತ್ವದ ಎನ್‌ಸಿಪಿ ಸೇರಿದ ಬಾಬಾ ಸಿದ್ದೀಕ್ ಪುತ್ರ ಝೀಶಾನ್ ಸಿದ್ದೀಕ್

ಅಜಿತ್‌ ಪವಾರ್‌ ನೇತೃತ್ವದ ಎನ್‌ಸಿಪಿ ಸೇರಿದ ಬಾಬಾ ಸಿದ್ದೀಕ್ ಪುತ್ರ ಝೀಶಾನ್ ಸಿದ್ದೀಕ್

- Advertisement -
- Advertisement -

ಇತ್ತೀಚೆಗೆ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಹಾಗೂ ಎನ್‌ಸಿಪಿ (ಅಜಿತ್ ಪವಾರ್ ಬಣ) ನಾಯಕ ಬಾಬಾ ಸಿದ್ದೀಕ್ (ಬಾಬಾ ಝಿಯಾವುದ್ದೀನ್ ಸಿದ್ದೀಕ್) ಅವರ ಪುತ್ರ ಝೀಶಾನ್ ಸಿದ್ದೀಕ್ ಇಂದು (ಅ.25) ಬೆಳಿಗ್ಗೆ ಎನ್‌ಸಿಪಿ ಸೇರ್ಪಡೆಯಾಗಿದ್ದಾರೆ.

ಪಕ್ಷ ಸೇರ್ಪಡೆ ಬೆನ್ನಲ್ಲೇ ಝೀಶಾನ್ ಅವರನ್ನು ವಿಧಾನಸಭೆ ಚುನಾವಣೆಗೆ ಮುಂಬೈನ ಬಾಂದ್ರಾ ಪೂರ್ವ ಕ್ಷೇತ್ರದ ಅಭ್ಯರ್ಥಿಯಾಗಿ ಎನ್‌ಸಿಪಿ ಘೋಷಣೆ ಮಾಡಿದೆ.

ಎನ್‌ಸಿಪಿ ಸೇರ್ಪಡೆ ಬಳಿಕ ಮಾತನಾಡಿದ ಝೀಶಾನ್, “ಕಾಂಗ್ರೆಸ್‌ ಸೇರಿದಂತೆ ಮಹಾ ವಿಕಾಸ್ ಅಘಾಡಿಯ ನಾಯಕರು ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದರು. ಆದರೆ ಅವರು ಮೋಸ ಮಾಡುವ ಉದ್ದೇಶ ಹೊಂದಿದ್ದರು. ಕಾಂಗ್ರೆಸ್‌ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ಅವರು ಯಾವಾಗಲೂ ಶಿವಸೇನೆ (ಯುಬಿಟಿ) ಒತ್ತಡಕ್ಕೆ ಒಳಗಾಗುತ್ತಾರೆ” ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಮಾಜಿ ಶಾಸಕ ಝೀಶಾನ್ : ಝೀಶಾನ್ ಅವರು 2019ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಆದರೆ, ನಂತರ ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಅರೋಪದ ಮೇಲೆ ಕಾಂಗ್ರೆಸ್ ಅವರನ್ನು ಉಚ್ಚಾಟಿಸಿತ್ತು. ಈ ಚುನಾವಣೆಯಲ್ಲಿ ಝೀಶಾನ್ ಅವರು ಶಿವಸೇನೆ (ಯುಬಿಟಿ) ಅಭ್ಯರ್ಥಿ ವರುಣ್ ಸರ್ದೇಸಾಯಿ ವಿರುದ್ಧ ಸ್ಪರ್ಧಿಸಲಿದ್ದಾರೆ.

ಬಾಬಾ ಸಿದ್ದೀಕ್ ಹತ್ಯೆ : ಝೀಶಾನ್ ಸಿದ್ದೀಕ್ ಅವರ ತಂದೆ, ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಬಾಬಾ ಸಿದ್ದೀಕ್ ಅವರನ್ನು, ದಸರಾ ಹಬ್ಬದ ಅಂಗವಾಗಿ ಝೀಶಾನ್ ಸಿದ್ದೀಕ್ ಕಚೇರಿ ಬಳಿ ಪಠಾಕಿ ಸಿಡಿಸುತ್ತಿದ್ದ ವೇಳೆ ಕಳೆದ ಅಕ್ಟೋಬರ್ 12ರಂದು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಗ್ಯಾಂಗ್‌ಸ್ಟರ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯನೊಬ್ಬ ಬಾಬಾ ಸಿದ್ದೀಕ್ ಅವರ ಹತ್ಯೆಯ ಹೊಣೆಗಾರಿಕೆ ಹೊತ್ತುಕೊಂಡಿದ್ದಾನೆ. ಬಾಲಿವುಡ್‌ ನಟ ಸಲ್ಮಾನ್ ಖಾನ್ ಅವರೊಂದಿಗಿನ ನಿಕಟ ಸಂಬಂಧ ಕಾರಣಕ್ಕೆ ಬಾಬಾ ಸಿದ್ದೀಕ್ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಲಾಗ್ತಿದೆ.

ಹಿರಿಯ ರಾಜಕಾರಣಿ ಬಾಬಾ ಸಿದ್ದೀಕ್ : ಬಾಬಾ ಸಿದ್ದೀಕ್ ಮುಂಬೈನ ಬಾಂದ್ರಾ ಪೂರ್ವ ಕ್ಷೇತ್ರದಿಂದ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2004 ಮತ್ತು 2008ರ ನಡುವೆ ಮುಖ್ಯಮಂತ್ರಿ ವಿಲಾಸ್‌ರಾವ್ ದೇಶಮುಖ್ ನೇತೃತ್ವದ ಮಹಾರಾಷ್ಟ್ರ ರಾಜ್ಯ ಸರ್ಕಾರದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಕಾರ್ಮಿಕ ಇಲಾಖೆ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

ಸಿದ್ದೀಕ್ ಅವರು ಈ ಹಿಂದೆ 1992 ಮತ್ತು 1997 ರ ನಡುವೆ ಸತತ ಎರಡು ಅವಧಿಗೆ ಮುಂಬೈ ಮುನ್ಸಿಪಲ್ ಕಾರ್ಪೊರೇಟರ್ ಆಗಿ ಸೇವೆ ಸಲ್ಲಿಸಿದ್ದರು. ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಂಬೈ ಪ್ರಾದೇಶಿಕ ಕಾಂಗ್ರೆಸ್ ಸಮಿತಿ ಮತ್ತು ಸಂಸದೀಯ ಮಂಡಳಿಯ ಅಧ್ಯಕ್ಷರು ಮತ್ತು ಹಿರಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದರು. 8 ಫೆಬ್ರವರಿ 2024ರಂದು, ಅವರು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. ನಂತರ 12 ಫೆಬ್ರವರಿ 2024 ರಂದು ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷಕ್ಕೆ (ಎನ್‌ಸಿಪಿ) ಸೇರಿದರು.

ಇದನ್ನೂ ಓದಿ : ಮಹಾರಾಷ್ಟ್ರ ಚುನಾವಣೆ: 48 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ ಕಾಂಗ್ರೆಸ್, 25 ಹಾಲಿ ಶಾಸಕರಿಗೂ ಟಿಕೆಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...